Homeಅಂತರಾಷ್ಟ್ರೀಯಕೊರೊನಾ ಪ್ರಕರಣಗಳನ್ನು ಚೀನಾ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದರೆ ಪರಿಣಾಮ ಎದುರಿಸಲಿದೆ: ಅಮೆರಿಕ

ಕೊರೊನಾ ಪ್ರಕರಣಗಳನ್ನು ಚೀನಾ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದರೆ ಪರಿಣಾಮ ಎದುರಿಸಲಿದೆ: ಅಮೆರಿಕ

- Advertisement -
- Advertisement -

ಕೊರೊನಾ ವೈರಸ್‌ ಪ್ರಕರಣಗಳನ್ನು ಚೀನಾವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿರುವುದು ಕಂಡುಬಂದಲ್ಲಿ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

“ಇದು ಪ್ರಾರಂಭವಾಗುವ ಮೊದಲೇ ಚೀನಾದಲ್ಲಿ ಅದನ್ನು ನಿಲ್ಲಿಸಬಹುದಿತ್ತು ಆದರೆ ಅದು ಆಗಲಿಲ್ಲ, ಇದರಿಂದಾಗಿ ಇಡೀ ಪ್ರಪಂಚ ಬಳಲುತ್ತಿದೆ” ಎಂದು ಟ್ರಂಪ್ ಹೇಳಿದ್ದಾರೆ.

“ಒಂದು ವೇಳೆ ತಪ್ಪಾಗಿದ್ದರೆ, ತಪ್ಪು ತಪ್ಪೇ ಆಗಿದೆ, ಆದರೆ ಅವರು ಉದ್ದೇಶಪೂರ್ವಕವಾಗಿ ಜವಾಬ್ದಾರರಾಗಿದ್ದರೆ, ಖಂಡಿತವಾಗಿಯೂ ಅದರ ಪರಿಣಾಮ ಎದುರಿಸಬೇಕಾಗುತ್ತದೆ ” ಎಂದು ಹೇಳಿದ್ದಾರೆ.

ಕೊರೊನಾ ವೈರಸನ್ನು “ಚೈನೀಸ್ ವೈರಸ್” ಎಂದು ಈ ಹಿಂದೆಯೆ ಚೀನಾವನ್ನು ಮೂದಲಿಸಿದ್ದರು, ಇದರಿಂದಾಗಿ ಅಮೆರಿಕದಾದ್ಯಂತ ಏಷ್ಯಾ ವಿರೋಧಿ ಭಾವನೆಗಳಿಗೆ ಉತ್ತೇಜನ ನೀಡಿತು. ಸಾಂಕ್ರಾಮಿಕ ರೋಗವು ವುಹಾನ್ ನಲ್ಲಿ ಪ್ರಾರಂಭವಾಯಿತು ಎಂದು ನಂಬಲಾದ ನಂತರ ಇತರ ಅಮೆರಿಕಾದ ಅಧಿಕಾರಿಗಳು ಇದನ್ನು “ವುಹಾನ್ ವೈರಸ್” ಎಂದು ಕರೆಯತೊಡಗಿದ್ದರು.


ಇದನ್ನೂ ಓದಿ: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಎಚ್ಚರಿಕೆ


ಕೆಲವು ಅಮೆರಿಕಾ ಅಧಿಕಾರಿಗಳು ಮತ್ತು ರಿಪಬ್ಲಿಕನ್ ಪಕ್ಷದ ಸಂಸದರು ಗುಪ್ತಚರ ವರದಿಗಳನ್ನು ಉಲ್ಲೇಖಿಸಿ, ಚೀನಾ ನಿಜವಾದ ಅಂಕಿ ಅಂಶವನ್ನು ನೀಡುತ್ತಿಲ್ಲ ಎಂದು ಆರೋಪ ಮಾಡಿದ್ದರು. ಅಧ್ಯಕ್ಷ ಟ್ರಂಪ್ ಅಮೆರಿಕಾಕ್ಕಿಂತ ಚೀನಾದಲ್ಲೇ  ಹೆಚ್ಚು ಪ್ರಕರಣವಿದೆ ಎಂದು ಆರೋಪಿಸಿದ್ದರಾದರೂ ಅದಕ್ಕೆ ಯಾವುದೇ ಪುರಾವೆಯನ್ನು ಒದಗಿಸಿರಲಿಲ್ಲ.

ಅಮೆರಿಕಾ ಅಧ್ಯಕ್ಷ ಟ್ರಂಪ್ ತಮ್ಮ ಆಡಳಿತವೂ ಸಾಂಕ್ರಾಮಿಕದ ವಿರುದ್ದದ ಹೋರಾಟದಲ್ಲಿ ವಿಳಂಬ ಪ್ರತಿಕ್ರಿಯೆಗೆ ತೀವ್ರ ಟೀಕೆಗೆ ಗುರಿಯಾಗುತ್ತಿದ್ದಂತೆ, ಚೀನಾದ ಅಂಕಿ ಅಂಶ ಮರೆಮಾಚಲು ವಿಶ್ವ ಆರೋಗ್ಯ ಸಂಸ್ಥೆ ಸಹಾಯ ಮಾಡಿದೆ ಮತ್ತು ಬಿಕ್ಕಟ್ಟಿಗೆ ತನ್ನದೇ ಆದ ಪ್ರತಿಕ್ರಿಯೆಯನ್ನು ತಪ್ಪಾಗಿ ನಿರ್ವಹಿಸುತ್ತಿದೆ ಎಂದು ಆರೋಪಿಸಿದ್ದಾರೆ.  ಅಂದಿನಿಂದ ಚೀನಾ ತನ್ನ ಸಂಖ್ಯೆಯನ್ನು ವುಹಾನ್‌ನಲ್ಲಿ 50% ರಷ್ಟು ಪರಿಷ್ಕರಿಸಿದೆ ಎನ್ನಲಾಗಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದಿಂದಾಗಿ ನಿನ್ನೆ ಸಂಜೆ ತನಕ ವಿಶ್ವದಾದ್ಯಂತ 1,59,510 ಜನರು ಸಾವಿಗೀಡಾಗಿರುವುದು ವರದಿಯಾಗಿದೆ. 23,17,759 ಜನರು ಈ ಸೋಂಕಿನಿಂದ ಬಳಳುತ್ತಿದ್ದಾರೆ. ಅಮೆರಿಕಾ ದಲ್ಲಿ 38,664 ಜನರ ಸಾವಿನೊಂದಿಗೆ 7,32,197 ಪ್ರಕರಣಗಳನ್ನು ವರದಿಯಾಗಿದೆ.

ಮಾಹಿತಿ: ಹಿಂದುಸ್ತಾನ್ ಟೈಂಮ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...