Homeಮುಖಪುಟಬಿಜೆಪಿ ಗೆದ್ದರೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತ ರಸ್ತೆ ನಿರ್ಮಾಣ ಎಂದ ಮಾಜಿ ಸಂಸದ!

ಬಿಜೆಪಿ ಗೆದ್ದರೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತ ರಸ್ತೆ ನಿರ್ಮಾಣ ಎಂದ ಮಾಜಿ ಸಂಸದ!

- Advertisement -
- Advertisement -

ದೆಹಲಿ ಚುನಾವಣೆಯಲ್ಲಿ ತಮ್ಮ ಕಲ್ಕಾಜಿ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿ ಗೆದ್ದರೆ ಕ್ಷೇತ್ರದ ಎಲ್ಲಾ ರಸ್ತೆಗಳನ್ನು ಪ್ರಿಯಾಂಕಾ ಗಾಂಧಿಯವರ ಕೆನ್ನೆಯಂತೆ ಮಾಡುವುದಾಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಅವರು ಹೇಳಿದ್ದು, ಈ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ ಅವರು, ಅವರ ಈ ಹೇಳಿಕೆ ನಾಚಿಕೆಗೇಡಿನದ್ದಾಗಿದ್ದು, ಇದು ಬಿಜೆಪಿಯು ಮಹಿಳಾ ವಿರೋಧಿ ಮನಸ್ಥಿತಿಯನ್ನು ಬೆಳೆಸುತ್ತಿದೆ ಎಂಬುವುದನ್ನು ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.

ದೆಹಲಿಯ ಮಾಜಿ ಸಂಸದರೂ ಆಗಿರುವ ರಮೇಶ್ ಬಿಧುರಿಯ ವಿಡಿಯೊವನ್ನು ಎಎಪಿ ಸಂಸದ ಸಂಜಯ್ ಸಿಂಗ್ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಪ್ರಿಯಾಂಕ ವಿರುದ್ಧ ಬಿಧುರಿ ನೀಡಿರುವ ಹೇಳಿಕೆ ನಾಚಿಕೆಗೇಡಿನ ಸಂಗತಿ ಮಾತ್ರವಲ್ಲದೆ ಮಹಿಳೆಯರ ಬಗೆಗಿನ ಅವರ ಅಸಹ್ಯಕರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಶ್ರೀನಾಟೆ ಅವರು ಹೇಳಿದ್ದಾರೆ. ಬಿಜೆಪಿ ಗೆದ್ದರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಹೇಳಿಕೆಗೆ ಬಿಜೆಪಿಯ ಪ್ರತಿಕ್ರಿಯೆಯನ್ನು ಅವರು ಪ್ರಶ್ನಿಸಿದ್ದು, ಬಿಧುರಿ ಅವರು ಈ ಹಿಂದೆ ಕೂಡಾ ಸಂಸದರೊಬ್ಬರ ವಿರುದ್ಧ ಅಸಭ್ಯ ಭಾಷೆ ಬಳಸಿದ್ದರು, ಆದರೆ ಅದಕ್ಕಾಗಿ ಅವರು ಯಾವುದೇ ಶಿಕ್ಷೆಯನ್ನು ಎದುರಿಸಲಿಲ್ಲ ಎಂದು ಶ್ರೀನಾಟೆ ಹೇಳಿದ್ದಾರೆ.

“ಬಿಜೆಪಿ ಅತ್ಯಂತ ಮಹಿಳಾ ವಿರೋಧಿ, ಪ್ರಿಯಾಂಕಾ ಗಾಂಧಿ ಅವರ ಬಗ್ಗೆ ರಮೇಶ್ ಬಿಧುರಿ ಹೇಳಿಕೆ ನಾಚಿಕೆಗೇಡಿನ ಸಂಗತಿ ಮಾತ್ರವಲ್ಲದೆ ಮಹಿಳೆಯರ ಬಗ್ಗೆ ಅವರ ಅಸಹ್ಯ ಮನಸ್ಥಿತಿಯನ್ನು ತೋರಿಸುತ್ತದೆ. ಆದರೆ ಸದನದಲ್ಲಿ ತನ್ನ ಸಹ ಸಂಸದರ ವಿರುದ್ಧ ಅಸಭ್ಯ ಭಾಷೆ ಬಳಸಿದ ವ್ಯಕ್ತಿಯಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಇದುವೆ ಬಿಜೆಪಿಯ ನಿಜವಾದ ಮುಖವಾಗಿದೆಯೇ?” ಎಂದು ಅವರು ಕೇಳಿದ್ದಾರೆ.

ಮಹಿಳಾ ಅಭಿವೃದ್ಧಿ ಸಚಿವೆ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಪಕ್ಷದ ಮಹಿಳಾ ಮುಖಂಡರು ಇಂತಹ ಟೀಕೆಗಳ ಬಗ್ಗೆ ಮಾತನಾಡಬೇಕು ಎಂದು ಶ್ರೀನಾಟೆ ಹೇಳಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ಈ ಮನಸ್ಥಿತಿ ಮತ್ತು ಭಾಷೆಯ ಜವಾಬ್ದಾರಿ ಬಳಕೆಯನ್ನು ಪಕ್ಷವು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿರುವ ಅವರು, ಇದಕ್ಕಾಗಿ ಬಿಜೆಪಿ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

ಅದಾಗ್ಯೂ, ರಮೇಶ್ ಬಿಧುರಿ ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇಂಡಿಯಾ ಟುಡೇ ಟಿವಿಯೊಂದಿಗೆ ಮಾತನಾಡಿದ ರಮೇಶ್ ಬಿಧುರಿ, ಬಿಹಾರದ ರಸ್ತೆಗಳನ್ನು ನಟಿ-ರಾಜಕಾರಣಿ ಹೇಮಾ ಮಾಲಿನಿ ಅವರ ಕೆನ್ನೆಗೆ ಹೋಲಿಸಿದ ಲಾಲು ಪ್ರಸಾದ್ ಯಾದವ್ ಅವರ ಹಿಂದಿನ ಹೇಳಿಕೆಯನ್ನು ಉಲ್ಲೇಖಿಸಿ ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

“ಇಂದು ನನ್ನ ಹೇಳಿಕೆಯಿಂದ ಕಾಂಗ್ರೆಸ್ ನವರಿಗೆ ನೋವಾಗಿದ್ದರೆ, ಹೇಮಾ ಮಾಲಿನಿ ಅವರ ಬಗ್ಗೆ ಏನು ಹೇಳುತ್ತಾರೆ? ಅವರು ತಮ್ಮ ಚಲನಚಿತ್ರಗಳ ಮೂಲಕ ಭಾರತಕ್ಕೆ ಕೀರ್ತಿ ತಂದ ಖ್ಯಾತ ನಟಿ. ಲಾಲು ಯಾದವ್ ಅವರ ಹೇಳಿಕೆಗಳ ಬಗ್ಗೆ ಟೀಕೆ ಮಾಡದ ಅವರು, ನನ್ನ ಬಗ್ಗೆ ಏಕೆ ಪ್ರಶ್ನಿಸಬೇಕು? ” ಬಿಧುರಿ ಹೇಳಿದ್ದಾರೆ. ಕಾಂಗ್ರೆಸ್ ಟೀಕೆಗೆ ಪ್ರತಿಕ್ರಿಯಿಸಿದ ಬಿಧುರಿ, “ಹೇಮಾ ಮಾಲಿನಿ ಮಹಿಳೆ ಅಲ್ಲವೇ? ಸಾಧನೆಗಳ ವಿಷಯದಲ್ಲಿ, ಹೇಮಾ ಮಾಲಿನಿ ಪ್ರಿಯಾಂಕಾ ಗಾಂಧಿಗಿಂತ ಹೆಚ್ಚು ಶ್ರೇಷ್ಠರು” ಎಂದು ಹೇಳಿದ್ದಾರೆ.

ವಿವಾದಾತ್ಮಕ ಹೇಳಿಕೆಗಳಿಗೆ ರಮೇಶ್ ಬಿಧುರಿ ಹಿನ್ನಡೆ ಅನುಭವಿಸುತ್ತಿರುವುದು ಇದೇ ಮೊದಲಲ್ಲ. 2023 ರಲ್ಲಿ, ಅವರು ಲೋಕಸಭೆಯ ಅಧಿವೇಶನದಲ್ಲಿ ಆಗಿನ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಕೋಮುವಾದಿ ಟೀಕೆಗಳನ್ನು ಮಾಡಿದರು. ಅವರ ಈ ಹೇಳಿಕೆ ಕ್ಯಾಮರಾದಲ್ಲಿ ದಾಖಲಾಗಿದ್ದು, ದೇಶದಾದ್ಯಂತ ರಾಜಕೀಯ ಮುಖಂಡರು ವ್ಯಾಪಕವಾಗಿ ಟೀಕಿಸಿದ್ದರು.

ಇದನ್ನೂ ಓದಿ: ಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ – ತಮಿಳುನಾಡು ಸಿಎಂ ಸ್ಟಾಲಿನ್

ಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ – ತಮಿಳುನಾಡು ಸಿಎಂ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...