Homeಮುಖಪುಟಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

- Advertisement -
- Advertisement -

“ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿಯೊಬ್ಬ ಯಾಕೆ ಹೋಗಬಾರದು?” ಎಂದು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.

ಗೋವಾದ ಅಸ್ಸೋನೋರಾದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, “ನಾನು ಬಂಗಾಳಿ ಎಂದು ನನಗೆ ಹೇಳಲಾಗುತ್ತಿದೆ. ಹಾಗಾದರೆ ಅವರು ಯಾರು? ಅವರು ಗುಜರಾತಿ ಅಲ್ಲವೆ? ಅವರು ಗುಜರಾತಿ ಆಗಿರುವುದರಿಂದ ಅವರು ಇಲ್ಲಿಗೆ ಬರಬಾರದು ಎಂದು ಹೇಳಬಹುದೇ? ಒಬ್ಬ ಬಂಗಾಳಿ ರಾಷ್ಟ್ರಗೀತೆಯನ್ನು ಬರೆಯಬಹುದು; ಆದರೆ, ಒಬ್ಬ ಬಂಗಾಳಿ ಗೋವಾಕ್ಕೆ ಬರಲು ಸಾಧ್ಯವಿಲ್ಲವೇ? ನಾವೆಲ್ಲರೂ ಗಾಂಧೀಜಿಯನ್ನು ಗೌರವಿಸುತ್ತೇವೆ. ಗಾಂಧೀಜಿ ಬೆಂಗಾಲಿಯೋ ಅಥವಾ ಬೆಂಗಾಲಿ ಅಲ್ಲದವರೋ ಅಥವಾ ಗೋವನ್ನರೋ ಅಥವಾ ಯುಪಿಯವರೋ ಎಂದು ನಾವು ಎಂದಾದರೂ ಪ್ರಶ್ನಿಸಿದ್ದೇವೆಯೇ? ರಾಷ್ಟ್ರೀಯ ನಾಯಕರೆಂದರೆ ಎಲ್ಲರನ್ನೂ ಮುನ್ನಡೆಸಿಕೊಂಡು ಹೋಗುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

ಗೋವಾದ ರಾಜಕೀಯಕ್ಕೆ ತಮ್ಮ ಪಕ್ಷದ ಪ್ರವೇಶವನ್ನು ಇತರ ಪಕ್ಷಗಳು ಪ್ರಶ್ನಿಸಿವೆ. ಆದಾಗ್ಯೂ, ಗೋವಾದಲ್ಲಿರುವ ಟಿಎಂಸಿ ನಾಯಕರನ್ನು ರಿಮೋಟ್ ಕಂಟ್ರೋಲ್ ಮಾಡಲು ನಾವು ಗೋವಾಕ್ಕೆ ಬಂದಿಲ್ಲ. ನಾವು ಅವರನ್ನು ಬೆಂಬಲಿಸಲು ಬಂದಿದ್ದೇವೆ ಎಂದು ಅವರು ಹೇಳಿದ್ದಾರೆ.

“ಅವರು ರಾಷ್ಟ್ರೀಯ ನಾಯಕರಾಗುತ್ತಾರೆಯೇ? ಅವರು ಗೋವಾವನ್ನು ಗುಜರಾತ್‌ನಿಂದ ನಿಯಂತ್ರಿಸುತ್ತಾರೆ. ಗೋವಾವನ್ನು ಗುಜರಾತ್ ಅಥವಾ ದೆಹಲಿಯಿಂದ ಮುನ್ನಡೆಸಬಾದರು. ಗೋವಾದ ಜನರು ಗೋವಾವನ್ನು ಮುನ್ನಡೆಸುತ್ತಾರೆ” ಎಂದು ಅವರು ಹೇಳಿದ್ದಾರೆ.

“ನಮಗೆ ಬಿಜೆಪಿಯಿಂದ ‘ಕ್ಯಾರೆಕ್ಟರ್ ಸರ್ಟಿಫಿಕೇಟ್’ ಅಗತ್ಯವಿಲ್ಲ. ನಾವು ಚುನಾವಣೆಯ ಸಮಯ ಬಂದಾಗ ಮಾತ್ರ ಗಂಗಾ ತೀರಕ್ಕೆ ಹೋಗಿ ಪೂಜೆ ಮಾಡುವುದಿಲ್ಲ. ಚುನಾವಣಾ ಸಮಯ ಬಂದಾಗ ಮೋದಿ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಾರೆ. ಅವರು ತಪಸ್ಸಿಗಾಗಿ ಉತ್ತರಾಖಂಡದ ದೇವಸ್ಥಾನಕ್ಕೆ ಹೋಗುತ್ತಾರೆ. ಮತದಾನದ ಸಮಯ ಬಂದಾಗ ಅವರೇ ಪುರೋಹಿತ ಆಗುತ್ತಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ಬಿಜೆಪಿ ಎಂಎಲ್‌ಸಿ ವಿಶ್ವನಾಥ್‌

“ಅದನ್ನು ಮಾಡುವ ಎಲ್ಲಾ ಸ್ವಾತಂತ್ರ್ಯ ಅವರಿಗಿದೆ. ಆದರೆ ವರ್ಷದ ಉಳಿದ ದಿನಗಳಲ್ಲಿ ಅವರು ಎಲ್ಲಿರುತ್ತಾರೆ? ಯುಪಿ ಸರ್ಕಾರವು ಕೊರೊನಾದಿಂದ ಸಾವನ್ನಪ್ಪಿದ ಮೃತ ದೇಹಗಳನ್ನು ನದಿಗೆ ಎಸೆಯುತ್ತದೆ. ಅವರು ಗಂಗಾ ತಾಯಿಯನ್ನು ಅಶುದ್ಧಗೊಳಿಸಿದ್ದಾರೆ. ಕೋವಿಡ್‌ನಿಂದ ಸಾವನ್ನಪ್ಪಿದವರ ಸಂಖ್ಯೆ ಅವರ ಬಳಿ ಇಲ್ಲ. ನಾವು ಗಂಗೆಯನ್ನು ನಮ್ಮ ತಾಯಿ ಎಂದು ಕರೆಯುತ್ತೇವೆ. ಬಿಜೆಪಿಯವರು ಕೋವಿಡ್ ಮೃತ ದೇಹಗಳನ್ನು ಗಂಗಾ ನದಿಯಲ್ಲಿ ಎಸೆದಿದ್ದಾರೆ. ಇದನ್ನು ಸಹಿಸಲಾಗದು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಾಲ್ವರು ರೈತರು ಮತ್ತು ಪತ್ರಕರ್ತರನ್ನು ಕೊಂದ ಲಖಿಂಪುರ ಖೇರಿ ಘಟನೆಯ ಬಗ್ಗೆ ಎಸ್‌ಐಟಿ ತನಿಖೆಯನ್ನು ಉಲ್ಲೇಸಿದ ಬ್ಯಾನರ್ಜಿ, ಲಖಿಂಪುರ್ ಘಟನೆಯು “ಯೋಜಿತ ಪಿತೂರಿ” ಎಂದು ಎಸ್‌ಐಟಿ ಹೇಳಿದೆ. “ಯುಪಿ ಸಿಎಂ ರಾಜೀನಾಮೆ ನೀಡಬೇಕಲ್ಲವೇ? ಗೃಹ ಸಚಿವರು ರಾಜೀನಾಮೆ ನೀಡಬಾರದೇ? ಪ್ರಧಾನಿಯವರು ಇದರ ಬಗ್ಗೆ ಮಾತನಾಡಬೇಕು?” ಎಂದು ಒತ್ತಾಯಿಸಿದ್ದಾರೆ.

“ಬಿಜೆಪಿಯನ್ನು ಸೋಲಿಸಲು ಬಯಸುವವರು ಮತಗಳನ್ನು ವಿಭಜಿಸಬೇಡಿ, ನಮ್ಮೊಂದಿಗೆ ಸೇರಿಕೊಳ್ಳಿ” ಎಂದು ಮಮತಾ ಮನವಿ ಮಾಡಿದ್ದಾರೆ. 

ಬಿಜೆಪಿ ವಿರುದ್ಧ ಹೋರಾಡುವ ಬಗ್ಗೆ ಗಂಭೀರವಾಗಿರುವ ಯಾವುದೇ ಪಕ್ಷದೊಂದಿಗೆ ಕೆಲಸ ಮಾಡಲು ತಮ್ಮ ಪಕ್ಷವು ಮುಕ್ತವಾಗಿದೆ. “ಕಾಂಗ್ರೆಸ್ ದೊಡ್ಡ ದೊಡ್ಡ ವಿಷಯಗಳನ್ನು ಹೇಳುತ್ತದೆ. ಏಕಾಂಗಿಯಾಗಿ ಹೋರಾಡುತ್ತೇವೆ ಎನ್ನುತ್ತಾರೆ. ಈಗಲೂ ನಮ್ಮೊಂದಿಗೆ ಜಗಳವಾಡುತ್ತಿದ್ದಾರೆ. ಮೊದಲು ಬಿಜೆಪಿ ವಿರುದ್ಧ ಹೋರಾಡಿ ನಂತರ ದೊಡ್ಡದಾಗಿ ಮಾತನಾಡಿ. ಕಾಂಗ್ರೆಸ್‌ ವಿರುದ್ದ ಮಾತನಾಡಲು ಏನೂ ಇಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ನರೇಂದ್ರ ಮೋದಿ ಟ್ವಿಟರ್‌‌ ಖಾತೆ ಹ್ಯಾಕ್‌: ಬಿಟ್‌ ಕಾಯಿನ್‌ ಕುರಿತು ನಕಲಿ ಪೋಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...