Homeಕರ್ನಾಟಕಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ- ಎಚ್‌.ಡಿ.ಕುಮಾರಸ್ವಾಮಿ

ಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ- ಎಚ್‌.ಡಿ.ಕುಮಾರಸ್ವಾಮಿ

’ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ..?’

- Advertisement -
- Advertisement -

’ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು GSTಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳೇನಾದರೂ GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಇಂಧನ ಬೆಲೆಗಳು ಗಗನಕ್ಕೇರಿದ್ದು, ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಯುವಜನತೆ ಬೀದಿಗಿಳುದು ಹೋರಾಟ ನಡೆಸುತ್ತಿದ್ದಾರೆ. ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ಬೊಟ್ಟು ಮಾಡಿ ಆಕ್ರೋಶ ವ್ಯಕ್ತಪಡಿಸಿವೆ. ಈ ಬಗ್ಗೆ ಟ್ವೀಟ್‌ಗಳಲ್ಲಿ ಆತಂಕ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದು ಕೇಂದ್ರ ಸರ್ಕಾರದ ಹುನ್ನಾರ ಎಂದಿದ್ದಾರೆ.

’ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ರಾಜ್ಯಗಳ ಪ್ರಮುಖ ಆದಾಯದ ಮೂಲಗಳಲ್ಲೊಂದು. ಕೇಂದ್ರ ಸರ್ಕಾರ ಮಿತಿ ಮೀರಿದ ತೆರಿಗೆ ವಿಧಿಸುತ್ತದೆ ಮತ್ತು ರಾಜ್ಯಗಳಿಗಿಂತಲೂ ಅಧಿಕ ಆದಾಯವನ್ನು ಸಂಗ್ರಹಿಸುತ್ತದೆ. ಈಗ ಅದೂ ಸಾಲದು ಎಂಬಂತೆ ಪೆಟ್ರೋಲಿಯಂ ಅನ್ನು GSTಗೆ ತಂದು ರಾಜ್ಯಗಳು ಪಡೆಯುತ್ತಿರುವ ಆದಾಯವನ್ನೂ ಲಪಟಾಯಿಸುವ ತಂತ್ರವನ್ನು ಮಾಡಿದೆ’ ಎಂದು ಜೆಡಿಎಸ್ ಮುಖಂಡ ಆರೋಪಿಸಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಸ್ತೆಯಲ್ಲಿ ಅಡುಗೆ ಮಾಡಿದ ಡಿ.ಕೆ. ಶಿವಕುಮಾರ್‌

ರಾಜ್ಯಗಳು GST ವ್ಯವಸ್ಥೆಗೆ ಒಪ್ಪಿಗೆ ನೀಡಿದ ನಂತರ ನೀಡಬೇಕಿದ್ದ ಪಾಲು, ಪರಿಹಾರವನ್ನು ಕೇಂದ್ರ ಈವರೆಗೆ ಸರಿಯಾಗಿ ಕೊಟ್ಟೇ ಇಲ್ಲ. ಸಾವಿರಾರು ಕೋಟಿ ಬಾಕಿಯನ್ನು ಇನ್ನೂ ಉಳಿಸಿಕೊಂಡಿದೆ. ಬಾಕಿಗಾಗಿ ರಾಜ್ಯಗಳು ಕೇಂದ್ರವನ್ನು ಬೇಡಾಡಿ ಬಸವಳಿದಿವೆ. ಈಗ ಪೆಟ್ರೋಲಿಯಂ ಆದಾಯವನ್ನು ಕೇಂದ್ರಕ್ಕೆ ಒಪ್ಪಿಸಿದರೆ ರಾಜ್ಯಗಳ ಪಾಡು ಶೋಚನೀಯವಾಗಲಿದೆ ಎಂದಿದ್ದಾರೆ.

ರಾಜ್ಯಗಳು ಆದಾಯವಿಲ್ಲದೇ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದೇ ಸಂಕಷ್ಟ ಅನುಭವಿಸಬೇಕಾಗುತ್ತದೆ. ಕೊನೆಗೆ ಕೊರತೆ ಬಜೆಟ್‌ ಮಂಡಿಸಬೇಕಾಗುತ್ತದೆ. ಅಥವಾ, ಬಜೆಟ್‌ ಗಾತ್ರವನ್ನೇ ಇಳಿಸಬೇಕಾದ ಸಂದರ್ಭ ಬರಲಿದೆ. ಇದು ಅಭಿವೃದ್ಧಿ ವಿಚಾರದಲ್ಲಿ ಹಿಂದಕ್ಕೆ ಓಡಿದಂತೆ. ಪ್ರತಿಯೊಬ್ಬ ಪ್ರಜೆಯೂ ಇದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮುನ್ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

’ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ ಎಂದಿದ್ದಾರೆ. ಜೊತೆಗೆ ’ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ..?’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

’ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಕ್ಕೆ ಹಲವು ರಾಜ್ಯಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ರಾಜ್ಯದ ಮುಖ್ಯಮಂತ್ರಿಗಳೂ ಈ ವಿಚಾರದಲ್ಲಿ ಆಕ್ಷೇಪಣಾ ಮನೋಭಾವ ತಳೆಯಬೇಕು. ರಾಜ್ಯದ ಪ್ರಮುಖ ನಾಯಕರೂ ಈ ವಿಚಾರವಾಗಿ ಈಗಿನಿಂದಲೇ ಪ್ರತಿರೋಧ ವ್ಯಕ್ತಪಡಿಸಬೇಕು. ಇಲ್ಲವಾದರೆ, ಜಿಎಸ್‌ಟಿ ಕುಣಿಕೆ ನಮ್ಮನ್ನು ಕಾಡಲಿದೆ’ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕ ನೀಡಿದ್ದಾರೆ.

ತೈಲ ಬೆಲೆ ಹೆಚ್ಚಳಕ್ಕೆ ಹಿಂದಿನ ಸರ್ಕಾರ ಕಾರಣ ಎಂದು ಸಮಸ್ಯೆಯನ್ನು ಹಿಂದಿನ ಸರ್ಕಾರದ ಮೇಲೆ ಹೊರೆಸಲು ಹೊರಟಿದ್ದ ಕೇಂದ್ರ ಸರ್ಕಾರ ದೇಶದಲ್ಲಿ ಪ್ರತಿಭಟನೆಯನ್ನು ಎದುರಿಸುತ್ತಿದೆ. ಬೆಲೆ ಏರಿಕೆಯಲ್ಲಿ ಬಸವಳಿದಿರುವ ಜನಸಾಮಾನ್ಯರು ಸರ್ಕಾರಗಳಿಗೆ ಪ್ರತಿಭಟನೆಯ ಬಿಸಿ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಬಗ್ಗೆ ಹಲವಾರು ಪ್ರತಿಭಟನೆ ನಡೆಸಿದೆ. ಜನಧ್ವನಿ ಜಾಥಾ ಮೂಲಕ ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಮತ್ತೆ 25 ರೂ ಹೆಚ್ಚಳ: ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಬೆಲೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...