Homeಮುಖಪುಟಬಿರಿಯಾನಿ ರೆಸ್ಟೋರೆಂಟ್‌ ಮುಚ್ಚದಿದ್ದರೆ ಬೆಂಕಿ ಹಚ್ಚುತ್ತೇನೆ: ದೆಹಲಿಯಲ್ಲಿ ಮತೀಯ ಗೂಂಡಾಗಿರಿ

ಬಿರಿಯಾನಿ ರೆಸ್ಟೋರೆಂಟ್‌ ಮುಚ್ಚದಿದ್ದರೆ ಬೆಂಕಿ ಹಚ್ಚುತ್ತೇನೆ: ದೆಹಲಿಯಲ್ಲಿ ಮತೀಯ ಗೂಂಡಾಗಿರಿ

ಆರೋಪಿ ನರೇಶ್‌ ಕುಮಾರ್‌ ಸೂರ್ಯವಂಶಿ, ತನ್ನನ್ನು ಬಜರಂಗದಳದ ಸದಸ್ಯ ಎಂದು ಗುರುತಿಸಿಕೊಂಡಿದ್ದಾನೆ ಎಂದು ಪಿಟಿಐ ವರದಿ ಮಾಡಿದೆ.

- Advertisement -
- Advertisement -

ದೆಹಲಿಯ ಸಂತ್‌ ನಗರದಲ್ಲಿರುವ ಬಿರಿಯಾನಿ ಪಾಯಿಂಟ್‌ ರೆಸ್ಟೋರೆಂಟ್‌ ಮುಚ್ಚಬೇಕು ಇಲ್ಲವಾದಲ್ಲಿ ಬೆಂಕಿ ಹಚ್ಚುತ್ತೇನೆ ಎಂದು ವ್ಯಕ್ತಿಯೊಬ್ಬ ರೆಸ್ಟೋರೆಂಟ್‌ ಸಿಬ್ಬಂದಿಯನ್ನು ಕೆಟ್ಟದಾಗಿ ನಿಂದಿಸಿ, ಕಿರುಕುಳ ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ದೀಪಾವಳಿ ರಾತ್ರಿ ಈ ಘಟನೆ ನಡೆದಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್‌ ಆದ ನಂತರ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಆದರೆ ಆರೋಪಿಯ ಗುರುತು ಸಿಕ್ಕಿಲ್ಲದೇ ಇರುವುದರಿಂದ ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಧರ್ಮ ಮತ್ತು ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ಉದ್ದೇಶ) ಅಡಿಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ.

ಈವರೆಗೂ ಬುರಾರಿ ಪೊಲೀಸ್‌ ಠಾಣೆಯಲ್ಲಿ ಯಾವುದೇ ಪಿಸಿಆರ್‌ ಕರೆ ಅಥವಾ ದೂರು ಬಂದಿಲ್ಲ. ಆದರೂ ಸತ್ಯವನ್ನು ಪರಿಶೀಲಿಸಲಾಗುತ್ತಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಡಿಸಿಪಿ (ಉತ್ತರ) ಸಾಗರ್‌ ಸಿಂಗ್‌ ಕಲ್ಸಿ ಹೇಳಿದ್ದಾರೆ.

ವೈರಲ್‌ ಆಗಿರುವ ಸುಮಾರು ಮೂರು ನಿಮಿಷಗಳ ವೀಡಿಯೋದಲ್ಲಿ ವ್ಯಕ್ತಿಯೊಬ್ಬ ಗಿಜುಗುಡುವ ರಸ್ತೆಯಲ್ಲಿರುವ ರೆಸ್ಟೋರೆಂಟ್‌ ಅನ್ನು ಉಲ್ಲೇಖಿಸಿ, ‘ಇದು ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶವಾ? ಅವರು ಅಲ್ಲಿ ಕುಳಿತಿದ್ದಾರೆ ನೋಡಿ, ದೀಪಾವಳಿ ದಿನ ತೊಂದರೆ ನೀಡಲು ಹೋಟೆಲ್ ತೆರೆದಿದ್ದಾರೆ’ ಎಂದು ಹೇಳಿರುವುದು ವೀಡಿಯೋದಲ್ಲಿದೆ. ಎನ್‌ಡಿಟಿವಿ ಇದನ್ನು ಸ್ವತಂತ್ರವಾಗಿ ಪರಿಶೀಲನೆ ನಡೆಸಿಲ್ಲ ಸಾಧ್ಯವಾಗಿಲ್ಲ ಎಂದು ತಿಳಿಸಿದೆ.

ಪಿಟಿಐ ಸುದ್ದಿ ಸಂಸ್ಥೆ ಪ್ರಕಾರ, ಆರೋಪಿ ನರೇಶ್‌ ಕುಮಾರ್‌ ಸೂರ್ಯವಂಶಿ, ತನ್ನನ್ನು ಬಲಪಂಥೀಯ ಸಂಘಟನೆ ಬಜರಂಗದಳದ ಸದಸ್ಯ ಎಂದು ಗುರುತಿಸಿಕೊಂಡಿದ್ದಾನೆ ಎನ್ನಲಾಗಿದೆ.

ರೆಸ್ಟೋರೆಂಟ್‌ ಒಳಗೆ ಕುಳಿತಿದ್ದ ಅಲ್ಲಿನ ಸಿಬ್ಬಂದಿಯೊಂದಿಗೆ ಮಾತಿಗಿಳಿದ ವ್ಯಕ್ತಿಯು, ಇದು ಹಿಂದು ಪ್ರದೇಶ ಎಂದು ಘೋಷಿಸಿ, ರೆಸ್ಟೋರೆಂಟ್‌ ಅನ್ನು ಮುಚ್ಚುವಂತೆ ಒತ್ತಾಯಿಸಿ, ಅವರನ್ನು ನಿಂದಿಸಲು ಪ್ರಾರಂಭಿಸುತ್ತಾನೆ. ‘ಅರೇ… ನಿಮ್ಮ ಅಂಗಡಿ ಹೇಗೆ ತೆರೆದಿದ್ದೀರಿ? ನಿಮಗೆ ಅನುಮತಿ ನೀಡಿದ್ದು ಯಾರು? ಇದು ಹಿಂದು ಪ್ರದೇಶ ಎಂಬುದು ನಿಮಗೆ ತಿಳಿದಿಲ್ಲವೇ? ಇಂದು ದೀಪಾವಳಿ…. ಈಗ ಅಂಗಡಿಯನ್ನು ಮುಚ್ಚಿ. ಏನಿದು? ಇದೇನು ನಿಮ್ಮ ಪ್ರದೇಶವೇ? ಇದೇನು ಜಾಮಾ ಮಸೀದಿಯೇ? ಇದು ಸಂಪೂರ್ಣವಾಗಿ ‘ಹಿಂದು ಪ್ರದೇಶ’ ಎಂದು ಕಿರುಚಾಡಿದ್ದಾನೆ.

ಈಗ ಹೋಟೆಲ್ ಮುಚ್ಚದಿದ್ದರೆ ಬೆಂಕಿ ಹಚ್ಚಬೇಕಾಗುತ್ತದೆ ಎಂದು ಗದರಿದ್ದಾನೆ. ವ್ಯಕ್ತಿಯು ಮಾಡಿದ ಗಲಾಟೆಯಿಂದ ರೆಸ್ಟೋರೆಂಟ್‌ ಸಿಬ್ಬಂದಿ ಭಯಭೀತರಾಗಿದ್ದು, ಅಂಗಡಿಯೊಳಗಿನ ಟೇಬಲ್‌, ಕುರ್ಚಿ ಹಾಗೂ ಪಾತ್ರೆಗಳನ್ನು ಸ್ಥಳಾಂತರಿಸಲು ಪ್ರಾರಂಭಿಸಿದ್ದಾರೆ. ಆ ಸಮಯದಲ್ಲಿ ಅರಚಾಡುತ್ತಲೇ ಇದ್ದ ವ್ಯಕ್ತಿಯು ‘ಇದು ಹಿಂದೂ ಪ್ರದೇಶ’ ಎಂದು ಕೂಗಿದ್ದು, ಸುತ್ತಲು ನೆರೆದಿದ್ದ ಜನರನ್ನು ಉದ್ದೇಶಿಸಿ, ‘ಎದ್ದೇಳಿ…. ಇವರೆಲ್ಲರೂ ನಮ್ಮ ಸಹೋದರಿಯರೊಂದಿಗೆ ಇಲ್ಲಿ ಲವ್‌ ಜಿಹಾದ್ ಮಾಡುತ್ತಿದ್ದಾರೆ’ ಎಂದಿದ್ದಾನೆ.

ಇತ್ತೀಚೆಗೆ ದೇಶಾದ್ಯಂತ ಮತೀಯ ಗೂಂಡಾಗಿರಿ ನಡೆಸುವ ಪ್ರಕರಣಗಳು ಹೆಚ್ಚುತ್ತಿವೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ.


ಇದನ್ನೂ ಓದಿ: ಉತ್ತರ ಪ್ರದೇಶ: ಜೈ ಶ್ರೀರಾಮ್‌ ಘೋಷಣೆ ಕೂಗದ ಬೀದಿ ವ್ಯಾಪಾರಿ ಮೇಲೆ ಹಲ್ಲೆ – ಮತೀಯ ಗೂಂಡಾಗಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...