Homeಕರ್ನಾಟಕಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ- ಎಚ್‌.ಡಿ.ಕುಮಾರಸ್ವಾಮಿ

ಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ- ಎಚ್‌.ಡಿ.ಕುಮಾರಸ್ವಾಮಿ

’ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ..?’

- Advertisement -
- Advertisement -

’ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು GSTಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳೇನಾದರೂ GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಇಂಧನ ಬೆಲೆಗಳು ಗಗನಕ್ಕೇರಿದ್ದು, ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಯುವಜನತೆ ಬೀದಿಗಿಳುದು ಹೋರಾಟ ನಡೆಸುತ್ತಿದ್ದಾರೆ. ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ಬೊಟ್ಟು ಮಾಡಿ ಆಕ್ರೋಶ ವ್ಯಕ್ತಪಡಿಸಿವೆ. ಈ ಬಗ್ಗೆ ಟ್ವೀಟ್‌ಗಳಲ್ಲಿ ಆತಂಕ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದು ಕೇಂದ್ರ ಸರ್ಕಾರದ ಹುನ್ನಾರ ಎಂದಿದ್ದಾರೆ.

’ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ರಾಜ್ಯಗಳ ಪ್ರಮುಖ ಆದಾಯದ ಮೂಲಗಳಲ್ಲೊಂದು. ಕೇಂದ್ರ ಸರ್ಕಾರ ಮಿತಿ ಮೀರಿದ ತೆರಿಗೆ ವಿಧಿಸುತ್ತದೆ ಮತ್ತು ರಾಜ್ಯಗಳಿಗಿಂತಲೂ ಅಧಿಕ ಆದಾಯವನ್ನು ಸಂಗ್ರಹಿಸುತ್ತದೆ. ಈಗ ಅದೂ ಸಾಲದು ಎಂಬಂತೆ ಪೆಟ್ರೋಲಿಯಂ ಅನ್ನು GSTಗೆ ತಂದು ರಾಜ್ಯಗಳು ಪಡೆಯುತ್ತಿರುವ ಆದಾಯವನ್ನೂ ಲಪಟಾಯಿಸುವ ತಂತ್ರವನ್ನು ಮಾಡಿದೆ’ ಎಂದು ಜೆಡಿಎಸ್ ಮುಖಂಡ ಆರೋಪಿಸಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಸ್ತೆಯಲ್ಲಿ ಅಡುಗೆ ಮಾಡಿದ ಡಿ.ಕೆ. ಶಿವಕುಮಾರ್‌

ರಾಜ್ಯಗಳು GST ವ್ಯವಸ್ಥೆಗೆ ಒಪ್ಪಿಗೆ ನೀಡಿದ ನಂತರ ನೀಡಬೇಕಿದ್ದ ಪಾಲು, ಪರಿಹಾರವನ್ನು ಕೇಂದ್ರ ಈವರೆಗೆ ಸರಿಯಾಗಿ ಕೊಟ್ಟೇ ಇಲ್ಲ. ಸಾವಿರಾರು ಕೋಟಿ ಬಾಕಿಯನ್ನು ಇನ್ನೂ ಉಳಿಸಿಕೊಂಡಿದೆ. ಬಾಕಿಗಾಗಿ ರಾಜ್ಯಗಳು ಕೇಂದ್ರವನ್ನು ಬೇಡಾಡಿ ಬಸವಳಿದಿವೆ. ಈಗ ಪೆಟ್ರೋಲಿಯಂ ಆದಾಯವನ್ನು ಕೇಂದ್ರಕ್ಕೆ ಒಪ್ಪಿಸಿದರೆ ರಾಜ್ಯಗಳ ಪಾಡು ಶೋಚನೀಯವಾಗಲಿದೆ ಎಂದಿದ್ದಾರೆ.

ರಾಜ್ಯಗಳು ಆದಾಯವಿಲ್ಲದೇ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದೇ ಸಂಕಷ್ಟ ಅನುಭವಿಸಬೇಕಾಗುತ್ತದೆ. ಕೊನೆಗೆ ಕೊರತೆ ಬಜೆಟ್‌ ಮಂಡಿಸಬೇಕಾಗುತ್ತದೆ. ಅಥವಾ, ಬಜೆಟ್‌ ಗಾತ್ರವನ್ನೇ ಇಳಿಸಬೇಕಾದ ಸಂದರ್ಭ ಬರಲಿದೆ. ಇದು ಅಭಿವೃದ್ಧಿ ವಿಚಾರದಲ್ಲಿ ಹಿಂದಕ್ಕೆ ಓಡಿದಂತೆ. ಪ್ರತಿಯೊಬ್ಬ ಪ್ರಜೆಯೂ ಇದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮುನ್ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

’ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ ಎಂದಿದ್ದಾರೆ. ಜೊತೆಗೆ ’ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ..?’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

’ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಕ್ಕೆ ಹಲವು ರಾಜ್ಯಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ರಾಜ್ಯದ ಮುಖ್ಯಮಂತ್ರಿಗಳೂ ಈ ವಿಚಾರದಲ್ಲಿ ಆಕ್ಷೇಪಣಾ ಮನೋಭಾವ ತಳೆಯಬೇಕು. ರಾಜ್ಯದ ಪ್ರಮುಖ ನಾಯಕರೂ ಈ ವಿಚಾರವಾಗಿ ಈಗಿನಿಂದಲೇ ಪ್ರತಿರೋಧ ವ್ಯಕ್ತಪಡಿಸಬೇಕು. ಇಲ್ಲವಾದರೆ, ಜಿಎಸ್‌ಟಿ ಕುಣಿಕೆ ನಮ್ಮನ್ನು ಕಾಡಲಿದೆ’ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕ ನೀಡಿದ್ದಾರೆ.

ತೈಲ ಬೆಲೆ ಹೆಚ್ಚಳಕ್ಕೆ ಹಿಂದಿನ ಸರ್ಕಾರ ಕಾರಣ ಎಂದು ಸಮಸ್ಯೆಯನ್ನು ಹಿಂದಿನ ಸರ್ಕಾರದ ಮೇಲೆ ಹೊರೆಸಲು ಹೊರಟಿದ್ದ ಕೇಂದ್ರ ಸರ್ಕಾರ ದೇಶದಲ್ಲಿ ಪ್ರತಿಭಟನೆಯನ್ನು ಎದುರಿಸುತ್ತಿದೆ. ಬೆಲೆ ಏರಿಕೆಯಲ್ಲಿ ಬಸವಳಿದಿರುವ ಜನಸಾಮಾನ್ಯರು ಸರ್ಕಾರಗಳಿಗೆ ಪ್ರತಿಭಟನೆಯ ಬಿಸಿ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಬಗ್ಗೆ ಹಲವಾರು ಪ್ರತಿಭಟನೆ ನಡೆಸಿದೆ. ಜನಧ್ವನಿ ಜಾಥಾ ಮೂಲಕ ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಮತ್ತೆ 25 ರೂ ಹೆಚ್ಚಳ: ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಬೆಲೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...