Homeಕರ್ನಾಟಕಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ : ಅಧಿಕಾರಿಗಳ...

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ : ಅಧಿಕಾರಿಗಳ ವಿರುದ್ಧ ಗರಂ ಆದ ಸಿಎಂ

"ಪರಿಶಿಷ್ಟ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ"

- Advertisement -
- Advertisement -

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ, ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ಉದ್ದೇಶಿಸಿ ಹೇಳಿದರು.

ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ಮಂಗಳವಾರ (ಜ.28) ನಡೆದ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಿಎಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ ಮೇಲ್ಮನವಿ ಹೋಗಿ, ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ? ಈ ಬಗ್ಗೆ ವಿವರ ಕೊಡಿ ಎಂದು ಸಭೆಯಲ್ಲಿ ಸಿಎಂ ಅಧಿಕಾರಿಗಳನ್ನು ಪ್ರಶ್ನಿಸಿದರು.

ಪೊಲೀಸ್ ಇಲಾಖೆಯಲ್ಲಿ ಹಿರಿತನ ಪಟ್ಟಿ ಉಲ್ಲಂಘನೆಯಾಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು, ನಾವು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ? ಎಂದು ಸಭೆಯಲ್ಲಿ ಸಿಎಂ ಅಧಿಕಾರಿಗಳನ್ನು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಈ. ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಎಡಿಜಿಪಿ ಅಡ್ಮಿನ್, ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ, ಈ ವಿಚಾರವನ್ನು ಮುಂದಿನ ಸಂಪುಟ ಸಭೆಯ ಮುಂದಿಡಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.

ಬ್ಯಾಕ್ ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ, ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಸಬ್ ಕಮಿಟಿ ಕೊಡುವ ವರದಿಗಳಿಗೆ ಬೆಲೆ ಇಲ್ಲವೇ ಎಂದು ವಿಧಾನಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಪ್ರಶ್ನಿಸಿದರು.

ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ಕೌಂಟರ್ ದೂರು ಪಡೆದು ಪ್ರಕರಣ ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸಲ್ಲ. ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಎಲ್ಲಾ ಇಲಾಖೆಗಳು ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಪರಿಶಿಷ್ಟ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ. ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ ಪರಿಶೀಲನೆ ಮೀಟಿಂಗ್ ಕರೆಯುವಂತೆ ಸಿಎಂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದರು.

ಪ್ರತೀ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಎಚ್ಚರಿಸಿದರು.

ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಎಸ್‌ಪಿ-ಡಿಸಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಹೇಳಿದರು.

ರಾಯಚೂರಿನ‌ ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಕ್ರಿಯಾ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಮಹಿಳೆಯರ ಅಹೋರಾತ್ರಿ ಧರಣಿ ವಿಚಾರವನ್ನು ಸಿಎಂ ಸಭೆಯಲ್ಲಿ ಪ್ರಸ್ತಾಪಿಸಿದರು. ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವೈಜ್ಞಾನಿಕವಾಗಿ ದೇವದಾಸಿ ಮಹಿಳೆಯರ ಸ್ಥಿತಿಗತಿ ಬಗ್ಗೆ ಸಮೀಕ್ಷೆ ನಡೆಸಬೇಕು ಎನ್ನುವುದು ಪ್ರತಿಭಟನಾ ನಿರತರ ಬೇಡಿಕೆಯಾಗಿದೆ ಎಂದು ಉಲ್ಲೇಖಿಸಿದ ಸಿಎಂ, ದೇವದಾಸಿಯರ ಪುನರ್ವಸತಿ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಕೇಳಿದರು. ಈ ಬಗ್ಗೆ ಕೆಲ ಹೊತ್ತು ಚರ್ಚೆ ನಡೆದ ಬಳಿಕ ದೇವದಾಸಿಯರ ಸಮಸ್ಯೆ ಮತ್ತು ಪುನರ್ವಸತಿ ಬಗ್ಗೆ ಸಮಗ್ರ ವರದಿ ಸಿದ್ದಪಡಿಸಲು ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಸಿಎಂ ಸೂಚಿಸಿದರು. ಸಭೆಗೆ ಅಧಿಕಾರಿಗಳು ನೀಡಿರುವ ಅನುಪಾಲನಾ ವರದಿಯಲ್ಲಿ ಮುಂದಿನ ಬಾರಿ ಜಿಲ್ಲಾವಾರು ಅಂಕಿ ಅಂಶ ನಮೂದಿಸಲು ಆದೇಶಿಸಿದರು.

ಮೂಡಾ ಹಗರಣ | ಸಿದ್ದರಾಮಯ್ಯ ಪತ್ನಿ, ಭೈರತಿ ಸುರೇಶ್‌ಗೆ ಇಡಿ ನೀಡಿದ್ದ ನೋಟಿಸ್‌ಗೆ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...