Homeರಾಜಕೀಯದಾದಾಗಿರಿ ಮಾಡಲು ಬಂದರೆ ‘ಮಹಾರುದ್ರ’ ತೋರಿಸಿ ಕೊಡುತ್ತೇವೆ: ಬಿಜೆಪಿಗೆ ಶಿವಸೇನೆ ಎಚ್ಚರಿಕೆ

ದಾದಾಗಿರಿ ಮಾಡಲು ಬಂದರೆ ‘ಮಹಾರುದ್ರ’ ತೋರಿಸಿ ಕೊಡುತ್ತೇವೆ: ಬಿಜೆಪಿಗೆ ಶಿವಸೇನೆ ಎಚ್ಚರಿಕೆ

- Advertisement -
- Advertisement -

“ಹನುಮಾನ್‌ ಚಾಲೀಸಾ ಪಠಿಸಬೇಕಿದ್ದರೆ ಪಠಿಸು…ಆದರೆ ದಾದಾಗಿರಿ ಮಾಡಿದರೆ ಅದನ್ನು ಹೇಗೆ ಒಡೆಯಬೇಕು ಎಂದು ನಮಗೆ ಗೊತ್ತು…ಶಿವಸೇನೆಗೆ ಸವಾಲೆಸೆದರೆ ಭೀಮಾ ರೂಪ ಮತ್ತು ಮಹಾರುದ್ರ ಏನು ಎಂಬುದನ್ನು ತೋರಿಸಿ ಕೊಡುತ್ತೇವೆ…ನಮ್ಮ ಹಿಂದುತ್ವ ಗದಾಧಾರಿ ಹನುಮಂತನಷ್ಟೇ ಬಲಿಷ್ಠ” ಎಂದು ಮಹಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮಂಗಳವಾರದಂದು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

“ಕಳೆದ ಕೆಲವು ದಿನಗಳಿಂದ ಅವರು (ಬಿಜೆಪಿ) ಶಿವಸೇನೆಯು ಹಿಂದುತ್ವವನ್ನು ತೊರೆದಿದೆ ಎಂದು ಕಿರುಚುತ್ತಿದ್ದಾರೆ. ಆದರೆ ನಾವು ಯಾವುದನ್ನು ಬಿಟ್ಟಿದ್ದೇವೆ? ಒಮ್ಮೆ ಹಾಕಲು ಮತ್ತು ಬಿಡಲು ಹಿಂದುತ್ವ ಅಂದರೆ ಪಂಚೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಒಂದು ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಹಿಂದುತ್ವದ ಬಗ್ಗೆ ನಮಗೆ ಉಪನ್ಯಾಸ ನೀಡುವವರು ಹಿಂದುತ್ವಕ್ಕಾಗಿ ಏನು ಮಾಡಿದ್ದಾರೆ ಎಂದು ತಮ್ಮನ್ನು ತಾವು ಕೇಳಿಕೊಳ್ಳಬೇಕು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಮಸೀದಿಯಿಂದ ಬಲವಂತವಾಗಿ ಧ್ವನಿವರ್ಧಕ ತೆಗೆಯುವುದಿಲ್ಲ: ಸಿಎಂ ಬೊಮ್ಮಾಯಿ

“ಬಾಬರಿ ಮಸೀದಿಯನ್ನು ಕೆಡವಿದಾಗ, ನೀವು ನಿಮ್ಮ ಗುಂಡಿ ಹುಡಿಕೊಂಡು ಓಡಿಹೋದಿರಿ. ರಾಮ ಮಂದಿರವನ್ನು ನಿರ್ಮಿಸುವ ನಿರ್ಧಾರ ನಿಮ್ಮ ಸರ್ಕಾರದಿಂದ ಬಂದಿದ್ದಲ್ಲ, ಅದು ನ್ಯಾಯಾಲಯದಿಂದ ಬಂದಿದ್ದು. ಅದನ್ನು ನಿರ್ಮಿಸುತ್ತಿರುವಾಗ ನೀವು ಜೋಳಿಗೆಯೊಂದಿಗೆ ಜನರ ನಡುವೆ ಹೋಗಿದ್ದೀರಿ. ನಿಮ್ಮ ಹಿಂದುತ್ವ ಎಲ್ಲಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ ಮನೆಯ ಹೊರಗೆ ಹನುಮಾನ್ ಚಾಲೀಸಾವನ್ನು ಪಠಿಸಲು ತೆರಳಿ ಶನಿವಾರ ಬಂಧನಕ್ಕೆ ಒಳಗಾದ ಸ್ವತಂತ್ರ ಸಂಸದೆ ನವನೀತ್ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ಅವರನ್ನು ಬಿಜೆಪಿ ಬೆಂಬಲಿಸುತ್ತಿದೆ. ಸರ್ಕಾರವು ಅವರಿಬ್ಬರ ವಿರುದ್ಧ ದೇಶದ್ರೋಹ ಮತ್ತು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಪ್ರಕರಣವನ್ನು ದಾಖಲಿಸಿದೆ.

ಧ್ವನಿವರ್ಧಕಗಳಲ್ಲಿ ಅಜಾನ್‌ ಕರೆ ನೀಡುವುದರ ವಿರುದ್ದದ ಮೇಲಿನ ರಾಜಕೀಯ ವಿವಾದವು ಅಣಬೆಗಳಂತೆ ಹುಟ್ಟಿಕೊಂಡಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮುಸ್ಲಿಮರ ವಿರುದ್ಧ ಶತಮಾನದ ಕೋಮು ದಾಳಿಗಳು

ಇಬ್ಬರು ರಾಣಾಗಳ ವಿರುದ್ದ ಸರ್ಕಾರ ಕೈಗೊಂಡ ಕ್ರಮವನ್ನು ಬಾಂಬೆ ಹೈಕೋರ್ಟ್‌ ಬೆಂಬಲಿಸಿದ್ದು, “ಕಾನೂನು-ಸುವ್ಯವಸ್ಥೆ ಸಮಸ್ಯೆಯನ್ನು ಉಂಟುಮಾಡಬಹುದು ಎಂಬ ಆತಂಕವನ್ನು ಸರಿಯಾಗಿದೆ” ಎಂದು ಅದು ಹೇಳಿದೆ.

“ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯ ಸ್ಥಳದಲ್ಲಿ ಅಥವಾ ಸಾರ್ವಜನಿಕ ಸ್ಥಳದಲ್ಲಿ ಧಾರ್ಮಿಕ ಶ್ಲೋಕಗಳನ್ನು ಪಠಿಸುತ್ತೇನೆ ಎಂಬ ಘೋಷಣೆಯು ಇತರ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ” ಎಂದು ಹೈಕೋರ್ಟ್ ಹೇಳಿದ್ದು, ತನ್ನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ನವನೀತ್ ರಾಣಾ ಅವರ ಮನವಿಯನ್ನು ತಿರಸ್ಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...