Homeಮುಖಪುಟಅಂದು ಅಮಿತ್ ಶಾ ಕೊಟ್ಟ ಮಾತು ಉಳಿಸಿಕೊಂಡಿದ್ದರೆ, ಇಂದು ಮಹಾರಾಷ್ಟ್ರ ಬಿಜೆಪಿ ಸಿಎಂ ಹೊಂದಿರುತ್ತಿತ್ತು: ಉದ್ಧವ್...

ಅಂದು ಅಮಿತ್ ಶಾ ಕೊಟ್ಟ ಮಾತು ಉಳಿಸಿಕೊಂಡಿದ್ದರೆ, ಇಂದು ಮಹಾರಾಷ್ಟ್ರ ಬಿಜೆಪಿ ಸಿಎಂ ಹೊಂದಿರುತ್ತಿತ್ತು: ಉದ್ಧವ್ ಠಾಕ್ರೆ

- Advertisement -
- Advertisement -

ಅಂದು ಅಮಿತ್ ಶಾ ಕೊಟ್ಟ ಮಾತು ಉಳಿಸಿಕೊಂಡಿದ್ದರೆ, ಇಂದು ಮಹಾರಾಷ್ಟ್ರದಲ್ಲಿ ಬಿಜೆಪಿ ವ್ಯಕ್ತಿ ಸಿಎಂ ಆಗಿರುತ್ತಿದ್ದರು ಎಂದು ಮಾಜಿ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇಂದು ಬಿಜೆಪಿಯು ಹೊರಗಿನ ವ್ಯಕ್ತಿಗೆ ಸಿಎಂ ಸ್ಥಾನ ಬಿಟ್ಟುಕೊಟ್ಟಿದೆ. 2019ರಲ್ಲಿಯೇ ಆ ಕೆಲಸ ಮಾಡಲು ಏಕೆ ಸಾಧ್ಯವಾಗಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.

2019ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿಯೊಂದಿಗೆ ಚುನಾವಣೆ ಎದುರಿಸಿದ್ದವು. ಬಿಜೆಪಿ 106 ಸ್ಥಾನಗಳನ್ನು ಗೆದ್ದರೆ, ಶಿವಸೇನೆ 55 ಸ್ಥಾನಗಳಲ್ಲಿ ಜಯಗಳಿಸಿತ್ತು. ಆಗ ಸಿಎಂ ಯಾರಾಗಬೇಕು ಎಂಬ ದೊಡ್ಡ ಚರ್ಚೆ ನಡೆದಿತ್ತು. ತಲಾ 2.5 ವರ್ಷಗಳ ಅವಧಿಗೆ ಅಧಿಕಾರ ಹಂಚಿಕೊಳ್ಳಲು ಅಮಿತ್ ಶಾ ಮಾತು ಕೊಟ್ಟಿದ್ದಾರೆ. ಮೊದಲ ಎರಡೂವರೆ ವರ್ಷ ಶಿವಸೇನೆಯ ವ್ಯಕ್ತಿ ಸಿಎಂ ಆಗಲು ಒಪ್ಪಿದ್ದರು ಎಂದು ಉದ್ಧವ್ ಠಾಕ್ರೆ ವಾದಿಸಿದ್ದರು. ಆದರೆ ಆಗ ಬಿಜೆಪಿ ಅಂತಹ ಆಶ್ವಾಸನೆ ನೀಡಿಲ್ಲ ಎಂದು ವಾದಿಸಿತು. ಕೊನೆಗೆ ಬಿಜೆಪಿಯೊಂದಿಗೆ ಸುಧೀರ್ಘ ಮೈತ್ರಿ ಕಡಿದುಕೊಂಡ ಶಿವಸೇನೆ ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆಗೂಡಿ ಅಧಿಕಾರ ಹಿಡಿದಿತ್ತು. ಉದ್ಧವ್ ಠಾಕ್ರೆ ಸಿಎಂ ಆಗಿದ್ದರು.

ಈಗ ಅದನ್ನು ನೆನಪಿಸಿರುವ ಉದ್ಧವ್ ಠಾಕ್ರೆಯವರು, “ಅಂದು ಬಿಜೆಪಿ ಕೊಟ್ಟ ಮಾತು ಉಳಿಸಿಕೊಂಡಿದ್ದರೆ ಒಪ್ಪಂದದಂತೆ ಉಳಿದ ಎರಡೂವರೆ ವರ್ಷ ಬಿಜೆಪಿ ವ್ಯಕ್ತಿ ಸಿಎಂ ಆಗಬಹುದಿತ್ತು. ಆದರೆ ಹಾಗೆ ಮಾಡದ ಕಾರಣ ಈಗಲೂ ಅವರು ಶಿವಸೇನೆಯ ವ್ಯಕ್ತಿಗೆ ಸಿಎಂ ಹುದ್ದೆ ಬಿಟ್ಟುಕೊಟ್ಟಿದ್ದಾರೆ” ಎಂದು ಲೇವಡಿ ಮಾಡಿದ್ದಾರೆ.

2019ರಲ್ಲಿ ಉದ್ಧವ್ ಠಾಕ್ರೆಯವರು ಸಿಎಂ ಆದ ನಂತರ ಮುಂಬೈನ ಆರೇ ಅರಣ್ಯ ಪ್ರದೇಶದಲ್ಲಿ ಮೆಟ್ರೊ ಕಾರ್‌ ಶೆಡ್‌ ನಿರ್ಮಾಣವನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದ್ದರು. ಆ ಮೂಲಕ ಹಲವು ದಿನಗಳಿಂದ ಹೋರಾಡುತ್ತಿದ್ದ ಪರಿಸರ ಪ್ರೇಮಿಗಳ ಮನಗೆದ್ದಿದ್ದರು. ಈಗ ಏಕನಾಥ್ ಶಿಂಧೆಯವರು ಸಿಎಂ ಆದ ಕೂಡಲೆ ಆ ಆದೇಶವನ್ನು ಬದಲಿಸಿದ್ದಾರೆ. ಈ ಕುರಿತು ಸಹ ಉದ್ಧವ್ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದು, ನನ್ನ ಮೇಲಿನ ಸೇಡನ್ನು ಸಾಮಾನ್ಯ ಮುಂಬೈ ಜನರ ಮೇಲೆ ತೋರಿಸಬೇಡಿ ಎಂದಿದ್ದಾರೆ.

ಇನ್ನೊಂದು ಕಡೆ ಏಕನಾಥ್ ಶಿಂಧೆ ಸಿಎಂ ಆಗಿರುವುದರಿಂದ ಮತ್ತು ಅವರ ಜೊತೆ 39 ಶಿವಸೇನೆ ಶಾಸಕರು ಇರುವುದರಿಂದ ನಿಜವಾದ ಶಿವಸೇನೆ ಪಕ್ಷ ಅವರಿಗೆ ಸೇರುತ್ತದೆ. ಇತ್ತ ಉದ್ಧವ್ ಠಾಕ್ರೆ ಅಧಿಕಾರದ ಆಸೆಯಿಂದ ಪಕ್ಷವನ್ನೇ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ವಾದಿಸಿದೆ.

ಫಡ್ನವೀಸ್ ಸದ್ಯ ಅತಂತ್ರ

ಮಹಾರಾಷ್ಟ್ರದ ಆಪರೇಷನ್ ಕಮಲದ ರೂವಾರಿ ಎಂದು ಬಿಂಬಿಸಿಕೊಳ್ಳುತ್ತಿದ್ದ ಮಾಜಿ ಸಿಎಂ, ಹಾಲಿ ಡಿಸಿಎಂ ದೇವೇಂದ್ರ ಫಡ್ನವೀಸ್ ಏಕಾಏಕಿ ಮೂಲೆಗೆ ತಳ್ಳಲ್ಪಟ್ಟರು. ಗುರವಾರದ ಬೆಳಿಗ್ಗೆಯವರೆಗೂ ತಾನೇ ಸಿಎಂ ಎಂದು ಬೀಗುತ್ತಿದ್ದ ಅವರು ಮಧ್ಯಾಹ್ನದ ವೇಳೆಗೆ ಸಿಹಿ ಹಂಚಿ ಸಂಭ್ರಮಿಸಿದ್ದರೂ ಕೂಡ. ಆದರೆ ಸಿಎಂ ಸ್ಥಾನ ಸಿಗುವುದಿಲ್ಲ ಎಂದು ಅರಿತ ನಂತರ ನನಗೆ ನೂತನ ಸರ್ಕಾರದಲ್ಲಿ ಯಾವುದೇ ಹುದ್ದೆ ಬೇಡ, ಸರ್ಕಾರ ಸುಗಮ ರೀತಿಯಲ್ಲಿ ನಡೆದುಕೊಂಡು ಹೋಗಲು ಸಹಕರಿಸುವುದಾಗಿ ಹೇಳಿದರು. ಒಂದು ರೀತಿಯಲ್ಲಿ ತಮ್ಮ ಮುನಿಸನ್ನು ಹೊರಹಾಕಿದರು. ಆದರೆ ಸಂಜೆ ವೇಳೆಗೆ ಉಪಮುಖ್ಯಮಂತ್ರಿ ಸ್ಥಾನವನ್ನು ಅನಿವಾರ್ಯವಾಗಿ ಒಪ್ಪಿಕೊಳ್ಳಬೇಕಾದ ಪರಿಸ್ಥಿತಿ ಅವರದ್ದಾಗಿತ್ತು.

ಇದನ್ನೂ ಓದಿ: ಫಡ್ನವೀಸ್‌ಗೆ ದಕ್ಕದ ಸಿಎಂ ಪಟ್ಟ: ಬಿಜೆಪಿ ಹೈಕಮಾಂಡ್ ಎದುರು ಮಂಡಿಯೂರಿದ್ದೇಕೆ?

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೇವಲ ಒಂದು ಕುರ್ಚಿ ಮಾತ್ರ ಹಾಕಲಾಗಿತ್ತು. ಅತ್ತ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ, “ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುತ್ತಾರೆ, ಫಡ್ನವೀಸ್ ಉಪಮುಖ್ಯಮಂತ್ರಿಯಾಗಬೇಕು. ನಾನು ಅವರನ್ನು ವೈಯಕ್ತಿಕವಾಗಿ ವಿನಂತಿಸುತ್ತೇನೆ” ಎಂದು ಟ್ವೀಟ್ ಮಾಡಿದರು. ಅದರ ಬೆನ್ನಲ್ಲೆ “ಬಿಜೆಪಿ ಅಧ್ಯಕ್ಷ ನಡ್ಡಾಜಿ ಅವರ ಆದೇಶದ ಮೇರೆಗೆ ಫಡ್ನವೀಸ್ ಅವರು ವಿಶಾಲ ಹೃದಯ ಮೆರೆದಿದ್ದಾರೆ ಮತ್ತು ಮಹಾರಾಷ್ಟ್ರದ ರಾಜ್ಯ ಮತ್ತು ಸಾರ್ವಜನಿಕರ ಹಿತಾಸಕ್ತಿಯಿಂದ ಸರ್ಕಾರಕ್ಕೆ ಸೇರಲು ನಿರ್ಧರಿಸಿದ್ದಾರೆ. ಈ ನಿರ್ಧಾರವು ಮಹಾರಾಷ್ಟ್ರದ ಬಗ್ಗೆ ಅವರ ನಿಜವಾದ ನಿಷ್ಠೆ ಮತ್ತು ಸೇವೆಯ ಸಂಕೇತವಾಗಿದೆ. ಇದಕ್ಕಾಗಿ ನಾನು ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ” ಎಂದು ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದರು. ಆಗ ಆತುರಾತುರವಾಗಿ ವೇದಿಕೆಗೆ ಮತ್ತೊಂದು ಕುರ್ಚಿ ಹಾಕಿ ದೇವೇಂದ್ರ ಫಡ್ನವೀಸ್‌ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...