Homeಮುಖಪುಟಬಿಜೆಪಿ ಗೆದ್ದರೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತ ರಸ್ತೆ ನಿರ್ಮಾಣ ಎಂದ ಮಾಜಿ ಸಂಸದ!

ಬಿಜೆಪಿ ಗೆದ್ದರೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತ ರಸ್ತೆ ನಿರ್ಮಾಣ ಎಂದ ಮಾಜಿ ಸಂಸದ!

- Advertisement -
- Advertisement -

ದೆಹಲಿ ಚುನಾವಣೆಯಲ್ಲಿ ತಮ್ಮ ಕಲ್ಕಾಜಿ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿ ಗೆದ್ದರೆ ಕ್ಷೇತ್ರದ ಎಲ್ಲಾ ರಸ್ತೆಗಳನ್ನು ಪ್ರಿಯಾಂಕಾ ಗಾಂಧಿಯವರ ಕೆನ್ನೆಯಂತೆ ಮಾಡುವುದಾಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಅವರು ಹೇಳಿದ್ದು, ಈ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ ಅವರು, ಅವರ ಈ ಹೇಳಿಕೆ ನಾಚಿಕೆಗೇಡಿನದ್ದಾಗಿದ್ದು, ಇದು ಬಿಜೆಪಿಯು ಮಹಿಳಾ ವಿರೋಧಿ ಮನಸ್ಥಿತಿಯನ್ನು ಬೆಳೆಸುತ್ತಿದೆ ಎಂಬುವುದನ್ನು ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.

ದೆಹಲಿಯ ಮಾಜಿ ಸಂಸದರೂ ಆಗಿರುವ ರಮೇಶ್ ಬಿಧುರಿಯ ವಿಡಿಯೊವನ್ನು ಎಎಪಿ ಸಂಸದ ಸಂಜಯ್ ಸಿಂಗ್ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಪ್ರಿಯಾಂಕ ವಿರುದ್ಧ ಬಿಧುರಿ ನೀಡಿರುವ ಹೇಳಿಕೆ ನಾಚಿಕೆಗೇಡಿನ ಸಂಗತಿ ಮಾತ್ರವಲ್ಲದೆ ಮಹಿಳೆಯರ ಬಗೆಗಿನ ಅವರ ಅಸಹ್ಯಕರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಶ್ರೀನಾಟೆ ಅವರು ಹೇಳಿದ್ದಾರೆ. ಬಿಜೆಪಿ ಗೆದ್ದರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಹೇಳಿಕೆಗೆ ಬಿಜೆಪಿಯ ಪ್ರತಿಕ್ರಿಯೆಯನ್ನು ಅವರು ಪ್ರಶ್ನಿಸಿದ್ದು, ಬಿಧುರಿ ಅವರು ಈ ಹಿಂದೆ ಕೂಡಾ ಸಂಸದರೊಬ್ಬರ ವಿರುದ್ಧ ಅಸಭ್ಯ ಭಾಷೆ ಬಳಸಿದ್ದರು, ಆದರೆ ಅದಕ್ಕಾಗಿ ಅವರು ಯಾವುದೇ ಶಿಕ್ಷೆಯನ್ನು ಎದುರಿಸಲಿಲ್ಲ ಎಂದು ಶ್ರೀನಾಟೆ ಹೇಳಿದ್ದಾರೆ.

“ಬಿಜೆಪಿ ಅತ್ಯಂತ ಮಹಿಳಾ ವಿರೋಧಿ, ಪ್ರಿಯಾಂಕಾ ಗಾಂಧಿ ಅವರ ಬಗ್ಗೆ ರಮೇಶ್ ಬಿಧುರಿ ಹೇಳಿಕೆ ನಾಚಿಕೆಗೇಡಿನ ಸಂಗತಿ ಮಾತ್ರವಲ್ಲದೆ ಮಹಿಳೆಯರ ಬಗ್ಗೆ ಅವರ ಅಸಹ್ಯ ಮನಸ್ಥಿತಿಯನ್ನು ತೋರಿಸುತ್ತದೆ. ಆದರೆ ಸದನದಲ್ಲಿ ತನ್ನ ಸಹ ಸಂಸದರ ವಿರುದ್ಧ ಅಸಭ್ಯ ಭಾಷೆ ಬಳಸಿದ ವ್ಯಕ್ತಿಯಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಇದುವೆ ಬಿಜೆಪಿಯ ನಿಜವಾದ ಮುಖವಾಗಿದೆಯೇ?” ಎಂದು ಅವರು ಕೇಳಿದ್ದಾರೆ.

ಮಹಿಳಾ ಅಭಿವೃದ್ಧಿ ಸಚಿವೆ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಪಕ್ಷದ ಮಹಿಳಾ ಮುಖಂಡರು ಇಂತಹ ಟೀಕೆಗಳ ಬಗ್ಗೆ ಮಾತನಾಡಬೇಕು ಎಂದು ಶ್ರೀನಾಟೆ ಹೇಳಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ಈ ಮನಸ್ಥಿತಿ ಮತ್ತು ಭಾಷೆಯ ಜವಾಬ್ದಾರಿ ಬಳಕೆಯನ್ನು ಪಕ್ಷವು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿರುವ ಅವರು, ಇದಕ್ಕಾಗಿ ಬಿಜೆಪಿ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

ಅದಾಗ್ಯೂ, ರಮೇಶ್ ಬಿಧುರಿ ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇಂಡಿಯಾ ಟುಡೇ ಟಿವಿಯೊಂದಿಗೆ ಮಾತನಾಡಿದ ರಮೇಶ್ ಬಿಧುರಿ, ಬಿಹಾರದ ರಸ್ತೆಗಳನ್ನು ನಟಿ-ರಾಜಕಾರಣಿ ಹೇಮಾ ಮಾಲಿನಿ ಅವರ ಕೆನ್ನೆಗೆ ಹೋಲಿಸಿದ ಲಾಲು ಪ್ರಸಾದ್ ಯಾದವ್ ಅವರ ಹಿಂದಿನ ಹೇಳಿಕೆಯನ್ನು ಉಲ್ಲೇಖಿಸಿ ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

“ಇಂದು ನನ್ನ ಹೇಳಿಕೆಯಿಂದ ಕಾಂಗ್ರೆಸ್ ನವರಿಗೆ ನೋವಾಗಿದ್ದರೆ, ಹೇಮಾ ಮಾಲಿನಿ ಅವರ ಬಗ್ಗೆ ಏನು ಹೇಳುತ್ತಾರೆ? ಅವರು ತಮ್ಮ ಚಲನಚಿತ್ರಗಳ ಮೂಲಕ ಭಾರತಕ್ಕೆ ಕೀರ್ತಿ ತಂದ ಖ್ಯಾತ ನಟಿ. ಲಾಲು ಯಾದವ್ ಅವರ ಹೇಳಿಕೆಗಳ ಬಗ್ಗೆ ಟೀಕೆ ಮಾಡದ ಅವರು, ನನ್ನ ಬಗ್ಗೆ ಏಕೆ ಪ್ರಶ್ನಿಸಬೇಕು? ” ಬಿಧುರಿ ಹೇಳಿದ್ದಾರೆ. ಕಾಂಗ್ರೆಸ್ ಟೀಕೆಗೆ ಪ್ರತಿಕ್ರಿಯಿಸಿದ ಬಿಧುರಿ, “ಹೇಮಾ ಮಾಲಿನಿ ಮಹಿಳೆ ಅಲ್ಲವೇ? ಸಾಧನೆಗಳ ವಿಷಯದಲ್ಲಿ, ಹೇಮಾ ಮಾಲಿನಿ ಪ್ರಿಯಾಂಕಾ ಗಾಂಧಿಗಿಂತ ಹೆಚ್ಚು ಶ್ರೇಷ್ಠರು” ಎಂದು ಹೇಳಿದ್ದಾರೆ.

ವಿವಾದಾತ್ಮಕ ಹೇಳಿಕೆಗಳಿಗೆ ರಮೇಶ್ ಬಿಧುರಿ ಹಿನ್ನಡೆ ಅನುಭವಿಸುತ್ತಿರುವುದು ಇದೇ ಮೊದಲಲ್ಲ. 2023 ರಲ್ಲಿ, ಅವರು ಲೋಕಸಭೆಯ ಅಧಿವೇಶನದಲ್ಲಿ ಆಗಿನ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಕೋಮುವಾದಿ ಟೀಕೆಗಳನ್ನು ಮಾಡಿದರು. ಅವರ ಈ ಹೇಳಿಕೆ ಕ್ಯಾಮರಾದಲ್ಲಿ ದಾಖಲಾಗಿದ್ದು, ದೇಶದಾದ್ಯಂತ ರಾಜಕೀಯ ಮುಖಂಡರು ವ್ಯಾಪಕವಾಗಿ ಟೀಕಿಸಿದ್ದರು.

ಇದನ್ನೂ ಓದಿ: ಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ – ತಮಿಳುನಾಡು ಸಿಎಂ ಸ್ಟಾಲಿನ್

ಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ – ತಮಿಳುನಾಡು ಸಿಎಂ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ‘ಬಾಂಗ್ಲಾದೇಶಿ’ ಎಂದು ಆರೋಪಿಸಿ ಮುಸ್ಲಿಂ ಕಾರ್ಮಿಕನನ್ನು ಥಳಿಸಿದ ಗುಂಪು

ಬಾಂಗ್ಲಾದೇಶಿ ಎಂದು ಸುಳ್ಳು ಆರೋಪ ಹೊರಿಸಿ ಮುಸ್ಲಿಂ ಕಾರ್ಮಿಕನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ. ಬಲಿಪಶು ಖುರ್ಷಿದ್ ಆಲಂ, ಧಾರ್ಮಿಕ ಘೋಷಣೆಗಳನ್ನು ಪಠಿಸಲು ನಿರಾಕರಿಸಿದ ನಂತರ ಸುಮಾರು...

ರಾಜ್ಯ ಸರ್ಕಾರದ ಸಮೀಕ್ಷೆಯಲ್ಲಿ ಇವಿಎಂ ಮೇಲೆ ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದ ವರದಿ : ಅಲ್ಲಗಳೆದ ಸಚಿವ ಪ್ರಿಯಾಂಕ್ ಖರ್ಗೆ

ಹೆಚ್ಚಿನ ನಾಗರಿಕರು ಭಾರತದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತವಾಗಿ ನಡೆಯುತ್ತಿವೆ ಎಂದು ನಂಬುತ್ತಾರೆ ಹಾಗೂ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲಿನ ನಂಬಿಕೆ ಹೆಚ್ಚಾಗಿದೆ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ ರಾಜ್ಯವ್ಯಾಪಿ ಸಮೀಕ್ಷೆಯ...

ಉಡುಗೊರೆಯಾಗಿ ನೀಡಿದ್ದ ಮೊಬೈಲ್ ಫೋನ್‌ಗಳನ್ನು ಅಸ್ಸಾಂ ಸರ್ಕಾರಕ್ಕೆ ಹಿಂದಿರುಗಿಸಿದ ಪತ್ರಕರ್ತರು

ಅಸ್ಸಾಂ ಸರ್ಕಾರದಿಂದ ಹೊಸ ವರ್ಷದ ಉಡುಗೊರೆಯಾಗಿ ಪಡೆದ ಮೊಬೈಲ್ ಫೋನ್‌ಗಳನ್ನು ಕನಿಷ್ಠ ಇಬ್ಬರು ಪತ್ರಕರ್ತರು ಗುರುವಾರ ಹಿಂದಿರುಗಿಸಿದ್ದಾರೆ ಎಂದು 'ಸ್ಕ್ರೋಲ್' ವರದಿ ಮಾಡಿದೆ. ಅಸ್ಸಾಂನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯದಲ್ಲಿ ನೋಂದಾಯಿಸಲಾದ 2,200...

ಕೋಗಿಲು ಬಡಾವಣೆ ಮನೆಗಳ ತೆರವು : ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರಿನ ಕೋಗಿಲು ಬಡಾವಣೆಯ ವಾಸಿಂ ಹಾಗೂ ಫಕೀರ್ ಕಾಲೊನಿಗಳ ಸುಮಾರು ‌300 ಮನೆಗಳನ್ನು ನೆಲಸಮ ಮಾಡಿ, ಮೂರು ಸಾವಿರಕ್ಕೂ ಹೆಚ್ಚು ಜನರನ್ನು ಬೀದಿಗೆ ತಳ್ಳಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ...

ರ‍್ಯಾಗಿಂಗ್ ದೈಹಿಕ ಹಿಂಸೆ; ಎರಡು ತಿಂಗಳ ಬಳಿಕ 19 ವರ್ಷದ ವಿದ್ಯಾರ್ಥಿನಿ ಸಾವು

ಹಿಮಾಚಲ ಪ್ರದೇಶದ ಧರ್ಮಶಾಲಾದ ಸರ್ಕಾರಿ ಪದವಿ ಕಾಲೇಜಿನಲ್ಲಿ ನಡೆದ ಘಟನೆಯು ಇಡೀ ರಾಜ್ಯವನ್ನೇ ಆಘಾತಕ್ಕೆ ದೂಡಿದೆ. 19 ವರ್ಷದ ಬಾಲಕಿಯ ಸಾವಿನ ಗಂಭೀರ ಪ್ರಕರಣಗಳಲ್ಲಿ ಕಾಲೇಜಿನ ಅಧ್ಯಾಪಕರು ಮತ್ತು ಮೂವರು ವಿದ್ಯಾರ್ಥಿನಿಯರ ಹೆಸರಿದೆ....

ಮುಸ್ಲಿಂ ಲೀಗ್‌ ಚಂದ್ರಿಕಾದ ಸಂಪಾದಕೀಯ ಪ್ರಕಟಿಸಿದ ಜನ್ಮಭೂಮಿ ಪತ್ರಿಕೆ : ಮುಜುಗರಕ್ಕೊಳಗಾದ ಬಿಜೆಪಿಯ ಮುಖವಾಣಿ

ವರ್ಷದ ಆರಂಭದಲ್ಲಿ ಅಚ್ಚರಿ ಎಂಬಂತೆ, ಕೇರಳ ಬಿಜೆಪಿಯ ಮುಖವಾಣಿಯಾದ ಮಲಯಾಳಂ ದಿನಪತ್ರಿಕೆ 'ಜನ್ಮಭೂಮಿ', ಪ್ರತಿಸ್ಪರ್ಧಿ ಪತ್ರಿಕೆಯಾದ ಇಂಡಿಯನ್‌ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಪಕ್ಷದ ಮುಖವಾಣಿ 'ಚಂದ್ರಿಕಾ'ದ ಸಂಪಾದಕೀಯ ಪ್ರಕಟಿಸಿ ಮುಜುಗರಕ್ಕೀಡಾಗಿದೆ. 'ಜನ್ಮಭೂಮಿ' ಪತ್ರಿಕೆಯ...

ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಖರೀದಿ; ಶಾರುಖ್ ಖಾನ್ ಅವರನ್ನು ‘ದೇಶದ್ರೋಹಿ’ ಎಂದ ರಾಮಭದ್ರಾಚಾರ್ಯ

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಸೀಸನ್‌ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿ ಮಾಡಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಹಿಂದೂ ಆಧ್ಯಾತ್ಮಿಕ ನಾಯಕ...

“ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ”: ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

ಜೈಲಿನಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್‌ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ಅವರು ಕೈಬರಹದ ಪತ್ರವೊಂದನ್ನು ಬರೆದಿದ್ದಾರೆ ಎಂದು, ಖಾಲಿದ್ ಸ್ನೇಹಿತೆ ಬನೋಜ್ಯೋತ್ಸ್ನಾ...

ಮಧ್ಯಪ್ರದೇಶ| ಹಸು ಮೇಯಿಸುವ ವಿಚಾರಕ್ಕೆ ಜಗಳ; ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿದ ಗುಂಪು

ದಲಿತ ಕುಟುಂಬವೊಂದರ ಹೊಲದಲ್ಲಿ ಪ್ರಬಲ ಜಾತಿ ಜನರ ಹಸುಗಳು ಮೇಯಿಸುವುದನ್ನು ವಿರೋಧಿಸದ್ದಕ್ಕೆ ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಕೋರರು ಮನಬಂದಂತೆ ಗುಂಡು ಹಾರಿಸಿ ನಂತರ ದಲಿತ...

ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ (ಜ.1) ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ...