Homeಕರ್ನಾಟಕನಂದಿನಿ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತೆ: ಕೆಎಂಎಫ್‌-ಅಮುಲ್ ವಿಲೀನ ಪ್ರಸ್ತಾಪಕ್ಕೆ ಎಚ್‌ಡಿಕೆ ಆಕ್ರೋಶ

ನಂದಿನಿ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತೆ: ಕೆಎಂಎಫ್‌-ಅಮುಲ್ ವಿಲೀನ ಪ್ರಸ್ತಾಪಕ್ಕೆ ಎಚ್‌ಡಿಕೆ ಆಕ್ರೋಶ

ಕೆಎಂಎಫ್‌- ಅಮುಲ್‌ ವಿಲೀನ ಪ್ರಸ್ತಾಪವನ್ನು ಜೆಡಿಎಸ್ ಕಟುವಾಗಿ ಟೀಕಿಸಿದೆ. ರೀಟ್ವೀಟ್ ಮಾಡುವ ಮೂಲಕ ಎಚ್‌.ಡಿ.ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

“ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಗುಜರಾತ್‌ನ ಅಮುಲ್‌ನೊಂದಿಗೆ ಕೆಎಂಎಫ್‌ (ನಂದಿನಿ) ವಿಲೀನಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಡಿರುವ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

“ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ, ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ” ಎಂದು ಟೀಕಿಸಿದ್ದಾರೆ.

“ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟ ವ್ಯಕ್ತಿ, ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಕಿವಿ ಹಿಂಡದ ವ್ಯಕ್ತಿ ಈಗ ಕನ್ನಡ ನೆಲದ ಮಣ್ಣಿನಮಕ್ಕಳ ಜೀವನಾಡಿ ಕರ್ನಾಟಕ ಹಾಲು ಮಹಾ ಮಂಡಳಿ (KMF- ನಂದಿನಿ)ಯನ್ನು ಗುಜರಾತಿನ ಅಮುಲ್‌ನಲ್ಲಿ ವಿಲೀನ ಮಾಡುವ ಹೇಳಿಕೆ ನೀಡಿರುವುದು ಕನ್ನಡಿಗರಿಗೆ ಮಾಡಲು ಹೊರಟಿರುವ ಘೋರ ಅನ್ಯಾಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕ ರಾಜ್ಯವನ್ನು ಗುಜರಾತ್ ಮಾಡುವ ಧೂರ್ತ ಹುನ್ನಾರ ಇದು. ಅಷ್ಟೇ ಅಲ್ಲ, ಗುಜರಾತ್‌ಗೆ ಕರ್ನಾಟಕವೇ ಪ್ರತಿಸ್ಪರ್ಧಿ ಎನ್ನುವ ಕಾರಣಕ್ಕೆ ಅಭಿವೃದ್ಧಿಯಲ್ಲಿ ಕರ್ನಾಟಕವನ್ನು ಮುಗಿಸೇಬೀಡಬೇಕು ಎನ್ನುವ ದುರಾಲೋಚನೆ ಅಮಿತ್ ಶಾ ಅವರಿಗೆ ಸ್ಪಷ್ಟವಾಗಿ ಇದ್ದಂತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದೇಶದ ಬೇರಾವ ರಾಜ್ಯದ ಮೇಲೆಯೂ ಇಲ್ಲದ ಅಸಹನೆ, ಅಸೂಯೆ, ವೈಷಮ್ಯ ಕರ್ನಾಟಕದ ಮೇಲೇಕೆ ಅಮಿತ್ ಶಾ ಅವರೇ ಎಂದು ನಾನು ಕೇಳುತ್ತಿದ್ದೇನೆ. ಕನ್ನಡಿಗರನ್ನು ಶತ್ರುಗಳಂತೆ ನೋಡುತ್ತಿದ್ದಾರೆ. ಕನ್ನಡಿಗರನ್ನು ಗುಜರಾತಿನ ಗುಲಾಮರನ್ನಾಗಿ ಮಾಡಲು ಶಾ ಅವರು ಷಡ್ಯಂತ್ರ ರೂಪಿಸಿದ್ದಾರೆ ಎನ್ನುವುದು ನನ್ನ ಅನುಮಾನ” ಎಂದಿದ್ದಾರೆ.

“ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ. ಇಡೀ ದೇಶವನ್ನೇ ಆಳಿದ ಕನ್ನಡಿಗರು ಯಾರೊಬ್ಬರ ಗುಲಾಮರಲ್ಲ. ಕರ್ನಾಟಕವನ್ನು ಆಕ್ರಮಣ ಮಾಡಿಕೊಳ್ಳುವ ಹಾಗೂ ಆರ್ಥಿಕ, ಕೈಗಾರಿಕೆ ಕ್ಷೇತ್ರಗಳಲ್ಲಿ ರಾಜ್ಯವನ್ನು ಹತ್ತಿಕ್ಕುವ ಹುನ್ನಾರ ಯಶಸ್ಸು ಕಾಣದು. ಬಿಜೆಪಿಯ ಬ್ರಹ್ಮರಾಕ್ಷಸ ರೂಪ ಕನ್ನಡಿಗರಿಗೆ ಈಗ ಅರಿವಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶಕ್ಕೇ ಮಾದರಿಯಾಗಿದ್ದ ಕರ್ನಾಟಕವನ್ನು ಉತ್ತರ ಭಾರತದ ಬ್ಯಾಂಕ್‌‌ಗಳಿಗೆ ಅಡಿಯಾಳನ್ನಾಗಿಸಿ, ಹಿಂದಿ ಭಾಷಿಗರ ಉದ್ಧಾರಕ್ಕಾಗಿ ಕನ್ನಡಿಗರ ಅನ್ನ ಕಸಿದುಕೊಂಡ ಬಿಜೆಪಿ ಈಗ, ನಂದಿನಿಯನ್ನು ಹೊಡೆದುಕೊಂಡು ಹೋಗಲು ಹಿಡನ್ ಅಜೆಂಡಾ ರೂಪಿಸಿದಂತಿದೆ. ಕರ್ನಾಟಕ ಎಂದಿಗೂ ಗುಜರಾತಿನ ವಸಾಹತು ಆಗುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಎಚ್‌.ಡಿ. ರೇವಣ್ಣ ರೀಟ್ವೀಟ್‌

ಕೆಎಂಎಫ್‌- ಅಮುಲ್‌ ವಿಲೀನ ಪ್ರಸ್ತಾಪ ಖಂಡಿಸಿ ಜೆಡಿಎಸ್‌ ಟ್ವಿಟರ್‌ ಖಾತೆಯಲ್ಲಿ ಮಾಡಲಾದ ಟ್ವೀಟ್‌ಗಳನ್ನು ಮಾಜಿ ಸಚಿವ ಎಚ್.ಡಿ.ರೇವಣ್ಣ ರೀಟ್ವೀಟ್ ಮಾಡಿದ್ದಾರೆ.

“ಕನ್ನಡಿಗರು ಕಟ್ಟಿಬೆಳೆಸಿದ ಸಂಸ್ಥೆಗಳ ಮೇಲೆ ಯಾಕಿಷ್ಟು ಅಸೂಯೆ ಅಮಿತ್ ಶಷಾ ಅವರೇ? ರಾಜ್ಯದಲ್ಲಿರುವ ನಿಮ್ಮದೇ ಸರ್ಕಾರ ಕಮಿಷನ್ ದಂದೆ, ಹಗರಣಗಳು ಹಾಗೂ ಭ್ರಷ್ಟಾಚಾರದ ಮೂಲಕ ರಾಜ್ಯವನ್ನು ದೋಚುತ್ತಿದ್ದರೆ, ನೀವು ವೀಲಿನದ ಹೆಸರಲ್ಲಿ ಕನ್ನಡಿಗರು ಕಟ್ಟಿಬೆಳೆಸಿದ ಲಾಭದಾಯಕ ಸಂಸ್ಥೆಗಳನ್ನೇ ದೋಚಲು ಮುಂದಾಗಿದ್ದಿರಾ? ನಿಮ್ಮದು ಡಬಲ್ ಇಂಜಿನ್ ಸರ್ಕಾರವಲ್ಲ ಕನ್ನಡಿಗರ ಪಾಲಿಗೆ ದೋಚುವ ಸರ್ಕಾರ. ನಿಮ್ಮ ದೋಚುವ ಆಡಳಿತದ ಅವನತಿ 2023ಕ್ಕೆ ಕರ್ನಾಟಕದಿಂದಲೇ ಶುರುವಾಗಲಿದೆ” ಎಂದು ಜೆಡಿಎಸ್ ತಿಳಿಸಿದೆ.

“ಕೆಎಂಎಫ್ ಗೆ ನಿಮ್ಮ ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊಡುಗೆಯಾದರೂ ಏನು? ಕರ್ನಾಟಕದ ಲಕ್ಷಾಂತರ ರೈತರು ಕಟ್ಟಿಬೆಳೆಸಿದ ಸಂಸ್ಥೆ ಇದು, ಇಂದು ರಾಜ್ಯದ ರೈತ ಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬುತ್ತಿರುವ ಸಂಸ್ಥೆಯನ್ನು ನಿಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹಗಲುಗನಸನ್ನು ಮೊದಲು ಬಿಟ್ಟುಬಿಡಿ” ಎಂದಿದೆ.

“ಪಂಚರತ್ನ ರಥಯಾತ್ರೆಯ ಯಶಸ್ಸು ನಿಮ್ಮ ಕಣ್ಣಿಗೂ ಬಿದ್ದಿರಬಹುದು, ಇಲ್ಲವೇ ಯಾರಾದರೂ ಭಟ್ಟಂಗಿಗಳು ನಿಮ್ಮ ಕಿವಿ ಊದಿರಬಹುದು. ಅದಕ್ಕೆ ಮಂಡ್ಯಕ್ಕೆ ಬಂದು ಮಕ್ಮಲ್ ಟೋಪಿ ಹಾಕಲು ವ್ಯರ್ಥ ಪ್ರಯತ್ನ ಮಾಡುತ್ತಿದ್ದೀರಿ. ನೀವು ಮಂಡ್ಯದಲ್ಲಿ ಮುಗ್ಗರಿಸುತ್ತಿರಿ. ಅಮಿತ್ ಶಾ ಅವರೇ ಅತಿಯಾದ ಅಮಿತೋತ್ಸಾಹ ಒಳ್ಳೆಯದಲ್ಲ” ಎಂದು ಕುಟುಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...