Homeಮುಖಪುಟಕಾಂಗ್ರೆಸ್‌ ಪಕ್ಷಕ್ಕೆ ಅಗತ್ಯವಿಲ್ಲದಿದ್ದರೆ ನನಗೆ ಬೇರೆ ಆಯ್ಕೆಗಳಿವೆ: ಸಂಸದ ಶಶಿ ತರೂರ್

ಕಾಂಗ್ರೆಸ್‌ ಪಕ್ಷಕ್ಕೆ ಅಗತ್ಯವಿಲ್ಲದಿದ್ದರೆ ನನಗೆ ಬೇರೆ ಆಯ್ಕೆಗಳಿವೆ: ಸಂಸದ ಶಶಿ ತರೂರ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ ಸರ್ಕಾರವನ್ನು ತಿರುವನಂತಪುರಂ ಕಾಂಗ್ರೆಸ್ ಸಂಸದ ಹೊಗಳಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾತನಾಡಿರುವ ತರೂರ್, “ನಾನು ಪಕ್ಷಕ್ಕೆ ಲಭ್ಯವಿದ್ದೇನೆ, ಆದರೆ ಸೇವೆಗಳು ಅಗತ್ಯವಿಲ್ಲದಿದ್ದರೆ ನನಗೆ ಬೇರೆ ಆಯ್ಕೆಗಳು ಇವೆ” ಎಂದು ಪಕ್ಷಾಂತರದ ಎಚ್ಚರಿಕೆ ನೀಡಿದ್ದಾರೆ.

ಮಲಯಾಳಂ ಪಾಡ್‌ಕ್ಯಾಸ್ಟ್‌ ಒಂದರಲ್ಲಿ ಮಾತನಾಡಿದ ತರೂರ್, ಪಕ್ಷ ಬದಲಾಯಿಸುವ ವದಂತಿಗಳನ್ನು ನಿರಾಕರಿಸಿದರು. ಅಭಿಪ್ರಾಯಗಳಲ್ಲಿ ವ್ಯತ್ಯಾಸವಿದ್ದರೂ ಸಹ ನನಗೆ ಅದರಲ್ಲಿ ನಂಬಿಕೆ ಇಲ್ಲ ಎಂದು ಹೇಳಿದರು.

ಕೇರಳ ಸರ್ಕಾರದ ನೀತಿಗಳನ್ನು ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಅಮೆರಿಕದಲ್ಲಿ ಭೇಟಿ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದರಿಂದ ತರೂರ್ ಅವರ ಹೇಳಿಕೆಗಳು ಮಹತ್ವದ್ದಾಗಿವೆ, ಹೇಳಿಕೆಗಳು ಕಾಂಗ್ರೆಸ್‌ ಪಕ್ಷಕ್ಕೆ ಒಪ್ಪಿಗೆಯಾಗಿಲ್ಲ.

“ನಾನು ಎಂದಿಗೂ ರಾಜಕಾರಣಿ ಎಂದು ಭಾವಿಸಿಲ್ಲ, ನನಗೆ ಸಂಕುಚಿತ ರಾಜಕೀಯ ಆಲೋಚನೆಗಳು ಇವೆ” ಎಂದು ಪಾಡ್‌ಕಾಸ್ಟ್‌ನಲ್ಲಿ ಹೇಳಿದರು.

ಹೊಸ ಮತದಾರರನ್ನು ಆಕರ್ಷಿಸಲು ಅವರು ಕಾಂಗ್ರೆಸ್ ತನ್ನ ನೆಲೆಯನ್ನು ವಿಸ್ತರಿಸಲು ಕರೆ ನೀಡಿದರು. ಪಕ್ಷದ ಕೇರಳ ಘಟಕದಲ್ಲಿ ನಾಯಕನ ಅನುಪಸ್ಥಿತಿಯನ್ನು ಅವರು ಎತ್ತಿ ತೋರಿಸಿದರು.

ಕೇರಳ ಘಟಕದಲ್ಲಿ ನಾಯಕರ ಅನುಪಸ್ಥಿತಿ ಇದೆ ಎಂಬ ತಮ್ಮ ಅಭಿಪ್ರಾಯಕ್ಕೆ ಇತರ ಕಾಂಗ್ರೆಸ್ ನಾಯಕರು ಬೆಂಬಲ ನೀಡಿದ್ದಾರೆ ಎಂದು 67 ವರ್ಷದ ನಾಯಕ ಹೇಳಿಕೊಂಡಿದ್ದಾರೆ. ಸ್ವತಂತ್ರ ಸಂಸ್ಥೆಗಳು ನಡೆಸಿದ ಅಭಿಪ್ರಾಯ ಸಂಗ್ರಹಗಳು ರಾಜ್ಯದಲ್ಲಿ ನಾಯಕತ್ವದ ವಿಷಯದಲ್ಲಿ ತಾವು ಇತರರಿಗಿಂತ ಮುಂದಿರುವುದಾಗಿ ತೋರಿಸಿವೆ ಎಂದು ಅವರು ಉಲ್ಲೇಖಿಸಿದ್ದಾರೆ.

ತಿರುವನಂತಪುರದ ನಾಲ್ಕು ಬಾರಿ ಸಂಸದರಾಗಿರುವ ಅವರು, ಕಾಂಗ್ರೆಸ್ ತನ್ನ ಆಕರ್ಷಣೆಯನ್ನು ವಿಸ್ತರಿಸದಿದ್ದರೆ, ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಕೇರಳದಲ್ಲಿ ಸತತ ಮೂರನೇ ಬಾರಿಗೆ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ; ತಮಿಳುನಾಡಿಗೆ ₹10,000 ಕೋಟಿ ಕೊಟ್ಟರೂ ಎನ್‌ಇಪಿ ಜಾರಿಗೆ ತರುವುದಿಲ್ಲ: ಸಿಎಂ ಎಂಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...