Homeಮುಖಪುಟಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ದೆಹಲಿ ಡಿಸಿಎಂ ಮನೀಶ್‌ ಸಿಸೋಡಿಯಾ ಮಾಡಿರುವ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿದೆ. ತಮ್ಮ ಬಳಿ ಆಡಿಯೊ ಇರುವುದಾಗಿ ಎಎಪಿ ತಿರುಗೇಟು ನೀಡಿದೆ.

- Advertisement -
- Advertisement -

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಆಮ್ ಆದ್ಮಿ ಪಕ್ಷ (ಎಎಪಿ) ತೊರೆದು, ಪಕ್ಷವನ್ನು  ಉರುಳಿಸಲು ಸಹಾಯ ಮಾಡಿದರೆ ಅವರ ವಿರುದ್ಧದ ಸಿಬಿಐ ಪ್ರಕರಣವನ್ನು ಕೈಬಿಡುವ ಪ್ರಸ್ತಾಪದೊಂದಿಗೆ ಬಿಜೆಪಿ ನಾಯಕರೊಬ್ಬರು ಸಿಸೋಡಿಯಾ ಅವರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. “ಆ ಆಡಿಯೊ ರೆಕಾರ್ಡ್ ಸಿಸೋಡಿಯಾ ಅವರ ಬಳಿ ಇದೆ” ಎಂದು ಎಎಪಿ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ಈ ಹಂತದಲ್ಲಿ ನಾವು ಸಂಭಾಷಣೆಯನ್ನು ಬಿಡುಗಡೆ ಮಾಡುವ ಅಗತ್ಯವಿಲ್ಲ. ಆದರೆ ಸಮಯ ಬಂದಾಗ, ಎಎಪಿ ಫೋನ್ ಸಂಭಾಷಣೆಯನ್ನು ಬಿಡುಗಡೆ ಮಾಡುತ್ತದೆ” ಎಂದು ಎಎಪಿ ನಾಯಕರೊಬ್ಬರು ತಿಳಿಸಿದ್ದಾರೆ.

“ಈಗ ರದ್ದು ಮಾಡಲಾಗಿರುವ ಮದ್ಯದ ನೀತಿಗೆ ಸಂಬಂಧಿಸಿದ ಆರೋಪಗಳ ಮೇಲೆ ಸಿಬಿಐನಿಂದ ಆರೋಪ ಎದುರಿಸುತ್ತಿರುವ ನೀವು ಎಎಪಿ ತೊರೆದರೆ, ಬಿಜೆಪಿಯು ನಿಮ್ಮ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಮುಚ್ಚಿಹಾಕಲು ಮುಂದಾಗಿದೆ ಎಂಬ ಆಮಿಷ ನೀಡಲಾಗಿದೆ” ಎಂದು ಸಿಸೋಡಿಯಾ ಅವರೂ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನಗೆ ಬಿಜೆಪಿಯಿಂದ ಸಂದೇಶ ಬಂದಿದೆ – ಆಪ್ ಒಡೆದುಹಾಕಿ ಬಿಜೆಪಿಗೆ ಸೇರಿಕೊಳ್ಳಿ. ನಿಮ್ಮ ವಿರುದ್ಧದ ಸಿಬಿಐ ಮತ್ತು ಇ.ಡಿ.ಯ ಎಲ್ಲಾ ಪ್ರಕರಣಗಳನ್ನು ತೆರವು ಮಾಡಲಾಗುವುದು ಎಂದು ಸೂಚಿಸಲಾಗಿದೆ” ಎಂದು ಸಿಬಿಐ ದಾಳಿ ನಡೆಸಿದ ಎರಡು ದಿನಗಳ ನಂತರ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.

ಈ ಹೇಳಿಕೆಯನ್ನು ಬಿಜೆಪಿ ಬಲವಾಗಿ ತಳ್ಳಿಹಾಕಿದೆ. “ಇದು ಎಎಪಿಯ ತಂತ್ರಗಾರಿಕೆಯ ಒಂದು ಭಾಗವಾಗಿದೆಯಷ್ಟೇ. ಅವರ ಬಳಿ ಪುರಾವೆ ಇದ್ದರೆ ಬಿಡುಗಡೆ ಮಾಡಬೇಕು” ಎಂದು ಬಿಜೆಪಿ ನಾಯಕ ಪ್ರಮೋದ್ ಸ್ವಾಮಿ ಒತ್ತಾಯಿಸಿದ್ದಾರೆ.

ತಮ್ಮ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು ಎಂದು ಒತ್ತಿ ಹೇಳಿರುವ ಮನೀಶ್ ಸಿಸೋಡಿಯಾ, “ನೀವು ಏನು ಬೇಕಾದರೂ ಮಾಡಿ, ಹೆದರಲ್ಲ” ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

“ಬಿಜೆಪಿಗೆ ನನ್ನ ಪ್ರತ್ಯುತ್ತರವಿದು- ನಾನು ಮಹಾರಾಣಾ ಪ್ರತಾಪ್ ಮತ್ತು ರಜಪೂತರ ವಂಶಸ್ಥ. ನಾನು ಶಿರಚ್ಛೇದನಕ್ಕೂ ಸಿದ್ಧನಿದ್ದೇನೆ. ಆದರೆ ಪಿತೂರಿಗಾರರು ಮತ್ತು ಭ್ರಷ್ಟರ ಮುಂದೆ ಎಂದಿಗೂ ತಲೆಬಾಗುವುದಿಲ್ಲ. ನನ್ನ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು. ನೀವು ಏನು ಬೇಕಾದರೂ ಮಾಡಿ” ಎಂದಿದ್ದಾರೆ.

ಸಿಸೋಡಿಯಾ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕ ಮನೋಜ್ ತಿವಾರಿ, “ತಮ್ಮನ್ನು ಮಹಾರಾಣಾ ಪ್ರತಾಪ್‌ಗೆ ಹೋಲಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಟೀಕಿಸಿದ್ದಾರೆ.

“ತನ್ನನ್ನು ಮಹಾರಾಣಾ ಪ್ರತಾಪ್‌ಗೆ ಹೋಲಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಮಹಾರಾಣಾ ಪ್ರತಾಪ್ ಅವರು ಜನರಿಗೆ ಮದ್ಯಪಾನ ಮಾಡಿಸಿದ್ದರೆ? ನೀವು ಮೂಲೆ ಮೂಲೆಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದೀರಿ, ನೀವು ದೆಹಲಿಯ ಮಹಿಳೆಯರ ಕೂಗನ್ನು ನಿರ್ಲಕ್ಷಿಸುತ್ತಿದ್ದೀರಿ. ಮಹಾರಾಣಾ ಪ್ರತಾಪ್ ಒಂದು ಕಾಲದಲ್ಲಿ ಮಹಿಳೆಯರಿಗಾಗಿ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಂಡಿದ್ದರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ಮಹಾರಾಣಾ ಪ್ರತಾಪ್ ಅವರನ್ನು ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿರುವ ವ್ಯಕ್ತಿಯೊಂದಿಗೆ ಹೋಲಿಸಬಹುದೇ? ಅಂತಹ ಭ್ರಷ್ಟರಿಗೆ ಆಪ್‌ನಲ್ಲಿ ಮಾತ್ರ ಸ್ಥಾನ ಸಿಗುತ್ತದೆ. ಮಾಡಿರುವ ತಪ್ಪಿಗೆ ಶಿಕ್ಷೆಯಾಗುತ್ತದೆ. ಮನೀಶ್ ಸಿಸೋಡಿಯಾ ಅವರಂತಹ ತಪ್ಪಿತಸ್ಥರನ್ನು ಶಿಕ್ಷಿಸಲು ಬಿಜೆಪಿ ಕೆಲಸ ಮಾಡುತ್ತದೆ. ಬಿಜೆಪಿಯಲ್ಲಿ ಭ್ರಷ್ಟರಿಗೆ ಸ್ಥಾನವಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ನಾಯಕ ಸೌರಭ್ ಭಾರದ್ವಾಜ್ ಪ್ರತಿಕ್ರಿಯಿಸಿ, “ಬಿಜೆಪಿಯು ಪ್ರತಿಪಕ್ಷಗಳ ನಾಯಕರ ಮೇಲೆ ತನಿಖೆಯ ಮೂಲಕ ಒತ್ತಡ ಹೇರಿದ ಮೂರು ಡಜನ್ ಉದಾಹರಣೆಗಳಿವೆ. ಒತ್ತಡ ಎದುರಿಸಿದ ರಾಜಕಾರಣಿಗಳು ಬಿಜೆಪಿಯ ಮಾತು ಕೇಳಿದ ಬಳಿಕವಷ್ಟೇ ಪ್ರಕರಣಗಳನ್ನು ಕೈಬಿಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರನ್ನು ತಮ್ಮ ರಾಜಕೀಯ ಗುರು ಎಂದಿರುವ ಸಿಸೋಡಿಯಾ, “ನಾನು ಎಂದಿಗೂ ಅವರಿಗೆ ಮೋಸ ಮಾಡುವುದಿಲ್ಲ. ನನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಾಡುವ ಪ್ರಸ್ತಾಪವಿಟ್ಟು ಕರೆದಿರುವ ಬಿಜೆಪಿಗೆ ನನ್ನ ಸಂದೇಶವಿದು. ಅರವಿಂದ್ ಕೇಜ್ರಿವಾಲ್ ನನ್ನ ರಾಜಕೀಯ ಗುರು, ನಾನು ಅವರಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ. ನಾನು ಸಿಎಂ ಆಗಲು ಇಲ್ಲಿಗೆ ಬಂದಿಲ್ಲ. ದೇಶದ ಪ್ರತಿ ಮಗುವಿಗೆ ಉತ್ತಮ ಶಿಕ್ಷಣ ಸಿಗಬೇಕು, ಆಗ ಮಾತ್ರ ಭಾರತವು ನಂಬರ್ 1 ದೇಶವಾಗುತ್ತದೆ ಎಂಬುದು ನನ್ನ ಕನಸಾಗಿದೆ. ಕೇಜ್ರಿವಾಲ್ ಅವರು ಮಾತ್ರ ಇಡೀ ದೇಶದಲ್ಲಿ ಈ ಕೆಲಸವನ್ನು ಮಾಡಲು ಸಾಧ್ಯ” ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...