Homeಮುಖಪುಟಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

- Advertisement -
- Advertisement -

“ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿಯೊಬ್ಬ ಯಾಕೆ ಹೋಗಬಾರದು?” ಎಂದು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.

ಗೋವಾದ ಅಸ್ಸೋನೋರಾದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, “ನಾನು ಬಂಗಾಳಿ ಎಂದು ನನಗೆ ಹೇಳಲಾಗುತ್ತಿದೆ. ಹಾಗಾದರೆ ಅವರು ಯಾರು? ಅವರು ಗುಜರಾತಿ ಅಲ್ಲವೆ? ಅವರು ಗುಜರಾತಿ ಆಗಿರುವುದರಿಂದ ಅವರು ಇಲ್ಲಿಗೆ ಬರಬಾರದು ಎಂದು ಹೇಳಬಹುದೇ? ಒಬ್ಬ ಬಂಗಾಳಿ ರಾಷ್ಟ್ರಗೀತೆಯನ್ನು ಬರೆಯಬಹುದು; ಆದರೆ, ಒಬ್ಬ ಬಂಗಾಳಿ ಗೋವಾಕ್ಕೆ ಬರಲು ಸಾಧ್ಯವಿಲ್ಲವೇ? ನಾವೆಲ್ಲರೂ ಗಾಂಧೀಜಿಯನ್ನು ಗೌರವಿಸುತ್ತೇವೆ. ಗಾಂಧೀಜಿ ಬೆಂಗಾಲಿಯೋ ಅಥವಾ ಬೆಂಗಾಲಿ ಅಲ್ಲದವರೋ ಅಥವಾ ಗೋವನ್ನರೋ ಅಥವಾ ಯುಪಿಯವರೋ ಎಂದು ನಾವು ಎಂದಾದರೂ ಪ್ರಶ್ನಿಸಿದ್ದೇವೆಯೇ? ರಾಷ್ಟ್ರೀಯ ನಾಯಕರೆಂದರೆ ಎಲ್ಲರನ್ನೂ ಮುನ್ನಡೆಸಿಕೊಂಡು ಹೋಗುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

ಗೋವಾದ ರಾಜಕೀಯಕ್ಕೆ ತಮ್ಮ ಪಕ್ಷದ ಪ್ರವೇಶವನ್ನು ಇತರ ಪಕ್ಷಗಳು ಪ್ರಶ್ನಿಸಿವೆ. ಆದಾಗ್ಯೂ, ಗೋವಾದಲ್ಲಿರುವ ಟಿಎಂಸಿ ನಾಯಕರನ್ನು ರಿಮೋಟ್ ಕಂಟ್ರೋಲ್ ಮಾಡಲು ನಾವು ಗೋವಾಕ್ಕೆ ಬಂದಿಲ್ಲ. ನಾವು ಅವರನ್ನು ಬೆಂಬಲಿಸಲು ಬಂದಿದ್ದೇವೆ ಎಂದು ಅವರು ಹೇಳಿದ್ದಾರೆ.

“ಅವರು ರಾಷ್ಟ್ರೀಯ ನಾಯಕರಾಗುತ್ತಾರೆಯೇ? ಅವರು ಗೋವಾವನ್ನು ಗುಜರಾತ್‌ನಿಂದ ನಿಯಂತ್ರಿಸುತ್ತಾರೆ. ಗೋವಾವನ್ನು ಗುಜರಾತ್ ಅಥವಾ ದೆಹಲಿಯಿಂದ ಮುನ್ನಡೆಸಬಾದರು. ಗೋವಾದ ಜನರು ಗೋವಾವನ್ನು ಮುನ್ನಡೆಸುತ್ತಾರೆ” ಎಂದು ಅವರು ಹೇಳಿದ್ದಾರೆ.

“ನಮಗೆ ಬಿಜೆಪಿಯಿಂದ ‘ಕ್ಯಾರೆಕ್ಟರ್ ಸರ್ಟಿಫಿಕೇಟ್’ ಅಗತ್ಯವಿಲ್ಲ. ನಾವು ಚುನಾವಣೆಯ ಸಮಯ ಬಂದಾಗ ಮಾತ್ರ ಗಂಗಾ ತೀರಕ್ಕೆ ಹೋಗಿ ಪೂಜೆ ಮಾಡುವುದಿಲ್ಲ. ಚುನಾವಣಾ ಸಮಯ ಬಂದಾಗ ಮೋದಿ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಾರೆ. ಅವರು ತಪಸ್ಸಿಗಾಗಿ ಉತ್ತರಾಖಂಡದ ದೇವಸ್ಥಾನಕ್ಕೆ ಹೋಗುತ್ತಾರೆ. ಮತದಾನದ ಸಮಯ ಬಂದಾಗ ಅವರೇ ಪುರೋಹಿತ ಆಗುತ್ತಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ಬಿಜೆಪಿ ಎಂಎಲ್‌ಸಿ ವಿಶ್ವನಾಥ್‌

“ಅದನ್ನು ಮಾಡುವ ಎಲ್ಲಾ ಸ್ವಾತಂತ್ರ್ಯ ಅವರಿಗಿದೆ. ಆದರೆ ವರ್ಷದ ಉಳಿದ ದಿನಗಳಲ್ಲಿ ಅವರು ಎಲ್ಲಿರುತ್ತಾರೆ? ಯುಪಿ ಸರ್ಕಾರವು ಕೊರೊನಾದಿಂದ ಸಾವನ್ನಪ್ಪಿದ ಮೃತ ದೇಹಗಳನ್ನು ನದಿಗೆ ಎಸೆಯುತ್ತದೆ. ಅವರು ಗಂಗಾ ತಾಯಿಯನ್ನು ಅಶುದ್ಧಗೊಳಿಸಿದ್ದಾರೆ. ಕೋವಿಡ್‌ನಿಂದ ಸಾವನ್ನಪ್ಪಿದವರ ಸಂಖ್ಯೆ ಅವರ ಬಳಿ ಇಲ್ಲ. ನಾವು ಗಂಗೆಯನ್ನು ನಮ್ಮ ತಾಯಿ ಎಂದು ಕರೆಯುತ್ತೇವೆ. ಬಿಜೆಪಿಯವರು ಕೋವಿಡ್ ಮೃತ ದೇಹಗಳನ್ನು ಗಂಗಾ ನದಿಯಲ್ಲಿ ಎಸೆದಿದ್ದಾರೆ. ಇದನ್ನು ಸಹಿಸಲಾಗದು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಾಲ್ವರು ರೈತರು ಮತ್ತು ಪತ್ರಕರ್ತರನ್ನು ಕೊಂದ ಲಖಿಂಪುರ ಖೇರಿ ಘಟನೆಯ ಬಗ್ಗೆ ಎಸ್‌ಐಟಿ ತನಿಖೆಯನ್ನು ಉಲ್ಲೇಸಿದ ಬ್ಯಾನರ್ಜಿ, ಲಖಿಂಪುರ್ ಘಟನೆಯು “ಯೋಜಿತ ಪಿತೂರಿ” ಎಂದು ಎಸ್‌ಐಟಿ ಹೇಳಿದೆ. “ಯುಪಿ ಸಿಎಂ ರಾಜೀನಾಮೆ ನೀಡಬೇಕಲ್ಲವೇ? ಗೃಹ ಸಚಿವರು ರಾಜೀನಾಮೆ ನೀಡಬಾರದೇ? ಪ್ರಧಾನಿಯವರು ಇದರ ಬಗ್ಗೆ ಮಾತನಾಡಬೇಕು?” ಎಂದು ಒತ್ತಾಯಿಸಿದ್ದಾರೆ.

“ಬಿಜೆಪಿಯನ್ನು ಸೋಲಿಸಲು ಬಯಸುವವರು ಮತಗಳನ್ನು ವಿಭಜಿಸಬೇಡಿ, ನಮ್ಮೊಂದಿಗೆ ಸೇರಿಕೊಳ್ಳಿ” ಎಂದು ಮಮತಾ ಮನವಿ ಮಾಡಿದ್ದಾರೆ. 

ಬಿಜೆಪಿ ವಿರುದ್ಧ ಹೋರಾಡುವ ಬಗ್ಗೆ ಗಂಭೀರವಾಗಿರುವ ಯಾವುದೇ ಪಕ್ಷದೊಂದಿಗೆ ಕೆಲಸ ಮಾಡಲು ತಮ್ಮ ಪಕ್ಷವು ಮುಕ್ತವಾಗಿದೆ. “ಕಾಂಗ್ರೆಸ್ ದೊಡ್ಡ ದೊಡ್ಡ ವಿಷಯಗಳನ್ನು ಹೇಳುತ್ತದೆ. ಏಕಾಂಗಿಯಾಗಿ ಹೋರಾಡುತ್ತೇವೆ ಎನ್ನುತ್ತಾರೆ. ಈಗಲೂ ನಮ್ಮೊಂದಿಗೆ ಜಗಳವಾಡುತ್ತಿದ್ದಾರೆ. ಮೊದಲು ಬಿಜೆಪಿ ವಿರುದ್ಧ ಹೋರಾಡಿ ನಂತರ ದೊಡ್ಡದಾಗಿ ಮಾತನಾಡಿ. ಕಾಂಗ್ರೆಸ್‌ ವಿರುದ್ದ ಮಾತನಾಡಲು ಏನೂ ಇಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ನರೇಂದ್ರ ಮೋದಿ ಟ್ವಿಟರ್‌‌ ಖಾತೆ ಹ್ಯಾಕ್‌: ಬಿಟ್‌ ಕಾಯಿನ್‌ ಕುರಿತು ನಕಲಿ ಪೋಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...