Homeಮುಖಪುಟಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

- Advertisement -
- Advertisement -

“ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿಯೊಬ್ಬ ಯಾಕೆ ಹೋಗಬಾರದು?” ಎಂದು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.

ಗೋವಾದ ಅಸ್ಸೋನೋರಾದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, “ನಾನು ಬಂಗಾಳಿ ಎಂದು ನನಗೆ ಹೇಳಲಾಗುತ್ತಿದೆ. ಹಾಗಾದರೆ ಅವರು ಯಾರು? ಅವರು ಗುಜರಾತಿ ಅಲ್ಲವೆ? ಅವರು ಗುಜರಾತಿ ಆಗಿರುವುದರಿಂದ ಅವರು ಇಲ್ಲಿಗೆ ಬರಬಾರದು ಎಂದು ಹೇಳಬಹುದೇ? ಒಬ್ಬ ಬಂಗಾಳಿ ರಾಷ್ಟ್ರಗೀತೆಯನ್ನು ಬರೆಯಬಹುದು; ಆದರೆ, ಒಬ್ಬ ಬಂಗಾಳಿ ಗೋವಾಕ್ಕೆ ಬರಲು ಸಾಧ್ಯವಿಲ್ಲವೇ? ನಾವೆಲ್ಲರೂ ಗಾಂಧೀಜಿಯನ್ನು ಗೌರವಿಸುತ್ತೇವೆ. ಗಾಂಧೀಜಿ ಬೆಂಗಾಲಿಯೋ ಅಥವಾ ಬೆಂಗಾಲಿ ಅಲ್ಲದವರೋ ಅಥವಾ ಗೋವನ್ನರೋ ಅಥವಾ ಯುಪಿಯವರೋ ಎಂದು ನಾವು ಎಂದಾದರೂ ಪ್ರಶ್ನಿಸಿದ್ದೇವೆಯೇ? ರಾಷ್ಟ್ರೀಯ ನಾಯಕರೆಂದರೆ ಎಲ್ಲರನ್ನೂ ಮುನ್ನಡೆಸಿಕೊಂಡು ಹೋಗುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

ಗೋವಾದ ರಾಜಕೀಯಕ್ಕೆ ತಮ್ಮ ಪಕ್ಷದ ಪ್ರವೇಶವನ್ನು ಇತರ ಪಕ್ಷಗಳು ಪ್ರಶ್ನಿಸಿವೆ. ಆದಾಗ್ಯೂ, ಗೋವಾದಲ್ಲಿರುವ ಟಿಎಂಸಿ ನಾಯಕರನ್ನು ರಿಮೋಟ್ ಕಂಟ್ರೋಲ್ ಮಾಡಲು ನಾವು ಗೋವಾಕ್ಕೆ ಬಂದಿಲ್ಲ. ನಾವು ಅವರನ್ನು ಬೆಂಬಲಿಸಲು ಬಂದಿದ್ದೇವೆ ಎಂದು ಅವರು ಹೇಳಿದ್ದಾರೆ.

“ಅವರು ರಾಷ್ಟ್ರೀಯ ನಾಯಕರಾಗುತ್ತಾರೆಯೇ? ಅವರು ಗೋವಾವನ್ನು ಗುಜರಾತ್‌ನಿಂದ ನಿಯಂತ್ರಿಸುತ್ತಾರೆ. ಗೋವಾವನ್ನು ಗುಜರಾತ್ ಅಥವಾ ದೆಹಲಿಯಿಂದ ಮುನ್ನಡೆಸಬಾದರು. ಗೋವಾದ ಜನರು ಗೋವಾವನ್ನು ಮುನ್ನಡೆಸುತ್ತಾರೆ” ಎಂದು ಅವರು ಹೇಳಿದ್ದಾರೆ.

“ನಮಗೆ ಬಿಜೆಪಿಯಿಂದ ‘ಕ್ಯಾರೆಕ್ಟರ್ ಸರ್ಟಿಫಿಕೇಟ್’ ಅಗತ್ಯವಿಲ್ಲ. ನಾವು ಚುನಾವಣೆಯ ಸಮಯ ಬಂದಾಗ ಮಾತ್ರ ಗಂಗಾ ತೀರಕ್ಕೆ ಹೋಗಿ ಪೂಜೆ ಮಾಡುವುದಿಲ್ಲ. ಚುನಾವಣಾ ಸಮಯ ಬಂದಾಗ ಮೋದಿ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಾರೆ. ಅವರು ತಪಸ್ಸಿಗಾಗಿ ಉತ್ತರಾಖಂಡದ ದೇವಸ್ಥಾನಕ್ಕೆ ಹೋಗುತ್ತಾರೆ. ಮತದಾನದ ಸಮಯ ಬಂದಾಗ ಅವರೇ ಪುರೋಹಿತ ಆಗುತ್ತಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ಬಿಜೆಪಿ ಎಂಎಲ್‌ಸಿ ವಿಶ್ವನಾಥ್‌

“ಅದನ್ನು ಮಾಡುವ ಎಲ್ಲಾ ಸ್ವಾತಂತ್ರ್ಯ ಅವರಿಗಿದೆ. ಆದರೆ ವರ್ಷದ ಉಳಿದ ದಿನಗಳಲ್ಲಿ ಅವರು ಎಲ್ಲಿರುತ್ತಾರೆ? ಯುಪಿ ಸರ್ಕಾರವು ಕೊರೊನಾದಿಂದ ಸಾವನ್ನಪ್ಪಿದ ಮೃತ ದೇಹಗಳನ್ನು ನದಿಗೆ ಎಸೆಯುತ್ತದೆ. ಅವರು ಗಂಗಾ ತಾಯಿಯನ್ನು ಅಶುದ್ಧಗೊಳಿಸಿದ್ದಾರೆ. ಕೋವಿಡ್‌ನಿಂದ ಸಾವನ್ನಪ್ಪಿದವರ ಸಂಖ್ಯೆ ಅವರ ಬಳಿ ಇಲ್ಲ. ನಾವು ಗಂಗೆಯನ್ನು ನಮ್ಮ ತಾಯಿ ಎಂದು ಕರೆಯುತ್ತೇವೆ. ಬಿಜೆಪಿಯವರು ಕೋವಿಡ್ ಮೃತ ದೇಹಗಳನ್ನು ಗಂಗಾ ನದಿಯಲ್ಲಿ ಎಸೆದಿದ್ದಾರೆ. ಇದನ್ನು ಸಹಿಸಲಾಗದು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಾಲ್ವರು ರೈತರು ಮತ್ತು ಪತ್ರಕರ್ತರನ್ನು ಕೊಂದ ಲಖಿಂಪುರ ಖೇರಿ ಘಟನೆಯ ಬಗ್ಗೆ ಎಸ್‌ಐಟಿ ತನಿಖೆಯನ್ನು ಉಲ್ಲೇಸಿದ ಬ್ಯಾನರ್ಜಿ, ಲಖಿಂಪುರ್ ಘಟನೆಯು “ಯೋಜಿತ ಪಿತೂರಿ” ಎಂದು ಎಸ್‌ಐಟಿ ಹೇಳಿದೆ. “ಯುಪಿ ಸಿಎಂ ರಾಜೀನಾಮೆ ನೀಡಬೇಕಲ್ಲವೇ? ಗೃಹ ಸಚಿವರು ರಾಜೀನಾಮೆ ನೀಡಬಾರದೇ? ಪ್ರಧಾನಿಯವರು ಇದರ ಬಗ್ಗೆ ಮಾತನಾಡಬೇಕು?” ಎಂದು ಒತ್ತಾಯಿಸಿದ್ದಾರೆ.

“ಬಿಜೆಪಿಯನ್ನು ಸೋಲಿಸಲು ಬಯಸುವವರು ಮತಗಳನ್ನು ವಿಭಜಿಸಬೇಡಿ, ನಮ್ಮೊಂದಿಗೆ ಸೇರಿಕೊಳ್ಳಿ” ಎಂದು ಮಮತಾ ಮನವಿ ಮಾಡಿದ್ದಾರೆ. 

ಬಿಜೆಪಿ ವಿರುದ್ಧ ಹೋರಾಡುವ ಬಗ್ಗೆ ಗಂಭೀರವಾಗಿರುವ ಯಾವುದೇ ಪಕ್ಷದೊಂದಿಗೆ ಕೆಲಸ ಮಾಡಲು ತಮ್ಮ ಪಕ್ಷವು ಮುಕ್ತವಾಗಿದೆ. “ಕಾಂಗ್ರೆಸ್ ದೊಡ್ಡ ದೊಡ್ಡ ವಿಷಯಗಳನ್ನು ಹೇಳುತ್ತದೆ. ಏಕಾಂಗಿಯಾಗಿ ಹೋರಾಡುತ್ತೇವೆ ಎನ್ನುತ್ತಾರೆ. ಈಗಲೂ ನಮ್ಮೊಂದಿಗೆ ಜಗಳವಾಡುತ್ತಿದ್ದಾರೆ. ಮೊದಲು ಬಿಜೆಪಿ ವಿರುದ್ಧ ಹೋರಾಡಿ ನಂತರ ದೊಡ್ಡದಾಗಿ ಮಾತನಾಡಿ. ಕಾಂಗ್ರೆಸ್‌ ವಿರುದ್ದ ಮಾತನಾಡಲು ಏನೂ ಇಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ನರೇಂದ್ರ ಮೋದಿ ಟ್ವಿಟರ್‌‌ ಖಾತೆ ಹ್ಯಾಕ್‌: ಬಿಟ್‌ ಕಾಯಿನ್‌ ಕುರಿತು ನಕಲಿ ಪೋಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...