Homeಮುಖಪುಟಕ್ರಿಸ್‌‌ಮಸ್‌ನಲ್ಲಿ ಭಾಗವಹಿಸುವ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತೇವೆ: ಬಜರಂಗದಳ

ಕ್ರಿಸ್‌‌ಮಸ್‌ನಲ್ಲಿ ಭಾಗವಹಿಸುವ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತೇವೆ: ಬಜರಂಗದಳ

"ನಾವು ಹಿಂದೂಗಳ ಮೇಲೆ ಹಲ್ಲೆ ಮಾಡಿದರೆ ಮರುದಿನ ಪತ್ರಿಕೆಗಳಲ್ಲಿ ’ಗೂಂಡಾದಳವು ಓರಿಯೆಂಟಲ್ ಶಾಲೆಯನ್ನು ಧ್ವಂಸ ಮಾಡಿದೆ’ ಎಂದು ಸುದ್ದಿಯಾಗುತ್ತದೆ. ಆದರೆ ನಾನು ತೆಲೆಕೆಡಿಸಿಕೊಳ್ಳುವುದಿಲ್ಲ.

- Advertisement -
- Advertisement -

ಕ್ರಿಸ್‌ಮಸ್ ಆಚರಣೆಯಲ್ಲಿ ಪಾಲ್ಗೊಳ್ಳಲು ಚರ್ಚುಗಳಿಗೆ ಭೇಟಿ ನೀಡುವ ಹಿಂದೂಗಳ ಮೇಲೆ ಹಲ್ಲೆ ನಡೆಸಲಾಗುವುದು ಎಂದು ಅಸ್ಸಾಂನ ಕ್ಯಾಚಾರ್‌ ಜಿಲ್ಲೆಯಲ್ಲಿ ಬಜರಂಗದಳದ ಮುಖಂಡನೊಬ್ಬ ಘೋಷಿಸಿದ್ದಾನೆ.

ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹೇಳಿಕೆ ನೀಡಿರುವವನನ್ನು ವಿಶ್ವ ಹಿಂದೂ ಪರಿಷತ್‌-ಬಜರಂಗದಳದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಿಥು ನಾಥ್ ಎಂದು ಗುರುತಿಸಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಕ್ರೈಸ್ತರು ಬಹುಸಂಖ್ಯಾತರಾಗಿರುವ ಮೇಘಾಲಯದ ರಾಜಧಾನಿ ಶಿಲ್ಲಾಂಗ್‌‌ನಲ್ಲಿ ರಾಮಕೃಷ್ಣ ಮಠದ ವಿವೇಕಾನಂದ ಕೇಂದ್ರವು ಸ್ಥಗಿತಗೊಂಡಿದೆ ಎಂದು ಆರೋಪಿಸಿರುವ ಅವರು, ಹಿಂದೂಗಳು ಕ್ರಿಸ್‌ಮಸ್ ದಿನದ ಕಾರ್ಯಕ್ರಮ ಮತ್ತು ಹಬ್ಬಕ್ಕೆ ಹಾಜರಾಗಲು ಅನುಮತಿ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

“ಚರ್ಚುಗಳಿಗೆ ಭೇಟಿ ನೀಡುವ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತೇವೆ. ಯಾಕೆಂದರೆ ನಮ್ಮ ಪೂಜಾ ಸ್ಥಳಗಳನ್ನು ಮುಚ್ಚಿದ ನಂತರ ಕ್ರಿಶ್ಚಿಯನ್ ಸಮಾರಂಭವೊಂದರಲ್ಲಿ ಹೋಗಿ ಮೋಜು ಮಾಡುವ ಹಿಂದೂಗಳನ್ನು ನಾನು ನಿಂದಿಸುತ್ತೇನೆ. ಈ ಕ್ರಿಸ್‌ಮಸ್‌ನಲ್ಲಿ ಯಾವುದೇ ಹಿಂದೂಗಳು ಚರ್ಚ್‌ಗೆ ಹೋಗುವುದಿಲ್ಲ. ನಾವು ಅದನ್ನು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಮಿಥು ನಾಥ್ ವೀಡಿಯೊದಲ್ಲಿ ಹೇಳಿದ್ದಾರೆ.

“ನಾವು ಹಿಂದೂಗಳ ಮೇಲೆ ಹಲ್ಲೆ ಮಾಡಿದರೆ ಮರುದಿನ ಪತ್ರಿಕೆಗಳಲ್ಲಿ ’ಗೂಂಡಾದಳವು ಓರಿಯೆಂಟಲ್ ಶಾಲೆಯನ್ನು ಧ್ವಂಸ ಮಾಡಿದೆ’ ಎಂದು ಸುದ್ದಿಯಾಗುತ್ತದೆ. ಆದರೆ ನಾನು ತೆಲೆಕೆಡಿಸಿಕೊಳ್ಳುವುದಿಲ್ಲ. ಶಿಲ್ಲಾಂಗ್‌‌ನಲ್ಲಿ ದೇವಾಲಯದ ಗೇಟುಗಳಿಗೆ ಅವರು ಬೀಗ ಹಾಕಿ, ಕ್ರಿಸ್‌ಮಸ್ ಕಾರ್ಯಕ್ರಮದಲ್ಲಿ ಹಿಂದೂಗಳು ಭಾಗವಹಿಸುವುದನ್ನು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಆದರೆ ಮಿಥು ನಾಥ್ ಹೇಳಿಕೆಯನ್ನು ನಿರಾಕರಿಸಿರುವ ಮೇಘಾಲಯ ಸರ್ಕಾರದ ಉನ್ನತ ಅಧಿಕಾರಿಯೊಬ್ಬರು, “ರಾಮಕೃಷ್ಣ ಮಿಷನ್‌ನ ಯಾವುದೇ ದೇವಾಲಯವನ್ನು ಮುಚ್ಚಲಾಗಿಲ್ಲ” ತಿಳಿಸಿದ್ದಾರೆ.

ಈಶಾನ್ಯ ರಾಜ್ಯದ ಕ್ಯಾಚರ್ ಜಿಲ್ಲೆಯಲ್ಲಿನ ಕ್ರಿಶ್ಚಿಯನ್ ಜನಸಂಖ್ಯೆ ಕಡಿಮೆಯಿದ್ದರೂ, ರಜಾದಿನವನ್ನು ಸಾಂಪ್ರದಾಯಿಕವಾಗಿ ಸಿಲ್ಚಾರ್ ಬಳಿಯ ಅಂಬಿಕಪಟ್ಟಿಯಲ್ಲಿರುವ ಓರಿಯಂಟಲ್ ಶಾಲೆಯಿಂದ ಅಮೋಘವಾಗಿ ಆಚರಿಸಲಾಗುತ್ತದೆ. ಇಲ್ಲಿ ಪ್ರತಿವರ್ಷ ವಿವಿಧ ಧರ್ಮದ ಜನರು ಸೇರುತ್ತಾರೆ.

ಇದನ್ನೂ ಓದಿ: ಸಂಘಪರಿವಾರದ ಕಾರ್ಯಕರ್ತರಿಂದ ಗೋ ಕಳ್ಳತನಕ್ಕೆ ಯತ್ನ ಆರೋಪ: ಮೂವರು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...