Homeಮುಖಪುಟಕ್ರಿಸ್‌‌ಮಸ್‌ನಲ್ಲಿ ಭಾಗವಹಿಸುವ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತೇವೆ: ಬಜರಂಗದಳ

ಕ್ರಿಸ್‌‌ಮಸ್‌ನಲ್ಲಿ ಭಾಗವಹಿಸುವ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತೇವೆ: ಬಜರಂಗದಳ

"ನಾವು ಹಿಂದೂಗಳ ಮೇಲೆ ಹಲ್ಲೆ ಮಾಡಿದರೆ ಮರುದಿನ ಪತ್ರಿಕೆಗಳಲ್ಲಿ ’ಗೂಂಡಾದಳವು ಓರಿಯೆಂಟಲ್ ಶಾಲೆಯನ್ನು ಧ್ವಂಸ ಮಾಡಿದೆ’ ಎಂದು ಸುದ್ದಿಯಾಗುತ್ತದೆ. ಆದರೆ ನಾನು ತೆಲೆಕೆಡಿಸಿಕೊಳ್ಳುವುದಿಲ್ಲ.

- Advertisement -
- Advertisement -

ಕ್ರಿಸ್‌ಮಸ್ ಆಚರಣೆಯಲ್ಲಿ ಪಾಲ್ಗೊಳ್ಳಲು ಚರ್ಚುಗಳಿಗೆ ಭೇಟಿ ನೀಡುವ ಹಿಂದೂಗಳ ಮೇಲೆ ಹಲ್ಲೆ ನಡೆಸಲಾಗುವುದು ಎಂದು ಅಸ್ಸಾಂನ ಕ್ಯಾಚಾರ್‌ ಜಿಲ್ಲೆಯಲ್ಲಿ ಬಜರಂಗದಳದ ಮುಖಂಡನೊಬ್ಬ ಘೋಷಿಸಿದ್ದಾನೆ.

ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹೇಳಿಕೆ ನೀಡಿರುವವನನ್ನು ವಿಶ್ವ ಹಿಂದೂ ಪರಿಷತ್‌-ಬಜರಂಗದಳದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಿಥು ನಾಥ್ ಎಂದು ಗುರುತಿಸಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಕ್ರೈಸ್ತರು ಬಹುಸಂಖ್ಯಾತರಾಗಿರುವ ಮೇಘಾಲಯದ ರಾಜಧಾನಿ ಶಿಲ್ಲಾಂಗ್‌‌ನಲ್ಲಿ ರಾಮಕೃಷ್ಣ ಮಠದ ವಿವೇಕಾನಂದ ಕೇಂದ್ರವು ಸ್ಥಗಿತಗೊಂಡಿದೆ ಎಂದು ಆರೋಪಿಸಿರುವ ಅವರು, ಹಿಂದೂಗಳು ಕ್ರಿಸ್‌ಮಸ್ ದಿನದ ಕಾರ್ಯಕ್ರಮ ಮತ್ತು ಹಬ್ಬಕ್ಕೆ ಹಾಜರಾಗಲು ಅನುಮತಿ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

“ಚರ್ಚುಗಳಿಗೆ ಭೇಟಿ ನೀಡುವ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತೇವೆ. ಯಾಕೆಂದರೆ ನಮ್ಮ ಪೂಜಾ ಸ್ಥಳಗಳನ್ನು ಮುಚ್ಚಿದ ನಂತರ ಕ್ರಿಶ್ಚಿಯನ್ ಸಮಾರಂಭವೊಂದರಲ್ಲಿ ಹೋಗಿ ಮೋಜು ಮಾಡುವ ಹಿಂದೂಗಳನ್ನು ನಾನು ನಿಂದಿಸುತ್ತೇನೆ. ಈ ಕ್ರಿಸ್‌ಮಸ್‌ನಲ್ಲಿ ಯಾವುದೇ ಹಿಂದೂಗಳು ಚರ್ಚ್‌ಗೆ ಹೋಗುವುದಿಲ್ಲ. ನಾವು ಅದನ್ನು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಮಿಥು ನಾಥ್ ವೀಡಿಯೊದಲ್ಲಿ ಹೇಳಿದ್ದಾರೆ.

“ನಾವು ಹಿಂದೂಗಳ ಮೇಲೆ ಹಲ್ಲೆ ಮಾಡಿದರೆ ಮರುದಿನ ಪತ್ರಿಕೆಗಳಲ್ಲಿ ’ಗೂಂಡಾದಳವು ಓರಿಯೆಂಟಲ್ ಶಾಲೆಯನ್ನು ಧ್ವಂಸ ಮಾಡಿದೆ’ ಎಂದು ಸುದ್ದಿಯಾಗುತ್ತದೆ. ಆದರೆ ನಾನು ತೆಲೆಕೆಡಿಸಿಕೊಳ್ಳುವುದಿಲ್ಲ. ಶಿಲ್ಲಾಂಗ್‌‌ನಲ್ಲಿ ದೇವಾಲಯದ ಗೇಟುಗಳಿಗೆ ಅವರು ಬೀಗ ಹಾಕಿ, ಕ್ರಿಸ್‌ಮಸ್ ಕಾರ್ಯಕ್ರಮದಲ್ಲಿ ಹಿಂದೂಗಳು ಭಾಗವಹಿಸುವುದನ್ನು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಆದರೆ ಮಿಥು ನಾಥ್ ಹೇಳಿಕೆಯನ್ನು ನಿರಾಕರಿಸಿರುವ ಮೇಘಾಲಯ ಸರ್ಕಾರದ ಉನ್ನತ ಅಧಿಕಾರಿಯೊಬ್ಬರು, “ರಾಮಕೃಷ್ಣ ಮಿಷನ್‌ನ ಯಾವುದೇ ದೇವಾಲಯವನ್ನು ಮುಚ್ಚಲಾಗಿಲ್ಲ” ತಿಳಿಸಿದ್ದಾರೆ.

ಈಶಾನ್ಯ ರಾಜ್ಯದ ಕ್ಯಾಚರ್ ಜಿಲ್ಲೆಯಲ್ಲಿನ ಕ್ರಿಶ್ಚಿಯನ್ ಜನಸಂಖ್ಯೆ ಕಡಿಮೆಯಿದ್ದರೂ, ರಜಾದಿನವನ್ನು ಸಾಂಪ್ರದಾಯಿಕವಾಗಿ ಸಿಲ್ಚಾರ್ ಬಳಿಯ ಅಂಬಿಕಪಟ್ಟಿಯಲ್ಲಿರುವ ಓರಿಯಂಟಲ್ ಶಾಲೆಯಿಂದ ಅಮೋಘವಾಗಿ ಆಚರಿಸಲಾಗುತ್ತದೆ. ಇಲ್ಲಿ ಪ್ರತಿವರ್ಷ ವಿವಿಧ ಧರ್ಮದ ಜನರು ಸೇರುತ್ತಾರೆ.

ಇದನ್ನೂ ಓದಿ: ಸಂಘಪರಿವಾರದ ಕಾರ್ಯಕರ್ತರಿಂದ ಗೋ ಕಳ್ಳತನಕ್ಕೆ ಯತ್ನ ಆರೋಪ: ಮೂವರು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...