Homeಕರ್ನಾಟಕಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ- ಎಚ್‌.ಡಿ.ಕುಮಾರಸ್ವಾಮಿ

ಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ- ಎಚ್‌.ಡಿ.ಕುಮಾರಸ್ವಾಮಿ

’ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ..?’

- Advertisement -
- Advertisement -

’ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು GSTಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳೇನಾದರೂ GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಇಂಧನ ಬೆಲೆಗಳು ಗಗನಕ್ಕೇರಿದ್ದು, ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಯುವಜನತೆ ಬೀದಿಗಿಳುದು ಹೋರಾಟ ನಡೆಸುತ್ತಿದ್ದಾರೆ. ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ಬೊಟ್ಟು ಮಾಡಿ ಆಕ್ರೋಶ ವ್ಯಕ್ತಪಡಿಸಿವೆ. ಈ ಬಗ್ಗೆ ಟ್ವೀಟ್‌ಗಳಲ್ಲಿ ಆತಂಕ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದು ಕೇಂದ್ರ ಸರ್ಕಾರದ ಹುನ್ನಾರ ಎಂದಿದ್ದಾರೆ.

’ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ರಾಜ್ಯಗಳ ಪ್ರಮುಖ ಆದಾಯದ ಮೂಲಗಳಲ್ಲೊಂದು. ಕೇಂದ್ರ ಸರ್ಕಾರ ಮಿತಿ ಮೀರಿದ ತೆರಿಗೆ ವಿಧಿಸುತ್ತದೆ ಮತ್ತು ರಾಜ್ಯಗಳಿಗಿಂತಲೂ ಅಧಿಕ ಆದಾಯವನ್ನು ಸಂಗ್ರಹಿಸುತ್ತದೆ. ಈಗ ಅದೂ ಸಾಲದು ಎಂಬಂತೆ ಪೆಟ್ರೋಲಿಯಂ ಅನ್ನು GSTಗೆ ತಂದು ರಾಜ್ಯಗಳು ಪಡೆಯುತ್ತಿರುವ ಆದಾಯವನ್ನೂ ಲಪಟಾಯಿಸುವ ತಂತ್ರವನ್ನು ಮಾಡಿದೆ’ ಎಂದು ಜೆಡಿಎಸ್ ಮುಖಂಡ ಆರೋಪಿಸಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಸ್ತೆಯಲ್ಲಿ ಅಡುಗೆ ಮಾಡಿದ ಡಿ.ಕೆ. ಶಿವಕುಮಾರ್‌

ರಾಜ್ಯಗಳು GST ವ್ಯವಸ್ಥೆಗೆ ಒಪ್ಪಿಗೆ ನೀಡಿದ ನಂತರ ನೀಡಬೇಕಿದ್ದ ಪಾಲು, ಪರಿಹಾರವನ್ನು ಕೇಂದ್ರ ಈವರೆಗೆ ಸರಿಯಾಗಿ ಕೊಟ್ಟೇ ಇಲ್ಲ. ಸಾವಿರಾರು ಕೋಟಿ ಬಾಕಿಯನ್ನು ಇನ್ನೂ ಉಳಿಸಿಕೊಂಡಿದೆ. ಬಾಕಿಗಾಗಿ ರಾಜ್ಯಗಳು ಕೇಂದ್ರವನ್ನು ಬೇಡಾಡಿ ಬಸವಳಿದಿವೆ. ಈಗ ಪೆಟ್ರೋಲಿಯಂ ಆದಾಯವನ್ನು ಕೇಂದ್ರಕ್ಕೆ ಒಪ್ಪಿಸಿದರೆ ರಾಜ್ಯಗಳ ಪಾಡು ಶೋಚನೀಯವಾಗಲಿದೆ ಎಂದಿದ್ದಾರೆ.

ರಾಜ್ಯಗಳು ಆದಾಯವಿಲ್ಲದೇ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದೇ ಸಂಕಷ್ಟ ಅನುಭವಿಸಬೇಕಾಗುತ್ತದೆ. ಕೊನೆಗೆ ಕೊರತೆ ಬಜೆಟ್‌ ಮಂಡಿಸಬೇಕಾಗುತ್ತದೆ. ಅಥವಾ, ಬಜೆಟ್‌ ಗಾತ್ರವನ್ನೇ ಇಳಿಸಬೇಕಾದ ಸಂದರ್ಭ ಬರಲಿದೆ. ಇದು ಅಭಿವೃದ್ಧಿ ವಿಚಾರದಲ್ಲಿ ಹಿಂದಕ್ಕೆ ಓಡಿದಂತೆ. ಪ್ರತಿಯೊಬ್ಬ ಪ್ರಜೆಯೂ ಇದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮುನ್ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

’ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ ಎಂದಿದ್ದಾರೆ. ಜೊತೆಗೆ ’ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ..?’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

’ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಕ್ಕೆ ಹಲವು ರಾಜ್ಯಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ರಾಜ್ಯದ ಮುಖ್ಯಮಂತ್ರಿಗಳೂ ಈ ವಿಚಾರದಲ್ಲಿ ಆಕ್ಷೇಪಣಾ ಮನೋಭಾವ ತಳೆಯಬೇಕು. ರಾಜ್ಯದ ಪ್ರಮುಖ ನಾಯಕರೂ ಈ ವಿಚಾರವಾಗಿ ಈಗಿನಿಂದಲೇ ಪ್ರತಿರೋಧ ವ್ಯಕ್ತಪಡಿಸಬೇಕು. ಇಲ್ಲವಾದರೆ, ಜಿಎಸ್‌ಟಿ ಕುಣಿಕೆ ನಮ್ಮನ್ನು ಕಾಡಲಿದೆ’ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕ ನೀಡಿದ್ದಾರೆ.

ತೈಲ ಬೆಲೆ ಹೆಚ್ಚಳಕ್ಕೆ ಹಿಂದಿನ ಸರ್ಕಾರ ಕಾರಣ ಎಂದು ಸಮಸ್ಯೆಯನ್ನು ಹಿಂದಿನ ಸರ್ಕಾರದ ಮೇಲೆ ಹೊರೆಸಲು ಹೊರಟಿದ್ದ ಕೇಂದ್ರ ಸರ್ಕಾರ ದೇಶದಲ್ಲಿ ಪ್ರತಿಭಟನೆಯನ್ನು ಎದುರಿಸುತ್ತಿದೆ. ಬೆಲೆ ಏರಿಕೆಯಲ್ಲಿ ಬಸವಳಿದಿರುವ ಜನಸಾಮಾನ್ಯರು ಸರ್ಕಾರಗಳಿಗೆ ಪ್ರತಿಭಟನೆಯ ಬಿಸಿ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಬಗ್ಗೆ ಹಲವಾರು ಪ್ರತಿಭಟನೆ ನಡೆಸಿದೆ. ಜನಧ್ವನಿ ಜಾಥಾ ಮೂಲಕ ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಮತ್ತೆ 25 ರೂ ಹೆಚ್ಚಳ: ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಬೆಲೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...