Homeಮುಖಪುಟಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ದೆಹಲಿ ಡಿಸಿಎಂ ಮನೀಶ್‌ ಸಿಸೋಡಿಯಾ ಮಾಡಿರುವ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿದೆ. ತಮ್ಮ ಬಳಿ ಆಡಿಯೊ ಇರುವುದಾಗಿ ಎಎಪಿ ತಿರುಗೇಟು ನೀಡಿದೆ.

- Advertisement -
- Advertisement -

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಆಮ್ ಆದ್ಮಿ ಪಕ್ಷ (ಎಎಪಿ) ತೊರೆದು, ಪಕ್ಷವನ್ನು  ಉರುಳಿಸಲು ಸಹಾಯ ಮಾಡಿದರೆ ಅವರ ವಿರುದ್ಧದ ಸಿಬಿಐ ಪ್ರಕರಣವನ್ನು ಕೈಬಿಡುವ ಪ್ರಸ್ತಾಪದೊಂದಿಗೆ ಬಿಜೆಪಿ ನಾಯಕರೊಬ್ಬರು ಸಿಸೋಡಿಯಾ ಅವರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. “ಆ ಆಡಿಯೊ ರೆಕಾರ್ಡ್ ಸಿಸೋಡಿಯಾ ಅವರ ಬಳಿ ಇದೆ” ಎಂದು ಎಎಪಿ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ಈ ಹಂತದಲ್ಲಿ ನಾವು ಸಂಭಾಷಣೆಯನ್ನು ಬಿಡುಗಡೆ ಮಾಡುವ ಅಗತ್ಯವಿಲ್ಲ. ಆದರೆ ಸಮಯ ಬಂದಾಗ, ಎಎಪಿ ಫೋನ್ ಸಂಭಾಷಣೆಯನ್ನು ಬಿಡುಗಡೆ ಮಾಡುತ್ತದೆ” ಎಂದು ಎಎಪಿ ನಾಯಕರೊಬ್ಬರು ತಿಳಿಸಿದ್ದಾರೆ.

“ಈಗ ರದ್ದು ಮಾಡಲಾಗಿರುವ ಮದ್ಯದ ನೀತಿಗೆ ಸಂಬಂಧಿಸಿದ ಆರೋಪಗಳ ಮೇಲೆ ಸಿಬಿಐನಿಂದ ಆರೋಪ ಎದುರಿಸುತ್ತಿರುವ ನೀವು ಎಎಪಿ ತೊರೆದರೆ, ಬಿಜೆಪಿಯು ನಿಮ್ಮ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಮುಚ್ಚಿಹಾಕಲು ಮುಂದಾಗಿದೆ ಎಂಬ ಆಮಿಷ ನೀಡಲಾಗಿದೆ” ಎಂದು ಸಿಸೋಡಿಯಾ ಅವರೂ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನಗೆ ಬಿಜೆಪಿಯಿಂದ ಸಂದೇಶ ಬಂದಿದೆ – ಆಪ್ ಒಡೆದುಹಾಕಿ ಬಿಜೆಪಿಗೆ ಸೇರಿಕೊಳ್ಳಿ. ನಿಮ್ಮ ವಿರುದ್ಧದ ಸಿಬಿಐ ಮತ್ತು ಇ.ಡಿ.ಯ ಎಲ್ಲಾ ಪ್ರಕರಣಗಳನ್ನು ತೆರವು ಮಾಡಲಾಗುವುದು ಎಂದು ಸೂಚಿಸಲಾಗಿದೆ” ಎಂದು ಸಿಬಿಐ ದಾಳಿ ನಡೆಸಿದ ಎರಡು ದಿನಗಳ ನಂತರ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.

ಈ ಹೇಳಿಕೆಯನ್ನು ಬಿಜೆಪಿ ಬಲವಾಗಿ ತಳ್ಳಿಹಾಕಿದೆ. “ಇದು ಎಎಪಿಯ ತಂತ್ರಗಾರಿಕೆಯ ಒಂದು ಭಾಗವಾಗಿದೆಯಷ್ಟೇ. ಅವರ ಬಳಿ ಪುರಾವೆ ಇದ್ದರೆ ಬಿಡುಗಡೆ ಮಾಡಬೇಕು” ಎಂದು ಬಿಜೆಪಿ ನಾಯಕ ಪ್ರಮೋದ್ ಸ್ವಾಮಿ ಒತ್ತಾಯಿಸಿದ್ದಾರೆ.

ತಮ್ಮ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು ಎಂದು ಒತ್ತಿ ಹೇಳಿರುವ ಮನೀಶ್ ಸಿಸೋಡಿಯಾ, “ನೀವು ಏನು ಬೇಕಾದರೂ ಮಾಡಿ, ಹೆದರಲ್ಲ” ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

“ಬಿಜೆಪಿಗೆ ನನ್ನ ಪ್ರತ್ಯುತ್ತರವಿದು- ನಾನು ಮಹಾರಾಣಾ ಪ್ರತಾಪ್ ಮತ್ತು ರಜಪೂತರ ವಂಶಸ್ಥ. ನಾನು ಶಿರಚ್ಛೇದನಕ್ಕೂ ಸಿದ್ಧನಿದ್ದೇನೆ. ಆದರೆ ಪಿತೂರಿಗಾರರು ಮತ್ತು ಭ್ರಷ್ಟರ ಮುಂದೆ ಎಂದಿಗೂ ತಲೆಬಾಗುವುದಿಲ್ಲ. ನನ್ನ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು. ನೀವು ಏನು ಬೇಕಾದರೂ ಮಾಡಿ” ಎಂದಿದ್ದಾರೆ.

ಸಿಸೋಡಿಯಾ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕ ಮನೋಜ್ ತಿವಾರಿ, “ತಮ್ಮನ್ನು ಮಹಾರಾಣಾ ಪ್ರತಾಪ್‌ಗೆ ಹೋಲಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಟೀಕಿಸಿದ್ದಾರೆ.

“ತನ್ನನ್ನು ಮಹಾರಾಣಾ ಪ್ರತಾಪ್‌ಗೆ ಹೋಲಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಮಹಾರಾಣಾ ಪ್ರತಾಪ್ ಅವರು ಜನರಿಗೆ ಮದ್ಯಪಾನ ಮಾಡಿಸಿದ್ದರೆ? ನೀವು ಮೂಲೆ ಮೂಲೆಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದೀರಿ, ನೀವು ದೆಹಲಿಯ ಮಹಿಳೆಯರ ಕೂಗನ್ನು ನಿರ್ಲಕ್ಷಿಸುತ್ತಿದ್ದೀರಿ. ಮಹಾರಾಣಾ ಪ್ರತಾಪ್ ಒಂದು ಕಾಲದಲ್ಲಿ ಮಹಿಳೆಯರಿಗಾಗಿ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಂಡಿದ್ದರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ಮಹಾರಾಣಾ ಪ್ರತಾಪ್ ಅವರನ್ನು ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿರುವ ವ್ಯಕ್ತಿಯೊಂದಿಗೆ ಹೋಲಿಸಬಹುದೇ? ಅಂತಹ ಭ್ರಷ್ಟರಿಗೆ ಆಪ್‌ನಲ್ಲಿ ಮಾತ್ರ ಸ್ಥಾನ ಸಿಗುತ್ತದೆ. ಮಾಡಿರುವ ತಪ್ಪಿಗೆ ಶಿಕ್ಷೆಯಾಗುತ್ತದೆ. ಮನೀಶ್ ಸಿಸೋಡಿಯಾ ಅವರಂತಹ ತಪ್ಪಿತಸ್ಥರನ್ನು ಶಿಕ್ಷಿಸಲು ಬಿಜೆಪಿ ಕೆಲಸ ಮಾಡುತ್ತದೆ. ಬಿಜೆಪಿಯಲ್ಲಿ ಭ್ರಷ್ಟರಿಗೆ ಸ್ಥಾನವಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ನಾಯಕ ಸೌರಭ್ ಭಾರದ್ವಾಜ್ ಪ್ರತಿಕ್ರಿಯಿಸಿ, “ಬಿಜೆಪಿಯು ಪ್ರತಿಪಕ್ಷಗಳ ನಾಯಕರ ಮೇಲೆ ತನಿಖೆಯ ಮೂಲಕ ಒತ್ತಡ ಹೇರಿದ ಮೂರು ಡಜನ್ ಉದಾಹರಣೆಗಳಿವೆ. ಒತ್ತಡ ಎದುರಿಸಿದ ರಾಜಕಾರಣಿಗಳು ಬಿಜೆಪಿಯ ಮಾತು ಕೇಳಿದ ಬಳಿಕವಷ್ಟೇ ಪ್ರಕರಣಗಳನ್ನು ಕೈಬಿಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರನ್ನು ತಮ್ಮ ರಾಜಕೀಯ ಗುರು ಎಂದಿರುವ ಸಿಸೋಡಿಯಾ, “ನಾನು ಎಂದಿಗೂ ಅವರಿಗೆ ಮೋಸ ಮಾಡುವುದಿಲ್ಲ. ನನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಾಡುವ ಪ್ರಸ್ತಾಪವಿಟ್ಟು ಕರೆದಿರುವ ಬಿಜೆಪಿಗೆ ನನ್ನ ಸಂದೇಶವಿದು. ಅರವಿಂದ್ ಕೇಜ್ರಿವಾಲ್ ನನ್ನ ರಾಜಕೀಯ ಗುರು, ನಾನು ಅವರಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ. ನಾನು ಸಿಎಂ ಆಗಲು ಇಲ್ಲಿಗೆ ಬಂದಿಲ್ಲ. ದೇಶದ ಪ್ರತಿ ಮಗುವಿಗೆ ಉತ್ತಮ ಶಿಕ್ಷಣ ಸಿಗಬೇಕು, ಆಗ ಮಾತ್ರ ಭಾರತವು ನಂಬರ್ 1 ದೇಶವಾಗುತ್ತದೆ ಎಂಬುದು ನನ್ನ ಕನಸಾಗಿದೆ. ಕೇಜ್ರಿವಾಲ್ ಅವರು ಮಾತ್ರ ಇಡೀ ದೇಶದಲ್ಲಿ ಈ ಕೆಲಸವನ್ನು ಮಾಡಲು ಸಾಧ್ಯ” ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...