Homeಮುಖಪುಟಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಭೆ ಉಂಟಾಗುತ್ತದೆ: ಅಮಿತ್ ಶಾ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಭೆ ಉಂಟಾಗುತ್ತದೆ: ಅಮಿತ್ ಶಾ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು

- Advertisement -
- Advertisement -

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಭೆ ಉಂಟಾಗುತ್ತದೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ಸಲ್ಲಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮತ್ತು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ ಗೌರವ್ ವಲ್ಲಭ್‌ರವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತೇರದಾಳದಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ಅಮಿತ್ ಶಾ ”ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಸರ್ಕಾರ ರಚಿಸಿದರೆ ರಾಜ್ಯವು ಗಲಭೆಗಳಿಂದ ತುಂಬಿಹೋಗುತ್ತದೆ. ವಂಶಾಡಳಿತ ಮುನ್ನೆಲೆಗೆ ಬರುತ್ತದೆ” ಎಂದು ಹೇಳಿದ್ದರು.

“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂಸಾಚಾರ ನಡೆಯುತ್ತದೆ ಎಂದು ರಾಜ್ಯದ ಮತದಾರರಿಗೆ ಬೆದರಿಕೆ ಒಡ್ಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರು” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಅಮಿತ್‌ ಶಾ ಹೇಳಿದ್ದರು. ಈ ಹೇಳಿಕೆಯನ್ನು ಖಂಡಿಸಿರುವ ಜೈರಾಮ್ ರಮೇಶ್ ಅವರು, ”ಭಯ ಹುಟ್ಟುಹಾಕುವ ಸಲುವಾಗಿಯೇ ಇಂತಹ ಹೇಳಿಕೆ ನೀಡಲು ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಮಿತ್ ಶಾ ಹೇಳಿಕೆಯು ಅತ್ಯಂತ ನಿರ್ಲಜ್ಜತನದ ಮತ್ತು ಬೆದರಿಸುವ ಹೇಳಿಕೆಯಾಗಿದೆ. ಭಾರತದ ಮೊಟ್ಟಮೊದಲ ಗೃಹ ಸಚಿವರಿಂದ ನಿಷೇಧಿಸಲ್ಪಟ್ಟ ಸಂಘಟನೆ(ಆರ್ ಎಸ್ಎಸ್)ಗೆ ನಿಷ್ಠರಾಗಿರುವ ಕೇಂದ್ರ ಗೃಹ ಸಚಿವರು ಈಗ ಚುನಾವಣಾ ಪ್ರಚಾರದ ಸಮಯದಲ್ಲಿ ಸೋಲಿನ ಆತಂಕದಿಂದ ಬೆದರಿಕೆಗಳನ್ನು ಹಾಕುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಕರ್ನಾಟಕ ವಿಧಾನಸಭೆ ಚುನಾವಣೆ ಎಂದರೆ ಕೇವಲ ಶಾಸಕರನ್ನು ಆರಿಸುವುದಲ್ಲ, ಬದಲಾಗಿ ರಾಜ್ಯದ ಭವಿಷ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಕೈಗಿಡುವುದು” ಎಂದು ಅಮಿತ್‌ ಶಾ ಹೇಳಿದ್ದರು. ಈ ಹೇಳಿಕೆಯು 6.5 ಕೋಟಿ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಬುಧವಾರ ಕಾಂಗ್ರೆಸ್‌ ಅಭ್ಯರ್ಥಿಗಳ ಪ್ರಚಾರ ಸಭೆಯಲ್ಲಿ ಶಾ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ, ”ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಂಗೆಗಳು ಆಗುತ್ತವೆ’ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಪ್ರಚೋದನಕಾರಿಯಾಗಿದ್ದು, ಕರ್ನಾಟಕ ರಾಜ್ಯದ ಜನತೆ ಕೆಟ್ಟವರಿದ್ದಾರೆಯೇ? ಕಾಂಗ್ರೆಸ್ ಸರಕಾರ ಆಡಳಿತ ಮಾಡಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

”ಕಾಂಗ್ರೆಸ್ ಚುನಾವಣೆಯನ್ನೇ ಮಾಡಿಲ್ಲವೇ? ಶಾಂತಿ ಪ್ರಿಯ ಕರ್ನಾಟಕದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡುತ್ತಿರುವ ಪ್ರಚೋದನಾತ್ಮಕ ಹೇಳಿಕೆಗಳನ್ನು ಕೂಡಲೇ ನಿಲ್ಲಿಸಬೇಕು” ಎಂದು ಇದೇ ವೇಳೆ ತಾಕೀತು ಮಾಡಿದರು.

”ಪ್ರಧಾನಿ ಮೋದಿ, ಅಮಿತ್ ಶಾ ವಿಧಾನಸಭಾ ಚುನಾವಣೆಯಲ್ಲಿ ಅತಿಹೆಚ್ಚು ಪ್ರಚಾರ ಮಾಡುವುದನ್ನು ಗಮನಿಸಿದರೆ ಅವರು ಹತಾಶರಾಗಿದ್ದು, ಮೋದಿ ಹಾಗೂ  ಶಾ ನೋಡಿ ಮತ ನೀಡಿ ಎಂದು ಬಸವರಾಜ ಬೊಮ್ಮಾಯಿ ಕೇಳುತ್ತಿದ್ದಾರೆ. ರಾಜ್ಯದ ಜನರಿಗೆ ಬಿಜೆಪಿ ಮತ್ತು ಬೊಮ್ಮಾಯಿ ನೀವೇನು ಮಾಡಿದ್ದೀರಿ? ಎಂಬುದನ್ನು ಜನ ಕೇಳುತ್ತಿದ್ದಾರೆ” ಎಂದು ಖರ್ಗೆ ವಾಗ್ದಾಳಿ ನಡೆಸಿದರು.

”ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಗಗನಕ್ಕೆ ಏರಿದ್ದು, ಬಿಜೆಪಿ ದುರಾಡಳಿತಕ್ಕೆ ರಾಜ್ಯದ ಜನ ಬೇಸತ್ತು ಹೋಗಿದ್ದಾರೆ. ಒಂದು ಕಡೆ ಭ್ರಷ್ಟಾಚಾರ, ಇನ್ನೊಂದು ಕಡೆ ನಿರುದ್ಯೋಗ ತಾಂಡವವಾಡುತ್ತಿದೆ. ರಾಜ್ಯದಲ್ಲಿ ಅನೇಕ ನ್ಯೂನತೆಗಳಿವೆ. ಬಿಜೆಪಿ ಸರಕಾರ ತೆಗೆದು ಹಾಕಲು ಜನರು ತೀರ್ಮಾನ ಮಾಡಿದ್ದಾರೆ” ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಇದನ್ನೂ ಓದಿ: ಮೋದಿ ಸರ್ ನೇಮ್ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...