Homeಕರ್ನಾಟಕಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ- ಎಚ್‌.ಡಿ.ಕುಮಾರಸ್ವಾಮಿ

ಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ- ಎಚ್‌.ಡಿ.ಕುಮಾರಸ್ವಾಮಿ

’ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ..?’

- Advertisement -
- Advertisement -

’ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು GSTಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳೇನಾದರೂ GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಇಂಧನ ಬೆಲೆಗಳು ಗಗನಕ್ಕೇರಿದ್ದು, ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಯುವಜನತೆ ಬೀದಿಗಿಳುದು ಹೋರಾಟ ನಡೆಸುತ್ತಿದ್ದಾರೆ. ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ಬೊಟ್ಟು ಮಾಡಿ ಆಕ್ರೋಶ ವ್ಯಕ್ತಪಡಿಸಿವೆ. ಈ ಬಗ್ಗೆ ಟ್ವೀಟ್‌ಗಳಲ್ಲಿ ಆತಂಕ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದು ಕೇಂದ್ರ ಸರ್ಕಾರದ ಹುನ್ನಾರ ಎಂದಿದ್ದಾರೆ.

’ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ರಾಜ್ಯಗಳ ಪ್ರಮುಖ ಆದಾಯದ ಮೂಲಗಳಲ್ಲೊಂದು. ಕೇಂದ್ರ ಸರ್ಕಾರ ಮಿತಿ ಮೀರಿದ ತೆರಿಗೆ ವಿಧಿಸುತ್ತದೆ ಮತ್ತು ರಾಜ್ಯಗಳಿಗಿಂತಲೂ ಅಧಿಕ ಆದಾಯವನ್ನು ಸಂಗ್ರಹಿಸುತ್ತದೆ. ಈಗ ಅದೂ ಸಾಲದು ಎಂಬಂತೆ ಪೆಟ್ರೋಲಿಯಂ ಅನ್ನು GSTಗೆ ತಂದು ರಾಜ್ಯಗಳು ಪಡೆಯುತ್ತಿರುವ ಆದಾಯವನ್ನೂ ಲಪಟಾಯಿಸುವ ತಂತ್ರವನ್ನು ಮಾಡಿದೆ’ ಎಂದು ಜೆಡಿಎಸ್ ಮುಖಂಡ ಆರೋಪಿಸಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಸ್ತೆಯಲ್ಲಿ ಅಡುಗೆ ಮಾಡಿದ ಡಿ.ಕೆ. ಶಿವಕುಮಾರ್‌

ರಾಜ್ಯಗಳು GST ವ್ಯವಸ್ಥೆಗೆ ಒಪ್ಪಿಗೆ ನೀಡಿದ ನಂತರ ನೀಡಬೇಕಿದ್ದ ಪಾಲು, ಪರಿಹಾರವನ್ನು ಕೇಂದ್ರ ಈವರೆಗೆ ಸರಿಯಾಗಿ ಕೊಟ್ಟೇ ಇಲ್ಲ. ಸಾವಿರಾರು ಕೋಟಿ ಬಾಕಿಯನ್ನು ಇನ್ನೂ ಉಳಿಸಿಕೊಂಡಿದೆ. ಬಾಕಿಗಾಗಿ ರಾಜ್ಯಗಳು ಕೇಂದ್ರವನ್ನು ಬೇಡಾಡಿ ಬಸವಳಿದಿವೆ. ಈಗ ಪೆಟ್ರೋಲಿಯಂ ಆದಾಯವನ್ನು ಕೇಂದ್ರಕ್ಕೆ ಒಪ್ಪಿಸಿದರೆ ರಾಜ್ಯಗಳ ಪಾಡು ಶೋಚನೀಯವಾಗಲಿದೆ ಎಂದಿದ್ದಾರೆ.

ರಾಜ್ಯಗಳು ಆದಾಯವಿಲ್ಲದೇ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದೇ ಸಂಕಷ್ಟ ಅನುಭವಿಸಬೇಕಾಗುತ್ತದೆ. ಕೊನೆಗೆ ಕೊರತೆ ಬಜೆಟ್‌ ಮಂಡಿಸಬೇಕಾಗುತ್ತದೆ. ಅಥವಾ, ಬಜೆಟ್‌ ಗಾತ್ರವನ್ನೇ ಇಳಿಸಬೇಕಾದ ಸಂದರ್ಭ ಬರಲಿದೆ. ಇದು ಅಭಿವೃದ್ಧಿ ವಿಚಾರದಲ್ಲಿ ಹಿಂದಕ್ಕೆ ಓಡಿದಂತೆ. ಪ್ರತಿಯೊಬ್ಬ ಪ್ರಜೆಯೂ ಇದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮುನ್ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

’ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ ಎಂದಿದ್ದಾರೆ. ಜೊತೆಗೆ ’ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ..?’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

’ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಕ್ಕೆ ಹಲವು ರಾಜ್ಯಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ರಾಜ್ಯದ ಮುಖ್ಯಮಂತ್ರಿಗಳೂ ಈ ವಿಚಾರದಲ್ಲಿ ಆಕ್ಷೇಪಣಾ ಮನೋಭಾವ ತಳೆಯಬೇಕು. ರಾಜ್ಯದ ಪ್ರಮುಖ ನಾಯಕರೂ ಈ ವಿಚಾರವಾಗಿ ಈಗಿನಿಂದಲೇ ಪ್ರತಿರೋಧ ವ್ಯಕ್ತಪಡಿಸಬೇಕು. ಇಲ್ಲವಾದರೆ, ಜಿಎಸ್‌ಟಿ ಕುಣಿಕೆ ನಮ್ಮನ್ನು ಕಾಡಲಿದೆ’ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕ ನೀಡಿದ್ದಾರೆ.

ತೈಲ ಬೆಲೆ ಹೆಚ್ಚಳಕ್ಕೆ ಹಿಂದಿನ ಸರ್ಕಾರ ಕಾರಣ ಎಂದು ಸಮಸ್ಯೆಯನ್ನು ಹಿಂದಿನ ಸರ್ಕಾರದ ಮೇಲೆ ಹೊರೆಸಲು ಹೊರಟಿದ್ದ ಕೇಂದ್ರ ಸರ್ಕಾರ ದೇಶದಲ್ಲಿ ಪ್ರತಿಭಟನೆಯನ್ನು ಎದುರಿಸುತ್ತಿದೆ. ಬೆಲೆ ಏರಿಕೆಯಲ್ಲಿ ಬಸವಳಿದಿರುವ ಜನಸಾಮಾನ್ಯರು ಸರ್ಕಾರಗಳಿಗೆ ಪ್ರತಿಭಟನೆಯ ಬಿಸಿ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಬಗ್ಗೆ ಹಲವಾರು ಪ್ರತಿಭಟನೆ ನಡೆಸಿದೆ. ಜನಧ್ವನಿ ಜಾಥಾ ಮೂಲಕ ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಮತ್ತೆ 25 ರೂ ಹೆಚ್ಚಳ: ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಬೆಲೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...