Homeಕರ್ನಾಟಕಬಿಜೆಪಿಯವರಿಗೆ ನಿಜವಾಗಿಯೂ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರದ ಮೇಲೆ ಒತ್ತಡ ತಂದು ಅಕ್ಕಿ ಕೊಡಿಸಲಿ:...

ಬಿಜೆಪಿಯವರಿಗೆ ನಿಜವಾಗಿಯೂ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರದ ಮೇಲೆ ಒತ್ತಡ ತಂದು ಅಕ್ಕಿ ಕೊಡಿಸಲಿ: ಸಿದ್ದರಾಮಯ್ಯ

- Advertisement -
- Advertisement -

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕಲು ಕೇಂದ್ರ ಬಿಜೆಪಿ ಸರ್ಕಾರ ಮುಂದಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ”ಬಿಜೆಪಿಯವರಿಗೆ ನಿಜವಾಗಿಯೂ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಅಕ್ಕಿ ಕೊಡಿಸುವ ಕೆಲಸ ಮಾಡಲಿ” ಎಂದು ಹೇಳಿದ್ದಾರೆ.

ಈ ಬಗ್ಗೆ ಭಾನುವಾರ ಸುದ್ದಿಗಾರರ ಜತೆಗೆ ಮಾತನಾಡಿದ ಸಿದ್ದರಾಮಯ್ಯ, ”ಭಾರತೀಯ ಆಹಾರ ನಿಗಮದ ಡಿಜಿಎಂ ಹರೀಶ್ ಜತೆಗೆ ನಾನೇ ಮಾತನಾಡಿದ್ದೆ. 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ. ಅಕ್ಕಿ ನೀಡುವುದಕ್ಕೇನು ಸಮಸ್ಯೆ ಇಲ್ಲ ಎಂದು ಅವರು ಹೇಳಿದ್ದರು. 2.28 ಲಕ್ಷ ಟನ್ ಅಕ್ಕಿ ನೀಡುವಂತೆ ನಾವು ಜೂನ್ 9ರಂದು ಆಹಾರ ನಿಗಮಕ್ಕೆ ಪತ್ರ ಬರೆದಿದ್ದೆವು. ಅಕ್ಕಿ ಪೂರೈಕೆ ಮಾಡಲಾಗುವುದು ಎಂದು ಜೂನ್ 12ಕ್ಕೆ ಪತ್ರ ಬರೆದಿದ್ದರು. ಆನಂತರ ಅಕ್ಕಿ ನೀಡಬಾರದು ಎಂದು ಕೇಂದ್ರ ಗ್ರಾಹಕ ಇಲಾಖೆಯು ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದರು. ಅಕ್ಕಿ ಕೊಡುವುದಿಲ್ಲ ಎಂದು ನಿಗಮವು ನಮಗೆ ಜೂನ್ 14ಕ್ಕೆ ಪತ್ರ ಬರೆದಿದ್ದಾರೆ” ಎಂದು ವಿವರಿಸಿದ್ದಾರೆ.

”5 ಕೆ.ಜಿ. ಅಕ್ಕಿ ನೀಡಿ ಉಳಿದ 5 ಕೆ.ಜಿ. ಅಕ್ಕಿಯ ದರವನ್ನು ಫಲಾನುಭವಿಗಳ ಖಾತೆಗೆ ಹಾಕಿ ಎಂದು ಬಿಜೆಪಿ ನಾಯಕರು ಸಲಹೆ ನೀಡುವ ಬದಲು ಅವರೇ ಕೇಂದ್ರದ ಮೇಲೆ ಒತ್ತಡ ಹಾಕಲಿ. ಬಡವರ ಕಾರ್ಯಕ್ರಮದಲ್ಲಿ ರಾಜಕೀಯ ಬೇಡ. ಅಕ್ಕಿ ಕೊಡಿ ಎಂದು ಹೇಳಬೇಕಿತ್ತು. ಕೇಂದ್ರ ಸರ್ಕಾರವು ಯಾಕೆ ಅಡ್ಡಿಪಡಿಸಬೇಕು. ದ್ವೇಷ ರಾಜಕಾರಣ ಯಾಕೆ ಮಾಡಬೇಕಿತ್ತು?” ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ಅನ್ನಭಾಗ್ಯದ ಅಕ್ಕಿ 10 ಕೆಜಿಗೆ ಏರಿಸುವುದು ನಿಶ್ಚಿತ: ಕಾಂಗ್ರೆಸ್ ವಾಗ್ದಾನ

”ಆಂಧ್ರ, ತೆಲಂಗಾಣ ರಾಜ್ಯಗಳ ಜೊತೆಗೂ ಮಾತನಾಡುತ್ತಿದ್ದೇವೆ. ಛತ್ತೀಸ್‌ಗಡದವರು ಮಾತ್ರ 2.28 ಲಕ್ಷ ಮೆಟ್ರಿಕ್ ಟನ್ ಅಲ್ಲ, 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಅದರ ದರವೂ ಹೆಚ್ಚು” ಎಂದು ಮಾಹಿತಿ ನೀಡಿದರು.

”ರಾಯಚೂರಿನಲ್ಲಿ ಸೋನ ಮಸೂರಿ ಅಕ್ಕಿ ಇದೆ. ಅದರ ದರ 55ರೂ.. ಆಹಾರ ನಿಗಮದಿಂದ ಅಕ್ಕಿ ಖರೀದಿಸಿದರೆ ಅಕ್ಕಿ ದರ 34ರೂ., ಸಾಗಾಟ ವೆಚ್ಚ 2.60ರೂ. ಸೇರಿ 36.60ರೂ.ಗೆ ಅಕ್ಕಿ ಸಿಗುತ್ತಿತ್ತು. ಈಗ 5 ಕೆ.ಜಿ. ಅಕ್ಕಿ ನೀಡುತ್ತಿರುವುದೂ ಅದೇ ದರದಲ್ಲಿ. ಈಗ ರಾಯಚೂರಿನಲ್ಲಿ ಸೋನ ಮಸೂರಿ ಅಕ್ಕಿ 55 ರೂ. ಕೊಟ್ಟು ಖರೀದಿ ಮಾಡಲು ಆಗುವುದಿಲ್ಲ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ‌ ನಾಯಕ ಸಿಟಿ ರವಿ ಅವರು ಇತ್ತಿಚೆಗೆ ಸವಾಲು ಹಾಕಿದ್ದರು. ಅದಕ್ಕೆ ತಿರುಗೇಟು ನೀಡಿದ್ದ ಸಿದ್ದರಾಮಯ್ಯ ಅವರು, ”ಇಲ್ಲಿದೆ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ. ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು. ಸಿ.ಟಿ.ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ” ಎಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...