Homeಮುಖಪುಟಬಿಜೆಪಿ ಗೆದ್ದರೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತ ರಸ್ತೆ ನಿರ್ಮಾಣ ಎಂದ ಮಾಜಿ ಸಂಸದ!

ಬಿಜೆಪಿ ಗೆದ್ದರೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತ ರಸ್ತೆ ನಿರ್ಮಾಣ ಎಂದ ಮಾಜಿ ಸಂಸದ!

- Advertisement -
- Advertisement -

ದೆಹಲಿ ಚುನಾವಣೆಯಲ್ಲಿ ತಮ್ಮ ಕಲ್ಕಾಜಿ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿ ಗೆದ್ದರೆ ಕ್ಷೇತ್ರದ ಎಲ್ಲಾ ರಸ್ತೆಗಳನ್ನು ಪ್ರಿಯಾಂಕಾ ಗಾಂಧಿಯವರ ಕೆನ್ನೆಯಂತೆ ಮಾಡುವುದಾಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಅವರು ಹೇಳಿದ್ದು, ಈ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ ಅವರು, ಅವರ ಈ ಹೇಳಿಕೆ ನಾಚಿಕೆಗೇಡಿನದ್ದಾಗಿದ್ದು, ಇದು ಬಿಜೆಪಿಯು ಮಹಿಳಾ ವಿರೋಧಿ ಮನಸ್ಥಿತಿಯನ್ನು ಬೆಳೆಸುತ್ತಿದೆ ಎಂಬುವುದನ್ನು ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.

ದೆಹಲಿಯ ಮಾಜಿ ಸಂಸದರೂ ಆಗಿರುವ ರಮೇಶ್ ಬಿಧುರಿಯ ವಿಡಿಯೊವನ್ನು ಎಎಪಿ ಸಂಸದ ಸಂಜಯ್ ಸಿಂಗ್ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಪ್ರಿಯಾಂಕ ವಿರುದ್ಧ ಬಿಧುರಿ ನೀಡಿರುವ ಹೇಳಿಕೆ ನಾಚಿಕೆಗೇಡಿನ ಸಂಗತಿ ಮಾತ್ರವಲ್ಲದೆ ಮಹಿಳೆಯರ ಬಗೆಗಿನ ಅವರ ಅಸಹ್ಯಕರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಶ್ರೀನಾಟೆ ಅವರು ಹೇಳಿದ್ದಾರೆ. ಬಿಜೆಪಿ ಗೆದ್ದರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಹೇಳಿಕೆಗೆ ಬಿಜೆಪಿಯ ಪ್ರತಿಕ್ರಿಯೆಯನ್ನು ಅವರು ಪ್ರಶ್ನಿಸಿದ್ದು, ಬಿಧುರಿ ಅವರು ಈ ಹಿಂದೆ ಕೂಡಾ ಸಂಸದರೊಬ್ಬರ ವಿರುದ್ಧ ಅಸಭ್ಯ ಭಾಷೆ ಬಳಸಿದ್ದರು, ಆದರೆ ಅದಕ್ಕಾಗಿ ಅವರು ಯಾವುದೇ ಶಿಕ್ಷೆಯನ್ನು ಎದುರಿಸಲಿಲ್ಲ ಎಂದು ಶ್ರೀನಾಟೆ ಹೇಳಿದ್ದಾರೆ.

“ಬಿಜೆಪಿ ಅತ್ಯಂತ ಮಹಿಳಾ ವಿರೋಧಿ, ಪ್ರಿಯಾಂಕಾ ಗಾಂಧಿ ಅವರ ಬಗ್ಗೆ ರಮೇಶ್ ಬಿಧುರಿ ಹೇಳಿಕೆ ನಾಚಿಕೆಗೇಡಿನ ಸಂಗತಿ ಮಾತ್ರವಲ್ಲದೆ ಮಹಿಳೆಯರ ಬಗ್ಗೆ ಅವರ ಅಸಹ್ಯ ಮನಸ್ಥಿತಿಯನ್ನು ತೋರಿಸುತ್ತದೆ. ಆದರೆ ಸದನದಲ್ಲಿ ತನ್ನ ಸಹ ಸಂಸದರ ವಿರುದ್ಧ ಅಸಭ್ಯ ಭಾಷೆ ಬಳಸಿದ ವ್ಯಕ್ತಿಯಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಇದುವೆ ಬಿಜೆಪಿಯ ನಿಜವಾದ ಮುಖವಾಗಿದೆಯೇ?” ಎಂದು ಅವರು ಕೇಳಿದ್ದಾರೆ.

ಮಹಿಳಾ ಅಭಿವೃದ್ಧಿ ಸಚಿವೆ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಪಕ್ಷದ ಮಹಿಳಾ ಮುಖಂಡರು ಇಂತಹ ಟೀಕೆಗಳ ಬಗ್ಗೆ ಮಾತನಾಡಬೇಕು ಎಂದು ಶ್ರೀನಾಟೆ ಹೇಳಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ಈ ಮನಸ್ಥಿತಿ ಮತ್ತು ಭಾಷೆಯ ಜವಾಬ್ದಾರಿ ಬಳಕೆಯನ್ನು ಪಕ್ಷವು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿರುವ ಅವರು, ಇದಕ್ಕಾಗಿ ಬಿಜೆಪಿ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

ಅದಾಗ್ಯೂ, ರಮೇಶ್ ಬಿಧುರಿ ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇಂಡಿಯಾ ಟುಡೇ ಟಿವಿಯೊಂದಿಗೆ ಮಾತನಾಡಿದ ರಮೇಶ್ ಬಿಧುರಿ, ಬಿಹಾರದ ರಸ್ತೆಗಳನ್ನು ನಟಿ-ರಾಜಕಾರಣಿ ಹೇಮಾ ಮಾಲಿನಿ ಅವರ ಕೆನ್ನೆಗೆ ಹೋಲಿಸಿದ ಲಾಲು ಪ್ರಸಾದ್ ಯಾದವ್ ಅವರ ಹಿಂದಿನ ಹೇಳಿಕೆಯನ್ನು ಉಲ್ಲೇಖಿಸಿ ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

“ಇಂದು ನನ್ನ ಹೇಳಿಕೆಯಿಂದ ಕಾಂಗ್ರೆಸ್ ನವರಿಗೆ ನೋವಾಗಿದ್ದರೆ, ಹೇಮಾ ಮಾಲಿನಿ ಅವರ ಬಗ್ಗೆ ಏನು ಹೇಳುತ್ತಾರೆ? ಅವರು ತಮ್ಮ ಚಲನಚಿತ್ರಗಳ ಮೂಲಕ ಭಾರತಕ್ಕೆ ಕೀರ್ತಿ ತಂದ ಖ್ಯಾತ ನಟಿ. ಲಾಲು ಯಾದವ್ ಅವರ ಹೇಳಿಕೆಗಳ ಬಗ್ಗೆ ಟೀಕೆ ಮಾಡದ ಅವರು, ನನ್ನ ಬಗ್ಗೆ ಏಕೆ ಪ್ರಶ್ನಿಸಬೇಕು? ” ಬಿಧುರಿ ಹೇಳಿದ್ದಾರೆ. ಕಾಂಗ್ರೆಸ್ ಟೀಕೆಗೆ ಪ್ರತಿಕ್ರಿಯಿಸಿದ ಬಿಧುರಿ, “ಹೇಮಾ ಮಾಲಿನಿ ಮಹಿಳೆ ಅಲ್ಲವೇ? ಸಾಧನೆಗಳ ವಿಷಯದಲ್ಲಿ, ಹೇಮಾ ಮಾಲಿನಿ ಪ್ರಿಯಾಂಕಾ ಗಾಂಧಿಗಿಂತ ಹೆಚ್ಚು ಶ್ರೇಷ್ಠರು” ಎಂದು ಹೇಳಿದ್ದಾರೆ.

ವಿವಾದಾತ್ಮಕ ಹೇಳಿಕೆಗಳಿಗೆ ರಮೇಶ್ ಬಿಧುರಿ ಹಿನ್ನಡೆ ಅನುಭವಿಸುತ್ತಿರುವುದು ಇದೇ ಮೊದಲಲ್ಲ. 2023 ರಲ್ಲಿ, ಅವರು ಲೋಕಸಭೆಯ ಅಧಿವೇಶನದಲ್ಲಿ ಆಗಿನ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಕೋಮುವಾದಿ ಟೀಕೆಗಳನ್ನು ಮಾಡಿದರು. ಅವರ ಈ ಹೇಳಿಕೆ ಕ್ಯಾಮರಾದಲ್ಲಿ ದಾಖಲಾಗಿದ್ದು, ದೇಶದಾದ್ಯಂತ ರಾಜಕೀಯ ಮುಖಂಡರು ವ್ಯಾಪಕವಾಗಿ ಟೀಕಿಸಿದ್ದರು.

ಇದನ್ನೂ ಓದಿ: ಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ – ತಮಿಳುನಾಡು ಸಿಎಂ ಸ್ಟಾಲಿನ್

ಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ – ತಮಿಳುನಾಡು ಸಿಎಂ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...