Homeಮುಖಪುಟಕ್ರಮ ಕೈಗೊಳ್ಳದಿದ್ದರೆ ಲೋಕಸಭಾ ಸದಸ್ಯತ್ವ ತ್ಯಜಿಸುವೆ: ಮುಸ್ಲಿಂ ವಿರೋಧಿ ನಿಂದನೆಗೆ ಡ್ಯಾನಿಶ್ ಅಲಿ ಪ್ರತಿಕ್ರಿಯೆ

ಕ್ರಮ ಕೈಗೊಳ್ಳದಿದ್ದರೆ ಲೋಕಸಭಾ ಸದಸ್ಯತ್ವ ತ್ಯಜಿಸುವೆ: ಮುಸ್ಲಿಂ ವಿರೋಧಿ ನಿಂದನೆಗೆ ಡ್ಯಾನಿಶ್ ಅಲಿ ಪ್ರತಿಕ್ರಿಯೆ

- Advertisement -
- Advertisement -

ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ತಮ್ಮ ಲೋಕಸಭಾ ಸದಸ್ಯತ್ವವನ್ನು ತ್ಯಜಿಸುವುದಾಗಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ನಾಯಕ ಮತ್ತು ಲೋಕಸಭಾ ಸಂಸದ ಡ್ಯಾನಿಶ್ ಅಲಿ ಹೇಳಿದ್ದಾರೆ.

ಗುರುವಾರ ಸಂಸತ್ತಿನ ಕೆಳಮನೆಯಲ್ಲಿ ಚಂದ್ರಯಾನ-3ರ ಯಶಸ್ಸಿನ ಚರ್ಚೆಯ ವೇಳೆ ಬಿಜೆಪಿ ನಾಯಕನಿಂದ ದ್ವೇಷಪೂರಿತ ಹೇಳಿಕೆ ಹೊರಬಿದ್ದಿದೆ. ”ಯೇ ಉಗ್ರವಾದಿ (ಉಗ್ರವಾದಿ), ಯೇ ಆಟಂಕ್ವಾಡಿ ಹೈ, ಉಗ್ರವಾದಿ ಹೈ, ಯೇ ಆಂತಂಕ್ವಾದಿ (ಭಯೋತ್ಪಾದಕ) ಹೈ” ಎಂದು ಹೇಳಿದ್ದಾರೆ

ಈ ಬಗ್ಗೆ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಡ್ಯಾನಿಶ್ ಅಲಿ, ”ಬಿಧುರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರವನ್ನು ಸಲ್ಲಿಸಿದ್ದೇನೆ. ಲೋಕಸಭಾ ಸ್ಪೀಕರ್ ಘಟನೆಯ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ. ಎಲ್ಲವೂ ದಾಖಲೆಯಲ್ಲಿದೆ. ಆದರೆ, ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮತ್ತು ನನ್ನ ಹಕ್ಕುಗಳನ್ನು ರಕ್ಷಿಸದಿದ್ದರೆ, ನಾನು ಲೋಕಸಭೆ ಸದಸ್ಯತ್ವವನ್ನು ತೊರೆಯುವ ಬಗ್ಗೆ ಯೋಚಿಸುತ್ತೇನೆ” ಎಂದು ಹೇಳಿದರು.

”ಬಿಧುರಿ ಬಳಸಿರುವ ಅವಹೇಳನಕಾರಿ ಭಾಷೆ ಇಡೀ ಮುಸ್ಲಿಂ ಸಮುದಾಯಕ್ಕೆ ಮಾಡಿದ ಅವಮಾನ” ಎಂದು ಡ್ಯಾನಿಶ್ ಅಲಿ ಹೇಳಿದ್ದಾರೆ.

”ಚುನಾಯಿತ ಸಂಸದರ ವಿರುದ್ಧ ಇಂತಹ ಅಸಂಸದೀಯ ಭಾಷೆ ಬಳಸಿರುವುದು ಇದೇ ಮೊದಲು, ನನಗೆ ನಿದ್ರೆ ಬರಲಿಲ್ಲ, ನನ್ನ ಆತ್ಮವು ನಡುಗಿತು. ಚುನಾಯಿತ ಸಂಸದರು ಈ ಪರಿಸ್ಥಿತಿಯನ್ನು ಎದುರಿಸಿದರೆ, ಸಾಮಾನ್ಯ ಜನರ ಗತಿಯೇನು? ಭಾರವಾದ ಹೃದಯದಿಂದ, ನಾನು ಸಹ ಈ ಸಂಸತ್ತನ್ನು ತೊರೆಯಲು ಯೋಚಿಸುತ್ತಿದ್ದೇನೆ ಏಕೆಂದರೆ ಇದನ್ನು ಸಹಿಸಲಾಗುವುದಿಲ್ಲ” ಎಂದು ಅಸಮಾಧಾನವನ್ನು ಹೊರಹಾಕಿದರು.

”ನಾವು ಆಯ್ಕೆಯಾಗಿದ್ದೇವೆ ಇದಕ್ಕಾಗಿಯೇ? ನಮ್ಮ ಪೂರ್ವಜರು ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದು ಇದಕ್ಕಾಗಿಯೇ..? ಅವರು (ಬಿಜೆಪಿ) ನನಗೆ ಮಾತ್ರ ಅವಮಾನ ಮಾಡಲಿಲ್ಲ, ನನ್ನ ಹಿಂಬಾಲಕರಿಗೆ ಅವಮಾನ ಮಾಡಿ, ಇಡೀ ರಾಷ್ಟ್ರಕ್ಕೆ ಅವಮಾನ ಮಾಡಿದರು… ಈಗ ನೋಡೋಣ ಬಿಜೆಪಿ ರಮೇಶ್ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳುತ್ತಾ ಅಥವಾ ಬಡ್ತಿ ನೀಡಿ ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುತ್ತಾರಾ… ಬಹುಶಃ ಇದು ಅವರ ನಡುವೆ ಪೈಪೋಟಿಯಾಗಿ ಪರಿಣಮಿಸಿದೆ. ಬಿಜೆಪಿ ನಾಯಕರು ಹೊರಗೆ ಮಾತ್ರವಲ್ಲದೆ ಸಂಸತ್ತಿನ ಒಳಗೂ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದರು.

ಬಿಧುರಿ ಅವರ ಹೇಳಿಕೆಗೆ ವಿರೋಧ ಪಕ್ಷದ ಸದಸ್ಯರು ಬಿಜೆಪಿ ಸಂಸದರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.

ಇದನ್ನೂ ಓದಿ: ‘ಮುಲ್ಲಾ ಭಯೋತ್ಪಾದಕ’: ಲೋಕಸಭೆಯಲ್ಲಿ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...