Homeಕರ್ನಾಟಕಹಾಸನ ಚಲೋ| ದೇವೇಗೌಡರೆ ನೈತಿಕತೆ ಇದ್ರೆ ರಾಜಕೀಯ ನಿವೃತ್ತಿ ಘೋಷಿಸಿ..: ಸಿದ್ದನಗೌಡ ಪಾಟೀಲ್

ಹಾಸನ ಚಲೋ| ದೇವೇಗೌಡರೆ ನೈತಿಕತೆ ಇದ್ರೆ ರಾಜಕೀಯ ನಿವೃತ್ತಿ ಘೋಷಿಸಿ..: ಸಿದ್ದನಗೌಡ ಪಾಟೀಲ್

- Advertisement -
- Advertisement -

‘ದೇವೇಗೌಡರೆ ನಿಮಗೆ ನೈತಿಕತೆ ಇದ್ರೆ ಈ ಪ್ರಕರಣದ ಹೊಣೆ ಹೊತ್ತು ರಾಜಕೀಯ ನಿವೃತ್ತಿ ಘೋಷಿಸಿ, ಈ ನಾಡಿದ ಹೆಮ್ಮೆಯ ಪ್ರಧಾನಿ ಅನ್ನೋ ಹೆಸರನ್ನು ಪಡೆದಿದ್ದಿರಲ್ಲ ಅದನ್ನ ಉಳಿಸಿಕೊಳ್ಳಿ’ ಎಂದು ಹಿರಿಯ ಹೋರಾಟಗಾರ ಸಿದ್ದನಗೌಡ ಪಾಟೀಲ್ ಸವಾಲು ಹಾಕಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ನಾವಿಲ್ಲಿ ಸೇರಿರುವುದು ಹೆಮ್ಮೆಯ ಸಂಗತಿಯಲ್ಲವಾದರೂ ಇಂತಹ ಪರಿಸ್ಥಿತಿಯನ್ನು ಈ ಜಿಲ್ಲೆಯ ರಾಜಕೀಯ ಪರಿಸ್ಥಿತಿ ತಂದುಕೊಟ್ಟಿದೆ. ಜಾತಿಯ ಬಲದಿದಂದ, ಹಣದ ಬಲದಿಂದ ತಾನು ಇರುವ ಪ್ರದೇಶದಲ್ಲಿ ಅಲ್ಲಿನ ಪರಿಸ್ಥಿತಿಯನ್ನು ನಿಯಂತ್ರಿಸುವ ಪರಿಸ್ಥಿತಿ ಇಂದುನೆನ್ನೆಯದಲ್ಲ. ಹಾಸನದಲ್ಲಿ ನಡೆದಿರುವ ಈ ದೌರ್ಜನ್ಯವನ್ನು ಸರ್ಕಾರದ ಹೆಗಲಿಗೆ ಬಿಡದೆ, ಈ ರಾಜ್ಯದ ಜನಪರ ಚಳುವಳಿಗಳು ಜವಾಬ್ದಾರಿವಹಿಸಿ ಮಾಡುತ್ತಿರುವ ಹೋರಾಟ, ಈ ರಾಜ್ಯದಲ್ಲಿ ಯಾವುದೇ ಪ್ರಭಾವಿ ವ್ಯಕ್ತಿ ದೌರ್ಜನ್ಯ ಎಸಗಿದರೆ ನಾವು ಸುಮ್ಮನಿರುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡುತ್ತಿದ್ದೇವೆ” ಎಂದರು.

“ಕ್ರಿಮಿಲ್‌ಗಳು, ಅತ್ಯಾಚಾರಿಗಳು, ಭ್ರಷ್ಟಾಚಾರಿಗಳು ಈ ದೇಶದಲ್ಲಿ ರಾಜಕಾರಣಿಗಳು ಆಗ್ತಾ ಇರುವ ಸಂದರ್ಭದಲ್ಲಿ, ಜನಪರ ಸಂಘಟನೆಗಳು ವಾಚ್‌ಡಾಗ್ ರೀತಿ ಕೆಲಸ ಮಾಡಬೇಕಿದೆ” ಎಂದರು.

“ಹಾಸನದಲ್ಲಿ ಹಲವು ದಶಕಗಳ ಹಿಂದೆ ನಡೆದ ನುಗ್ಗೆಹಳ್ಳಿ ನೀರಿನ ಹೋರಾಟದ ಸಂದರ್ಭದಲ್ಲಿ ಅಲ್ಲಿನ ಹಳ್ಳಿಯ ಮಹಿಳೆಯರ ಮೇಲೂ ಪೊಲೀಸರು ದೌರ್ಜನ್ಯ ಎಸಗಿಸುವಂತಹ, ಜೈಲಿಗಟ್ಟುವ ಕೆಲಸ ಮಾಡಿದ್ದ ದೇವೇಗೌಡರಿಗೆ ಇಲ್ಲಿನ ಜನ ಅಂದೇ ಸರಿಯಾದ ಪಾಠ ಕಲಿಸಿದ್ದಿದ್ದರೆ, ಇಂದು ಈ ಸ್ಥಿತಿ ಬರುತ್ತಿರಲಿಲ್ಲ” ಎಂದು ಹೇಳಿದರು.

“ದೇವೇಗೌಡರು ಮೊಮ್ಮಗನಿಗೆ ಒಂದು ಎಚ್ಚರಿಕೆ ಪತ್ರ ಬರೆದಿದ್ದರು.., ಎಲ್ಲಿದ್ದರೂ ಬಂದು ಶರಣಾಗು ಅಂತ. ಆದ್ರೆ, ನಾನು ನಿಮಗೆ ನೇರವಾಗಿ ಒಂದು ಮಾತನ್ನು ಹೇಳ್ತೇನೆ, ನಿಮಗೆ ನೈತಿಕತೆ ಇದ್ರೆ ಈ ಪ್ರಕರಣದ ಹೊಣೆ ಹೊತ್ತು ರಾಜಕೀಯ ನಿವೃತ್ತಿ ಘೋಷಿಸಿ, ಈ ನಾಡಿದ ಹೆಮ್ಮೆಯ ಪ್ರಧಾನಿ ಅನ್ನೋ ಹೆಸರನ್ನು ಪಡೆದಿದ್ದಿರಲ್ಲ ಅದನ್ನ ಉಳಿಸಿಕೊಳ್ಳಿ. 4ರಂದು ಫಲಿತಾಂಶ ಬಂದ ನಂತರ ದೇವೇಗೌಡರ ಕುಟುಂಬದ ದನಿಗಳು ಎನಾಗುತ್ತವೋ ಗೊತ್ತಿಲ್ಲ. ಆದರೆ, ನಾವಂತೂ ನಿಮ್ಮ ಕೃತ್ಯವನ್ನು ಖಂಡಿಸದೆ, ತಕ್ಕ ಪಾಠವನ್ನು ಕಲಿಸುತ್ತೇವೆ ಎಂಬ ಎಚ್ಚರಿಕೆಯನ್ನು ಕೊಟ್ಟು ಹೋಗುತ್ತಿದ್ದೇವೆ. ಪ್ರಜ್ವಲನಂತಹ ಅತ್ಯಾಚಾರಿಗಳನ್ನು ಶಿಕ್ಷೆಗೆ ಗುರಿಪಡಿಸಲು ಒಗ್ಗಟ್ಟಿನ ಹೋರಾಟ ಮಾಡುತ್ತೇವೆ” ಎಂದರು.

ಇದನ್ನೂ ಓದಿ; ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...