Homeಕರ್ನಾಟಕಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ : ಅಧಿಕಾರಿಗಳ...

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ : ಅಧಿಕಾರಿಗಳ ವಿರುದ್ಧ ಗರಂ ಆದ ಸಿಎಂ

"ಪರಿಶಿಷ್ಟ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ"

- Advertisement -
- Advertisement -

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ, ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ಉದ್ದೇಶಿಸಿ ಹೇಳಿದರು.

ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ಮಂಗಳವಾರ (ಜ.28) ನಡೆದ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಿಎಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ ಮೇಲ್ಮನವಿ ಹೋಗಿ, ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ? ಈ ಬಗ್ಗೆ ವಿವರ ಕೊಡಿ ಎಂದು ಸಭೆಯಲ್ಲಿ ಸಿಎಂ ಅಧಿಕಾರಿಗಳನ್ನು ಪ್ರಶ್ನಿಸಿದರು.

ಪೊಲೀಸ್ ಇಲಾಖೆಯಲ್ಲಿ ಹಿರಿತನ ಪಟ್ಟಿ ಉಲ್ಲಂಘನೆಯಾಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು, ನಾವು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ? ಎಂದು ಸಭೆಯಲ್ಲಿ ಸಿಎಂ ಅಧಿಕಾರಿಗಳನ್ನು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಈ. ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಎಡಿಜಿಪಿ ಅಡ್ಮಿನ್, ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ, ಈ ವಿಚಾರವನ್ನು ಮುಂದಿನ ಸಂಪುಟ ಸಭೆಯ ಮುಂದಿಡಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.

ಬ್ಯಾಕ್ ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ, ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಸಬ್ ಕಮಿಟಿ ಕೊಡುವ ವರದಿಗಳಿಗೆ ಬೆಲೆ ಇಲ್ಲವೇ ಎಂದು ವಿಧಾನಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಪ್ರಶ್ನಿಸಿದರು.

ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ಕೌಂಟರ್ ದೂರು ಪಡೆದು ಪ್ರಕರಣ ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸಲ್ಲ. ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಎಲ್ಲಾ ಇಲಾಖೆಗಳು ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಪರಿಶಿಷ್ಟ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ. ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ ಪರಿಶೀಲನೆ ಮೀಟಿಂಗ್ ಕರೆಯುವಂತೆ ಸಿಎಂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದರು.

ಪ್ರತೀ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಎಚ್ಚರಿಸಿದರು.

ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಎಸ್‌ಪಿ-ಡಿಸಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಹೇಳಿದರು.

ರಾಯಚೂರಿನ‌ ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಕ್ರಿಯಾ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಮಹಿಳೆಯರ ಅಹೋರಾತ್ರಿ ಧರಣಿ ವಿಚಾರವನ್ನು ಸಿಎಂ ಸಭೆಯಲ್ಲಿ ಪ್ರಸ್ತಾಪಿಸಿದರು. ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವೈಜ್ಞಾನಿಕವಾಗಿ ದೇವದಾಸಿ ಮಹಿಳೆಯರ ಸ್ಥಿತಿಗತಿ ಬಗ್ಗೆ ಸಮೀಕ್ಷೆ ನಡೆಸಬೇಕು ಎನ್ನುವುದು ಪ್ರತಿಭಟನಾ ನಿರತರ ಬೇಡಿಕೆಯಾಗಿದೆ ಎಂದು ಉಲ್ಲೇಖಿಸಿದ ಸಿಎಂ, ದೇವದಾಸಿಯರ ಪುನರ್ವಸತಿ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಕೇಳಿದರು. ಈ ಬಗ್ಗೆ ಕೆಲ ಹೊತ್ತು ಚರ್ಚೆ ನಡೆದ ಬಳಿಕ ದೇವದಾಸಿಯರ ಸಮಸ್ಯೆ ಮತ್ತು ಪುನರ್ವಸತಿ ಬಗ್ಗೆ ಸಮಗ್ರ ವರದಿ ಸಿದ್ದಪಡಿಸಲು ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಸಿಎಂ ಸೂಚಿಸಿದರು. ಸಭೆಗೆ ಅಧಿಕಾರಿಗಳು ನೀಡಿರುವ ಅನುಪಾಲನಾ ವರದಿಯಲ್ಲಿ ಮುಂದಿನ ಬಾರಿ ಜಿಲ್ಲಾವಾರು ಅಂಕಿ ಅಂಶ ನಮೂದಿಸಲು ಆದೇಶಿಸಿದರು.

ಮೂಡಾ ಹಗರಣ | ಸಿದ್ದರಾಮಯ್ಯ ಪತ್ನಿ, ಭೈರತಿ ಸುರೇಶ್‌ಗೆ ಇಡಿ ನೀಡಿದ್ದ ನೋಟಿಸ್‌ಗೆ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...