Homeಕರ್ನಾಟಕಬಿಜೆಪಿಯವರಿಗೆ ನಿಜವಾಗಿಯೂ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರದ ಮೇಲೆ ಒತ್ತಡ ತಂದು ಅಕ್ಕಿ ಕೊಡಿಸಲಿ:...

ಬಿಜೆಪಿಯವರಿಗೆ ನಿಜವಾಗಿಯೂ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರದ ಮೇಲೆ ಒತ್ತಡ ತಂದು ಅಕ್ಕಿ ಕೊಡಿಸಲಿ: ಸಿದ್ದರಾಮಯ್ಯ

- Advertisement -
- Advertisement -

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕಲು ಕೇಂದ್ರ ಬಿಜೆಪಿ ಸರ್ಕಾರ ಮುಂದಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ”ಬಿಜೆಪಿಯವರಿಗೆ ನಿಜವಾಗಿಯೂ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಅಕ್ಕಿ ಕೊಡಿಸುವ ಕೆಲಸ ಮಾಡಲಿ” ಎಂದು ಹೇಳಿದ್ದಾರೆ.

ಈ ಬಗ್ಗೆ ಭಾನುವಾರ ಸುದ್ದಿಗಾರರ ಜತೆಗೆ ಮಾತನಾಡಿದ ಸಿದ್ದರಾಮಯ್ಯ, ”ಭಾರತೀಯ ಆಹಾರ ನಿಗಮದ ಡಿಜಿಎಂ ಹರೀಶ್ ಜತೆಗೆ ನಾನೇ ಮಾತನಾಡಿದ್ದೆ. 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ. ಅಕ್ಕಿ ನೀಡುವುದಕ್ಕೇನು ಸಮಸ್ಯೆ ಇಲ್ಲ ಎಂದು ಅವರು ಹೇಳಿದ್ದರು. 2.28 ಲಕ್ಷ ಟನ್ ಅಕ್ಕಿ ನೀಡುವಂತೆ ನಾವು ಜೂನ್ 9ರಂದು ಆಹಾರ ನಿಗಮಕ್ಕೆ ಪತ್ರ ಬರೆದಿದ್ದೆವು. ಅಕ್ಕಿ ಪೂರೈಕೆ ಮಾಡಲಾಗುವುದು ಎಂದು ಜೂನ್ 12ಕ್ಕೆ ಪತ್ರ ಬರೆದಿದ್ದರು. ಆನಂತರ ಅಕ್ಕಿ ನೀಡಬಾರದು ಎಂದು ಕೇಂದ್ರ ಗ್ರಾಹಕ ಇಲಾಖೆಯು ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದರು. ಅಕ್ಕಿ ಕೊಡುವುದಿಲ್ಲ ಎಂದು ನಿಗಮವು ನಮಗೆ ಜೂನ್ 14ಕ್ಕೆ ಪತ್ರ ಬರೆದಿದ್ದಾರೆ” ಎಂದು ವಿವರಿಸಿದ್ದಾರೆ.

”5 ಕೆ.ಜಿ. ಅಕ್ಕಿ ನೀಡಿ ಉಳಿದ 5 ಕೆ.ಜಿ. ಅಕ್ಕಿಯ ದರವನ್ನು ಫಲಾನುಭವಿಗಳ ಖಾತೆಗೆ ಹಾಕಿ ಎಂದು ಬಿಜೆಪಿ ನಾಯಕರು ಸಲಹೆ ನೀಡುವ ಬದಲು ಅವರೇ ಕೇಂದ್ರದ ಮೇಲೆ ಒತ್ತಡ ಹಾಕಲಿ. ಬಡವರ ಕಾರ್ಯಕ್ರಮದಲ್ಲಿ ರಾಜಕೀಯ ಬೇಡ. ಅಕ್ಕಿ ಕೊಡಿ ಎಂದು ಹೇಳಬೇಕಿತ್ತು. ಕೇಂದ್ರ ಸರ್ಕಾರವು ಯಾಕೆ ಅಡ್ಡಿಪಡಿಸಬೇಕು. ದ್ವೇಷ ರಾಜಕಾರಣ ಯಾಕೆ ಮಾಡಬೇಕಿತ್ತು?” ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ಅನ್ನಭಾಗ್ಯದ ಅಕ್ಕಿ 10 ಕೆಜಿಗೆ ಏರಿಸುವುದು ನಿಶ್ಚಿತ: ಕಾಂಗ್ರೆಸ್ ವಾಗ್ದಾನ

”ಆಂಧ್ರ, ತೆಲಂಗಾಣ ರಾಜ್ಯಗಳ ಜೊತೆಗೂ ಮಾತನಾಡುತ್ತಿದ್ದೇವೆ. ಛತ್ತೀಸ್‌ಗಡದವರು ಮಾತ್ರ 2.28 ಲಕ್ಷ ಮೆಟ್ರಿಕ್ ಟನ್ ಅಲ್ಲ, 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಅದರ ದರವೂ ಹೆಚ್ಚು” ಎಂದು ಮಾಹಿತಿ ನೀಡಿದರು.

”ರಾಯಚೂರಿನಲ್ಲಿ ಸೋನ ಮಸೂರಿ ಅಕ್ಕಿ ಇದೆ. ಅದರ ದರ 55ರೂ.. ಆಹಾರ ನಿಗಮದಿಂದ ಅಕ್ಕಿ ಖರೀದಿಸಿದರೆ ಅಕ್ಕಿ ದರ 34ರೂ., ಸಾಗಾಟ ವೆಚ್ಚ 2.60ರೂ. ಸೇರಿ 36.60ರೂ.ಗೆ ಅಕ್ಕಿ ಸಿಗುತ್ತಿತ್ತು. ಈಗ 5 ಕೆ.ಜಿ. ಅಕ್ಕಿ ನೀಡುತ್ತಿರುವುದೂ ಅದೇ ದರದಲ್ಲಿ. ಈಗ ರಾಯಚೂರಿನಲ್ಲಿ ಸೋನ ಮಸೂರಿ ಅಕ್ಕಿ 55 ರೂ. ಕೊಟ್ಟು ಖರೀದಿ ಮಾಡಲು ಆಗುವುದಿಲ್ಲ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ‌ ನಾಯಕ ಸಿಟಿ ರವಿ ಅವರು ಇತ್ತಿಚೆಗೆ ಸವಾಲು ಹಾಕಿದ್ದರು. ಅದಕ್ಕೆ ತಿರುಗೇಟು ನೀಡಿದ್ದ ಸಿದ್ದರಾಮಯ್ಯ ಅವರು, ”ಇಲ್ಲಿದೆ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ. ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು. ಸಿ.ಟಿ.ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ” ಎಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...