Homeಕರ್ನಾಟಕಹಾಸನ ಚಲೋ| ದೇವೇಗೌಡರೆ ನೈತಿಕತೆ ಇದ್ರೆ ರಾಜಕೀಯ ನಿವೃತ್ತಿ ಘೋಷಿಸಿ..: ಸಿದ್ದನಗೌಡ ಪಾಟೀಲ್

ಹಾಸನ ಚಲೋ| ದೇವೇಗೌಡರೆ ನೈತಿಕತೆ ಇದ್ರೆ ರಾಜಕೀಯ ನಿವೃತ್ತಿ ಘೋಷಿಸಿ..: ಸಿದ್ದನಗೌಡ ಪಾಟೀಲ್

- Advertisement -
- Advertisement -

‘ದೇವೇಗೌಡರೆ ನಿಮಗೆ ನೈತಿಕತೆ ಇದ್ರೆ ಈ ಪ್ರಕರಣದ ಹೊಣೆ ಹೊತ್ತು ರಾಜಕೀಯ ನಿವೃತ್ತಿ ಘೋಷಿಸಿ, ಈ ನಾಡಿದ ಹೆಮ್ಮೆಯ ಪ್ರಧಾನಿ ಅನ್ನೋ ಹೆಸರನ್ನು ಪಡೆದಿದ್ದಿರಲ್ಲ ಅದನ್ನ ಉಳಿಸಿಕೊಳ್ಳಿ’ ಎಂದು ಹಿರಿಯ ಹೋರಾಟಗಾರ ಸಿದ್ದನಗೌಡ ಪಾಟೀಲ್ ಸವಾಲು ಹಾಕಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ನಾವಿಲ್ಲಿ ಸೇರಿರುವುದು ಹೆಮ್ಮೆಯ ಸಂಗತಿಯಲ್ಲವಾದರೂ ಇಂತಹ ಪರಿಸ್ಥಿತಿಯನ್ನು ಈ ಜಿಲ್ಲೆಯ ರಾಜಕೀಯ ಪರಿಸ್ಥಿತಿ ತಂದುಕೊಟ್ಟಿದೆ. ಜಾತಿಯ ಬಲದಿದಂದ, ಹಣದ ಬಲದಿಂದ ತಾನು ಇರುವ ಪ್ರದೇಶದಲ್ಲಿ ಅಲ್ಲಿನ ಪರಿಸ್ಥಿತಿಯನ್ನು ನಿಯಂತ್ರಿಸುವ ಪರಿಸ್ಥಿತಿ ಇಂದುನೆನ್ನೆಯದಲ್ಲ. ಹಾಸನದಲ್ಲಿ ನಡೆದಿರುವ ಈ ದೌರ್ಜನ್ಯವನ್ನು ಸರ್ಕಾರದ ಹೆಗಲಿಗೆ ಬಿಡದೆ, ಈ ರಾಜ್ಯದ ಜನಪರ ಚಳುವಳಿಗಳು ಜವಾಬ್ದಾರಿವಹಿಸಿ ಮಾಡುತ್ತಿರುವ ಹೋರಾಟ, ಈ ರಾಜ್ಯದಲ್ಲಿ ಯಾವುದೇ ಪ್ರಭಾವಿ ವ್ಯಕ್ತಿ ದೌರ್ಜನ್ಯ ಎಸಗಿದರೆ ನಾವು ಸುಮ್ಮನಿರುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡುತ್ತಿದ್ದೇವೆ” ಎಂದರು.

“ಕ್ರಿಮಿಲ್‌ಗಳು, ಅತ್ಯಾಚಾರಿಗಳು, ಭ್ರಷ್ಟಾಚಾರಿಗಳು ಈ ದೇಶದಲ್ಲಿ ರಾಜಕಾರಣಿಗಳು ಆಗ್ತಾ ಇರುವ ಸಂದರ್ಭದಲ್ಲಿ, ಜನಪರ ಸಂಘಟನೆಗಳು ವಾಚ್‌ಡಾಗ್ ರೀತಿ ಕೆಲಸ ಮಾಡಬೇಕಿದೆ” ಎಂದರು.

“ಹಾಸನದಲ್ಲಿ ಹಲವು ದಶಕಗಳ ಹಿಂದೆ ನಡೆದ ನುಗ್ಗೆಹಳ್ಳಿ ನೀರಿನ ಹೋರಾಟದ ಸಂದರ್ಭದಲ್ಲಿ ಅಲ್ಲಿನ ಹಳ್ಳಿಯ ಮಹಿಳೆಯರ ಮೇಲೂ ಪೊಲೀಸರು ದೌರ್ಜನ್ಯ ಎಸಗಿಸುವಂತಹ, ಜೈಲಿಗಟ್ಟುವ ಕೆಲಸ ಮಾಡಿದ್ದ ದೇವೇಗೌಡರಿಗೆ ಇಲ್ಲಿನ ಜನ ಅಂದೇ ಸರಿಯಾದ ಪಾಠ ಕಲಿಸಿದ್ದಿದ್ದರೆ, ಇಂದು ಈ ಸ್ಥಿತಿ ಬರುತ್ತಿರಲಿಲ್ಲ” ಎಂದು ಹೇಳಿದರು.

“ದೇವೇಗೌಡರು ಮೊಮ್ಮಗನಿಗೆ ಒಂದು ಎಚ್ಚರಿಕೆ ಪತ್ರ ಬರೆದಿದ್ದರು.., ಎಲ್ಲಿದ್ದರೂ ಬಂದು ಶರಣಾಗು ಅಂತ. ಆದ್ರೆ, ನಾನು ನಿಮಗೆ ನೇರವಾಗಿ ಒಂದು ಮಾತನ್ನು ಹೇಳ್ತೇನೆ, ನಿಮಗೆ ನೈತಿಕತೆ ಇದ್ರೆ ಈ ಪ್ರಕರಣದ ಹೊಣೆ ಹೊತ್ತು ರಾಜಕೀಯ ನಿವೃತ್ತಿ ಘೋಷಿಸಿ, ಈ ನಾಡಿದ ಹೆಮ್ಮೆಯ ಪ್ರಧಾನಿ ಅನ್ನೋ ಹೆಸರನ್ನು ಪಡೆದಿದ್ದಿರಲ್ಲ ಅದನ್ನ ಉಳಿಸಿಕೊಳ್ಳಿ. 4ರಂದು ಫಲಿತಾಂಶ ಬಂದ ನಂತರ ದೇವೇಗೌಡರ ಕುಟುಂಬದ ದನಿಗಳು ಎನಾಗುತ್ತವೋ ಗೊತ್ತಿಲ್ಲ. ಆದರೆ, ನಾವಂತೂ ನಿಮ್ಮ ಕೃತ್ಯವನ್ನು ಖಂಡಿಸದೆ, ತಕ್ಕ ಪಾಠವನ್ನು ಕಲಿಸುತ್ತೇವೆ ಎಂಬ ಎಚ್ಚರಿಕೆಯನ್ನು ಕೊಟ್ಟು ಹೋಗುತ್ತಿದ್ದೇವೆ. ಪ್ರಜ್ವಲನಂತಹ ಅತ್ಯಾಚಾರಿಗಳನ್ನು ಶಿಕ್ಷೆಗೆ ಗುರಿಪಡಿಸಲು ಒಗ್ಗಟ್ಟಿನ ಹೋರಾಟ ಮಾಡುತ್ತೇವೆ” ಎಂದರು.

ಇದನ್ನೂ ಓದಿ; ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...