Homeಮುಖಪುಟಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

- Advertisement -
- Advertisement -

“ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿಯೊಬ್ಬ ಯಾಕೆ ಹೋಗಬಾರದು?” ಎಂದು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.

ಗೋವಾದ ಅಸ್ಸೋನೋರಾದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, “ನಾನು ಬಂಗಾಳಿ ಎಂದು ನನಗೆ ಹೇಳಲಾಗುತ್ತಿದೆ. ಹಾಗಾದರೆ ಅವರು ಯಾರು? ಅವರು ಗುಜರಾತಿ ಅಲ್ಲವೆ? ಅವರು ಗುಜರಾತಿ ಆಗಿರುವುದರಿಂದ ಅವರು ಇಲ್ಲಿಗೆ ಬರಬಾರದು ಎಂದು ಹೇಳಬಹುದೇ? ಒಬ್ಬ ಬಂಗಾಳಿ ರಾಷ್ಟ್ರಗೀತೆಯನ್ನು ಬರೆಯಬಹುದು; ಆದರೆ, ಒಬ್ಬ ಬಂಗಾಳಿ ಗೋವಾಕ್ಕೆ ಬರಲು ಸಾಧ್ಯವಿಲ್ಲವೇ? ನಾವೆಲ್ಲರೂ ಗಾಂಧೀಜಿಯನ್ನು ಗೌರವಿಸುತ್ತೇವೆ. ಗಾಂಧೀಜಿ ಬೆಂಗಾಲಿಯೋ ಅಥವಾ ಬೆಂಗಾಲಿ ಅಲ್ಲದವರೋ ಅಥವಾ ಗೋವನ್ನರೋ ಅಥವಾ ಯುಪಿಯವರೋ ಎಂದು ನಾವು ಎಂದಾದರೂ ಪ್ರಶ್ನಿಸಿದ್ದೇವೆಯೇ? ರಾಷ್ಟ್ರೀಯ ನಾಯಕರೆಂದರೆ ಎಲ್ಲರನ್ನೂ ಮುನ್ನಡೆಸಿಕೊಂಡು ಹೋಗುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

ಗೋವಾದ ರಾಜಕೀಯಕ್ಕೆ ತಮ್ಮ ಪಕ್ಷದ ಪ್ರವೇಶವನ್ನು ಇತರ ಪಕ್ಷಗಳು ಪ್ರಶ್ನಿಸಿವೆ. ಆದಾಗ್ಯೂ, ಗೋವಾದಲ್ಲಿರುವ ಟಿಎಂಸಿ ನಾಯಕರನ್ನು ರಿಮೋಟ್ ಕಂಟ್ರೋಲ್ ಮಾಡಲು ನಾವು ಗೋವಾಕ್ಕೆ ಬಂದಿಲ್ಲ. ನಾವು ಅವರನ್ನು ಬೆಂಬಲಿಸಲು ಬಂದಿದ್ದೇವೆ ಎಂದು ಅವರು ಹೇಳಿದ್ದಾರೆ.

“ಅವರು ರಾಷ್ಟ್ರೀಯ ನಾಯಕರಾಗುತ್ತಾರೆಯೇ? ಅವರು ಗೋವಾವನ್ನು ಗುಜರಾತ್‌ನಿಂದ ನಿಯಂತ್ರಿಸುತ್ತಾರೆ. ಗೋವಾವನ್ನು ಗುಜರಾತ್ ಅಥವಾ ದೆಹಲಿಯಿಂದ ಮುನ್ನಡೆಸಬಾದರು. ಗೋವಾದ ಜನರು ಗೋವಾವನ್ನು ಮುನ್ನಡೆಸುತ್ತಾರೆ” ಎಂದು ಅವರು ಹೇಳಿದ್ದಾರೆ.

“ನಮಗೆ ಬಿಜೆಪಿಯಿಂದ ‘ಕ್ಯಾರೆಕ್ಟರ್ ಸರ್ಟಿಫಿಕೇಟ್’ ಅಗತ್ಯವಿಲ್ಲ. ನಾವು ಚುನಾವಣೆಯ ಸಮಯ ಬಂದಾಗ ಮಾತ್ರ ಗಂಗಾ ತೀರಕ್ಕೆ ಹೋಗಿ ಪೂಜೆ ಮಾಡುವುದಿಲ್ಲ. ಚುನಾವಣಾ ಸಮಯ ಬಂದಾಗ ಮೋದಿ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಾರೆ. ಅವರು ತಪಸ್ಸಿಗಾಗಿ ಉತ್ತರಾಖಂಡದ ದೇವಸ್ಥಾನಕ್ಕೆ ಹೋಗುತ್ತಾರೆ. ಮತದಾನದ ಸಮಯ ಬಂದಾಗ ಅವರೇ ಪುರೋಹಿತ ಆಗುತ್ತಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ಬಿಜೆಪಿ ಎಂಎಲ್‌ಸಿ ವಿಶ್ವನಾಥ್‌

“ಅದನ್ನು ಮಾಡುವ ಎಲ್ಲಾ ಸ್ವಾತಂತ್ರ್ಯ ಅವರಿಗಿದೆ. ಆದರೆ ವರ್ಷದ ಉಳಿದ ದಿನಗಳಲ್ಲಿ ಅವರು ಎಲ್ಲಿರುತ್ತಾರೆ? ಯುಪಿ ಸರ್ಕಾರವು ಕೊರೊನಾದಿಂದ ಸಾವನ್ನಪ್ಪಿದ ಮೃತ ದೇಹಗಳನ್ನು ನದಿಗೆ ಎಸೆಯುತ್ತದೆ. ಅವರು ಗಂಗಾ ತಾಯಿಯನ್ನು ಅಶುದ್ಧಗೊಳಿಸಿದ್ದಾರೆ. ಕೋವಿಡ್‌ನಿಂದ ಸಾವನ್ನಪ್ಪಿದವರ ಸಂಖ್ಯೆ ಅವರ ಬಳಿ ಇಲ್ಲ. ನಾವು ಗಂಗೆಯನ್ನು ನಮ್ಮ ತಾಯಿ ಎಂದು ಕರೆಯುತ್ತೇವೆ. ಬಿಜೆಪಿಯವರು ಕೋವಿಡ್ ಮೃತ ದೇಹಗಳನ್ನು ಗಂಗಾ ನದಿಯಲ್ಲಿ ಎಸೆದಿದ್ದಾರೆ. ಇದನ್ನು ಸಹಿಸಲಾಗದು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಾಲ್ವರು ರೈತರು ಮತ್ತು ಪತ್ರಕರ್ತರನ್ನು ಕೊಂದ ಲಖಿಂಪುರ ಖೇರಿ ಘಟನೆಯ ಬಗ್ಗೆ ಎಸ್‌ಐಟಿ ತನಿಖೆಯನ್ನು ಉಲ್ಲೇಸಿದ ಬ್ಯಾನರ್ಜಿ, ಲಖಿಂಪುರ್ ಘಟನೆಯು “ಯೋಜಿತ ಪಿತೂರಿ” ಎಂದು ಎಸ್‌ಐಟಿ ಹೇಳಿದೆ. “ಯುಪಿ ಸಿಎಂ ರಾಜೀನಾಮೆ ನೀಡಬೇಕಲ್ಲವೇ? ಗೃಹ ಸಚಿವರು ರಾಜೀನಾಮೆ ನೀಡಬಾರದೇ? ಪ್ರಧಾನಿಯವರು ಇದರ ಬಗ್ಗೆ ಮಾತನಾಡಬೇಕು?” ಎಂದು ಒತ್ತಾಯಿಸಿದ್ದಾರೆ.

“ಬಿಜೆಪಿಯನ್ನು ಸೋಲಿಸಲು ಬಯಸುವವರು ಮತಗಳನ್ನು ವಿಭಜಿಸಬೇಡಿ, ನಮ್ಮೊಂದಿಗೆ ಸೇರಿಕೊಳ್ಳಿ” ಎಂದು ಮಮತಾ ಮನವಿ ಮಾಡಿದ್ದಾರೆ. 

ಬಿಜೆಪಿ ವಿರುದ್ಧ ಹೋರಾಡುವ ಬಗ್ಗೆ ಗಂಭೀರವಾಗಿರುವ ಯಾವುದೇ ಪಕ್ಷದೊಂದಿಗೆ ಕೆಲಸ ಮಾಡಲು ತಮ್ಮ ಪಕ್ಷವು ಮುಕ್ತವಾಗಿದೆ. “ಕಾಂಗ್ರೆಸ್ ದೊಡ್ಡ ದೊಡ್ಡ ವಿಷಯಗಳನ್ನು ಹೇಳುತ್ತದೆ. ಏಕಾಂಗಿಯಾಗಿ ಹೋರಾಡುತ್ತೇವೆ ಎನ್ನುತ್ತಾರೆ. ಈಗಲೂ ನಮ್ಮೊಂದಿಗೆ ಜಗಳವಾಡುತ್ತಿದ್ದಾರೆ. ಮೊದಲು ಬಿಜೆಪಿ ವಿರುದ್ಧ ಹೋರಾಡಿ ನಂತರ ದೊಡ್ಡದಾಗಿ ಮಾತನಾಡಿ. ಕಾಂಗ್ರೆಸ್‌ ವಿರುದ್ದ ಮಾತನಾಡಲು ಏನೂ ಇಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ನರೇಂದ್ರ ಮೋದಿ ಟ್ವಿಟರ್‌‌ ಖಾತೆ ಹ್ಯಾಕ್‌: ಬಿಟ್‌ ಕಾಯಿನ್‌ ಕುರಿತು ನಕಲಿ ಪೋಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...