Homeಮುಖಪುಟಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

- Advertisement -
- Advertisement -

“ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿಯೊಬ್ಬ ಯಾಕೆ ಹೋಗಬಾರದು?” ಎಂದು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.

ಗೋವಾದ ಅಸ್ಸೋನೋರಾದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, “ನಾನು ಬಂಗಾಳಿ ಎಂದು ನನಗೆ ಹೇಳಲಾಗುತ್ತಿದೆ. ಹಾಗಾದರೆ ಅವರು ಯಾರು? ಅವರು ಗುಜರಾತಿ ಅಲ್ಲವೆ? ಅವರು ಗುಜರಾತಿ ಆಗಿರುವುದರಿಂದ ಅವರು ಇಲ್ಲಿಗೆ ಬರಬಾರದು ಎಂದು ಹೇಳಬಹುದೇ? ಒಬ್ಬ ಬಂಗಾಳಿ ರಾಷ್ಟ್ರಗೀತೆಯನ್ನು ಬರೆಯಬಹುದು; ಆದರೆ, ಒಬ್ಬ ಬಂಗಾಳಿ ಗೋವಾಕ್ಕೆ ಬರಲು ಸಾಧ್ಯವಿಲ್ಲವೇ? ನಾವೆಲ್ಲರೂ ಗಾಂಧೀಜಿಯನ್ನು ಗೌರವಿಸುತ್ತೇವೆ. ಗಾಂಧೀಜಿ ಬೆಂಗಾಲಿಯೋ ಅಥವಾ ಬೆಂಗಾಲಿ ಅಲ್ಲದವರೋ ಅಥವಾ ಗೋವನ್ನರೋ ಅಥವಾ ಯುಪಿಯವರೋ ಎಂದು ನಾವು ಎಂದಾದರೂ ಪ್ರಶ್ನಿಸಿದ್ದೇವೆಯೇ? ರಾಷ್ಟ್ರೀಯ ನಾಯಕರೆಂದರೆ ಎಲ್ಲರನ್ನೂ ಮುನ್ನಡೆಸಿಕೊಂಡು ಹೋಗುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

ಗೋವಾದ ರಾಜಕೀಯಕ್ಕೆ ತಮ್ಮ ಪಕ್ಷದ ಪ್ರವೇಶವನ್ನು ಇತರ ಪಕ್ಷಗಳು ಪ್ರಶ್ನಿಸಿವೆ. ಆದಾಗ್ಯೂ, ಗೋವಾದಲ್ಲಿರುವ ಟಿಎಂಸಿ ನಾಯಕರನ್ನು ರಿಮೋಟ್ ಕಂಟ್ರೋಲ್ ಮಾಡಲು ನಾವು ಗೋವಾಕ್ಕೆ ಬಂದಿಲ್ಲ. ನಾವು ಅವರನ್ನು ಬೆಂಬಲಿಸಲು ಬಂದಿದ್ದೇವೆ ಎಂದು ಅವರು ಹೇಳಿದ್ದಾರೆ.

“ಅವರು ರಾಷ್ಟ್ರೀಯ ನಾಯಕರಾಗುತ್ತಾರೆಯೇ? ಅವರು ಗೋವಾವನ್ನು ಗುಜರಾತ್‌ನಿಂದ ನಿಯಂತ್ರಿಸುತ್ತಾರೆ. ಗೋವಾವನ್ನು ಗುಜರಾತ್ ಅಥವಾ ದೆಹಲಿಯಿಂದ ಮುನ್ನಡೆಸಬಾದರು. ಗೋವಾದ ಜನರು ಗೋವಾವನ್ನು ಮುನ್ನಡೆಸುತ್ತಾರೆ” ಎಂದು ಅವರು ಹೇಳಿದ್ದಾರೆ.

“ನಮಗೆ ಬಿಜೆಪಿಯಿಂದ ‘ಕ್ಯಾರೆಕ್ಟರ್ ಸರ್ಟಿಫಿಕೇಟ್’ ಅಗತ್ಯವಿಲ್ಲ. ನಾವು ಚುನಾವಣೆಯ ಸಮಯ ಬಂದಾಗ ಮಾತ್ರ ಗಂಗಾ ತೀರಕ್ಕೆ ಹೋಗಿ ಪೂಜೆ ಮಾಡುವುದಿಲ್ಲ. ಚುನಾವಣಾ ಸಮಯ ಬಂದಾಗ ಮೋದಿ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಾರೆ. ಅವರು ತಪಸ್ಸಿಗಾಗಿ ಉತ್ತರಾಖಂಡದ ದೇವಸ್ಥಾನಕ್ಕೆ ಹೋಗುತ್ತಾರೆ. ಮತದಾನದ ಸಮಯ ಬಂದಾಗ ಅವರೇ ಪುರೋಹಿತ ಆಗುತ್ತಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ಬಿಜೆಪಿ ಎಂಎಲ್‌ಸಿ ವಿಶ್ವನಾಥ್‌

“ಅದನ್ನು ಮಾಡುವ ಎಲ್ಲಾ ಸ್ವಾತಂತ್ರ್ಯ ಅವರಿಗಿದೆ. ಆದರೆ ವರ್ಷದ ಉಳಿದ ದಿನಗಳಲ್ಲಿ ಅವರು ಎಲ್ಲಿರುತ್ತಾರೆ? ಯುಪಿ ಸರ್ಕಾರವು ಕೊರೊನಾದಿಂದ ಸಾವನ್ನಪ್ಪಿದ ಮೃತ ದೇಹಗಳನ್ನು ನದಿಗೆ ಎಸೆಯುತ್ತದೆ. ಅವರು ಗಂಗಾ ತಾಯಿಯನ್ನು ಅಶುದ್ಧಗೊಳಿಸಿದ್ದಾರೆ. ಕೋವಿಡ್‌ನಿಂದ ಸಾವನ್ನಪ್ಪಿದವರ ಸಂಖ್ಯೆ ಅವರ ಬಳಿ ಇಲ್ಲ. ನಾವು ಗಂಗೆಯನ್ನು ನಮ್ಮ ತಾಯಿ ಎಂದು ಕರೆಯುತ್ತೇವೆ. ಬಿಜೆಪಿಯವರು ಕೋವಿಡ್ ಮೃತ ದೇಹಗಳನ್ನು ಗಂಗಾ ನದಿಯಲ್ಲಿ ಎಸೆದಿದ್ದಾರೆ. ಇದನ್ನು ಸಹಿಸಲಾಗದು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಾಲ್ವರು ರೈತರು ಮತ್ತು ಪತ್ರಕರ್ತರನ್ನು ಕೊಂದ ಲಖಿಂಪುರ ಖೇರಿ ಘಟನೆಯ ಬಗ್ಗೆ ಎಸ್‌ಐಟಿ ತನಿಖೆಯನ್ನು ಉಲ್ಲೇಸಿದ ಬ್ಯಾನರ್ಜಿ, ಲಖಿಂಪುರ್ ಘಟನೆಯು “ಯೋಜಿತ ಪಿತೂರಿ” ಎಂದು ಎಸ್‌ಐಟಿ ಹೇಳಿದೆ. “ಯುಪಿ ಸಿಎಂ ರಾಜೀನಾಮೆ ನೀಡಬೇಕಲ್ಲವೇ? ಗೃಹ ಸಚಿವರು ರಾಜೀನಾಮೆ ನೀಡಬಾರದೇ? ಪ್ರಧಾನಿಯವರು ಇದರ ಬಗ್ಗೆ ಮಾತನಾಡಬೇಕು?” ಎಂದು ಒತ್ತಾಯಿಸಿದ್ದಾರೆ.

“ಬಿಜೆಪಿಯನ್ನು ಸೋಲಿಸಲು ಬಯಸುವವರು ಮತಗಳನ್ನು ವಿಭಜಿಸಬೇಡಿ, ನಮ್ಮೊಂದಿಗೆ ಸೇರಿಕೊಳ್ಳಿ” ಎಂದು ಮಮತಾ ಮನವಿ ಮಾಡಿದ್ದಾರೆ. 

ಬಿಜೆಪಿ ವಿರುದ್ಧ ಹೋರಾಡುವ ಬಗ್ಗೆ ಗಂಭೀರವಾಗಿರುವ ಯಾವುದೇ ಪಕ್ಷದೊಂದಿಗೆ ಕೆಲಸ ಮಾಡಲು ತಮ್ಮ ಪಕ್ಷವು ಮುಕ್ತವಾಗಿದೆ. “ಕಾಂಗ್ರೆಸ್ ದೊಡ್ಡ ದೊಡ್ಡ ವಿಷಯಗಳನ್ನು ಹೇಳುತ್ತದೆ. ಏಕಾಂಗಿಯಾಗಿ ಹೋರಾಡುತ್ತೇವೆ ಎನ್ನುತ್ತಾರೆ. ಈಗಲೂ ನಮ್ಮೊಂದಿಗೆ ಜಗಳವಾಡುತ್ತಿದ್ದಾರೆ. ಮೊದಲು ಬಿಜೆಪಿ ವಿರುದ್ಧ ಹೋರಾಡಿ ನಂತರ ದೊಡ್ಡದಾಗಿ ಮಾತನಾಡಿ. ಕಾಂಗ್ರೆಸ್‌ ವಿರುದ್ದ ಮಾತನಾಡಲು ಏನೂ ಇಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ನರೇಂದ್ರ ಮೋದಿ ಟ್ವಿಟರ್‌‌ ಖಾತೆ ಹ್ಯಾಕ್‌: ಬಿಟ್‌ ಕಾಯಿನ್‌ ಕುರಿತು ನಕಲಿ ಪೋಸ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...