Homeಮುಖಪುಟ'ಕಾಂಗ್ರೆಸ್ ಗೆದ್ದರೆ ಒಂದು ಇಟ್ಟಿಗೆ ಕೂಡಾ ನೀಡಲ್ಲ' | ಜನರನ್ನು ಬೆದರಿಸಿದ ಕೇಂದ್ರ ಸಚಿವ ಶಿವರಾಜ್...

‘ಕಾಂಗ್ರೆಸ್ ಗೆದ್ದರೆ ಒಂದು ಇಟ್ಟಿಗೆ ಕೂಡಾ ನೀಡಲ್ಲ’ | ಜನರನ್ನು ಬೆದರಿಸಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಪುತ್ರ

- Advertisement -
- Advertisement -

“ಉಪ ಚನಾವಣೆಯಲ್ಲಿ ಕಾಂಗ್ರೆಸ್ ಶಾಸಕ ಗೆದ್ದರೆ, ಈ ಹಳ್ಳಿಗೆ ಒಂದೇ ಒಂದು ಇಟ್ಟಿಗೆ ಕೂಡಾ ನೀಡುವುದಿಲ್ಲ” ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸರ್ಕಾರದ ಹಾಲಿ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಮಗ ಕಾರ್ತಿಕೇ ಸಿಂಗ್ ಚೌಹಾಣ್ ಬೆದರಿಸಿದ್ದು ಇದೀಗ ತೀವ್ರ ವಿವಾದವಾಗಿದೆ. ಅವರು ಮಧ್ಯಪ್ರದೇಶದ ಬುಧ್ನಿ ಉಪ ಚುನಾವಣೆಗೆ ಮುನ್ನ ನಡೆಸಿದ ಪ್ರಚಾರ ಭಾಷಣಲ್ಲಿ ಕ್ಷೇತ್ರದ ಜನರನ್ನು ಬೆದರಿಸಿದ್ದಾರೆ. ಕಾಂಗ್ರೆಸ್ ಗೆದ್ದರೆ

ಬಹುಕಾಲದಿಂದ ಶಿವರಾಜ್ ಸಿಂಗ್ ಚೌಹಾಣ್ ಪ್ರತಿನಿಧಿಸುತ್ತಿದ್ದ ಕ್ಷೇತ್ರವಾದ ಬುಧ್ನಿಯಲ್ಲಿ ಕಾರ್ತಿಕೇ ಬಿಜೆಪಿ ಪ್ರಚಾರದ ಸಾರಥ್ಯವನ್ನು ವಹಿಸಿಕೊಂಡಿದ್ದಾರೆ. ಉಪಚುನಾವಣೆ ಮೂಲಕ ಅವರು ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬುಧ್ನಿಯಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕಾರ್ತಿಕೇ ಅವರು ಚುನಾವಣಾ ಫಲಿತಾಂಶದ ನಂತರ ನಮ್ಮ ಕೆಲಸ ಮಾಡಿಕೊಡಿ ಎಂದು ಹೇಗೆ ಕೇಳುತ್ತೇವೆ? ಎಂದು ಅವರು ಹೇಳಿದ್ದಾರೆ.

“ಒಂದು ವೇಳೆ ಇಲ್ಲಿ ಕಾಂಗ್ರೆಸ್ ಶಾಸಕರು ಗೆದ್ದರೆ, ಇಲ್ಲಿ ತೊಂದರೆ ಯಾರಿಗೆ ಎಂದು ನಿಮಗೆ ಅರ್ಥವಾಗಬೇಕು. ನಮಗೆ ನಾವೇ ಯಾಕೆ ಹಾನಿ ಮಾಡಿಕೊಳ್ಳಬೇಕು? ಮತದಾನದಲ್ಲಿ ಅಕ್ರಮ ಮಾಡುವ ಮೂಲಕ ನಾವು ನಮ್ಮ ಖ್ಯಾತಿಯನ್ನು ಏಕೆ ಹಾಳು ಮಾಡಿಕೊಳ್ಳಬೇಕು? ಕೆಲಸ ಮಾಡಿಸಲು ನಮ್ಮ ಮುಖ್ಯಮಂತ್ರಿ ಬಳಿ ಹೋಗಬೇಕಲ್ಲವೇ? ನಮ್ಮ ಕೆಲಸಕ್ಕಾಗಿ ನಾವು ನಮ್ಮ ಗೌರವಾನ್ವಿತ ಕೃಷಿ ಸಚಿವರನ್ನು ಸಂಪರ್ಕಿಸಬೇಕಲ್ಲವೇ?” ಎಂದು ಕಾರ್ತಿಕೇಯ ಕೇಳಿದ್ದಾರೆ.

ಸರಪಂಚರನ್ನು ಉದ್ದೇಶಿಸಿ ಮಾತನಾಡಿದ ಅವರು, “ಹೇಳಿ, ಸರಪಂಚ್ ಅವರೆ. ನೀವು ಹೇಗೆ ಕೆಲಸ ಮಾಡಿಕೊಳ್ಳುತ್ತಿರಿ? ಒಂದು ವೇಳೆ ನಾವು ಸೋತರೆ, ಕೆಲಸಗಳನ್ನು ಮಾಡಲು ನೀವು ನಮ್ಮ ನಾಯಕರ ಬಳಿ ಹೇಗೆ ಹೋಗುತ್ತೀರಿ? ಅದಕ್ಕಾಗಿ ನೀವು ಯಾವ ದಾರಿ ಆಯ್ಕೆ ಮಾಡುತ್ತೀರಿ? ತಪ್ಪಿಯಾದರೂ ಕಾಂಗ್ರೆಸ್ ಶಾಸಕ ಗೆದ್ದರೆ ಈ ಹಳ್ಳಿಯಲ್ಲಿ ಒಂದು ಇಟ್ಟಿಗೆ ಕೂಡಾ ಇಡುವುದಿಲ್ಲ, ಇದನ್ನು ನೀವು ಅರ್ಥಮಾಡಿಕೊಳ್ಳಬೇಕು.” ಎಂದು ಹೇಳಿದ್ದಾರೆ.

ಅವರು ವಿವಾದಿತ ವೀಡಿಯೊ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ದಿಗ್ವಿಜಯ ಅವರು, “ರಾಜಕೀಯದ ಬಗ್ಗೆ ತಮ್ಮ ತಂದೆಯಿಂದ ಕಲಿಯಿರಿ” ಎಂದು ಕಾರ್ತಿಕೇ ಅವರಿಗೆ ಸಲಹೆ ನೀಡಿದ್ದಾರೆ. ಕಾಂಗ್ರೆಸ್ ಗೆದ್ದರೆ

“ಪ್ರಜಾಪ್ರಭುತ್ವದಲ್ಲಿ, ಸರ್ಕಾರ ಮತ್ತು ವಿರೋಧ ಪಕ್ಷಗಳೆರಡೂ ರಾಷ್ಟ್ರ ಕಟ್ಟಲು ಒಟ್ಟಾಗಿ ಕೆಲಸ ಮಾಡುತ್ತವೆ. ನಾನು 10 ವರ್ಷ ಮುಖ್ಯಮಂತ್ರಿಯಾಗಿದ್ದೆ, ಆದರೆ ಈ ರೀತಿಯ ಭಾಷೆ ಬಳಸಿಲ್ಲ. ಇದಕ್ಕೆ ನಿಮ್ಮ ತಂದೆಯೇ ಸಾಕ್ಷಿ… ನೀವು ನನಗೆ ಮೊಮ್ಮಗ ಇದ್ದಂತೆ. ಇದು ನನ್ನ ಅಭಿಪ್ರಾಯವಾಗಿದ್ದು, ಒಪ್ಪಿಕೊಳ್ಳುವುದು ಅಥವಾ ಬಿಡುವುದು ನಿಮಗೆ ಬಿಟ್ಟದ್ದು” ಎಂದು ದಿಗ್ವಿಜಯ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಠಾಣೆಯ ಎಲ್ಲ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಡ್ಡಾಯ; ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...