Homeಮುಖಪುಟಕ್ರಮ ಕೈಗೊಳ್ಳದಿದ್ದರೆ ಲೋಕಸಭಾ ಸದಸ್ಯತ್ವ ತ್ಯಜಿಸುವೆ: ಮುಸ್ಲಿಂ ವಿರೋಧಿ ನಿಂದನೆಗೆ ಡ್ಯಾನಿಶ್ ಅಲಿ ಪ್ರತಿಕ್ರಿಯೆ

ಕ್ರಮ ಕೈಗೊಳ್ಳದಿದ್ದರೆ ಲೋಕಸಭಾ ಸದಸ್ಯತ್ವ ತ್ಯಜಿಸುವೆ: ಮುಸ್ಲಿಂ ವಿರೋಧಿ ನಿಂದನೆಗೆ ಡ್ಯಾನಿಶ್ ಅಲಿ ಪ್ರತಿಕ್ರಿಯೆ

- Advertisement -
- Advertisement -

ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ತಮ್ಮ ಲೋಕಸಭಾ ಸದಸ್ಯತ್ವವನ್ನು ತ್ಯಜಿಸುವುದಾಗಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ನಾಯಕ ಮತ್ತು ಲೋಕಸಭಾ ಸಂಸದ ಡ್ಯಾನಿಶ್ ಅಲಿ ಹೇಳಿದ್ದಾರೆ.

ಗುರುವಾರ ಸಂಸತ್ತಿನ ಕೆಳಮನೆಯಲ್ಲಿ ಚಂದ್ರಯಾನ-3ರ ಯಶಸ್ಸಿನ ಚರ್ಚೆಯ ವೇಳೆ ಬಿಜೆಪಿ ನಾಯಕನಿಂದ ದ್ವೇಷಪೂರಿತ ಹೇಳಿಕೆ ಹೊರಬಿದ್ದಿದೆ. ”ಯೇ ಉಗ್ರವಾದಿ (ಉಗ್ರವಾದಿ), ಯೇ ಆಟಂಕ್ವಾಡಿ ಹೈ, ಉಗ್ರವಾದಿ ಹೈ, ಯೇ ಆಂತಂಕ್ವಾದಿ (ಭಯೋತ್ಪಾದಕ) ಹೈ” ಎಂದು ಹೇಳಿದ್ದಾರೆ

ಈ ಬಗ್ಗೆ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಡ್ಯಾನಿಶ್ ಅಲಿ, ”ಬಿಧುರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರವನ್ನು ಸಲ್ಲಿಸಿದ್ದೇನೆ. ಲೋಕಸಭಾ ಸ್ಪೀಕರ್ ಘಟನೆಯ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ. ಎಲ್ಲವೂ ದಾಖಲೆಯಲ್ಲಿದೆ. ಆದರೆ, ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮತ್ತು ನನ್ನ ಹಕ್ಕುಗಳನ್ನು ರಕ್ಷಿಸದಿದ್ದರೆ, ನಾನು ಲೋಕಸಭೆ ಸದಸ್ಯತ್ವವನ್ನು ತೊರೆಯುವ ಬಗ್ಗೆ ಯೋಚಿಸುತ್ತೇನೆ” ಎಂದು ಹೇಳಿದರು.

”ಬಿಧುರಿ ಬಳಸಿರುವ ಅವಹೇಳನಕಾರಿ ಭಾಷೆ ಇಡೀ ಮುಸ್ಲಿಂ ಸಮುದಾಯಕ್ಕೆ ಮಾಡಿದ ಅವಮಾನ” ಎಂದು ಡ್ಯಾನಿಶ್ ಅಲಿ ಹೇಳಿದ್ದಾರೆ.

”ಚುನಾಯಿತ ಸಂಸದರ ವಿರುದ್ಧ ಇಂತಹ ಅಸಂಸದೀಯ ಭಾಷೆ ಬಳಸಿರುವುದು ಇದೇ ಮೊದಲು, ನನಗೆ ನಿದ್ರೆ ಬರಲಿಲ್ಲ, ನನ್ನ ಆತ್ಮವು ನಡುಗಿತು. ಚುನಾಯಿತ ಸಂಸದರು ಈ ಪರಿಸ್ಥಿತಿಯನ್ನು ಎದುರಿಸಿದರೆ, ಸಾಮಾನ್ಯ ಜನರ ಗತಿಯೇನು? ಭಾರವಾದ ಹೃದಯದಿಂದ, ನಾನು ಸಹ ಈ ಸಂಸತ್ತನ್ನು ತೊರೆಯಲು ಯೋಚಿಸುತ್ತಿದ್ದೇನೆ ಏಕೆಂದರೆ ಇದನ್ನು ಸಹಿಸಲಾಗುವುದಿಲ್ಲ” ಎಂದು ಅಸಮಾಧಾನವನ್ನು ಹೊರಹಾಕಿದರು.

”ನಾವು ಆಯ್ಕೆಯಾಗಿದ್ದೇವೆ ಇದಕ್ಕಾಗಿಯೇ? ನಮ್ಮ ಪೂರ್ವಜರು ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದು ಇದಕ್ಕಾಗಿಯೇ..? ಅವರು (ಬಿಜೆಪಿ) ನನಗೆ ಮಾತ್ರ ಅವಮಾನ ಮಾಡಲಿಲ್ಲ, ನನ್ನ ಹಿಂಬಾಲಕರಿಗೆ ಅವಮಾನ ಮಾಡಿ, ಇಡೀ ರಾಷ್ಟ್ರಕ್ಕೆ ಅವಮಾನ ಮಾಡಿದರು… ಈಗ ನೋಡೋಣ ಬಿಜೆಪಿ ರಮೇಶ್ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳುತ್ತಾ ಅಥವಾ ಬಡ್ತಿ ನೀಡಿ ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುತ್ತಾರಾ… ಬಹುಶಃ ಇದು ಅವರ ನಡುವೆ ಪೈಪೋಟಿಯಾಗಿ ಪರಿಣಮಿಸಿದೆ. ಬಿಜೆಪಿ ನಾಯಕರು ಹೊರಗೆ ಮಾತ್ರವಲ್ಲದೆ ಸಂಸತ್ತಿನ ಒಳಗೂ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದರು.

ಬಿಧುರಿ ಅವರ ಹೇಳಿಕೆಗೆ ವಿರೋಧ ಪಕ್ಷದ ಸದಸ್ಯರು ಬಿಜೆಪಿ ಸಂಸದರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.

ಇದನ್ನೂ ಓದಿ: ‘ಮುಲ್ಲಾ ಭಯೋತ್ಪಾದಕ’: ಲೋಕಸಭೆಯಲ್ಲಿ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...