Homeಮುಖಪುಟಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

- Advertisement -
- Advertisement -

“ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿಯೊಬ್ಬ ಯಾಕೆ ಹೋಗಬಾರದು?” ಎಂದು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.

ಗೋವಾದ ಅಸ್ಸೋನೋರಾದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, “ನಾನು ಬಂಗಾಳಿ ಎಂದು ನನಗೆ ಹೇಳಲಾಗುತ್ತಿದೆ. ಹಾಗಾದರೆ ಅವರು ಯಾರು? ಅವರು ಗುಜರಾತಿ ಅಲ್ಲವೆ? ಅವರು ಗುಜರಾತಿ ಆಗಿರುವುದರಿಂದ ಅವರು ಇಲ್ಲಿಗೆ ಬರಬಾರದು ಎಂದು ಹೇಳಬಹುದೇ? ಒಬ್ಬ ಬಂಗಾಳಿ ರಾಷ್ಟ್ರಗೀತೆಯನ್ನು ಬರೆಯಬಹುದು; ಆದರೆ, ಒಬ್ಬ ಬಂಗಾಳಿ ಗೋವಾಕ್ಕೆ ಬರಲು ಸಾಧ್ಯವಿಲ್ಲವೇ? ನಾವೆಲ್ಲರೂ ಗಾಂಧೀಜಿಯನ್ನು ಗೌರವಿಸುತ್ತೇವೆ. ಗಾಂಧೀಜಿ ಬೆಂಗಾಲಿಯೋ ಅಥವಾ ಬೆಂಗಾಲಿ ಅಲ್ಲದವರೋ ಅಥವಾ ಗೋವನ್ನರೋ ಅಥವಾ ಯುಪಿಯವರೋ ಎಂದು ನಾವು ಎಂದಾದರೂ ಪ್ರಶ್ನಿಸಿದ್ದೇವೆಯೇ? ರಾಷ್ಟ್ರೀಯ ನಾಯಕರೆಂದರೆ ಎಲ್ಲರನ್ನೂ ಮುನ್ನಡೆಸಿಕೊಂಡು ಹೋಗುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

ಗೋವಾದ ರಾಜಕೀಯಕ್ಕೆ ತಮ್ಮ ಪಕ್ಷದ ಪ್ರವೇಶವನ್ನು ಇತರ ಪಕ್ಷಗಳು ಪ್ರಶ್ನಿಸಿವೆ. ಆದಾಗ್ಯೂ, ಗೋವಾದಲ್ಲಿರುವ ಟಿಎಂಸಿ ನಾಯಕರನ್ನು ರಿಮೋಟ್ ಕಂಟ್ರೋಲ್ ಮಾಡಲು ನಾವು ಗೋವಾಕ್ಕೆ ಬಂದಿಲ್ಲ. ನಾವು ಅವರನ್ನು ಬೆಂಬಲಿಸಲು ಬಂದಿದ್ದೇವೆ ಎಂದು ಅವರು ಹೇಳಿದ್ದಾರೆ.

“ಅವರು ರಾಷ್ಟ್ರೀಯ ನಾಯಕರಾಗುತ್ತಾರೆಯೇ? ಅವರು ಗೋವಾವನ್ನು ಗುಜರಾತ್‌ನಿಂದ ನಿಯಂತ್ರಿಸುತ್ತಾರೆ. ಗೋವಾವನ್ನು ಗುಜರಾತ್ ಅಥವಾ ದೆಹಲಿಯಿಂದ ಮುನ್ನಡೆಸಬಾದರು. ಗೋವಾದ ಜನರು ಗೋವಾವನ್ನು ಮುನ್ನಡೆಸುತ್ತಾರೆ” ಎಂದು ಅವರು ಹೇಳಿದ್ದಾರೆ.

“ನಮಗೆ ಬಿಜೆಪಿಯಿಂದ ‘ಕ್ಯಾರೆಕ್ಟರ್ ಸರ್ಟಿಫಿಕೇಟ್’ ಅಗತ್ಯವಿಲ್ಲ. ನಾವು ಚುನಾವಣೆಯ ಸಮಯ ಬಂದಾಗ ಮಾತ್ರ ಗಂಗಾ ತೀರಕ್ಕೆ ಹೋಗಿ ಪೂಜೆ ಮಾಡುವುದಿಲ್ಲ. ಚುನಾವಣಾ ಸಮಯ ಬಂದಾಗ ಮೋದಿ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಾರೆ. ಅವರು ತಪಸ್ಸಿಗಾಗಿ ಉತ್ತರಾಖಂಡದ ದೇವಸ್ಥಾನಕ್ಕೆ ಹೋಗುತ್ತಾರೆ. ಮತದಾನದ ಸಮಯ ಬಂದಾಗ ಅವರೇ ಪುರೋಹಿತ ಆಗುತ್ತಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ಬಿಜೆಪಿ ಎಂಎಲ್‌ಸಿ ವಿಶ್ವನಾಥ್‌

“ಅದನ್ನು ಮಾಡುವ ಎಲ್ಲಾ ಸ್ವಾತಂತ್ರ್ಯ ಅವರಿಗಿದೆ. ಆದರೆ ವರ್ಷದ ಉಳಿದ ದಿನಗಳಲ್ಲಿ ಅವರು ಎಲ್ಲಿರುತ್ತಾರೆ? ಯುಪಿ ಸರ್ಕಾರವು ಕೊರೊನಾದಿಂದ ಸಾವನ್ನಪ್ಪಿದ ಮೃತ ದೇಹಗಳನ್ನು ನದಿಗೆ ಎಸೆಯುತ್ತದೆ. ಅವರು ಗಂಗಾ ತಾಯಿಯನ್ನು ಅಶುದ್ಧಗೊಳಿಸಿದ್ದಾರೆ. ಕೋವಿಡ್‌ನಿಂದ ಸಾವನ್ನಪ್ಪಿದವರ ಸಂಖ್ಯೆ ಅವರ ಬಳಿ ಇಲ್ಲ. ನಾವು ಗಂಗೆಯನ್ನು ನಮ್ಮ ತಾಯಿ ಎಂದು ಕರೆಯುತ್ತೇವೆ. ಬಿಜೆಪಿಯವರು ಕೋವಿಡ್ ಮೃತ ದೇಹಗಳನ್ನು ಗಂಗಾ ನದಿಯಲ್ಲಿ ಎಸೆದಿದ್ದಾರೆ. ಇದನ್ನು ಸಹಿಸಲಾಗದು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಾಲ್ವರು ರೈತರು ಮತ್ತು ಪತ್ರಕರ್ತರನ್ನು ಕೊಂದ ಲಖಿಂಪುರ ಖೇರಿ ಘಟನೆಯ ಬಗ್ಗೆ ಎಸ್‌ಐಟಿ ತನಿಖೆಯನ್ನು ಉಲ್ಲೇಸಿದ ಬ್ಯಾನರ್ಜಿ, ಲಖಿಂಪುರ್ ಘಟನೆಯು “ಯೋಜಿತ ಪಿತೂರಿ” ಎಂದು ಎಸ್‌ಐಟಿ ಹೇಳಿದೆ. “ಯುಪಿ ಸಿಎಂ ರಾಜೀನಾಮೆ ನೀಡಬೇಕಲ್ಲವೇ? ಗೃಹ ಸಚಿವರು ರಾಜೀನಾಮೆ ನೀಡಬಾರದೇ? ಪ್ರಧಾನಿಯವರು ಇದರ ಬಗ್ಗೆ ಮಾತನಾಡಬೇಕು?” ಎಂದು ಒತ್ತಾಯಿಸಿದ್ದಾರೆ.

“ಬಿಜೆಪಿಯನ್ನು ಸೋಲಿಸಲು ಬಯಸುವವರು ಮತಗಳನ್ನು ವಿಭಜಿಸಬೇಡಿ, ನಮ್ಮೊಂದಿಗೆ ಸೇರಿಕೊಳ್ಳಿ” ಎಂದು ಮಮತಾ ಮನವಿ ಮಾಡಿದ್ದಾರೆ. 

ಬಿಜೆಪಿ ವಿರುದ್ಧ ಹೋರಾಡುವ ಬಗ್ಗೆ ಗಂಭೀರವಾಗಿರುವ ಯಾವುದೇ ಪಕ್ಷದೊಂದಿಗೆ ಕೆಲಸ ಮಾಡಲು ತಮ್ಮ ಪಕ್ಷವು ಮುಕ್ತವಾಗಿದೆ. “ಕಾಂಗ್ರೆಸ್ ದೊಡ್ಡ ದೊಡ್ಡ ವಿಷಯಗಳನ್ನು ಹೇಳುತ್ತದೆ. ಏಕಾಂಗಿಯಾಗಿ ಹೋರಾಡುತ್ತೇವೆ ಎನ್ನುತ್ತಾರೆ. ಈಗಲೂ ನಮ್ಮೊಂದಿಗೆ ಜಗಳವಾಡುತ್ತಿದ್ದಾರೆ. ಮೊದಲು ಬಿಜೆಪಿ ವಿರುದ್ಧ ಹೋರಾಡಿ ನಂತರ ದೊಡ್ಡದಾಗಿ ಮಾತನಾಡಿ. ಕಾಂಗ್ರೆಸ್‌ ವಿರುದ್ದ ಮಾತನಾಡಲು ಏನೂ ಇಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ನರೇಂದ್ರ ಮೋದಿ ಟ್ವಿಟರ್‌‌ ಖಾತೆ ಹ್ಯಾಕ್‌: ಬಿಟ್‌ ಕಾಯಿನ್‌ ಕುರಿತು ನಕಲಿ ಪೋಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...