Homeಮುಖಪುಟಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

- Advertisement -
- Advertisement -

“ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿಯೊಬ್ಬ ಯಾಕೆ ಹೋಗಬಾರದು?” ಎಂದು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.

ಗೋವಾದ ಅಸ್ಸೋನೋರಾದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, “ನಾನು ಬಂಗಾಳಿ ಎಂದು ನನಗೆ ಹೇಳಲಾಗುತ್ತಿದೆ. ಹಾಗಾದರೆ ಅವರು ಯಾರು? ಅವರು ಗುಜರಾತಿ ಅಲ್ಲವೆ? ಅವರು ಗುಜರಾತಿ ಆಗಿರುವುದರಿಂದ ಅವರು ಇಲ್ಲಿಗೆ ಬರಬಾರದು ಎಂದು ಹೇಳಬಹುದೇ? ಒಬ್ಬ ಬಂಗಾಳಿ ರಾಷ್ಟ್ರಗೀತೆಯನ್ನು ಬರೆಯಬಹುದು; ಆದರೆ, ಒಬ್ಬ ಬಂಗಾಳಿ ಗೋವಾಕ್ಕೆ ಬರಲು ಸಾಧ್ಯವಿಲ್ಲವೇ? ನಾವೆಲ್ಲರೂ ಗಾಂಧೀಜಿಯನ್ನು ಗೌರವಿಸುತ್ತೇವೆ. ಗಾಂಧೀಜಿ ಬೆಂಗಾಲಿಯೋ ಅಥವಾ ಬೆಂಗಾಲಿ ಅಲ್ಲದವರೋ ಅಥವಾ ಗೋವನ್ನರೋ ಅಥವಾ ಯುಪಿಯವರೋ ಎಂದು ನಾವು ಎಂದಾದರೂ ಪ್ರಶ್ನಿಸಿದ್ದೇವೆಯೇ? ರಾಷ್ಟ್ರೀಯ ನಾಯಕರೆಂದರೆ ಎಲ್ಲರನ್ನೂ ಮುನ್ನಡೆಸಿಕೊಂಡು ಹೋಗುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

ಗೋವಾದ ರಾಜಕೀಯಕ್ಕೆ ತಮ್ಮ ಪಕ್ಷದ ಪ್ರವೇಶವನ್ನು ಇತರ ಪಕ್ಷಗಳು ಪ್ರಶ್ನಿಸಿವೆ. ಆದಾಗ್ಯೂ, ಗೋವಾದಲ್ಲಿರುವ ಟಿಎಂಸಿ ನಾಯಕರನ್ನು ರಿಮೋಟ್ ಕಂಟ್ರೋಲ್ ಮಾಡಲು ನಾವು ಗೋವಾಕ್ಕೆ ಬಂದಿಲ್ಲ. ನಾವು ಅವರನ್ನು ಬೆಂಬಲಿಸಲು ಬಂದಿದ್ದೇವೆ ಎಂದು ಅವರು ಹೇಳಿದ್ದಾರೆ.

“ಅವರು ರಾಷ್ಟ್ರೀಯ ನಾಯಕರಾಗುತ್ತಾರೆಯೇ? ಅವರು ಗೋವಾವನ್ನು ಗುಜರಾತ್‌ನಿಂದ ನಿಯಂತ್ರಿಸುತ್ತಾರೆ. ಗೋವಾವನ್ನು ಗುಜರಾತ್ ಅಥವಾ ದೆಹಲಿಯಿಂದ ಮುನ್ನಡೆಸಬಾದರು. ಗೋವಾದ ಜನರು ಗೋವಾವನ್ನು ಮುನ್ನಡೆಸುತ್ತಾರೆ” ಎಂದು ಅವರು ಹೇಳಿದ್ದಾರೆ.

“ನಮಗೆ ಬಿಜೆಪಿಯಿಂದ ‘ಕ್ಯಾರೆಕ್ಟರ್ ಸರ್ಟಿಫಿಕೇಟ್’ ಅಗತ್ಯವಿಲ್ಲ. ನಾವು ಚುನಾವಣೆಯ ಸಮಯ ಬಂದಾಗ ಮಾತ್ರ ಗಂಗಾ ತೀರಕ್ಕೆ ಹೋಗಿ ಪೂಜೆ ಮಾಡುವುದಿಲ್ಲ. ಚುನಾವಣಾ ಸಮಯ ಬಂದಾಗ ಮೋದಿ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಾರೆ. ಅವರು ತಪಸ್ಸಿಗಾಗಿ ಉತ್ತರಾಖಂಡದ ದೇವಸ್ಥಾನಕ್ಕೆ ಹೋಗುತ್ತಾರೆ. ಮತದಾನದ ಸಮಯ ಬಂದಾಗ ಅವರೇ ಪುರೋಹಿತ ಆಗುತ್ತಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ಬಿಜೆಪಿ ಎಂಎಲ್‌ಸಿ ವಿಶ್ವನಾಥ್‌

“ಅದನ್ನು ಮಾಡುವ ಎಲ್ಲಾ ಸ್ವಾತಂತ್ರ್ಯ ಅವರಿಗಿದೆ. ಆದರೆ ವರ್ಷದ ಉಳಿದ ದಿನಗಳಲ್ಲಿ ಅವರು ಎಲ್ಲಿರುತ್ತಾರೆ? ಯುಪಿ ಸರ್ಕಾರವು ಕೊರೊನಾದಿಂದ ಸಾವನ್ನಪ್ಪಿದ ಮೃತ ದೇಹಗಳನ್ನು ನದಿಗೆ ಎಸೆಯುತ್ತದೆ. ಅವರು ಗಂಗಾ ತಾಯಿಯನ್ನು ಅಶುದ್ಧಗೊಳಿಸಿದ್ದಾರೆ. ಕೋವಿಡ್‌ನಿಂದ ಸಾವನ್ನಪ್ಪಿದವರ ಸಂಖ್ಯೆ ಅವರ ಬಳಿ ಇಲ್ಲ. ನಾವು ಗಂಗೆಯನ್ನು ನಮ್ಮ ತಾಯಿ ಎಂದು ಕರೆಯುತ್ತೇವೆ. ಬಿಜೆಪಿಯವರು ಕೋವಿಡ್ ಮೃತ ದೇಹಗಳನ್ನು ಗಂಗಾ ನದಿಯಲ್ಲಿ ಎಸೆದಿದ್ದಾರೆ. ಇದನ್ನು ಸಹಿಸಲಾಗದು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಾಲ್ವರು ರೈತರು ಮತ್ತು ಪತ್ರಕರ್ತರನ್ನು ಕೊಂದ ಲಖಿಂಪುರ ಖೇರಿ ಘಟನೆಯ ಬಗ್ಗೆ ಎಸ್‌ಐಟಿ ತನಿಖೆಯನ್ನು ಉಲ್ಲೇಸಿದ ಬ್ಯಾನರ್ಜಿ, ಲಖಿಂಪುರ್ ಘಟನೆಯು “ಯೋಜಿತ ಪಿತೂರಿ” ಎಂದು ಎಸ್‌ಐಟಿ ಹೇಳಿದೆ. “ಯುಪಿ ಸಿಎಂ ರಾಜೀನಾಮೆ ನೀಡಬೇಕಲ್ಲವೇ? ಗೃಹ ಸಚಿವರು ರಾಜೀನಾಮೆ ನೀಡಬಾರದೇ? ಪ್ರಧಾನಿಯವರು ಇದರ ಬಗ್ಗೆ ಮಾತನಾಡಬೇಕು?” ಎಂದು ಒತ್ತಾಯಿಸಿದ್ದಾರೆ.

“ಬಿಜೆಪಿಯನ್ನು ಸೋಲಿಸಲು ಬಯಸುವವರು ಮತಗಳನ್ನು ವಿಭಜಿಸಬೇಡಿ, ನಮ್ಮೊಂದಿಗೆ ಸೇರಿಕೊಳ್ಳಿ” ಎಂದು ಮಮತಾ ಮನವಿ ಮಾಡಿದ್ದಾರೆ. 

ಬಿಜೆಪಿ ವಿರುದ್ಧ ಹೋರಾಡುವ ಬಗ್ಗೆ ಗಂಭೀರವಾಗಿರುವ ಯಾವುದೇ ಪಕ್ಷದೊಂದಿಗೆ ಕೆಲಸ ಮಾಡಲು ತಮ್ಮ ಪಕ್ಷವು ಮುಕ್ತವಾಗಿದೆ. “ಕಾಂಗ್ರೆಸ್ ದೊಡ್ಡ ದೊಡ್ಡ ವಿಷಯಗಳನ್ನು ಹೇಳುತ್ತದೆ. ಏಕಾಂಗಿಯಾಗಿ ಹೋರಾಡುತ್ತೇವೆ ಎನ್ನುತ್ತಾರೆ. ಈಗಲೂ ನಮ್ಮೊಂದಿಗೆ ಜಗಳವಾಡುತ್ತಿದ್ದಾರೆ. ಮೊದಲು ಬಿಜೆಪಿ ವಿರುದ್ಧ ಹೋರಾಡಿ ನಂತರ ದೊಡ್ಡದಾಗಿ ಮಾತನಾಡಿ. ಕಾಂಗ್ರೆಸ್‌ ವಿರುದ್ದ ಮಾತನಾಡಲು ಏನೂ ಇಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ನರೇಂದ್ರ ಮೋದಿ ಟ್ವಿಟರ್‌‌ ಖಾತೆ ಹ್ಯಾಕ್‌: ಬಿಟ್‌ ಕಾಯಿನ್‌ ಕುರಿತು ನಕಲಿ ಪೋಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...