Homeಮುಖಪುಟಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ದೆಹಲಿ ಡಿಸಿಎಂ ಮನೀಶ್‌ ಸಿಸೋಡಿಯಾ ಮಾಡಿರುವ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿದೆ. ತಮ್ಮ ಬಳಿ ಆಡಿಯೊ ಇರುವುದಾಗಿ ಎಎಪಿ ತಿರುಗೇಟು ನೀಡಿದೆ.

- Advertisement -
- Advertisement -

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಆಮ್ ಆದ್ಮಿ ಪಕ್ಷ (ಎಎಪಿ) ತೊರೆದು, ಪಕ್ಷವನ್ನು  ಉರುಳಿಸಲು ಸಹಾಯ ಮಾಡಿದರೆ ಅವರ ವಿರುದ್ಧದ ಸಿಬಿಐ ಪ್ರಕರಣವನ್ನು ಕೈಬಿಡುವ ಪ್ರಸ್ತಾಪದೊಂದಿಗೆ ಬಿಜೆಪಿ ನಾಯಕರೊಬ್ಬರು ಸಿಸೋಡಿಯಾ ಅವರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. “ಆ ಆಡಿಯೊ ರೆಕಾರ್ಡ್ ಸಿಸೋಡಿಯಾ ಅವರ ಬಳಿ ಇದೆ” ಎಂದು ಎಎಪಿ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ಈ ಹಂತದಲ್ಲಿ ನಾವು ಸಂಭಾಷಣೆಯನ್ನು ಬಿಡುಗಡೆ ಮಾಡುವ ಅಗತ್ಯವಿಲ್ಲ. ಆದರೆ ಸಮಯ ಬಂದಾಗ, ಎಎಪಿ ಫೋನ್ ಸಂಭಾಷಣೆಯನ್ನು ಬಿಡುಗಡೆ ಮಾಡುತ್ತದೆ” ಎಂದು ಎಎಪಿ ನಾಯಕರೊಬ್ಬರು ತಿಳಿಸಿದ್ದಾರೆ.

“ಈಗ ರದ್ದು ಮಾಡಲಾಗಿರುವ ಮದ್ಯದ ನೀತಿಗೆ ಸಂಬಂಧಿಸಿದ ಆರೋಪಗಳ ಮೇಲೆ ಸಿಬಿಐನಿಂದ ಆರೋಪ ಎದುರಿಸುತ್ತಿರುವ ನೀವು ಎಎಪಿ ತೊರೆದರೆ, ಬಿಜೆಪಿಯು ನಿಮ್ಮ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಮುಚ್ಚಿಹಾಕಲು ಮುಂದಾಗಿದೆ ಎಂಬ ಆಮಿಷ ನೀಡಲಾಗಿದೆ” ಎಂದು ಸಿಸೋಡಿಯಾ ಅವರೂ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನಗೆ ಬಿಜೆಪಿಯಿಂದ ಸಂದೇಶ ಬಂದಿದೆ – ಆಪ್ ಒಡೆದುಹಾಕಿ ಬಿಜೆಪಿಗೆ ಸೇರಿಕೊಳ್ಳಿ. ನಿಮ್ಮ ವಿರುದ್ಧದ ಸಿಬಿಐ ಮತ್ತು ಇ.ಡಿ.ಯ ಎಲ್ಲಾ ಪ್ರಕರಣಗಳನ್ನು ತೆರವು ಮಾಡಲಾಗುವುದು ಎಂದು ಸೂಚಿಸಲಾಗಿದೆ” ಎಂದು ಸಿಬಿಐ ದಾಳಿ ನಡೆಸಿದ ಎರಡು ದಿನಗಳ ನಂತರ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.

ಈ ಹೇಳಿಕೆಯನ್ನು ಬಿಜೆಪಿ ಬಲವಾಗಿ ತಳ್ಳಿಹಾಕಿದೆ. “ಇದು ಎಎಪಿಯ ತಂತ್ರಗಾರಿಕೆಯ ಒಂದು ಭಾಗವಾಗಿದೆಯಷ್ಟೇ. ಅವರ ಬಳಿ ಪುರಾವೆ ಇದ್ದರೆ ಬಿಡುಗಡೆ ಮಾಡಬೇಕು” ಎಂದು ಬಿಜೆಪಿ ನಾಯಕ ಪ್ರಮೋದ್ ಸ್ವಾಮಿ ಒತ್ತಾಯಿಸಿದ್ದಾರೆ.

ತಮ್ಮ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು ಎಂದು ಒತ್ತಿ ಹೇಳಿರುವ ಮನೀಶ್ ಸಿಸೋಡಿಯಾ, “ನೀವು ಏನು ಬೇಕಾದರೂ ಮಾಡಿ, ಹೆದರಲ್ಲ” ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

“ಬಿಜೆಪಿಗೆ ನನ್ನ ಪ್ರತ್ಯುತ್ತರವಿದು- ನಾನು ಮಹಾರಾಣಾ ಪ್ರತಾಪ್ ಮತ್ತು ರಜಪೂತರ ವಂಶಸ್ಥ. ನಾನು ಶಿರಚ್ಛೇದನಕ್ಕೂ ಸಿದ್ಧನಿದ್ದೇನೆ. ಆದರೆ ಪಿತೂರಿಗಾರರು ಮತ್ತು ಭ್ರಷ್ಟರ ಮುಂದೆ ಎಂದಿಗೂ ತಲೆಬಾಗುವುದಿಲ್ಲ. ನನ್ನ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು. ನೀವು ಏನು ಬೇಕಾದರೂ ಮಾಡಿ” ಎಂದಿದ್ದಾರೆ.

ಸಿಸೋಡಿಯಾ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕ ಮನೋಜ್ ತಿವಾರಿ, “ತಮ್ಮನ್ನು ಮಹಾರಾಣಾ ಪ್ರತಾಪ್‌ಗೆ ಹೋಲಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಟೀಕಿಸಿದ್ದಾರೆ.

“ತನ್ನನ್ನು ಮಹಾರಾಣಾ ಪ್ರತಾಪ್‌ಗೆ ಹೋಲಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಮಹಾರಾಣಾ ಪ್ರತಾಪ್ ಅವರು ಜನರಿಗೆ ಮದ್ಯಪಾನ ಮಾಡಿಸಿದ್ದರೆ? ನೀವು ಮೂಲೆ ಮೂಲೆಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದೀರಿ, ನೀವು ದೆಹಲಿಯ ಮಹಿಳೆಯರ ಕೂಗನ್ನು ನಿರ್ಲಕ್ಷಿಸುತ್ತಿದ್ದೀರಿ. ಮಹಾರಾಣಾ ಪ್ರತಾಪ್ ಒಂದು ಕಾಲದಲ್ಲಿ ಮಹಿಳೆಯರಿಗಾಗಿ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಂಡಿದ್ದರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ಮಹಾರಾಣಾ ಪ್ರತಾಪ್ ಅವರನ್ನು ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿರುವ ವ್ಯಕ್ತಿಯೊಂದಿಗೆ ಹೋಲಿಸಬಹುದೇ? ಅಂತಹ ಭ್ರಷ್ಟರಿಗೆ ಆಪ್‌ನಲ್ಲಿ ಮಾತ್ರ ಸ್ಥಾನ ಸಿಗುತ್ತದೆ. ಮಾಡಿರುವ ತಪ್ಪಿಗೆ ಶಿಕ್ಷೆಯಾಗುತ್ತದೆ. ಮನೀಶ್ ಸಿಸೋಡಿಯಾ ಅವರಂತಹ ತಪ್ಪಿತಸ್ಥರನ್ನು ಶಿಕ್ಷಿಸಲು ಬಿಜೆಪಿ ಕೆಲಸ ಮಾಡುತ್ತದೆ. ಬಿಜೆಪಿಯಲ್ಲಿ ಭ್ರಷ್ಟರಿಗೆ ಸ್ಥಾನವಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ನಾಯಕ ಸೌರಭ್ ಭಾರದ್ವಾಜ್ ಪ್ರತಿಕ್ರಿಯಿಸಿ, “ಬಿಜೆಪಿಯು ಪ್ರತಿಪಕ್ಷಗಳ ನಾಯಕರ ಮೇಲೆ ತನಿಖೆಯ ಮೂಲಕ ಒತ್ತಡ ಹೇರಿದ ಮೂರು ಡಜನ್ ಉದಾಹರಣೆಗಳಿವೆ. ಒತ್ತಡ ಎದುರಿಸಿದ ರಾಜಕಾರಣಿಗಳು ಬಿಜೆಪಿಯ ಮಾತು ಕೇಳಿದ ಬಳಿಕವಷ್ಟೇ ಪ್ರಕರಣಗಳನ್ನು ಕೈಬಿಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರನ್ನು ತಮ್ಮ ರಾಜಕೀಯ ಗುರು ಎಂದಿರುವ ಸಿಸೋಡಿಯಾ, “ನಾನು ಎಂದಿಗೂ ಅವರಿಗೆ ಮೋಸ ಮಾಡುವುದಿಲ್ಲ. ನನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಾಡುವ ಪ್ರಸ್ತಾಪವಿಟ್ಟು ಕರೆದಿರುವ ಬಿಜೆಪಿಗೆ ನನ್ನ ಸಂದೇಶವಿದು. ಅರವಿಂದ್ ಕೇಜ್ರಿವಾಲ್ ನನ್ನ ರಾಜಕೀಯ ಗುರು, ನಾನು ಅವರಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ. ನಾನು ಸಿಎಂ ಆಗಲು ಇಲ್ಲಿಗೆ ಬಂದಿಲ್ಲ. ದೇಶದ ಪ್ರತಿ ಮಗುವಿಗೆ ಉತ್ತಮ ಶಿಕ್ಷಣ ಸಿಗಬೇಕು, ಆಗ ಮಾತ್ರ ಭಾರತವು ನಂಬರ್ 1 ದೇಶವಾಗುತ್ತದೆ ಎಂಬುದು ನನ್ನ ಕನಸಾಗಿದೆ. ಕೇಜ್ರಿವಾಲ್ ಅವರು ಮಾತ್ರ ಇಡೀ ದೇಶದಲ್ಲಿ ಈ ಕೆಲಸವನ್ನು ಮಾಡಲು ಸಾಧ್ಯ” ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...