HomeUncategorized'ರಾಜ್ಯದಲ್ಲಿ ಬಿಜೆಪಿ ಸೋತರೆ ಕೇಂದ್ರದಿಂದ ಬರುವ ಎಲ್ಲ ಯೋಜನೆಗಳು ಬಂದ್ ಆಗಲಿವೆ': ಜೆಪಿ ನಡ್ಡಾ ಹೇಳಿಕೆ

‘ರಾಜ್ಯದಲ್ಲಿ ಬಿಜೆಪಿ ಸೋತರೆ ಕೇಂದ್ರದಿಂದ ಬರುವ ಎಲ್ಲ ಯೋಜನೆಗಳು ಬಂದ್ ಆಗಲಿವೆ’: ಜೆಪಿ ನಡ್ಡಾ ಹೇಳಿಕೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಮೇಲಿಂದ ಮೇಲೆ ವಿವಾದಕ್ಕೀಡಾಗುವ ಹೇಳಿಕೆ ನೀಡುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತೊಂದು ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ‘‘ರಾಜ್ಯದಲ್ಲಿ ಬಿಜೆಪಿ ಸೋತರೆ ಕೇಂದ್ರದಿಂದ ಬರುವ ಎಲ್ಲ ಯೋಜನೆಗಳು ಬಂದ್ ಆಗಲಿವೆ” ಎಂದು ಹೇಳಿದ್ದಾರೆ.

ಹರಪ್ಪನಹಳ್ಳಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಜಿ. ಕರುಣಾಕರ ರೆಡ್ಡಿ ಪರ ರೋಡ್ ಶೋ ನಡೆಸಿದ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ನಡ್ಡಾ, ”ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವನ್ನು ಬೆಂಬಲಿಸಿ, ಸಿದ್ದರಾಮಯ್ಯ ಸರ್ಕಾರ ಬಂದರೆ ‘ಕಿಸಾನ್ ಸಮ್ಮಾನ್ ಯೋಜನೆ’ ಸೇರಿ ಹಲವು ಯೋಜನೆಗಳು ಬಂದ್ ಆಗಲಿವೆ” ಎಂದು ಹೇಳಿದ್ದಾರೆ.

”ಕೊಳವೆಬಾವಿ, ಅರ್ಕಾವತಿ ಡಿನೋಟಿಫಿಕೇಷನ್, ಪಿಎಫ್ಐ, ಮಲಪ್ರಭಾ ನಾಲಾ ಯೋಜನೆ, ಸ್ಟೀಲ್ ಫ್ಲೆ ಓವರ್ ಕಾಮಗಾರಿ ಹಗರಣಗಳು ಸಿದ್ದರಾಮಯ್ಯ ಅವರ ಅವಧಿಯಲ್ಲಿಯೇ ಆಗಿವೆ. ಅವರೀಗ ಬಿಜೆಪಿ ವಿರುದ್ಧ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ” ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

”ಬಿಜೆಪಿ ಸರ್ಕಾರ ದಲಿತರಿಗೆ ಒಳಮೀಸಲಾತಿ ಕೊಟ್ಟಿದೆ. ಪರಿಶಿಷ್ಟ ಪಂಗಡ, ಲಿಂಗಾಯತರು, ಒಕ್ಕಲಿಗರ ಮೀಸಲಾತಿ ಹೆಚ್ಚಳ ಮಾಡಿದೆ. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈಗ ಹೆಚ್ಚಿಸಿರುವ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ, ಇಂತಹವರಿಗೆ ಈ ಚುನಾವಣೆಯಲ್ಲಿ ಬುದ್ದಿ ಕಲಿಸಬೇಕು” ಎಂದರು.

ಇದನ್ನೂ ಓದಿ: ಬಸವಣ್ಣನ ಆಶೀರ್ವಾದವಿರುವಾಗ ಕನ್ನಡಿಗರಿಗೆ ಮೋದಿ ಆಶೀರ್ವಾದ ಬೇಕಿಲ್ಲ: ನಡ್ಡಾ ಹೇಳಿಕೆಗೆ ಗುಡುಗಿದ ಪ್ರಿಯಾಂಕಾ ಗಾಂಧಿ

”ಕಾಂಗ್ರೆಸ್ ನಾಯಕರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಮತ್ತು ಡಿ.ಕೆ.ಶಿವಕುಮಾರ ಅವರು ಭ್ರಷ್ಟಾಚಾರ ಮಾಡಿ ಬೇಲ್ ಮೇಲೆ ಹೊರಗಡೆ ಇದ್ದಾರೆ. ಅವರ ಮೇಲಿನ ಆರೋಪಗಳು ಸಾಬೀತಾದರೆ ಜೈಲಿಗೆ ಹೋಗುವುದು ಗ್ಯಾರಂಟಿ. ಕಾಂಗ್ರೆಸ್ ನವರು ತಾವು ಭ್ರಷ್ಟಾಚಾರ ಮಾಡಿ, ಮತ್ತೊಬ್ಬರ ಮೇಲೆ ಆರೋಪ ಮಾಡುವುದನ್ನು ಕೈಬಿಡಲಿ” ಎಂದು ಹೇಳಿದರು.

ಇತ್ತಿಚೆಗೆ ನಡ್ಡಾ ಅವರು, ”ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು. ಹಾಗಾಗಿ ವಿಕಾಸಕ್ಕಾಗಿ ಬಿಜೆಪಿಗೆ ಮತ ಹಾಕಿ” ಎಂದು ಹೇಳಿಕೆ ನೀಡುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದರು. ಇದೀಗ ಮತ್ತೊಂದು ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ.

”ಮೋದಿಯ ಆಶೀರ್ವಾದ ಬೇಕೆಂದರೆ ಬಿಜೆಪಿಗೆ ಮತ ಹಾಕಿ” ಇದು ಜೆ.ಪಿ ನಡ್ಡಾ ಅವರು ಕನ್ನಡಿಗರಿಗೆ ಹಾಕುತ್ತಿರುವ ಬೆದರಿಕೆ. ಬಿಜೆಪಿ ಸರ್ವಾಧಿಕಾರವನ್ನು ಜಾರಿಗೊಳಿಸುತ್ತಿರುವುದಕ್ಕೆ ಈ ಮಾತುಗಳೇ ನಿದರ್ಶನ. ಆಶೀರ್ವಾದ ಮಾಡಬೇಕಿರುವುದು ಜನರೇ ಹೊರತು, ಮೋದಿಯಲ್ಲ. ಒಕ್ಕೂಟ ವ್ಯವಸ್ಥೆ & ಪ್ರಜಾಪ್ರಭುತ್ವದ ಮೇಲೆ ಬಿಜೆಪಿಗೆ ಕಿಂಚಿತ್ ಗೌರವವಿಲ್ಲ ಎಂದು ಕಾಂಗ್ರೆಸ್ ಟೀಕಿಸಿತ್ತು.

ಜೆ.ಪಿ ನಡ್ಡಾ ಅವರ ಮೋದಿ ಆಶೀರ್ವಾದದ ಹೇಳಿಕೆಗೆ ತಿರುಗೇಟು ನೀಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ”ಬಸವಣ್ಣನ ಆಶೀರ್ವಾದವಿರುವಾಗ ಕನ್ನಡಿಗರಿಗೆ ಮೋದಿ ಆಶೀರ್ವಾದ ಬೇಕಿಲ್ಲ” ಎಂದು ಗುಡುಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...