ಸುಪ್ರೀಂ ಬಿಜೆಪಿಗೆ ಬಹುಮತ ಸಾಬೀತು ಮಾಡಲು ಸೂಚಿಸಿಲ್ಲ. ಆದರೆ ಫಡ್ನವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ಪೀಕರಿಸಿದರೂ ಕೂಡ ಅವರಿಗೆ ಬಹುಮತವಿಲ್ಲ. ಈಗಲೂ ನಮ್ಮನ್ನು ರಾಜ್ಯಪಾಲರು ಕರೆದರೆ ಇನ್ನು ಹತ್ತು ನಿಮಿಷದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ ಎಂದು ಶಿವಸೇನೆಯ ಮುಖಂಡ ಸಂಜಯ್ ರಾವತ್ರವರು ಹೇಳಿದ್ದಾರೆ.
ನಿನ್ನೆ ದೇಶದ ಇತಿಹಾಸದಲ್ಲಿ ಪ್ರಜಾಪ್ರಭುತ್ವಕ್ಕೆ ಕಪ್ಪು ದಿನವಾಗಿತ್ತು. ರಾಜಭವನದಲ್ಲಿ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಿದ ರೀತಿ ಆಕಸ್ಮಿಕವಾಗಿತ್ತು. ಏಕೆಂದರೆ ಮಹಾರಾಷ್ಟ್ರದ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದರೂ ಸಹ ಅದು ಮಹಾರಾಷ್ಟ್ರದ ಜನರಿಗೆ ತಿಳಿದಿರಲಿಲ್ಲ. ದೇಶದಲ್ಲಿ ಇದೇ ಮೊದಲ ಬಾರಿಗೆ ಇದು ಸಂಭವಿಸಿದೆ “ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.
ಇದನ್ನೂ ಓದಿ: ನಾಳೆಯೊಳಗೆ ಎರಡು ಪತ್ರಗಳನ್ನು ಸಲ್ಲಿಸಿ: ಮಹಾರಾಷ್ಟ್ರ ಮುಖ್ಯಮಂತ್ರಿಗೆ ಸುಪ್ರೀಂ ಸೂಚನೆ
ರಾಷ್ಟ್ರಪತಿಭವನ ಮತ್ತು ರಾಜಭವನದ ಇಂತಹ ದುರುಪಯೋಗ ದೇಶದ ಇತಿಹಾಸದಲ್ಲಿ ಎಂದಿಗೂ ನಡೆದಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
“ಅಜಿತ್ ಪವಾರ್ ಅವರು ನಿನ್ನೆ ರಾಜಭವನಕ್ಕೆ ಸುಳ್ಳು ದಾಖಲೆಗಳನ್ನು ಕೊಟ್ಟಿದ್ದಾರೆ ಮತ್ತು ರಾಜ್ಯಪಾಲರು ಆ ದಾಖಲೆಗಳನ್ನು ಸ್ವೀಕರಿಸಿದ್ದಾರೆ. ಈಗ ರಾಜ್ಯಪಾಲರು ಬಹುಮತವನ್ನು ಸಾಬೀತುಪಡಿಸುವಂತೆ ಕೇಳಿಕೊಂಡರೂ ನಾವು ಅದನ್ನು ಈಗಲೇ ಮಾಡಬಹುದು. 49 ಎನ್ಸಿಪಿ ಶಾಸಕರು ನಮ್ಮೊಂದಿಗಿದ್ದಾರೆ” ಎಂದು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಉದ್ಧವ್ ಠಾಕ್ರೆಯವರು ಸಿಎಂ ಆಗದಿದ್ದುದ್ದಕ್ಕೆ ಬೇಸರಗೊಂಡು ಶಿವಸೇನೆಯ ಕಾರ್ಯಕರ್ತನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಮಹಾರಾಷ್ಟ್ರದ ವಾಸೀಮ್ ಜಿಲ್ಲೆಯಲ್ಲಿ ಸಂಭವಿಸಿದೆ.