HomeUncategorized'ರಾಜ್ಯದಲ್ಲಿ ಬಿಜೆಪಿ ಸೋತರೆ ಕೇಂದ್ರದಿಂದ ಬರುವ ಎಲ್ಲ ಯೋಜನೆಗಳು ಬಂದ್ ಆಗಲಿವೆ': ಜೆಪಿ ನಡ್ಡಾ ಹೇಳಿಕೆ

‘ರಾಜ್ಯದಲ್ಲಿ ಬಿಜೆಪಿ ಸೋತರೆ ಕೇಂದ್ರದಿಂದ ಬರುವ ಎಲ್ಲ ಯೋಜನೆಗಳು ಬಂದ್ ಆಗಲಿವೆ’: ಜೆಪಿ ನಡ್ಡಾ ಹೇಳಿಕೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಮೇಲಿಂದ ಮೇಲೆ ವಿವಾದಕ್ಕೀಡಾಗುವ ಹೇಳಿಕೆ ನೀಡುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತೊಂದು ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ‘‘ರಾಜ್ಯದಲ್ಲಿ ಬಿಜೆಪಿ ಸೋತರೆ ಕೇಂದ್ರದಿಂದ ಬರುವ ಎಲ್ಲ ಯೋಜನೆಗಳು ಬಂದ್ ಆಗಲಿವೆ” ಎಂದು ಹೇಳಿದ್ದಾರೆ.

ಹರಪ್ಪನಹಳ್ಳಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಜಿ. ಕರುಣಾಕರ ರೆಡ್ಡಿ ಪರ ರೋಡ್ ಶೋ ನಡೆಸಿದ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ನಡ್ಡಾ, ”ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವನ್ನು ಬೆಂಬಲಿಸಿ, ಸಿದ್ದರಾಮಯ್ಯ ಸರ್ಕಾರ ಬಂದರೆ ‘ಕಿಸಾನ್ ಸಮ್ಮಾನ್ ಯೋಜನೆ’ ಸೇರಿ ಹಲವು ಯೋಜನೆಗಳು ಬಂದ್ ಆಗಲಿವೆ” ಎಂದು ಹೇಳಿದ್ದಾರೆ.

”ಕೊಳವೆಬಾವಿ, ಅರ್ಕಾವತಿ ಡಿನೋಟಿಫಿಕೇಷನ್, ಪಿಎಫ್ಐ, ಮಲಪ್ರಭಾ ನಾಲಾ ಯೋಜನೆ, ಸ್ಟೀಲ್ ಫ್ಲೆ ಓವರ್ ಕಾಮಗಾರಿ ಹಗರಣಗಳು ಸಿದ್ದರಾಮಯ್ಯ ಅವರ ಅವಧಿಯಲ್ಲಿಯೇ ಆಗಿವೆ. ಅವರೀಗ ಬಿಜೆಪಿ ವಿರುದ್ಧ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ” ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

”ಬಿಜೆಪಿ ಸರ್ಕಾರ ದಲಿತರಿಗೆ ಒಳಮೀಸಲಾತಿ ಕೊಟ್ಟಿದೆ. ಪರಿಶಿಷ್ಟ ಪಂಗಡ, ಲಿಂಗಾಯತರು, ಒಕ್ಕಲಿಗರ ಮೀಸಲಾತಿ ಹೆಚ್ಚಳ ಮಾಡಿದೆ. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈಗ ಹೆಚ್ಚಿಸಿರುವ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ, ಇಂತಹವರಿಗೆ ಈ ಚುನಾವಣೆಯಲ್ಲಿ ಬುದ್ದಿ ಕಲಿಸಬೇಕು” ಎಂದರು.

ಇದನ್ನೂ ಓದಿ: ಬಸವಣ್ಣನ ಆಶೀರ್ವಾದವಿರುವಾಗ ಕನ್ನಡಿಗರಿಗೆ ಮೋದಿ ಆಶೀರ್ವಾದ ಬೇಕಿಲ್ಲ: ನಡ್ಡಾ ಹೇಳಿಕೆಗೆ ಗುಡುಗಿದ ಪ್ರಿಯಾಂಕಾ ಗಾಂಧಿ

”ಕಾಂಗ್ರೆಸ್ ನಾಯಕರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಮತ್ತು ಡಿ.ಕೆ.ಶಿವಕುಮಾರ ಅವರು ಭ್ರಷ್ಟಾಚಾರ ಮಾಡಿ ಬೇಲ್ ಮೇಲೆ ಹೊರಗಡೆ ಇದ್ದಾರೆ. ಅವರ ಮೇಲಿನ ಆರೋಪಗಳು ಸಾಬೀತಾದರೆ ಜೈಲಿಗೆ ಹೋಗುವುದು ಗ್ಯಾರಂಟಿ. ಕಾಂಗ್ರೆಸ್ ನವರು ತಾವು ಭ್ರಷ್ಟಾಚಾರ ಮಾಡಿ, ಮತ್ತೊಬ್ಬರ ಮೇಲೆ ಆರೋಪ ಮಾಡುವುದನ್ನು ಕೈಬಿಡಲಿ” ಎಂದು ಹೇಳಿದರು.

ಇತ್ತಿಚೆಗೆ ನಡ್ಡಾ ಅವರು, ”ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು. ಹಾಗಾಗಿ ವಿಕಾಸಕ್ಕಾಗಿ ಬಿಜೆಪಿಗೆ ಮತ ಹಾಕಿ” ಎಂದು ಹೇಳಿಕೆ ನೀಡುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದರು. ಇದೀಗ ಮತ್ತೊಂದು ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ.

”ಮೋದಿಯ ಆಶೀರ್ವಾದ ಬೇಕೆಂದರೆ ಬಿಜೆಪಿಗೆ ಮತ ಹಾಕಿ” ಇದು ಜೆ.ಪಿ ನಡ್ಡಾ ಅವರು ಕನ್ನಡಿಗರಿಗೆ ಹಾಕುತ್ತಿರುವ ಬೆದರಿಕೆ. ಬಿಜೆಪಿ ಸರ್ವಾಧಿಕಾರವನ್ನು ಜಾರಿಗೊಳಿಸುತ್ತಿರುವುದಕ್ಕೆ ಈ ಮಾತುಗಳೇ ನಿದರ್ಶನ. ಆಶೀರ್ವಾದ ಮಾಡಬೇಕಿರುವುದು ಜನರೇ ಹೊರತು, ಮೋದಿಯಲ್ಲ. ಒಕ್ಕೂಟ ವ್ಯವಸ್ಥೆ & ಪ್ರಜಾಪ್ರಭುತ್ವದ ಮೇಲೆ ಬಿಜೆಪಿಗೆ ಕಿಂಚಿತ್ ಗೌರವವಿಲ್ಲ ಎಂದು ಕಾಂಗ್ರೆಸ್ ಟೀಕಿಸಿತ್ತು.

ಜೆ.ಪಿ ನಡ್ಡಾ ಅವರ ಮೋದಿ ಆಶೀರ್ವಾದದ ಹೇಳಿಕೆಗೆ ತಿರುಗೇಟು ನೀಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ”ಬಸವಣ್ಣನ ಆಶೀರ್ವಾದವಿರುವಾಗ ಕನ್ನಡಿಗರಿಗೆ ಮೋದಿ ಆಶೀರ್ವಾದ ಬೇಕಿಲ್ಲ” ಎಂದು ಗುಡುಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...