Homeಕರ್ನಾಟಕಪ್ರಜಾಪ್ರಭುತ್ವ ನಾಶವಾದರೆ ಮೊದಲ ದಾಳಿ ದಲಿತ, ಕಾರ್ಮಿಕ, ಬಡವರ ಮೇಲೆ ನಡೆಯುತ್ತದೆ– ಸಿಪಿಐ(ಎಂ) ನಾಯಕ ಬಿ.ವಿ....

ಪ್ರಜಾಪ್ರಭುತ್ವ ನಾಶವಾದರೆ ಮೊದಲ ದಾಳಿ ದಲಿತ, ಕಾರ್ಮಿಕ, ಬಡವರ ಮೇಲೆ ನಡೆಯುತ್ತದೆ– ಸಿಪಿಐ(ಎಂ) ನಾಯಕ ಬಿ.ವಿ. ರಾಘವಲು

- Advertisement -
- Advertisement -

ಪ್ರಜಾಪ್ರಭುತ್ವ ನಾಶವಾದರೆ ಮೊದಲ ದಾಳಿ ನಡೆಯುವುದು ಬಡವರು, ದಲಿತರು ಮತ್ತು ಕಾರ್ಮಿಕರ ಮೇಲೆಯಾಗಿದೆ ಎಂದು ಸಿಪಿಐ(ಎಂ) ಪೊಲೀಟ್‌ ಬ್ಯೋರೋ ಸದಸ್ಯ ಬಿ.ವಿ ರಾಘವಲು ಸೋಮವಾರ ತಿಳಿಸಿದ್ದಾರೆ. ಸಿಪಿಐ(ಎಂ) 24 ನೇ ರಾಜ್ಯ ಸಮ್ಮಳೇನದ ಪ್ರತಿನಿಧಿ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಂಸತ್ತಿನಲ್ಲಿ ಸಂವಿಧಾನದ 75 ವರ್ಷದ ಸಂದರ್ಭದಲ್ಲಿ ವಿಶೇಷ ಚರ್ಚೆ ನಡೆಯುತ್ತಿದೆ. ಸಂವಿಧಾನದ ಮಹತ್ವವನ್ನು ಅರಿಯದ ಕಾಂಗ್ರೆಸ್‌ ಮತ್ತು ಬಿಜೆಪಿ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದನ್ನು ದೇಶದ ಜನ ಗಮನಿಸಿದ್ದಾರೆ. ಸಂವಿಧಾನವನ್ನು ಅರ್ಥ ಮಾಡಿಕೊಂಡು, ಮೂಲಭೂತ ತತ್ವಗಳನ್ನು ಅರಿಯಬೇಕಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಾ. ಬಿ.ಆರ್.‌ ಅಂಬೇಡ್ಕರ್‌ ಮತ್ತು ಸಂವಿಧಾನದ ನಿರ್ಮಾತ್ರುಗಳು ಪ್ರತಿಪಾದಿಸಿದ ಆಧಾರದಲ್ಲಿ 5 ಮೂಲಭೂತ ತತ್ವಗಳನ್ನು ಸಂವಿಧಾನವು ನಿರೂಪಿಸಿದೆ. ಪ್ರಜಾಪ್ರಭುತ್ವ, ಜಾತ್ಯಾತೀತತೆ, ಸಾಮಾಜಿಕ ನ್ಯಾಯ, ಒಕ್ಕೂಟ ತತ್ವ ಮತ್ತು ಸಮಾಜವಾದ ಇವುಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ದಾಳಿಯನ್ನು ನಾವು ತಡೆಗಟ್ಟಬೇಕಿದೆ ಎಂದು ಅವರು ಹೇಳಿದ್ದಾರೆ.

“ಪ್ರಜಾಪ್ರಭುತ್ವ ನಾಶವಾದರೆ ಅದರ ಮೊದಲ ದಾಳಿ ಬಡವರು, ದುರ್ಬಲರು, ಕಾರ್ಮಿಕರು, ದಲಿತರ ಮೇಲೆ ನಡೆಯುತ್ತದೆ. ಉದಾಹರಣೆಗೆ ಕಾರ್ಮಿಕ ಸಂಹಿತೆಗಳನ್ನು ಬಿಜೆಪಿ ತಂದಿದೆ. ಈ ಹಿಂದೆ ಕಾಂಗ್ರೆಸ್‌ ಕೂಡಾ ಜಾರಿಗೆ ಪ್ರಯತ್ನಿಸಿತ್ತು. ಈ ನೀತಿಗಳು ಸಂಘ ಕಟ್ಟುವ ಹಕ್ಕು, ಕೆಲಸದ ಅವಧಿ, ಗುತ್ತಿಗೆ ಪದ್ದತಿ, ಬೇಕೆಂದಾಗ ಕೆಲಸಕ್ಕೆ ತೆಗೆದುಕೊಳ್ಳುವುದು, ತೆಗೆದು ಹಾಕುವುದನ್ನು ಬೆಂಬಲಿಸುತ್ತದೆ. ಇಂತಹ ಕಾರ್ಮಿಕ ವಿರೋಧಿ ನೀತಿಗಳನ್ನು ಸಂಹಿತೆಗಳು ಹೇಳುತ್ತಿವೆ. ಇದ್ದಕ್ಕೆ ನಿಯಮಗಳನ್ನು ರೂಪಿಸಲು ಮುಂದಾಗಿದೆ. ಇವೆಲ್ಲವೂ ಪ್ರಜಾಪ್ರಬುತ್ಬದ ಮೌಲ್ಯಗಳಾಗಿವೆ, ಇವೆಲ್ಲ ನಾಶವಾದರೆ ಪ್ರಜಾಪ್ರಭುತ್ವದಕ್ಕೆ ದಕ್ಕೆಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಒಂದು ದೇಶ ಒಂದು ಚುನಾವಣೆ ಪ್ರಜಾಪ್ರಭುತ್ವ ನಾಶಮಾಡಿ ಫ್ಯಾಸಿಸಂ ಜಾರಿ ಮಾಡುವ ಹುನ್ನಾರವಾಗಿದೆ. ಇದು ಏಕ ವ್ಯಕ್ತಿಯ ಆಡಳಿತ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡಲಿದೆ. ಆರ್‌ಎಸ್‌ಎಸ್‌ ಫ್ಯಾಸಿಸಂನ್ನು ಬೆಂಬಲಿಸುತ್ತಿರುವ ಕಾರಣ ಈ ದಾಳಿ ನಡೆಸುತ್ತಿದೆ. ಇಂತಹ ದಾಳಿಗಳ ವಿರುದ್ದ ಹೋರಾಟಗಳನ್ನು ಸಂಘಟಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ಜಾತ್ಯಾತೀತಯನ್ನು ನಾಶ ಮಾಡುವುದಕ್ಕಾಗಿ ಬಿಜೆಪಿ ಮತೀಯ ಕೋಮುಗಲಭೆಗಳನ್ನು ಹೆಚ್ಚಿಸುತ್ತಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್‌ 1991ರ ಪೂಜಾ ಸಂರಕ್ಷಣಾ ಕಾಯ್ದೆಯು ದೇಶದಲ್ಲಿರುವ ಎಲ್ಲಾ ಪೂಜಾ ಸ್ಥಳಗಳನ್ನು 1947ರ ಆಗಸ್ಟ್‌ 15ರ ಸ್ಥಿತಿಯಲ್ಲಿ ಕಾಪಾಡಬೇಕೆಂದುನ್ನು ಎತ್ತಿ ಹಿಡಿದಿದೆ. ಆರ್‌ಎಸ್‌ಎಸ್‌ ಚಾರಿತ್ರಿಕ ತಪ್ಪುಗಳನ್ನು ಸರಿಪಡಿಸುವ ನೆಪದಲ್ಲಿ ಮಸೀದಿಗಳ ಕೆಳಗ ದೇವಸ್ಥಾನ ಇದೆ ಎಂದು ಗುಲ್ಲೆಬ್ಬಿಸಿ ಪೂಜಾಕಾಯ್ದೆಯನ್ನು ಉಲ್ಲಂಘಿಸುತ್ತದೆ. ಇದೇ ವಾದವನ್ನು ದಲಿತ ವಿಭಾಗಗಳು ಪ್ರತಿಪಾದಿಸಿದರೆ 3 ಸಾವಿರ ವರ್ಷಗಳಿಂದ ಅಸ್ಪೃಶ್ಯತೆ, ಜಾತಿ ತಾರತಮ್ಯವನ್ನು ಅನುಸರಿಸಿರುವ ಜಾತಿಗಳ ವಿರುದ್ಧ ಅಂತಹದ್ದೇ ದೌರ್ಜನ್ಯಗಳನ್ನು ನಡೆಸುವಂತಾಗಬಹುದು” ಎಂದು ಅವರು ಹೇಳಿದ್ದಾರೆ.

ಆದ್ದರಿಂದ ಚಾರಿತ್ರಿಕ ತಪ್ಪುಗಳನ್ನು ಸರಿಪಡಿಸುವ ಬದಲಿಗೆ ಅದರಿಂದ ಪಾಠಗಳನ್ನು ಕಲಿತು ಸಮಾನತೆಯ ಆಧಾರದಲ್ಲಿ ಜಾತ್ಯಾತೀತ ತತ್ವವನ್ನು ಅಳವಡಿಸಿಕೊಳ್ಳುವುದನ್ನು ಸಂವಿಧಾನ ಪ್ರತಿಪಾದಿಸುತ್ತದೆ. ಇದಕ್ಕಾಗಿ ನಾವು ಹೋರಾಟ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...