Homeಮುಖಪುಟಕ್ರಿಸ್‌‌ಮಸ್‌ನಲ್ಲಿ ಭಾಗವಹಿಸುವ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತೇವೆ: ಬಜರಂಗದಳ

ಕ್ರಿಸ್‌‌ಮಸ್‌ನಲ್ಲಿ ಭಾಗವಹಿಸುವ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತೇವೆ: ಬಜರಂಗದಳ

"ನಾವು ಹಿಂದೂಗಳ ಮೇಲೆ ಹಲ್ಲೆ ಮಾಡಿದರೆ ಮರುದಿನ ಪತ್ರಿಕೆಗಳಲ್ಲಿ ’ಗೂಂಡಾದಳವು ಓರಿಯೆಂಟಲ್ ಶಾಲೆಯನ್ನು ಧ್ವಂಸ ಮಾಡಿದೆ’ ಎಂದು ಸುದ್ದಿಯಾಗುತ್ತದೆ. ಆದರೆ ನಾನು ತೆಲೆಕೆಡಿಸಿಕೊಳ್ಳುವುದಿಲ್ಲ.

- Advertisement -
- Advertisement -

ಕ್ರಿಸ್‌ಮಸ್ ಆಚರಣೆಯಲ್ಲಿ ಪಾಲ್ಗೊಳ್ಳಲು ಚರ್ಚುಗಳಿಗೆ ಭೇಟಿ ನೀಡುವ ಹಿಂದೂಗಳ ಮೇಲೆ ಹಲ್ಲೆ ನಡೆಸಲಾಗುವುದು ಎಂದು ಅಸ್ಸಾಂನ ಕ್ಯಾಚಾರ್‌ ಜಿಲ್ಲೆಯಲ್ಲಿ ಬಜರಂಗದಳದ ಮುಖಂಡನೊಬ್ಬ ಘೋಷಿಸಿದ್ದಾನೆ.

ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹೇಳಿಕೆ ನೀಡಿರುವವನನ್ನು ವಿಶ್ವ ಹಿಂದೂ ಪರಿಷತ್‌-ಬಜರಂಗದಳದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಿಥು ನಾಥ್ ಎಂದು ಗುರುತಿಸಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಕ್ರೈಸ್ತರು ಬಹುಸಂಖ್ಯಾತರಾಗಿರುವ ಮೇಘಾಲಯದ ರಾಜಧಾನಿ ಶಿಲ್ಲಾಂಗ್‌‌ನಲ್ಲಿ ರಾಮಕೃಷ್ಣ ಮಠದ ವಿವೇಕಾನಂದ ಕೇಂದ್ರವು ಸ್ಥಗಿತಗೊಂಡಿದೆ ಎಂದು ಆರೋಪಿಸಿರುವ ಅವರು, ಹಿಂದೂಗಳು ಕ್ರಿಸ್‌ಮಸ್ ದಿನದ ಕಾರ್ಯಕ್ರಮ ಮತ್ತು ಹಬ್ಬಕ್ಕೆ ಹಾಜರಾಗಲು ಅನುಮತಿ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

“ಚರ್ಚುಗಳಿಗೆ ಭೇಟಿ ನೀಡುವ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತೇವೆ. ಯಾಕೆಂದರೆ ನಮ್ಮ ಪೂಜಾ ಸ್ಥಳಗಳನ್ನು ಮುಚ್ಚಿದ ನಂತರ ಕ್ರಿಶ್ಚಿಯನ್ ಸಮಾರಂಭವೊಂದರಲ್ಲಿ ಹೋಗಿ ಮೋಜು ಮಾಡುವ ಹಿಂದೂಗಳನ್ನು ನಾನು ನಿಂದಿಸುತ್ತೇನೆ. ಈ ಕ್ರಿಸ್‌ಮಸ್‌ನಲ್ಲಿ ಯಾವುದೇ ಹಿಂದೂಗಳು ಚರ್ಚ್‌ಗೆ ಹೋಗುವುದಿಲ್ಲ. ನಾವು ಅದನ್ನು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಮಿಥು ನಾಥ್ ವೀಡಿಯೊದಲ್ಲಿ ಹೇಳಿದ್ದಾರೆ.

“ನಾವು ಹಿಂದೂಗಳ ಮೇಲೆ ಹಲ್ಲೆ ಮಾಡಿದರೆ ಮರುದಿನ ಪತ್ರಿಕೆಗಳಲ್ಲಿ ’ಗೂಂಡಾದಳವು ಓರಿಯೆಂಟಲ್ ಶಾಲೆಯನ್ನು ಧ್ವಂಸ ಮಾಡಿದೆ’ ಎಂದು ಸುದ್ದಿಯಾಗುತ್ತದೆ. ಆದರೆ ನಾನು ತೆಲೆಕೆಡಿಸಿಕೊಳ್ಳುವುದಿಲ್ಲ. ಶಿಲ್ಲಾಂಗ್‌‌ನಲ್ಲಿ ದೇವಾಲಯದ ಗೇಟುಗಳಿಗೆ ಅವರು ಬೀಗ ಹಾಕಿ, ಕ್ರಿಸ್‌ಮಸ್ ಕಾರ್ಯಕ್ರಮದಲ್ಲಿ ಹಿಂದೂಗಳು ಭಾಗವಹಿಸುವುದನ್ನು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಆದರೆ ಮಿಥು ನಾಥ್ ಹೇಳಿಕೆಯನ್ನು ನಿರಾಕರಿಸಿರುವ ಮೇಘಾಲಯ ಸರ್ಕಾರದ ಉನ್ನತ ಅಧಿಕಾರಿಯೊಬ್ಬರು, “ರಾಮಕೃಷ್ಣ ಮಿಷನ್‌ನ ಯಾವುದೇ ದೇವಾಲಯವನ್ನು ಮುಚ್ಚಲಾಗಿಲ್ಲ” ತಿಳಿಸಿದ್ದಾರೆ.

ಈಶಾನ್ಯ ರಾಜ್ಯದ ಕ್ಯಾಚರ್ ಜಿಲ್ಲೆಯಲ್ಲಿನ ಕ್ರಿಶ್ಚಿಯನ್ ಜನಸಂಖ್ಯೆ ಕಡಿಮೆಯಿದ್ದರೂ, ರಜಾದಿನವನ್ನು ಸಾಂಪ್ರದಾಯಿಕವಾಗಿ ಸಿಲ್ಚಾರ್ ಬಳಿಯ ಅಂಬಿಕಪಟ್ಟಿಯಲ್ಲಿರುವ ಓರಿಯಂಟಲ್ ಶಾಲೆಯಿಂದ ಅಮೋಘವಾಗಿ ಆಚರಿಸಲಾಗುತ್ತದೆ. ಇಲ್ಲಿ ಪ್ರತಿವರ್ಷ ವಿವಿಧ ಧರ್ಮದ ಜನರು ಸೇರುತ್ತಾರೆ.

ಇದನ್ನೂ ಓದಿ: ಸಂಘಪರಿವಾರದ ಕಾರ್ಯಕರ್ತರಿಂದ ಗೋ ಕಳ್ಳತನಕ್ಕೆ ಯತ್ನ ಆರೋಪ: ಮೂವರು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...