Homeಕರ್ನಾಟಕಪ್ರಜಾಪ್ರಭುತ್ವ ನಾಶವಾದರೆ ಮೊದಲ ದಾಳಿ ದಲಿತ, ಕಾರ್ಮಿಕ, ಬಡವರ ಮೇಲೆ ನಡೆಯುತ್ತದೆ– ಸಿಪಿಐ(ಎಂ) ನಾಯಕ ಬಿ.ವಿ....

ಪ್ರಜಾಪ್ರಭುತ್ವ ನಾಶವಾದರೆ ಮೊದಲ ದಾಳಿ ದಲಿತ, ಕಾರ್ಮಿಕ, ಬಡವರ ಮೇಲೆ ನಡೆಯುತ್ತದೆ– ಸಿಪಿಐ(ಎಂ) ನಾಯಕ ಬಿ.ವಿ. ರಾಘವಲು

- Advertisement -
- Advertisement -

ಪ್ರಜಾಪ್ರಭುತ್ವ ನಾಶವಾದರೆ ಮೊದಲ ದಾಳಿ ನಡೆಯುವುದು ಬಡವರು, ದಲಿತರು ಮತ್ತು ಕಾರ್ಮಿಕರ ಮೇಲೆಯಾಗಿದೆ ಎಂದು ಸಿಪಿಐ(ಎಂ) ಪೊಲೀಟ್‌ ಬ್ಯೋರೋ ಸದಸ್ಯ ಬಿ.ವಿ ರಾಘವಲು ಸೋಮವಾರ ತಿಳಿಸಿದ್ದಾರೆ. ಸಿಪಿಐ(ಎಂ) 24 ನೇ ರಾಜ್ಯ ಸಮ್ಮಳೇನದ ಪ್ರತಿನಿಧಿ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಂಸತ್ತಿನಲ್ಲಿ ಸಂವಿಧಾನದ 75 ವರ್ಷದ ಸಂದರ್ಭದಲ್ಲಿ ವಿಶೇಷ ಚರ್ಚೆ ನಡೆಯುತ್ತಿದೆ. ಸಂವಿಧಾನದ ಮಹತ್ವವನ್ನು ಅರಿಯದ ಕಾಂಗ್ರೆಸ್‌ ಮತ್ತು ಬಿಜೆಪಿ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದನ್ನು ದೇಶದ ಜನ ಗಮನಿಸಿದ್ದಾರೆ. ಸಂವಿಧಾನವನ್ನು ಅರ್ಥ ಮಾಡಿಕೊಂಡು, ಮೂಲಭೂತ ತತ್ವಗಳನ್ನು ಅರಿಯಬೇಕಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಾ. ಬಿ.ಆರ್.‌ ಅಂಬೇಡ್ಕರ್‌ ಮತ್ತು ಸಂವಿಧಾನದ ನಿರ್ಮಾತ್ರುಗಳು ಪ್ರತಿಪಾದಿಸಿದ ಆಧಾರದಲ್ಲಿ 5 ಮೂಲಭೂತ ತತ್ವಗಳನ್ನು ಸಂವಿಧಾನವು ನಿರೂಪಿಸಿದೆ. ಪ್ರಜಾಪ್ರಭುತ್ವ, ಜಾತ್ಯಾತೀತತೆ, ಸಾಮಾಜಿಕ ನ್ಯಾಯ, ಒಕ್ಕೂಟ ತತ್ವ ಮತ್ತು ಸಮಾಜವಾದ ಇವುಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ದಾಳಿಯನ್ನು ನಾವು ತಡೆಗಟ್ಟಬೇಕಿದೆ ಎಂದು ಅವರು ಹೇಳಿದ್ದಾರೆ.

“ಪ್ರಜಾಪ್ರಭುತ್ವ ನಾಶವಾದರೆ ಅದರ ಮೊದಲ ದಾಳಿ ಬಡವರು, ದುರ್ಬಲರು, ಕಾರ್ಮಿಕರು, ದಲಿತರ ಮೇಲೆ ನಡೆಯುತ್ತದೆ. ಉದಾಹರಣೆಗೆ ಕಾರ್ಮಿಕ ಸಂಹಿತೆಗಳನ್ನು ಬಿಜೆಪಿ ತಂದಿದೆ. ಈ ಹಿಂದೆ ಕಾಂಗ್ರೆಸ್‌ ಕೂಡಾ ಜಾರಿಗೆ ಪ್ರಯತ್ನಿಸಿತ್ತು. ಈ ನೀತಿಗಳು ಸಂಘ ಕಟ್ಟುವ ಹಕ್ಕು, ಕೆಲಸದ ಅವಧಿ, ಗುತ್ತಿಗೆ ಪದ್ದತಿ, ಬೇಕೆಂದಾಗ ಕೆಲಸಕ್ಕೆ ತೆಗೆದುಕೊಳ್ಳುವುದು, ತೆಗೆದು ಹಾಕುವುದನ್ನು ಬೆಂಬಲಿಸುತ್ತದೆ. ಇಂತಹ ಕಾರ್ಮಿಕ ವಿರೋಧಿ ನೀತಿಗಳನ್ನು ಸಂಹಿತೆಗಳು ಹೇಳುತ್ತಿವೆ. ಇದ್ದಕ್ಕೆ ನಿಯಮಗಳನ್ನು ರೂಪಿಸಲು ಮುಂದಾಗಿದೆ. ಇವೆಲ್ಲವೂ ಪ್ರಜಾಪ್ರಬುತ್ಬದ ಮೌಲ್ಯಗಳಾಗಿವೆ, ಇವೆಲ್ಲ ನಾಶವಾದರೆ ಪ್ರಜಾಪ್ರಭುತ್ವದಕ್ಕೆ ದಕ್ಕೆಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಒಂದು ದೇಶ ಒಂದು ಚುನಾವಣೆ ಪ್ರಜಾಪ್ರಭುತ್ವ ನಾಶಮಾಡಿ ಫ್ಯಾಸಿಸಂ ಜಾರಿ ಮಾಡುವ ಹುನ್ನಾರವಾಗಿದೆ. ಇದು ಏಕ ವ್ಯಕ್ತಿಯ ಆಡಳಿತ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡಲಿದೆ. ಆರ್‌ಎಸ್‌ಎಸ್‌ ಫ್ಯಾಸಿಸಂನ್ನು ಬೆಂಬಲಿಸುತ್ತಿರುವ ಕಾರಣ ಈ ದಾಳಿ ನಡೆಸುತ್ತಿದೆ. ಇಂತಹ ದಾಳಿಗಳ ವಿರುದ್ದ ಹೋರಾಟಗಳನ್ನು ಸಂಘಟಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ಜಾತ್ಯಾತೀತಯನ್ನು ನಾಶ ಮಾಡುವುದಕ್ಕಾಗಿ ಬಿಜೆಪಿ ಮತೀಯ ಕೋಮುಗಲಭೆಗಳನ್ನು ಹೆಚ್ಚಿಸುತ್ತಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್‌ 1991ರ ಪೂಜಾ ಸಂರಕ್ಷಣಾ ಕಾಯ್ದೆಯು ದೇಶದಲ್ಲಿರುವ ಎಲ್ಲಾ ಪೂಜಾ ಸ್ಥಳಗಳನ್ನು 1947ರ ಆಗಸ್ಟ್‌ 15ರ ಸ್ಥಿತಿಯಲ್ಲಿ ಕಾಪಾಡಬೇಕೆಂದುನ್ನು ಎತ್ತಿ ಹಿಡಿದಿದೆ. ಆರ್‌ಎಸ್‌ಎಸ್‌ ಚಾರಿತ್ರಿಕ ತಪ್ಪುಗಳನ್ನು ಸರಿಪಡಿಸುವ ನೆಪದಲ್ಲಿ ಮಸೀದಿಗಳ ಕೆಳಗ ದೇವಸ್ಥಾನ ಇದೆ ಎಂದು ಗುಲ್ಲೆಬ್ಬಿಸಿ ಪೂಜಾಕಾಯ್ದೆಯನ್ನು ಉಲ್ಲಂಘಿಸುತ್ತದೆ. ಇದೇ ವಾದವನ್ನು ದಲಿತ ವಿಭಾಗಗಳು ಪ್ರತಿಪಾದಿಸಿದರೆ 3 ಸಾವಿರ ವರ್ಷಗಳಿಂದ ಅಸ್ಪೃಶ್ಯತೆ, ಜಾತಿ ತಾರತಮ್ಯವನ್ನು ಅನುಸರಿಸಿರುವ ಜಾತಿಗಳ ವಿರುದ್ಧ ಅಂತಹದ್ದೇ ದೌರ್ಜನ್ಯಗಳನ್ನು ನಡೆಸುವಂತಾಗಬಹುದು” ಎಂದು ಅವರು ಹೇಳಿದ್ದಾರೆ.

ಆದ್ದರಿಂದ ಚಾರಿತ್ರಿಕ ತಪ್ಪುಗಳನ್ನು ಸರಿಪಡಿಸುವ ಬದಲಿಗೆ ಅದರಿಂದ ಪಾಠಗಳನ್ನು ಕಲಿತು ಸಮಾನತೆಯ ಆಧಾರದಲ್ಲಿ ಜಾತ್ಯಾತೀತ ತತ್ವವನ್ನು ಅಳವಡಿಸಿಕೊಳ್ಳುವುದನ್ನು ಸಂವಿಧಾನ ಪ್ರತಿಪಾದಿಸುತ್ತದೆ. ಇದಕ್ಕಾಗಿ ನಾವು ಹೋರಾಟ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...