Homeಮುಖಪುಟಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ದೆಹಲಿ ಡಿಸಿಎಂ ಮನೀಶ್‌ ಸಿಸೋಡಿಯಾ ಮಾಡಿರುವ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿದೆ. ತಮ್ಮ ಬಳಿ ಆಡಿಯೊ ಇರುವುದಾಗಿ ಎಎಪಿ ತಿರುಗೇಟು ನೀಡಿದೆ.

- Advertisement -
- Advertisement -

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಆಮ್ ಆದ್ಮಿ ಪಕ್ಷ (ಎಎಪಿ) ತೊರೆದು, ಪಕ್ಷವನ್ನು  ಉರುಳಿಸಲು ಸಹಾಯ ಮಾಡಿದರೆ ಅವರ ವಿರುದ್ಧದ ಸಿಬಿಐ ಪ್ರಕರಣವನ್ನು ಕೈಬಿಡುವ ಪ್ರಸ್ತಾಪದೊಂದಿಗೆ ಬಿಜೆಪಿ ನಾಯಕರೊಬ್ಬರು ಸಿಸೋಡಿಯಾ ಅವರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. “ಆ ಆಡಿಯೊ ರೆಕಾರ್ಡ್ ಸಿಸೋಡಿಯಾ ಅವರ ಬಳಿ ಇದೆ” ಎಂದು ಎಎಪಿ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ಈ ಹಂತದಲ್ಲಿ ನಾವು ಸಂಭಾಷಣೆಯನ್ನು ಬಿಡುಗಡೆ ಮಾಡುವ ಅಗತ್ಯವಿಲ್ಲ. ಆದರೆ ಸಮಯ ಬಂದಾಗ, ಎಎಪಿ ಫೋನ್ ಸಂಭಾಷಣೆಯನ್ನು ಬಿಡುಗಡೆ ಮಾಡುತ್ತದೆ” ಎಂದು ಎಎಪಿ ನಾಯಕರೊಬ್ಬರು ತಿಳಿಸಿದ್ದಾರೆ.

“ಈಗ ರದ್ದು ಮಾಡಲಾಗಿರುವ ಮದ್ಯದ ನೀತಿಗೆ ಸಂಬಂಧಿಸಿದ ಆರೋಪಗಳ ಮೇಲೆ ಸಿಬಿಐನಿಂದ ಆರೋಪ ಎದುರಿಸುತ್ತಿರುವ ನೀವು ಎಎಪಿ ತೊರೆದರೆ, ಬಿಜೆಪಿಯು ನಿಮ್ಮ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಮುಚ್ಚಿಹಾಕಲು ಮುಂದಾಗಿದೆ ಎಂಬ ಆಮಿಷ ನೀಡಲಾಗಿದೆ” ಎಂದು ಸಿಸೋಡಿಯಾ ಅವರೂ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನಗೆ ಬಿಜೆಪಿಯಿಂದ ಸಂದೇಶ ಬಂದಿದೆ – ಆಪ್ ಒಡೆದುಹಾಕಿ ಬಿಜೆಪಿಗೆ ಸೇರಿಕೊಳ್ಳಿ. ನಿಮ್ಮ ವಿರುದ್ಧದ ಸಿಬಿಐ ಮತ್ತು ಇ.ಡಿ.ಯ ಎಲ್ಲಾ ಪ್ರಕರಣಗಳನ್ನು ತೆರವು ಮಾಡಲಾಗುವುದು ಎಂದು ಸೂಚಿಸಲಾಗಿದೆ” ಎಂದು ಸಿಬಿಐ ದಾಳಿ ನಡೆಸಿದ ಎರಡು ದಿನಗಳ ನಂತರ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.

ಈ ಹೇಳಿಕೆಯನ್ನು ಬಿಜೆಪಿ ಬಲವಾಗಿ ತಳ್ಳಿಹಾಕಿದೆ. “ಇದು ಎಎಪಿಯ ತಂತ್ರಗಾರಿಕೆಯ ಒಂದು ಭಾಗವಾಗಿದೆಯಷ್ಟೇ. ಅವರ ಬಳಿ ಪುರಾವೆ ಇದ್ದರೆ ಬಿಡುಗಡೆ ಮಾಡಬೇಕು” ಎಂದು ಬಿಜೆಪಿ ನಾಯಕ ಪ್ರಮೋದ್ ಸ್ವಾಮಿ ಒತ್ತಾಯಿಸಿದ್ದಾರೆ.

ತಮ್ಮ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು ಎಂದು ಒತ್ತಿ ಹೇಳಿರುವ ಮನೀಶ್ ಸಿಸೋಡಿಯಾ, “ನೀವು ಏನು ಬೇಕಾದರೂ ಮಾಡಿ, ಹೆದರಲ್ಲ” ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

“ಬಿಜೆಪಿಗೆ ನನ್ನ ಪ್ರತ್ಯುತ್ತರವಿದು- ನಾನು ಮಹಾರಾಣಾ ಪ್ರತಾಪ್ ಮತ್ತು ರಜಪೂತರ ವಂಶಸ್ಥ. ನಾನು ಶಿರಚ್ಛೇದನಕ್ಕೂ ಸಿದ್ಧನಿದ್ದೇನೆ. ಆದರೆ ಪಿತೂರಿಗಾರರು ಮತ್ತು ಭ್ರಷ್ಟರ ಮುಂದೆ ಎಂದಿಗೂ ತಲೆಬಾಗುವುದಿಲ್ಲ. ನನ್ನ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು. ನೀವು ಏನು ಬೇಕಾದರೂ ಮಾಡಿ” ಎಂದಿದ್ದಾರೆ.

ಸಿಸೋಡಿಯಾ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕ ಮನೋಜ್ ತಿವಾರಿ, “ತಮ್ಮನ್ನು ಮಹಾರಾಣಾ ಪ್ರತಾಪ್‌ಗೆ ಹೋಲಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಟೀಕಿಸಿದ್ದಾರೆ.

“ತನ್ನನ್ನು ಮಹಾರಾಣಾ ಪ್ರತಾಪ್‌ಗೆ ಹೋಲಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಮಹಾರಾಣಾ ಪ್ರತಾಪ್ ಅವರು ಜನರಿಗೆ ಮದ್ಯಪಾನ ಮಾಡಿಸಿದ್ದರೆ? ನೀವು ಮೂಲೆ ಮೂಲೆಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದೀರಿ, ನೀವು ದೆಹಲಿಯ ಮಹಿಳೆಯರ ಕೂಗನ್ನು ನಿರ್ಲಕ್ಷಿಸುತ್ತಿದ್ದೀರಿ. ಮಹಾರಾಣಾ ಪ್ರತಾಪ್ ಒಂದು ಕಾಲದಲ್ಲಿ ಮಹಿಳೆಯರಿಗಾಗಿ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಂಡಿದ್ದರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ಮಹಾರಾಣಾ ಪ್ರತಾಪ್ ಅವರನ್ನು ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿರುವ ವ್ಯಕ್ತಿಯೊಂದಿಗೆ ಹೋಲಿಸಬಹುದೇ? ಅಂತಹ ಭ್ರಷ್ಟರಿಗೆ ಆಪ್‌ನಲ್ಲಿ ಮಾತ್ರ ಸ್ಥಾನ ಸಿಗುತ್ತದೆ. ಮಾಡಿರುವ ತಪ್ಪಿಗೆ ಶಿಕ್ಷೆಯಾಗುತ್ತದೆ. ಮನೀಶ್ ಸಿಸೋಡಿಯಾ ಅವರಂತಹ ತಪ್ಪಿತಸ್ಥರನ್ನು ಶಿಕ್ಷಿಸಲು ಬಿಜೆಪಿ ಕೆಲಸ ಮಾಡುತ್ತದೆ. ಬಿಜೆಪಿಯಲ್ಲಿ ಭ್ರಷ್ಟರಿಗೆ ಸ್ಥಾನವಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ನಾಯಕ ಸೌರಭ್ ಭಾರದ್ವಾಜ್ ಪ್ರತಿಕ್ರಿಯಿಸಿ, “ಬಿಜೆಪಿಯು ಪ್ರತಿಪಕ್ಷಗಳ ನಾಯಕರ ಮೇಲೆ ತನಿಖೆಯ ಮೂಲಕ ಒತ್ತಡ ಹೇರಿದ ಮೂರು ಡಜನ್ ಉದಾಹರಣೆಗಳಿವೆ. ಒತ್ತಡ ಎದುರಿಸಿದ ರಾಜಕಾರಣಿಗಳು ಬಿಜೆಪಿಯ ಮಾತು ಕೇಳಿದ ಬಳಿಕವಷ್ಟೇ ಪ್ರಕರಣಗಳನ್ನು ಕೈಬಿಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರನ್ನು ತಮ್ಮ ರಾಜಕೀಯ ಗುರು ಎಂದಿರುವ ಸಿಸೋಡಿಯಾ, “ನಾನು ಎಂದಿಗೂ ಅವರಿಗೆ ಮೋಸ ಮಾಡುವುದಿಲ್ಲ. ನನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಾಡುವ ಪ್ರಸ್ತಾಪವಿಟ್ಟು ಕರೆದಿರುವ ಬಿಜೆಪಿಗೆ ನನ್ನ ಸಂದೇಶವಿದು. ಅರವಿಂದ್ ಕೇಜ್ರಿವಾಲ್ ನನ್ನ ರಾಜಕೀಯ ಗುರು, ನಾನು ಅವರಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ. ನಾನು ಸಿಎಂ ಆಗಲು ಇಲ್ಲಿಗೆ ಬಂದಿಲ್ಲ. ದೇಶದ ಪ್ರತಿ ಮಗುವಿಗೆ ಉತ್ತಮ ಶಿಕ್ಷಣ ಸಿಗಬೇಕು, ಆಗ ಮಾತ್ರ ಭಾರತವು ನಂಬರ್ 1 ದೇಶವಾಗುತ್ತದೆ ಎಂಬುದು ನನ್ನ ಕನಸಾಗಿದೆ. ಕೇಜ್ರಿವಾಲ್ ಅವರು ಮಾತ್ರ ಇಡೀ ದೇಶದಲ್ಲಿ ಈ ಕೆಲಸವನ್ನು ಮಾಡಲು ಸಾಧ್ಯ” ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...