Homeಕರ್ನಾಟಕಪ್ರಜಾಪ್ರಭುತ್ವ ನಾಶವಾದರೆ ಮೊದಲ ದಾಳಿ ದಲಿತ, ಕಾರ್ಮಿಕ, ಬಡವರ ಮೇಲೆ ನಡೆಯುತ್ತದೆ– ಸಿಪಿಐ(ಎಂ) ನಾಯಕ ಬಿ.ವಿ....

ಪ್ರಜಾಪ್ರಭುತ್ವ ನಾಶವಾದರೆ ಮೊದಲ ದಾಳಿ ದಲಿತ, ಕಾರ್ಮಿಕ, ಬಡವರ ಮೇಲೆ ನಡೆಯುತ್ತದೆ– ಸಿಪಿಐ(ಎಂ) ನಾಯಕ ಬಿ.ವಿ. ರಾಘವಲು

- Advertisement -
- Advertisement -

ಪ್ರಜಾಪ್ರಭುತ್ವ ನಾಶವಾದರೆ ಮೊದಲ ದಾಳಿ ನಡೆಯುವುದು ಬಡವರು, ದಲಿತರು ಮತ್ತು ಕಾರ್ಮಿಕರ ಮೇಲೆಯಾಗಿದೆ ಎಂದು ಸಿಪಿಐ(ಎಂ) ಪೊಲೀಟ್‌ ಬ್ಯೋರೋ ಸದಸ್ಯ ಬಿ.ವಿ ರಾಘವಲು ಸೋಮವಾರ ತಿಳಿಸಿದ್ದಾರೆ. ಸಿಪಿಐ(ಎಂ) 24 ನೇ ರಾಜ್ಯ ಸಮ್ಮಳೇನದ ಪ್ರತಿನಿಧಿ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಂಸತ್ತಿನಲ್ಲಿ ಸಂವಿಧಾನದ 75 ವರ್ಷದ ಸಂದರ್ಭದಲ್ಲಿ ವಿಶೇಷ ಚರ್ಚೆ ನಡೆಯುತ್ತಿದೆ. ಸಂವಿಧಾನದ ಮಹತ್ವವನ್ನು ಅರಿಯದ ಕಾಂಗ್ರೆಸ್‌ ಮತ್ತು ಬಿಜೆಪಿ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದನ್ನು ದೇಶದ ಜನ ಗಮನಿಸಿದ್ದಾರೆ. ಸಂವಿಧಾನವನ್ನು ಅರ್ಥ ಮಾಡಿಕೊಂಡು, ಮೂಲಭೂತ ತತ್ವಗಳನ್ನು ಅರಿಯಬೇಕಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಾ. ಬಿ.ಆರ್.‌ ಅಂಬೇಡ್ಕರ್‌ ಮತ್ತು ಸಂವಿಧಾನದ ನಿರ್ಮಾತ್ರುಗಳು ಪ್ರತಿಪಾದಿಸಿದ ಆಧಾರದಲ್ಲಿ 5 ಮೂಲಭೂತ ತತ್ವಗಳನ್ನು ಸಂವಿಧಾನವು ನಿರೂಪಿಸಿದೆ. ಪ್ರಜಾಪ್ರಭುತ್ವ, ಜಾತ್ಯಾತೀತತೆ, ಸಾಮಾಜಿಕ ನ್ಯಾಯ, ಒಕ್ಕೂಟ ತತ್ವ ಮತ್ತು ಸಮಾಜವಾದ ಇವುಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ದಾಳಿಯನ್ನು ನಾವು ತಡೆಗಟ್ಟಬೇಕಿದೆ ಎಂದು ಅವರು ಹೇಳಿದ್ದಾರೆ.

“ಪ್ರಜಾಪ್ರಭುತ್ವ ನಾಶವಾದರೆ ಅದರ ಮೊದಲ ದಾಳಿ ಬಡವರು, ದುರ್ಬಲರು, ಕಾರ್ಮಿಕರು, ದಲಿತರ ಮೇಲೆ ನಡೆಯುತ್ತದೆ. ಉದಾಹರಣೆಗೆ ಕಾರ್ಮಿಕ ಸಂಹಿತೆಗಳನ್ನು ಬಿಜೆಪಿ ತಂದಿದೆ. ಈ ಹಿಂದೆ ಕಾಂಗ್ರೆಸ್‌ ಕೂಡಾ ಜಾರಿಗೆ ಪ್ರಯತ್ನಿಸಿತ್ತು. ಈ ನೀತಿಗಳು ಸಂಘ ಕಟ್ಟುವ ಹಕ್ಕು, ಕೆಲಸದ ಅವಧಿ, ಗುತ್ತಿಗೆ ಪದ್ದತಿ, ಬೇಕೆಂದಾಗ ಕೆಲಸಕ್ಕೆ ತೆಗೆದುಕೊಳ್ಳುವುದು, ತೆಗೆದು ಹಾಕುವುದನ್ನು ಬೆಂಬಲಿಸುತ್ತದೆ. ಇಂತಹ ಕಾರ್ಮಿಕ ವಿರೋಧಿ ನೀತಿಗಳನ್ನು ಸಂಹಿತೆಗಳು ಹೇಳುತ್ತಿವೆ. ಇದ್ದಕ್ಕೆ ನಿಯಮಗಳನ್ನು ರೂಪಿಸಲು ಮುಂದಾಗಿದೆ. ಇವೆಲ್ಲವೂ ಪ್ರಜಾಪ್ರಬುತ್ಬದ ಮೌಲ್ಯಗಳಾಗಿವೆ, ಇವೆಲ್ಲ ನಾಶವಾದರೆ ಪ್ರಜಾಪ್ರಭುತ್ವದಕ್ಕೆ ದಕ್ಕೆಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಒಂದು ದೇಶ ಒಂದು ಚುನಾವಣೆ ಪ್ರಜಾಪ್ರಭುತ್ವ ನಾಶಮಾಡಿ ಫ್ಯಾಸಿಸಂ ಜಾರಿ ಮಾಡುವ ಹುನ್ನಾರವಾಗಿದೆ. ಇದು ಏಕ ವ್ಯಕ್ತಿಯ ಆಡಳಿತ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡಲಿದೆ. ಆರ್‌ಎಸ್‌ಎಸ್‌ ಫ್ಯಾಸಿಸಂನ್ನು ಬೆಂಬಲಿಸುತ್ತಿರುವ ಕಾರಣ ಈ ದಾಳಿ ನಡೆಸುತ್ತಿದೆ. ಇಂತಹ ದಾಳಿಗಳ ವಿರುದ್ದ ಹೋರಾಟಗಳನ್ನು ಸಂಘಟಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ಜಾತ್ಯಾತೀತಯನ್ನು ನಾಶ ಮಾಡುವುದಕ್ಕಾಗಿ ಬಿಜೆಪಿ ಮತೀಯ ಕೋಮುಗಲಭೆಗಳನ್ನು ಹೆಚ್ಚಿಸುತ್ತಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್‌ 1991ರ ಪೂಜಾ ಸಂರಕ್ಷಣಾ ಕಾಯ್ದೆಯು ದೇಶದಲ್ಲಿರುವ ಎಲ್ಲಾ ಪೂಜಾ ಸ್ಥಳಗಳನ್ನು 1947ರ ಆಗಸ್ಟ್‌ 15ರ ಸ್ಥಿತಿಯಲ್ಲಿ ಕಾಪಾಡಬೇಕೆಂದುನ್ನು ಎತ್ತಿ ಹಿಡಿದಿದೆ. ಆರ್‌ಎಸ್‌ಎಸ್‌ ಚಾರಿತ್ರಿಕ ತಪ್ಪುಗಳನ್ನು ಸರಿಪಡಿಸುವ ನೆಪದಲ್ಲಿ ಮಸೀದಿಗಳ ಕೆಳಗ ದೇವಸ್ಥಾನ ಇದೆ ಎಂದು ಗುಲ್ಲೆಬ್ಬಿಸಿ ಪೂಜಾಕಾಯ್ದೆಯನ್ನು ಉಲ್ಲಂಘಿಸುತ್ತದೆ. ಇದೇ ವಾದವನ್ನು ದಲಿತ ವಿಭಾಗಗಳು ಪ್ರತಿಪಾದಿಸಿದರೆ 3 ಸಾವಿರ ವರ್ಷಗಳಿಂದ ಅಸ್ಪೃಶ್ಯತೆ, ಜಾತಿ ತಾರತಮ್ಯವನ್ನು ಅನುಸರಿಸಿರುವ ಜಾತಿಗಳ ವಿರುದ್ಧ ಅಂತಹದ್ದೇ ದೌರ್ಜನ್ಯಗಳನ್ನು ನಡೆಸುವಂತಾಗಬಹುದು” ಎಂದು ಅವರು ಹೇಳಿದ್ದಾರೆ.

ಆದ್ದರಿಂದ ಚಾರಿತ್ರಿಕ ತಪ್ಪುಗಳನ್ನು ಸರಿಪಡಿಸುವ ಬದಲಿಗೆ ಅದರಿಂದ ಪಾಠಗಳನ್ನು ಕಲಿತು ಸಮಾನತೆಯ ಆಧಾರದಲ್ಲಿ ಜಾತ್ಯಾತೀತ ತತ್ವವನ್ನು ಅಳವಡಿಸಿಕೊಳ್ಳುವುದನ್ನು ಸಂವಿಧಾನ ಪ್ರತಿಪಾದಿಸುತ್ತದೆ. ಇದಕ್ಕಾಗಿ ನಾವು ಹೋರಾಟ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...