Homeಕರ್ನಾಟಕನಂದಿನಿ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತೆ: ಕೆಎಂಎಫ್‌-ಅಮುಲ್ ವಿಲೀನ ಪ್ರಸ್ತಾಪಕ್ಕೆ ಎಚ್‌ಡಿಕೆ ಆಕ್ರೋಶ

ನಂದಿನಿ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತೆ: ಕೆಎಂಎಫ್‌-ಅಮುಲ್ ವಿಲೀನ ಪ್ರಸ್ತಾಪಕ್ಕೆ ಎಚ್‌ಡಿಕೆ ಆಕ್ರೋಶ

ಕೆಎಂಎಫ್‌- ಅಮುಲ್‌ ವಿಲೀನ ಪ್ರಸ್ತಾಪವನ್ನು ಜೆಡಿಎಸ್ ಕಟುವಾಗಿ ಟೀಕಿಸಿದೆ. ರೀಟ್ವೀಟ್ ಮಾಡುವ ಮೂಲಕ ಎಚ್‌.ಡಿ.ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

“ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಗುಜರಾತ್‌ನ ಅಮುಲ್‌ನೊಂದಿಗೆ ಕೆಎಂಎಫ್‌ (ನಂದಿನಿ) ವಿಲೀನಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಡಿರುವ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

“ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ, ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ” ಎಂದು ಟೀಕಿಸಿದ್ದಾರೆ.

“ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟ ವ್ಯಕ್ತಿ, ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಕಿವಿ ಹಿಂಡದ ವ್ಯಕ್ತಿ ಈಗ ಕನ್ನಡ ನೆಲದ ಮಣ್ಣಿನಮಕ್ಕಳ ಜೀವನಾಡಿ ಕರ್ನಾಟಕ ಹಾಲು ಮಹಾ ಮಂಡಳಿ (KMF- ನಂದಿನಿ)ಯನ್ನು ಗುಜರಾತಿನ ಅಮುಲ್‌ನಲ್ಲಿ ವಿಲೀನ ಮಾಡುವ ಹೇಳಿಕೆ ನೀಡಿರುವುದು ಕನ್ನಡಿಗರಿಗೆ ಮಾಡಲು ಹೊರಟಿರುವ ಘೋರ ಅನ್ಯಾಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕ ರಾಜ್ಯವನ್ನು ಗುಜರಾತ್ ಮಾಡುವ ಧೂರ್ತ ಹುನ್ನಾರ ಇದು. ಅಷ್ಟೇ ಅಲ್ಲ, ಗುಜರಾತ್‌ಗೆ ಕರ್ನಾಟಕವೇ ಪ್ರತಿಸ್ಪರ್ಧಿ ಎನ್ನುವ ಕಾರಣಕ್ಕೆ ಅಭಿವೃದ್ಧಿಯಲ್ಲಿ ಕರ್ನಾಟಕವನ್ನು ಮುಗಿಸೇಬೀಡಬೇಕು ಎನ್ನುವ ದುರಾಲೋಚನೆ ಅಮಿತ್ ಶಾ ಅವರಿಗೆ ಸ್ಪಷ್ಟವಾಗಿ ಇದ್ದಂತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದೇಶದ ಬೇರಾವ ರಾಜ್ಯದ ಮೇಲೆಯೂ ಇಲ್ಲದ ಅಸಹನೆ, ಅಸೂಯೆ, ವೈಷಮ್ಯ ಕರ್ನಾಟಕದ ಮೇಲೇಕೆ ಅಮಿತ್ ಶಾ ಅವರೇ ಎಂದು ನಾನು ಕೇಳುತ್ತಿದ್ದೇನೆ. ಕನ್ನಡಿಗರನ್ನು ಶತ್ರುಗಳಂತೆ ನೋಡುತ್ತಿದ್ದಾರೆ. ಕನ್ನಡಿಗರನ್ನು ಗುಜರಾತಿನ ಗುಲಾಮರನ್ನಾಗಿ ಮಾಡಲು ಶಾ ಅವರು ಷಡ್ಯಂತ್ರ ರೂಪಿಸಿದ್ದಾರೆ ಎನ್ನುವುದು ನನ್ನ ಅನುಮಾನ” ಎಂದಿದ್ದಾರೆ.

“ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ. ಇಡೀ ದೇಶವನ್ನೇ ಆಳಿದ ಕನ್ನಡಿಗರು ಯಾರೊಬ್ಬರ ಗುಲಾಮರಲ್ಲ. ಕರ್ನಾಟಕವನ್ನು ಆಕ್ರಮಣ ಮಾಡಿಕೊಳ್ಳುವ ಹಾಗೂ ಆರ್ಥಿಕ, ಕೈಗಾರಿಕೆ ಕ್ಷೇತ್ರಗಳಲ್ಲಿ ರಾಜ್ಯವನ್ನು ಹತ್ತಿಕ್ಕುವ ಹುನ್ನಾರ ಯಶಸ್ಸು ಕಾಣದು. ಬಿಜೆಪಿಯ ಬ್ರಹ್ಮರಾಕ್ಷಸ ರೂಪ ಕನ್ನಡಿಗರಿಗೆ ಈಗ ಅರಿವಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶಕ್ಕೇ ಮಾದರಿಯಾಗಿದ್ದ ಕರ್ನಾಟಕವನ್ನು ಉತ್ತರ ಭಾರತದ ಬ್ಯಾಂಕ್‌‌ಗಳಿಗೆ ಅಡಿಯಾಳನ್ನಾಗಿಸಿ, ಹಿಂದಿ ಭಾಷಿಗರ ಉದ್ಧಾರಕ್ಕಾಗಿ ಕನ್ನಡಿಗರ ಅನ್ನ ಕಸಿದುಕೊಂಡ ಬಿಜೆಪಿ ಈಗ, ನಂದಿನಿಯನ್ನು ಹೊಡೆದುಕೊಂಡು ಹೋಗಲು ಹಿಡನ್ ಅಜೆಂಡಾ ರೂಪಿಸಿದಂತಿದೆ. ಕರ್ನಾಟಕ ಎಂದಿಗೂ ಗುಜರಾತಿನ ವಸಾಹತು ಆಗುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಎಚ್‌.ಡಿ. ರೇವಣ್ಣ ರೀಟ್ವೀಟ್‌

ಕೆಎಂಎಫ್‌- ಅಮುಲ್‌ ವಿಲೀನ ಪ್ರಸ್ತಾಪ ಖಂಡಿಸಿ ಜೆಡಿಎಸ್‌ ಟ್ವಿಟರ್‌ ಖಾತೆಯಲ್ಲಿ ಮಾಡಲಾದ ಟ್ವೀಟ್‌ಗಳನ್ನು ಮಾಜಿ ಸಚಿವ ಎಚ್.ಡಿ.ರೇವಣ್ಣ ರೀಟ್ವೀಟ್ ಮಾಡಿದ್ದಾರೆ.

“ಕನ್ನಡಿಗರು ಕಟ್ಟಿಬೆಳೆಸಿದ ಸಂಸ್ಥೆಗಳ ಮೇಲೆ ಯಾಕಿಷ್ಟು ಅಸೂಯೆ ಅಮಿತ್ ಶಷಾ ಅವರೇ? ರಾಜ್ಯದಲ್ಲಿರುವ ನಿಮ್ಮದೇ ಸರ್ಕಾರ ಕಮಿಷನ್ ದಂದೆ, ಹಗರಣಗಳು ಹಾಗೂ ಭ್ರಷ್ಟಾಚಾರದ ಮೂಲಕ ರಾಜ್ಯವನ್ನು ದೋಚುತ್ತಿದ್ದರೆ, ನೀವು ವೀಲಿನದ ಹೆಸರಲ್ಲಿ ಕನ್ನಡಿಗರು ಕಟ್ಟಿಬೆಳೆಸಿದ ಲಾಭದಾಯಕ ಸಂಸ್ಥೆಗಳನ್ನೇ ದೋಚಲು ಮುಂದಾಗಿದ್ದಿರಾ? ನಿಮ್ಮದು ಡಬಲ್ ಇಂಜಿನ್ ಸರ್ಕಾರವಲ್ಲ ಕನ್ನಡಿಗರ ಪಾಲಿಗೆ ದೋಚುವ ಸರ್ಕಾರ. ನಿಮ್ಮ ದೋಚುವ ಆಡಳಿತದ ಅವನತಿ 2023ಕ್ಕೆ ಕರ್ನಾಟಕದಿಂದಲೇ ಶುರುವಾಗಲಿದೆ” ಎಂದು ಜೆಡಿಎಸ್ ತಿಳಿಸಿದೆ.

“ಕೆಎಂಎಫ್ ಗೆ ನಿಮ್ಮ ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊಡುಗೆಯಾದರೂ ಏನು? ಕರ್ನಾಟಕದ ಲಕ್ಷಾಂತರ ರೈತರು ಕಟ್ಟಿಬೆಳೆಸಿದ ಸಂಸ್ಥೆ ಇದು, ಇಂದು ರಾಜ್ಯದ ರೈತ ಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬುತ್ತಿರುವ ಸಂಸ್ಥೆಯನ್ನು ನಿಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹಗಲುಗನಸನ್ನು ಮೊದಲು ಬಿಟ್ಟುಬಿಡಿ” ಎಂದಿದೆ.

“ಪಂಚರತ್ನ ರಥಯಾತ್ರೆಯ ಯಶಸ್ಸು ನಿಮ್ಮ ಕಣ್ಣಿಗೂ ಬಿದ್ದಿರಬಹುದು, ಇಲ್ಲವೇ ಯಾರಾದರೂ ಭಟ್ಟಂಗಿಗಳು ನಿಮ್ಮ ಕಿವಿ ಊದಿರಬಹುದು. ಅದಕ್ಕೆ ಮಂಡ್ಯಕ್ಕೆ ಬಂದು ಮಕ್ಮಲ್ ಟೋಪಿ ಹಾಕಲು ವ್ಯರ್ಥ ಪ್ರಯತ್ನ ಮಾಡುತ್ತಿದ್ದೀರಿ. ನೀವು ಮಂಡ್ಯದಲ್ಲಿ ಮುಗ್ಗರಿಸುತ್ತಿರಿ. ಅಮಿತ್ ಶಾ ಅವರೇ ಅತಿಯಾದ ಅಮಿತೋತ್ಸಾಹ ಒಳ್ಳೆಯದಲ್ಲ” ಎಂದು ಕುಟುಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...