Homeಕರ್ನಾಟಕನಂದಿನಿ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತೆ: ಕೆಎಂಎಫ್‌-ಅಮುಲ್ ವಿಲೀನ ಪ್ರಸ್ತಾಪಕ್ಕೆ ಎಚ್‌ಡಿಕೆ ಆಕ್ರೋಶ

ನಂದಿನಿ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತೆ: ಕೆಎಂಎಫ್‌-ಅಮುಲ್ ವಿಲೀನ ಪ್ರಸ್ತಾಪಕ್ಕೆ ಎಚ್‌ಡಿಕೆ ಆಕ್ರೋಶ

ಕೆಎಂಎಫ್‌- ಅಮುಲ್‌ ವಿಲೀನ ಪ್ರಸ್ತಾಪವನ್ನು ಜೆಡಿಎಸ್ ಕಟುವಾಗಿ ಟೀಕಿಸಿದೆ. ರೀಟ್ವೀಟ್ ಮಾಡುವ ಮೂಲಕ ಎಚ್‌.ಡಿ.ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

“ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಗುಜರಾತ್‌ನ ಅಮುಲ್‌ನೊಂದಿಗೆ ಕೆಎಂಎಫ್‌ (ನಂದಿನಿ) ವಿಲೀನಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಡಿರುವ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

“ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ, ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ” ಎಂದು ಟೀಕಿಸಿದ್ದಾರೆ.

“ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟ ವ್ಯಕ್ತಿ, ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಕಿವಿ ಹಿಂಡದ ವ್ಯಕ್ತಿ ಈಗ ಕನ್ನಡ ನೆಲದ ಮಣ್ಣಿನಮಕ್ಕಳ ಜೀವನಾಡಿ ಕರ್ನಾಟಕ ಹಾಲು ಮಹಾ ಮಂಡಳಿ (KMF- ನಂದಿನಿ)ಯನ್ನು ಗುಜರಾತಿನ ಅಮುಲ್‌ನಲ್ಲಿ ವಿಲೀನ ಮಾಡುವ ಹೇಳಿಕೆ ನೀಡಿರುವುದು ಕನ್ನಡಿಗರಿಗೆ ಮಾಡಲು ಹೊರಟಿರುವ ಘೋರ ಅನ್ಯಾಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕ ರಾಜ್ಯವನ್ನು ಗುಜರಾತ್ ಮಾಡುವ ಧೂರ್ತ ಹುನ್ನಾರ ಇದು. ಅಷ್ಟೇ ಅಲ್ಲ, ಗುಜರಾತ್‌ಗೆ ಕರ್ನಾಟಕವೇ ಪ್ರತಿಸ್ಪರ್ಧಿ ಎನ್ನುವ ಕಾರಣಕ್ಕೆ ಅಭಿವೃದ್ಧಿಯಲ್ಲಿ ಕರ್ನಾಟಕವನ್ನು ಮುಗಿಸೇಬೀಡಬೇಕು ಎನ್ನುವ ದುರಾಲೋಚನೆ ಅಮಿತ್ ಶಾ ಅವರಿಗೆ ಸ್ಪಷ್ಟವಾಗಿ ಇದ್ದಂತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದೇಶದ ಬೇರಾವ ರಾಜ್ಯದ ಮೇಲೆಯೂ ಇಲ್ಲದ ಅಸಹನೆ, ಅಸೂಯೆ, ವೈಷಮ್ಯ ಕರ್ನಾಟಕದ ಮೇಲೇಕೆ ಅಮಿತ್ ಶಾ ಅವರೇ ಎಂದು ನಾನು ಕೇಳುತ್ತಿದ್ದೇನೆ. ಕನ್ನಡಿಗರನ್ನು ಶತ್ರುಗಳಂತೆ ನೋಡುತ್ತಿದ್ದಾರೆ. ಕನ್ನಡಿಗರನ್ನು ಗುಜರಾತಿನ ಗುಲಾಮರನ್ನಾಗಿ ಮಾಡಲು ಶಾ ಅವರು ಷಡ್ಯಂತ್ರ ರೂಪಿಸಿದ್ದಾರೆ ಎನ್ನುವುದು ನನ್ನ ಅನುಮಾನ” ಎಂದಿದ್ದಾರೆ.

“ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ. ಇಡೀ ದೇಶವನ್ನೇ ಆಳಿದ ಕನ್ನಡಿಗರು ಯಾರೊಬ್ಬರ ಗುಲಾಮರಲ್ಲ. ಕರ್ನಾಟಕವನ್ನು ಆಕ್ರಮಣ ಮಾಡಿಕೊಳ್ಳುವ ಹಾಗೂ ಆರ್ಥಿಕ, ಕೈಗಾರಿಕೆ ಕ್ಷೇತ್ರಗಳಲ್ಲಿ ರಾಜ್ಯವನ್ನು ಹತ್ತಿಕ್ಕುವ ಹುನ್ನಾರ ಯಶಸ್ಸು ಕಾಣದು. ಬಿಜೆಪಿಯ ಬ್ರಹ್ಮರಾಕ್ಷಸ ರೂಪ ಕನ್ನಡಿಗರಿಗೆ ಈಗ ಅರಿವಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶಕ್ಕೇ ಮಾದರಿಯಾಗಿದ್ದ ಕರ್ನಾಟಕವನ್ನು ಉತ್ತರ ಭಾರತದ ಬ್ಯಾಂಕ್‌‌ಗಳಿಗೆ ಅಡಿಯಾಳನ್ನಾಗಿಸಿ, ಹಿಂದಿ ಭಾಷಿಗರ ಉದ್ಧಾರಕ್ಕಾಗಿ ಕನ್ನಡಿಗರ ಅನ್ನ ಕಸಿದುಕೊಂಡ ಬಿಜೆಪಿ ಈಗ, ನಂದಿನಿಯನ್ನು ಹೊಡೆದುಕೊಂಡು ಹೋಗಲು ಹಿಡನ್ ಅಜೆಂಡಾ ರೂಪಿಸಿದಂತಿದೆ. ಕರ್ನಾಟಕ ಎಂದಿಗೂ ಗುಜರಾತಿನ ವಸಾಹತು ಆಗುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಎಚ್‌.ಡಿ. ರೇವಣ್ಣ ರೀಟ್ವೀಟ್‌

ಕೆಎಂಎಫ್‌- ಅಮುಲ್‌ ವಿಲೀನ ಪ್ರಸ್ತಾಪ ಖಂಡಿಸಿ ಜೆಡಿಎಸ್‌ ಟ್ವಿಟರ್‌ ಖಾತೆಯಲ್ಲಿ ಮಾಡಲಾದ ಟ್ವೀಟ್‌ಗಳನ್ನು ಮಾಜಿ ಸಚಿವ ಎಚ್.ಡಿ.ರೇವಣ್ಣ ರೀಟ್ವೀಟ್ ಮಾಡಿದ್ದಾರೆ.

“ಕನ್ನಡಿಗರು ಕಟ್ಟಿಬೆಳೆಸಿದ ಸಂಸ್ಥೆಗಳ ಮೇಲೆ ಯಾಕಿಷ್ಟು ಅಸೂಯೆ ಅಮಿತ್ ಶಷಾ ಅವರೇ? ರಾಜ್ಯದಲ್ಲಿರುವ ನಿಮ್ಮದೇ ಸರ್ಕಾರ ಕಮಿಷನ್ ದಂದೆ, ಹಗರಣಗಳು ಹಾಗೂ ಭ್ರಷ್ಟಾಚಾರದ ಮೂಲಕ ರಾಜ್ಯವನ್ನು ದೋಚುತ್ತಿದ್ದರೆ, ನೀವು ವೀಲಿನದ ಹೆಸರಲ್ಲಿ ಕನ್ನಡಿಗರು ಕಟ್ಟಿಬೆಳೆಸಿದ ಲಾಭದಾಯಕ ಸಂಸ್ಥೆಗಳನ್ನೇ ದೋಚಲು ಮುಂದಾಗಿದ್ದಿರಾ? ನಿಮ್ಮದು ಡಬಲ್ ಇಂಜಿನ್ ಸರ್ಕಾರವಲ್ಲ ಕನ್ನಡಿಗರ ಪಾಲಿಗೆ ದೋಚುವ ಸರ್ಕಾರ. ನಿಮ್ಮ ದೋಚುವ ಆಡಳಿತದ ಅವನತಿ 2023ಕ್ಕೆ ಕರ್ನಾಟಕದಿಂದಲೇ ಶುರುವಾಗಲಿದೆ” ಎಂದು ಜೆಡಿಎಸ್ ತಿಳಿಸಿದೆ.

“ಕೆಎಂಎಫ್ ಗೆ ನಿಮ್ಮ ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊಡುಗೆಯಾದರೂ ಏನು? ಕರ್ನಾಟಕದ ಲಕ್ಷಾಂತರ ರೈತರು ಕಟ್ಟಿಬೆಳೆಸಿದ ಸಂಸ್ಥೆ ಇದು, ಇಂದು ರಾಜ್ಯದ ರೈತ ಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬುತ್ತಿರುವ ಸಂಸ್ಥೆಯನ್ನು ನಿಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹಗಲುಗನಸನ್ನು ಮೊದಲು ಬಿಟ್ಟುಬಿಡಿ” ಎಂದಿದೆ.

“ಪಂಚರತ್ನ ರಥಯಾತ್ರೆಯ ಯಶಸ್ಸು ನಿಮ್ಮ ಕಣ್ಣಿಗೂ ಬಿದ್ದಿರಬಹುದು, ಇಲ್ಲವೇ ಯಾರಾದರೂ ಭಟ್ಟಂಗಿಗಳು ನಿಮ್ಮ ಕಿವಿ ಊದಿರಬಹುದು. ಅದಕ್ಕೆ ಮಂಡ್ಯಕ್ಕೆ ಬಂದು ಮಕ್ಮಲ್ ಟೋಪಿ ಹಾಕಲು ವ್ಯರ್ಥ ಪ್ರಯತ್ನ ಮಾಡುತ್ತಿದ್ದೀರಿ. ನೀವು ಮಂಡ್ಯದಲ್ಲಿ ಮುಗ್ಗರಿಸುತ್ತಿರಿ. ಅಮಿತ್ ಶಾ ಅವರೇ ಅತಿಯಾದ ಅಮಿತೋತ್ಸಾಹ ಒಳ್ಳೆಯದಲ್ಲ” ಎಂದು ಕುಟುಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...