Homeಮುಖಪುಟಕ್ರಿಸ್‌‌ಮಸ್‌ನಲ್ಲಿ ಭಾಗವಹಿಸುವ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತೇವೆ: ಬಜರಂಗದಳ

ಕ್ರಿಸ್‌‌ಮಸ್‌ನಲ್ಲಿ ಭಾಗವಹಿಸುವ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತೇವೆ: ಬಜರಂಗದಳ

"ನಾವು ಹಿಂದೂಗಳ ಮೇಲೆ ಹಲ್ಲೆ ಮಾಡಿದರೆ ಮರುದಿನ ಪತ್ರಿಕೆಗಳಲ್ಲಿ ’ಗೂಂಡಾದಳವು ಓರಿಯೆಂಟಲ್ ಶಾಲೆಯನ್ನು ಧ್ವಂಸ ಮಾಡಿದೆ’ ಎಂದು ಸುದ್ದಿಯಾಗುತ್ತದೆ. ಆದರೆ ನಾನು ತೆಲೆಕೆಡಿಸಿಕೊಳ್ಳುವುದಿಲ್ಲ.

- Advertisement -
- Advertisement -

ಕ್ರಿಸ್‌ಮಸ್ ಆಚರಣೆಯಲ್ಲಿ ಪಾಲ್ಗೊಳ್ಳಲು ಚರ್ಚುಗಳಿಗೆ ಭೇಟಿ ನೀಡುವ ಹಿಂದೂಗಳ ಮೇಲೆ ಹಲ್ಲೆ ನಡೆಸಲಾಗುವುದು ಎಂದು ಅಸ್ಸಾಂನ ಕ್ಯಾಚಾರ್‌ ಜಿಲ್ಲೆಯಲ್ಲಿ ಬಜರಂಗದಳದ ಮುಖಂಡನೊಬ್ಬ ಘೋಷಿಸಿದ್ದಾನೆ.

ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹೇಳಿಕೆ ನೀಡಿರುವವನನ್ನು ವಿಶ್ವ ಹಿಂದೂ ಪರಿಷತ್‌-ಬಜರಂಗದಳದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಿಥು ನಾಥ್ ಎಂದು ಗುರುತಿಸಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಕ್ರೈಸ್ತರು ಬಹುಸಂಖ್ಯಾತರಾಗಿರುವ ಮೇಘಾಲಯದ ರಾಜಧಾನಿ ಶಿಲ್ಲಾಂಗ್‌‌ನಲ್ಲಿ ರಾಮಕೃಷ್ಣ ಮಠದ ವಿವೇಕಾನಂದ ಕೇಂದ್ರವು ಸ್ಥಗಿತಗೊಂಡಿದೆ ಎಂದು ಆರೋಪಿಸಿರುವ ಅವರು, ಹಿಂದೂಗಳು ಕ್ರಿಸ್‌ಮಸ್ ದಿನದ ಕಾರ್ಯಕ್ರಮ ಮತ್ತು ಹಬ್ಬಕ್ಕೆ ಹಾಜರಾಗಲು ಅನುಮತಿ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

“ಚರ್ಚುಗಳಿಗೆ ಭೇಟಿ ನೀಡುವ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತೇವೆ. ಯಾಕೆಂದರೆ ನಮ್ಮ ಪೂಜಾ ಸ್ಥಳಗಳನ್ನು ಮುಚ್ಚಿದ ನಂತರ ಕ್ರಿಶ್ಚಿಯನ್ ಸಮಾರಂಭವೊಂದರಲ್ಲಿ ಹೋಗಿ ಮೋಜು ಮಾಡುವ ಹಿಂದೂಗಳನ್ನು ನಾನು ನಿಂದಿಸುತ್ತೇನೆ. ಈ ಕ್ರಿಸ್‌ಮಸ್‌ನಲ್ಲಿ ಯಾವುದೇ ಹಿಂದೂಗಳು ಚರ್ಚ್‌ಗೆ ಹೋಗುವುದಿಲ್ಲ. ನಾವು ಅದನ್ನು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಮಿಥು ನಾಥ್ ವೀಡಿಯೊದಲ್ಲಿ ಹೇಳಿದ್ದಾರೆ.

“ನಾವು ಹಿಂದೂಗಳ ಮೇಲೆ ಹಲ್ಲೆ ಮಾಡಿದರೆ ಮರುದಿನ ಪತ್ರಿಕೆಗಳಲ್ಲಿ ’ಗೂಂಡಾದಳವು ಓರಿಯೆಂಟಲ್ ಶಾಲೆಯನ್ನು ಧ್ವಂಸ ಮಾಡಿದೆ’ ಎಂದು ಸುದ್ದಿಯಾಗುತ್ತದೆ. ಆದರೆ ನಾನು ತೆಲೆಕೆಡಿಸಿಕೊಳ್ಳುವುದಿಲ್ಲ. ಶಿಲ್ಲಾಂಗ್‌‌ನಲ್ಲಿ ದೇವಾಲಯದ ಗೇಟುಗಳಿಗೆ ಅವರು ಬೀಗ ಹಾಕಿ, ಕ್ರಿಸ್‌ಮಸ್ ಕಾರ್ಯಕ್ರಮದಲ್ಲಿ ಹಿಂದೂಗಳು ಭಾಗವಹಿಸುವುದನ್ನು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಆದರೆ ಮಿಥು ನಾಥ್ ಹೇಳಿಕೆಯನ್ನು ನಿರಾಕರಿಸಿರುವ ಮೇಘಾಲಯ ಸರ್ಕಾರದ ಉನ್ನತ ಅಧಿಕಾರಿಯೊಬ್ಬರು, “ರಾಮಕೃಷ್ಣ ಮಿಷನ್‌ನ ಯಾವುದೇ ದೇವಾಲಯವನ್ನು ಮುಚ್ಚಲಾಗಿಲ್ಲ” ತಿಳಿಸಿದ್ದಾರೆ.

ಈಶಾನ್ಯ ರಾಜ್ಯದ ಕ್ಯಾಚರ್ ಜಿಲ್ಲೆಯಲ್ಲಿನ ಕ್ರಿಶ್ಚಿಯನ್ ಜನಸಂಖ್ಯೆ ಕಡಿಮೆಯಿದ್ದರೂ, ರಜಾದಿನವನ್ನು ಸಾಂಪ್ರದಾಯಿಕವಾಗಿ ಸಿಲ್ಚಾರ್ ಬಳಿಯ ಅಂಬಿಕಪಟ್ಟಿಯಲ್ಲಿರುವ ಓರಿಯಂಟಲ್ ಶಾಲೆಯಿಂದ ಅಮೋಘವಾಗಿ ಆಚರಿಸಲಾಗುತ್ತದೆ. ಇಲ್ಲಿ ಪ್ರತಿವರ್ಷ ವಿವಿಧ ಧರ್ಮದ ಜನರು ಸೇರುತ್ತಾರೆ.

ಇದನ್ನೂ ಓದಿ: ಸಂಘಪರಿವಾರದ ಕಾರ್ಯಕರ್ತರಿಂದ ಗೋ ಕಳ್ಳತನಕ್ಕೆ ಯತ್ನ ಆರೋಪ: ಮೂವರು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...