Homeಮುಖಪುಟಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿ ಯಾಕೆ ಹೋಗಬಾರದು: ಮಮತಾ ಬ್ಯಾನರ್ಜಿ

- Advertisement -
- Advertisement -

“ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿಯೊಬ್ಬ ಯಾಕೆ ಹೋಗಬಾರದು?” ಎಂದು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.

ಗೋವಾದ ಅಸ್ಸೋನೋರಾದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, “ನಾನು ಬಂಗಾಳಿ ಎಂದು ನನಗೆ ಹೇಳಲಾಗುತ್ತಿದೆ. ಹಾಗಾದರೆ ಅವರು ಯಾರು? ಅವರು ಗುಜರಾತಿ ಅಲ್ಲವೆ? ಅವರು ಗುಜರಾತಿ ಆಗಿರುವುದರಿಂದ ಅವರು ಇಲ್ಲಿಗೆ ಬರಬಾರದು ಎಂದು ಹೇಳಬಹುದೇ? ಒಬ್ಬ ಬಂಗಾಳಿ ರಾಷ್ಟ್ರಗೀತೆಯನ್ನು ಬರೆಯಬಹುದು; ಆದರೆ, ಒಬ್ಬ ಬಂಗಾಳಿ ಗೋವಾಕ್ಕೆ ಬರಲು ಸಾಧ್ಯವಿಲ್ಲವೇ? ನಾವೆಲ್ಲರೂ ಗಾಂಧೀಜಿಯನ್ನು ಗೌರವಿಸುತ್ತೇವೆ. ಗಾಂಧೀಜಿ ಬೆಂಗಾಲಿಯೋ ಅಥವಾ ಬೆಂಗಾಲಿ ಅಲ್ಲದವರೋ ಅಥವಾ ಗೋವನ್ನರೋ ಅಥವಾ ಯುಪಿಯವರೋ ಎಂದು ನಾವು ಎಂದಾದರೂ ಪ್ರಶ್ನಿಸಿದ್ದೇವೆಯೇ? ರಾಷ್ಟ್ರೀಯ ನಾಯಕರೆಂದರೆ ಎಲ್ಲರನ್ನೂ ಮುನ್ನಡೆಸಿಕೊಂಡು ಹೋಗುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

ಗೋವಾದ ರಾಜಕೀಯಕ್ಕೆ ತಮ್ಮ ಪಕ್ಷದ ಪ್ರವೇಶವನ್ನು ಇತರ ಪಕ್ಷಗಳು ಪ್ರಶ್ನಿಸಿವೆ. ಆದಾಗ್ಯೂ, ಗೋವಾದಲ್ಲಿರುವ ಟಿಎಂಸಿ ನಾಯಕರನ್ನು ರಿಮೋಟ್ ಕಂಟ್ರೋಲ್ ಮಾಡಲು ನಾವು ಗೋವಾಕ್ಕೆ ಬಂದಿಲ್ಲ. ನಾವು ಅವರನ್ನು ಬೆಂಬಲಿಸಲು ಬಂದಿದ್ದೇವೆ ಎಂದು ಅವರು ಹೇಳಿದ್ದಾರೆ.

“ಅವರು ರಾಷ್ಟ್ರೀಯ ನಾಯಕರಾಗುತ್ತಾರೆಯೇ? ಅವರು ಗೋವಾವನ್ನು ಗುಜರಾತ್‌ನಿಂದ ನಿಯಂತ್ರಿಸುತ್ತಾರೆ. ಗೋವಾವನ್ನು ಗುಜರಾತ್ ಅಥವಾ ದೆಹಲಿಯಿಂದ ಮುನ್ನಡೆಸಬಾದರು. ಗೋವಾದ ಜನರು ಗೋವಾವನ್ನು ಮುನ್ನಡೆಸುತ್ತಾರೆ” ಎಂದು ಅವರು ಹೇಳಿದ್ದಾರೆ.

“ನಮಗೆ ಬಿಜೆಪಿಯಿಂದ ‘ಕ್ಯಾರೆಕ್ಟರ್ ಸರ್ಟಿಫಿಕೇಟ್’ ಅಗತ್ಯವಿಲ್ಲ. ನಾವು ಚುನಾವಣೆಯ ಸಮಯ ಬಂದಾಗ ಮಾತ್ರ ಗಂಗಾ ತೀರಕ್ಕೆ ಹೋಗಿ ಪೂಜೆ ಮಾಡುವುದಿಲ್ಲ. ಚುನಾವಣಾ ಸಮಯ ಬಂದಾಗ ಮೋದಿ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಾರೆ. ಅವರು ತಪಸ್ಸಿಗಾಗಿ ಉತ್ತರಾಖಂಡದ ದೇವಸ್ಥಾನಕ್ಕೆ ಹೋಗುತ್ತಾರೆ. ಮತದಾನದ ಸಮಯ ಬಂದಾಗ ಅವರೇ ಪುರೋಹಿತ ಆಗುತ್ತಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ಬಿಜೆಪಿ ಎಂಎಲ್‌ಸಿ ವಿಶ್ವನಾಥ್‌

“ಅದನ್ನು ಮಾಡುವ ಎಲ್ಲಾ ಸ್ವಾತಂತ್ರ್ಯ ಅವರಿಗಿದೆ. ಆದರೆ ವರ್ಷದ ಉಳಿದ ದಿನಗಳಲ್ಲಿ ಅವರು ಎಲ್ಲಿರುತ್ತಾರೆ? ಯುಪಿ ಸರ್ಕಾರವು ಕೊರೊನಾದಿಂದ ಸಾವನ್ನಪ್ಪಿದ ಮೃತ ದೇಹಗಳನ್ನು ನದಿಗೆ ಎಸೆಯುತ್ತದೆ. ಅವರು ಗಂಗಾ ತಾಯಿಯನ್ನು ಅಶುದ್ಧಗೊಳಿಸಿದ್ದಾರೆ. ಕೋವಿಡ್‌ನಿಂದ ಸಾವನ್ನಪ್ಪಿದವರ ಸಂಖ್ಯೆ ಅವರ ಬಳಿ ಇಲ್ಲ. ನಾವು ಗಂಗೆಯನ್ನು ನಮ್ಮ ತಾಯಿ ಎಂದು ಕರೆಯುತ್ತೇವೆ. ಬಿಜೆಪಿಯವರು ಕೋವಿಡ್ ಮೃತ ದೇಹಗಳನ್ನು ಗಂಗಾ ನದಿಯಲ್ಲಿ ಎಸೆದಿದ್ದಾರೆ. ಇದನ್ನು ಸಹಿಸಲಾಗದು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಾಲ್ವರು ರೈತರು ಮತ್ತು ಪತ್ರಕರ್ತರನ್ನು ಕೊಂದ ಲಖಿಂಪುರ ಖೇರಿ ಘಟನೆಯ ಬಗ್ಗೆ ಎಸ್‌ಐಟಿ ತನಿಖೆಯನ್ನು ಉಲ್ಲೇಸಿದ ಬ್ಯಾನರ್ಜಿ, ಲಖಿಂಪುರ್ ಘಟನೆಯು “ಯೋಜಿತ ಪಿತೂರಿ” ಎಂದು ಎಸ್‌ಐಟಿ ಹೇಳಿದೆ. “ಯುಪಿ ಸಿಎಂ ರಾಜೀನಾಮೆ ನೀಡಬೇಕಲ್ಲವೇ? ಗೃಹ ಸಚಿವರು ರಾಜೀನಾಮೆ ನೀಡಬಾರದೇ? ಪ್ರಧಾನಿಯವರು ಇದರ ಬಗ್ಗೆ ಮಾತನಾಡಬೇಕು?” ಎಂದು ಒತ್ತಾಯಿಸಿದ್ದಾರೆ.

“ಬಿಜೆಪಿಯನ್ನು ಸೋಲಿಸಲು ಬಯಸುವವರು ಮತಗಳನ್ನು ವಿಭಜಿಸಬೇಡಿ, ನಮ್ಮೊಂದಿಗೆ ಸೇರಿಕೊಳ್ಳಿ” ಎಂದು ಮಮತಾ ಮನವಿ ಮಾಡಿದ್ದಾರೆ. 

ಬಿಜೆಪಿ ವಿರುದ್ಧ ಹೋರಾಡುವ ಬಗ್ಗೆ ಗಂಭೀರವಾಗಿರುವ ಯಾವುದೇ ಪಕ್ಷದೊಂದಿಗೆ ಕೆಲಸ ಮಾಡಲು ತಮ್ಮ ಪಕ್ಷವು ಮುಕ್ತವಾಗಿದೆ. “ಕಾಂಗ್ರೆಸ್ ದೊಡ್ಡ ದೊಡ್ಡ ವಿಷಯಗಳನ್ನು ಹೇಳುತ್ತದೆ. ಏಕಾಂಗಿಯಾಗಿ ಹೋರಾಡುತ್ತೇವೆ ಎನ್ನುತ್ತಾರೆ. ಈಗಲೂ ನಮ್ಮೊಂದಿಗೆ ಜಗಳವಾಡುತ್ತಿದ್ದಾರೆ. ಮೊದಲು ಬಿಜೆಪಿ ವಿರುದ್ಧ ಹೋರಾಡಿ ನಂತರ ದೊಡ್ಡದಾಗಿ ಮಾತನಾಡಿ. ಕಾಂಗ್ರೆಸ್‌ ವಿರುದ್ದ ಮಾತನಾಡಲು ಏನೂ ಇಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ:ನರೇಂದ್ರ ಮೋದಿ ಟ್ವಿಟರ್‌‌ ಖಾತೆ ಹ್ಯಾಕ್‌: ಬಿಟ್‌ ಕಾಯಿನ್‌ ಕುರಿತು ನಕಲಿ ಪೋಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...