Homeಮುಖಪುಟಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ದೆಹಲಿ ಡಿಸಿಎಂ ಮನೀಶ್‌ ಸಿಸೋಡಿಯಾ ಮಾಡಿರುವ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿದೆ. ತಮ್ಮ ಬಳಿ ಆಡಿಯೊ ಇರುವುದಾಗಿ ಎಎಪಿ ತಿರುಗೇಟು ನೀಡಿದೆ.

- Advertisement -
- Advertisement -

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಆಮ್ ಆದ್ಮಿ ಪಕ್ಷ (ಎಎಪಿ) ತೊರೆದು, ಪಕ್ಷವನ್ನು  ಉರುಳಿಸಲು ಸಹಾಯ ಮಾಡಿದರೆ ಅವರ ವಿರುದ್ಧದ ಸಿಬಿಐ ಪ್ರಕರಣವನ್ನು ಕೈಬಿಡುವ ಪ್ರಸ್ತಾಪದೊಂದಿಗೆ ಬಿಜೆಪಿ ನಾಯಕರೊಬ್ಬರು ಸಿಸೋಡಿಯಾ ಅವರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. “ಆ ಆಡಿಯೊ ರೆಕಾರ್ಡ್ ಸಿಸೋಡಿಯಾ ಅವರ ಬಳಿ ಇದೆ” ಎಂದು ಎಎಪಿ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ಈ ಹಂತದಲ್ಲಿ ನಾವು ಸಂಭಾಷಣೆಯನ್ನು ಬಿಡುಗಡೆ ಮಾಡುವ ಅಗತ್ಯವಿಲ್ಲ. ಆದರೆ ಸಮಯ ಬಂದಾಗ, ಎಎಪಿ ಫೋನ್ ಸಂಭಾಷಣೆಯನ್ನು ಬಿಡುಗಡೆ ಮಾಡುತ್ತದೆ” ಎಂದು ಎಎಪಿ ನಾಯಕರೊಬ್ಬರು ತಿಳಿಸಿದ್ದಾರೆ.

“ಈಗ ರದ್ದು ಮಾಡಲಾಗಿರುವ ಮದ್ಯದ ನೀತಿಗೆ ಸಂಬಂಧಿಸಿದ ಆರೋಪಗಳ ಮೇಲೆ ಸಿಬಿಐನಿಂದ ಆರೋಪ ಎದುರಿಸುತ್ತಿರುವ ನೀವು ಎಎಪಿ ತೊರೆದರೆ, ಬಿಜೆಪಿಯು ನಿಮ್ಮ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಮುಚ್ಚಿಹಾಕಲು ಮುಂದಾಗಿದೆ ಎಂಬ ಆಮಿಷ ನೀಡಲಾಗಿದೆ” ಎಂದು ಸಿಸೋಡಿಯಾ ಅವರೂ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನಗೆ ಬಿಜೆಪಿಯಿಂದ ಸಂದೇಶ ಬಂದಿದೆ – ಆಪ್ ಒಡೆದುಹಾಕಿ ಬಿಜೆಪಿಗೆ ಸೇರಿಕೊಳ್ಳಿ. ನಿಮ್ಮ ವಿರುದ್ಧದ ಸಿಬಿಐ ಮತ್ತು ಇ.ಡಿ.ಯ ಎಲ್ಲಾ ಪ್ರಕರಣಗಳನ್ನು ತೆರವು ಮಾಡಲಾಗುವುದು ಎಂದು ಸೂಚಿಸಲಾಗಿದೆ” ಎಂದು ಸಿಬಿಐ ದಾಳಿ ನಡೆಸಿದ ಎರಡು ದಿನಗಳ ನಂತರ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.

ಈ ಹೇಳಿಕೆಯನ್ನು ಬಿಜೆಪಿ ಬಲವಾಗಿ ತಳ್ಳಿಹಾಕಿದೆ. “ಇದು ಎಎಪಿಯ ತಂತ್ರಗಾರಿಕೆಯ ಒಂದು ಭಾಗವಾಗಿದೆಯಷ್ಟೇ. ಅವರ ಬಳಿ ಪುರಾವೆ ಇದ್ದರೆ ಬಿಡುಗಡೆ ಮಾಡಬೇಕು” ಎಂದು ಬಿಜೆಪಿ ನಾಯಕ ಪ್ರಮೋದ್ ಸ್ವಾಮಿ ಒತ್ತಾಯಿಸಿದ್ದಾರೆ.

ತಮ್ಮ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು ಎಂದು ಒತ್ತಿ ಹೇಳಿರುವ ಮನೀಶ್ ಸಿಸೋಡಿಯಾ, “ನೀವು ಏನು ಬೇಕಾದರೂ ಮಾಡಿ, ಹೆದರಲ್ಲ” ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

“ಬಿಜೆಪಿಗೆ ನನ್ನ ಪ್ರತ್ಯುತ್ತರವಿದು- ನಾನು ಮಹಾರಾಣಾ ಪ್ರತಾಪ್ ಮತ್ತು ರಜಪೂತರ ವಂಶಸ್ಥ. ನಾನು ಶಿರಚ್ಛೇದನಕ್ಕೂ ಸಿದ್ಧನಿದ್ದೇನೆ. ಆದರೆ ಪಿತೂರಿಗಾರರು ಮತ್ತು ಭ್ರಷ್ಟರ ಮುಂದೆ ಎಂದಿಗೂ ತಲೆಬಾಗುವುದಿಲ್ಲ. ನನ್ನ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು. ನೀವು ಏನು ಬೇಕಾದರೂ ಮಾಡಿ” ಎಂದಿದ್ದಾರೆ.

ಸಿಸೋಡಿಯಾ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕ ಮನೋಜ್ ತಿವಾರಿ, “ತಮ್ಮನ್ನು ಮಹಾರಾಣಾ ಪ್ರತಾಪ್‌ಗೆ ಹೋಲಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಟೀಕಿಸಿದ್ದಾರೆ.

“ತನ್ನನ್ನು ಮಹಾರಾಣಾ ಪ್ರತಾಪ್‌ಗೆ ಹೋಲಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಮಹಾರಾಣಾ ಪ್ರತಾಪ್ ಅವರು ಜನರಿಗೆ ಮದ್ಯಪಾನ ಮಾಡಿಸಿದ್ದರೆ? ನೀವು ಮೂಲೆ ಮೂಲೆಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದೀರಿ, ನೀವು ದೆಹಲಿಯ ಮಹಿಳೆಯರ ಕೂಗನ್ನು ನಿರ್ಲಕ್ಷಿಸುತ್ತಿದ್ದೀರಿ. ಮಹಾರಾಣಾ ಪ್ರತಾಪ್ ಒಂದು ಕಾಲದಲ್ಲಿ ಮಹಿಳೆಯರಿಗಾಗಿ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಂಡಿದ್ದರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ಮಹಾರಾಣಾ ಪ್ರತಾಪ್ ಅವರನ್ನು ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿರುವ ವ್ಯಕ್ತಿಯೊಂದಿಗೆ ಹೋಲಿಸಬಹುದೇ? ಅಂತಹ ಭ್ರಷ್ಟರಿಗೆ ಆಪ್‌ನಲ್ಲಿ ಮಾತ್ರ ಸ್ಥಾನ ಸಿಗುತ್ತದೆ. ಮಾಡಿರುವ ತಪ್ಪಿಗೆ ಶಿಕ್ಷೆಯಾಗುತ್ತದೆ. ಮನೀಶ್ ಸಿಸೋಡಿಯಾ ಅವರಂತಹ ತಪ್ಪಿತಸ್ಥರನ್ನು ಶಿಕ್ಷಿಸಲು ಬಿಜೆಪಿ ಕೆಲಸ ಮಾಡುತ್ತದೆ. ಬಿಜೆಪಿಯಲ್ಲಿ ಭ್ರಷ್ಟರಿಗೆ ಸ್ಥಾನವಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ನಾಯಕ ಸೌರಭ್ ಭಾರದ್ವಾಜ್ ಪ್ರತಿಕ್ರಿಯಿಸಿ, “ಬಿಜೆಪಿಯು ಪ್ರತಿಪಕ್ಷಗಳ ನಾಯಕರ ಮೇಲೆ ತನಿಖೆಯ ಮೂಲಕ ಒತ್ತಡ ಹೇರಿದ ಮೂರು ಡಜನ್ ಉದಾಹರಣೆಗಳಿವೆ. ಒತ್ತಡ ಎದುರಿಸಿದ ರಾಜಕಾರಣಿಗಳು ಬಿಜೆಪಿಯ ಮಾತು ಕೇಳಿದ ಬಳಿಕವಷ್ಟೇ ಪ್ರಕರಣಗಳನ್ನು ಕೈಬಿಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರನ್ನು ತಮ್ಮ ರಾಜಕೀಯ ಗುರು ಎಂದಿರುವ ಸಿಸೋಡಿಯಾ, “ನಾನು ಎಂದಿಗೂ ಅವರಿಗೆ ಮೋಸ ಮಾಡುವುದಿಲ್ಲ. ನನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಾಡುವ ಪ್ರಸ್ತಾಪವಿಟ್ಟು ಕರೆದಿರುವ ಬಿಜೆಪಿಗೆ ನನ್ನ ಸಂದೇಶವಿದು. ಅರವಿಂದ್ ಕೇಜ್ರಿವಾಲ್ ನನ್ನ ರಾಜಕೀಯ ಗುರು, ನಾನು ಅವರಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ. ನಾನು ಸಿಎಂ ಆಗಲು ಇಲ್ಲಿಗೆ ಬಂದಿಲ್ಲ. ದೇಶದ ಪ್ರತಿ ಮಗುವಿಗೆ ಉತ್ತಮ ಶಿಕ್ಷಣ ಸಿಗಬೇಕು, ಆಗ ಮಾತ್ರ ಭಾರತವು ನಂಬರ್ 1 ದೇಶವಾಗುತ್ತದೆ ಎಂಬುದು ನನ್ನ ಕನಸಾಗಿದೆ. ಕೇಜ್ರಿವಾಲ್ ಅವರು ಮಾತ್ರ ಇಡೀ ದೇಶದಲ್ಲಿ ಈ ಕೆಲಸವನ್ನು ಮಾಡಲು ಸಾಧ್ಯ” ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...