Homeಅಂತರಾಷ್ಟ್ರೀಯಕೊರೊನಾ ಪ್ರಕರಣಗಳನ್ನು ಚೀನಾ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದರೆ ಪರಿಣಾಮ ಎದುರಿಸಲಿದೆ: ಅಮೆರಿಕ

ಕೊರೊನಾ ಪ್ರಕರಣಗಳನ್ನು ಚೀನಾ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದರೆ ಪರಿಣಾಮ ಎದುರಿಸಲಿದೆ: ಅಮೆರಿಕ

- Advertisement -
- Advertisement -

ಕೊರೊನಾ ವೈರಸ್‌ ಪ್ರಕರಣಗಳನ್ನು ಚೀನಾವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿರುವುದು ಕಂಡುಬಂದಲ್ಲಿ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

“ಇದು ಪ್ರಾರಂಭವಾಗುವ ಮೊದಲೇ ಚೀನಾದಲ್ಲಿ ಅದನ್ನು ನಿಲ್ಲಿಸಬಹುದಿತ್ತು ಆದರೆ ಅದು ಆಗಲಿಲ್ಲ, ಇದರಿಂದಾಗಿ ಇಡೀ ಪ್ರಪಂಚ ಬಳಲುತ್ತಿದೆ” ಎಂದು ಟ್ರಂಪ್ ಹೇಳಿದ್ದಾರೆ.

“ಒಂದು ವೇಳೆ ತಪ್ಪಾಗಿದ್ದರೆ, ತಪ್ಪು ತಪ್ಪೇ ಆಗಿದೆ, ಆದರೆ ಅವರು ಉದ್ದೇಶಪೂರ್ವಕವಾಗಿ ಜವಾಬ್ದಾರರಾಗಿದ್ದರೆ, ಖಂಡಿತವಾಗಿಯೂ ಅದರ ಪರಿಣಾಮ ಎದುರಿಸಬೇಕಾಗುತ್ತದೆ ” ಎಂದು ಹೇಳಿದ್ದಾರೆ.

ಕೊರೊನಾ ವೈರಸನ್ನು “ಚೈನೀಸ್ ವೈರಸ್” ಎಂದು ಈ ಹಿಂದೆಯೆ ಚೀನಾವನ್ನು ಮೂದಲಿಸಿದ್ದರು, ಇದರಿಂದಾಗಿ ಅಮೆರಿಕದಾದ್ಯಂತ ಏಷ್ಯಾ ವಿರೋಧಿ ಭಾವನೆಗಳಿಗೆ ಉತ್ತೇಜನ ನೀಡಿತು. ಸಾಂಕ್ರಾಮಿಕ ರೋಗವು ವುಹಾನ್ ನಲ್ಲಿ ಪ್ರಾರಂಭವಾಯಿತು ಎಂದು ನಂಬಲಾದ ನಂತರ ಇತರ ಅಮೆರಿಕಾದ ಅಧಿಕಾರಿಗಳು ಇದನ್ನು “ವುಹಾನ್ ವೈರಸ್” ಎಂದು ಕರೆಯತೊಡಗಿದ್ದರು.


ಇದನ್ನೂ ಓದಿ: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಎಚ್ಚರಿಕೆ


ಕೆಲವು ಅಮೆರಿಕಾ ಅಧಿಕಾರಿಗಳು ಮತ್ತು ರಿಪಬ್ಲಿಕನ್ ಪಕ್ಷದ ಸಂಸದರು ಗುಪ್ತಚರ ವರದಿಗಳನ್ನು ಉಲ್ಲೇಖಿಸಿ, ಚೀನಾ ನಿಜವಾದ ಅಂಕಿ ಅಂಶವನ್ನು ನೀಡುತ್ತಿಲ್ಲ ಎಂದು ಆರೋಪ ಮಾಡಿದ್ದರು. ಅಧ್ಯಕ್ಷ ಟ್ರಂಪ್ ಅಮೆರಿಕಾಕ್ಕಿಂತ ಚೀನಾದಲ್ಲೇ  ಹೆಚ್ಚು ಪ್ರಕರಣವಿದೆ ಎಂದು ಆರೋಪಿಸಿದ್ದರಾದರೂ ಅದಕ್ಕೆ ಯಾವುದೇ ಪುರಾವೆಯನ್ನು ಒದಗಿಸಿರಲಿಲ್ಲ.

ಅಮೆರಿಕಾ ಅಧ್ಯಕ್ಷ ಟ್ರಂಪ್ ತಮ್ಮ ಆಡಳಿತವೂ ಸಾಂಕ್ರಾಮಿಕದ ವಿರುದ್ದದ ಹೋರಾಟದಲ್ಲಿ ವಿಳಂಬ ಪ್ರತಿಕ್ರಿಯೆಗೆ ತೀವ್ರ ಟೀಕೆಗೆ ಗುರಿಯಾಗುತ್ತಿದ್ದಂತೆ, ಚೀನಾದ ಅಂಕಿ ಅಂಶ ಮರೆಮಾಚಲು ವಿಶ್ವ ಆರೋಗ್ಯ ಸಂಸ್ಥೆ ಸಹಾಯ ಮಾಡಿದೆ ಮತ್ತು ಬಿಕ್ಕಟ್ಟಿಗೆ ತನ್ನದೇ ಆದ ಪ್ರತಿಕ್ರಿಯೆಯನ್ನು ತಪ್ಪಾಗಿ ನಿರ್ವಹಿಸುತ್ತಿದೆ ಎಂದು ಆರೋಪಿಸಿದ್ದಾರೆ.  ಅಂದಿನಿಂದ ಚೀನಾ ತನ್ನ ಸಂಖ್ಯೆಯನ್ನು ವುಹಾನ್‌ನಲ್ಲಿ 50% ರಷ್ಟು ಪರಿಷ್ಕರಿಸಿದೆ ಎನ್ನಲಾಗಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದಿಂದಾಗಿ ನಿನ್ನೆ ಸಂಜೆ ತನಕ ವಿಶ್ವದಾದ್ಯಂತ 1,59,510 ಜನರು ಸಾವಿಗೀಡಾಗಿರುವುದು ವರದಿಯಾಗಿದೆ. 23,17,759 ಜನರು ಈ ಸೋಂಕಿನಿಂದ ಬಳಳುತ್ತಿದ್ದಾರೆ. ಅಮೆರಿಕಾ ದಲ್ಲಿ 38,664 ಜನರ ಸಾವಿನೊಂದಿಗೆ 7,32,197 ಪ್ರಕರಣಗಳನ್ನು ವರದಿಯಾಗಿದೆ.

ಮಾಹಿತಿ: ಹಿಂದುಸ್ತಾನ್ ಟೈಂಮ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...