Homeಮುಖಪುಟಬಿರಿಯಾನಿ ರೆಸ್ಟೋರೆಂಟ್‌ ಮುಚ್ಚದಿದ್ದರೆ ಬೆಂಕಿ ಹಚ್ಚುತ್ತೇನೆ: ದೆಹಲಿಯಲ್ಲಿ ಮತೀಯ ಗೂಂಡಾಗಿರಿ

ಬಿರಿಯಾನಿ ರೆಸ್ಟೋರೆಂಟ್‌ ಮುಚ್ಚದಿದ್ದರೆ ಬೆಂಕಿ ಹಚ್ಚುತ್ತೇನೆ: ದೆಹಲಿಯಲ್ಲಿ ಮತೀಯ ಗೂಂಡಾಗಿರಿ

ಆರೋಪಿ ನರೇಶ್‌ ಕುಮಾರ್‌ ಸೂರ್ಯವಂಶಿ, ತನ್ನನ್ನು ಬಜರಂಗದಳದ ಸದಸ್ಯ ಎಂದು ಗುರುತಿಸಿಕೊಂಡಿದ್ದಾನೆ ಎಂದು ಪಿಟಿಐ ವರದಿ ಮಾಡಿದೆ.

- Advertisement -
- Advertisement -

ದೆಹಲಿಯ ಸಂತ್‌ ನಗರದಲ್ಲಿರುವ ಬಿರಿಯಾನಿ ಪಾಯಿಂಟ್‌ ರೆಸ್ಟೋರೆಂಟ್‌ ಮುಚ್ಚಬೇಕು ಇಲ್ಲವಾದಲ್ಲಿ ಬೆಂಕಿ ಹಚ್ಚುತ್ತೇನೆ ಎಂದು ವ್ಯಕ್ತಿಯೊಬ್ಬ ರೆಸ್ಟೋರೆಂಟ್‌ ಸಿಬ್ಬಂದಿಯನ್ನು ಕೆಟ್ಟದಾಗಿ ನಿಂದಿಸಿ, ಕಿರುಕುಳ ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ದೀಪಾವಳಿ ರಾತ್ರಿ ಈ ಘಟನೆ ನಡೆದಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್‌ ಆದ ನಂತರ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಆದರೆ ಆರೋಪಿಯ ಗುರುತು ಸಿಕ್ಕಿಲ್ಲದೇ ಇರುವುದರಿಂದ ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಧರ್ಮ ಮತ್ತು ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ಉದ್ದೇಶ) ಅಡಿಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ.

ಈವರೆಗೂ ಬುರಾರಿ ಪೊಲೀಸ್‌ ಠಾಣೆಯಲ್ಲಿ ಯಾವುದೇ ಪಿಸಿಆರ್‌ ಕರೆ ಅಥವಾ ದೂರು ಬಂದಿಲ್ಲ. ಆದರೂ ಸತ್ಯವನ್ನು ಪರಿಶೀಲಿಸಲಾಗುತ್ತಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಡಿಸಿಪಿ (ಉತ್ತರ) ಸಾಗರ್‌ ಸಿಂಗ್‌ ಕಲ್ಸಿ ಹೇಳಿದ್ದಾರೆ.

ವೈರಲ್‌ ಆಗಿರುವ ಸುಮಾರು ಮೂರು ನಿಮಿಷಗಳ ವೀಡಿಯೋದಲ್ಲಿ ವ್ಯಕ್ತಿಯೊಬ್ಬ ಗಿಜುಗುಡುವ ರಸ್ತೆಯಲ್ಲಿರುವ ರೆಸ್ಟೋರೆಂಟ್‌ ಅನ್ನು ಉಲ್ಲೇಖಿಸಿ, ‘ಇದು ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶವಾ? ಅವರು ಅಲ್ಲಿ ಕುಳಿತಿದ್ದಾರೆ ನೋಡಿ, ದೀಪಾವಳಿ ದಿನ ತೊಂದರೆ ನೀಡಲು ಹೋಟೆಲ್ ತೆರೆದಿದ್ದಾರೆ’ ಎಂದು ಹೇಳಿರುವುದು ವೀಡಿಯೋದಲ್ಲಿದೆ. ಎನ್‌ಡಿಟಿವಿ ಇದನ್ನು ಸ್ವತಂತ್ರವಾಗಿ ಪರಿಶೀಲನೆ ನಡೆಸಿಲ್ಲ ಸಾಧ್ಯವಾಗಿಲ್ಲ ಎಂದು ತಿಳಿಸಿದೆ.

ಪಿಟಿಐ ಸುದ್ದಿ ಸಂಸ್ಥೆ ಪ್ರಕಾರ, ಆರೋಪಿ ನರೇಶ್‌ ಕುಮಾರ್‌ ಸೂರ್ಯವಂಶಿ, ತನ್ನನ್ನು ಬಲಪಂಥೀಯ ಸಂಘಟನೆ ಬಜರಂಗದಳದ ಸದಸ್ಯ ಎಂದು ಗುರುತಿಸಿಕೊಂಡಿದ್ದಾನೆ ಎನ್ನಲಾಗಿದೆ.

ರೆಸ್ಟೋರೆಂಟ್‌ ಒಳಗೆ ಕುಳಿತಿದ್ದ ಅಲ್ಲಿನ ಸಿಬ್ಬಂದಿಯೊಂದಿಗೆ ಮಾತಿಗಿಳಿದ ವ್ಯಕ್ತಿಯು, ಇದು ಹಿಂದು ಪ್ರದೇಶ ಎಂದು ಘೋಷಿಸಿ, ರೆಸ್ಟೋರೆಂಟ್‌ ಅನ್ನು ಮುಚ್ಚುವಂತೆ ಒತ್ತಾಯಿಸಿ, ಅವರನ್ನು ನಿಂದಿಸಲು ಪ್ರಾರಂಭಿಸುತ್ತಾನೆ. ‘ಅರೇ… ನಿಮ್ಮ ಅಂಗಡಿ ಹೇಗೆ ತೆರೆದಿದ್ದೀರಿ? ನಿಮಗೆ ಅನುಮತಿ ನೀಡಿದ್ದು ಯಾರು? ಇದು ಹಿಂದು ಪ್ರದೇಶ ಎಂಬುದು ನಿಮಗೆ ತಿಳಿದಿಲ್ಲವೇ? ಇಂದು ದೀಪಾವಳಿ…. ಈಗ ಅಂಗಡಿಯನ್ನು ಮುಚ್ಚಿ. ಏನಿದು? ಇದೇನು ನಿಮ್ಮ ಪ್ರದೇಶವೇ? ಇದೇನು ಜಾಮಾ ಮಸೀದಿಯೇ? ಇದು ಸಂಪೂರ್ಣವಾಗಿ ‘ಹಿಂದು ಪ್ರದೇಶ’ ಎಂದು ಕಿರುಚಾಡಿದ್ದಾನೆ.

ಈಗ ಹೋಟೆಲ್ ಮುಚ್ಚದಿದ್ದರೆ ಬೆಂಕಿ ಹಚ್ಚಬೇಕಾಗುತ್ತದೆ ಎಂದು ಗದರಿದ್ದಾನೆ. ವ್ಯಕ್ತಿಯು ಮಾಡಿದ ಗಲಾಟೆಯಿಂದ ರೆಸ್ಟೋರೆಂಟ್‌ ಸಿಬ್ಬಂದಿ ಭಯಭೀತರಾಗಿದ್ದು, ಅಂಗಡಿಯೊಳಗಿನ ಟೇಬಲ್‌, ಕುರ್ಚಿ ಹಾಗೂ ಪಾತ್ರೆಗಳನ್ನು ಸ್ಥಳಾಂತರಿಸಲು ಪ್ರಾರಂಭಿಸಿದ್ದಾರೆ. ಆ ಸಮಯದಲ್ಲಿ ಅರಚಾಡುತ್ತಲೇ ಇದ್ದ ವ್ಯಕ್ತಿಯು ‘ಇದು ಹಿಂದೂ ಪ್ರದೇಶ’ ಎಂದು ಕೂಗಿದ್ದು, ಸುತ್ತಲು ನೆರೆದಿದ್ದ ಜನರನ್ನು ಉದ್ದೇಶಿಸಿ, ‘ಎದ್ದೇಳಿ…. ಇವರೆಲ್ಲರೂ ನಮ್ಮ ಸಹೋದರಿಯರೊಂದಿಗೆ ಇಲ್ಲಿ ಲವ್‌ ಜಿಹಾದ್ ಮಾಡುತ್ತಿದ್ದಾರೆ’ ಎಂದಿದ್ದಾನೆ.

ಇತ್ತೀಚೆಗೆ ದೇಶಾದ್ಯಂತ ಮತೀಯ ಗೂಂಡಾಗಿರಿ ನಡೆಸುವ ಪ್ರಕರಣಗಳು ಹೆಚ್ಚುತ್ತಿವೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ.


ಇದನ್ನೂ ಓದಿ: ಉತ್ತರ ಪ್ರದೇಶ: ಜೈ ಶ್ರೀರಾಮ್‌ ಘೋಷಣೆ ಕೂಗದ ಬೀದಿ ವ್ಯಾಪಾರಿ ಮೇಲೆ ಹಲ್ಲೆ – ಮತೀಯ ಗೂಂಡಾಗಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...